Homeಫ್ಯಾಕ್ಟ್‌ಚೆಕ್FACT CHECK | ಕುತುಬ್ ಮಿನಾರ್ ನಿರ್ಮಿಸಿದ್ದು ಮೊಘಲರಲ್ಲವೇ ? ಇತಿಹಾಸ ತಿರುಚಲಾಗಿದೆಯಾ?

FACT CHECK | ಕುತುಬ್ ಮಿನಾರ್ ನಿರ್ಮಿಸಿದ್ದು ಮೊಘಲರಲ್ಲವೇ ? ಇತಿಹಾಸ ತಿರುಚಲಾಗಿದೆಯಾ?

- Advertisement -
- Advertisement -

“ಕುತುಬ್ ಮಿನಾರ್ ನಿರ್ಮಿಸಿದ್ದು ಮೊಘಲರು ಅಂತಾ ಇತಿಹಾಸದಲ್ಲಿ ಬರೆಯಲಾಗಿತ್ತು!! ಆದ್ರೆ ಅಲ್ಲಿ ಇರುವ ಕಬ್ಬಿಣದ ಕಂಬದ ಮೇಲೆ ಯಾರ ಹೆಸರಿದೆ ಎಂದೂ ಸ್ವಲ್ಪ ಜೂಮ್ ಮಾಡಿ ನೋಡಿದರೆ ನೈಜ ಸತ್ಯ ಸಂಗತಿ ತಿಳಿಯಲಿದೆ. ಇದು 1500 ವರ್ಷಗಳ ಹಿಂದಿನ ವರಾಹಮಿಹಿರನ ಕಾಲದ ವಿಷ್ಣು ಸ್ಥಂಭ.. ನಮ್ಮ ದೇಶದ ಇತಿಹಾಸವನ್ನು ಬರೆದ ಇತಿಹಾಸ ತಜ್ಞರ ಕಣ್ಣುಗಳಿಗೆ ಇದು ಕಾಣಲಿಲ್ಲ ಕಣ್ಣು ಕುರುಡಾಗುವಷ್ಟು ಮೊಘಲರು ಎಂಜಲು ತಿನ್ನಿಸಿರಬೇಕು ಡೋಂಗಿ ಇತಿಹಾಸ ತಜ್ಞರಿಗೆ ಯಾರೋ ಸ್ಥಾಪಿಸಿದ ಪರಂಪರೆಯನ್ನು ತಮ್ಮದು ಎಂದೂ ಇಲ್ಲಿವರೆಗೆ ಹೇಳಿಕೊಂಡ ನಕಲಿಗಳಿಗೆ ನಾಚಿಕೆಯಾಗಬೇಕು” ಎಂಬ ಸಂದೇಶವೊಂದು ವಾಟ್ಸಾಪ್‌ನಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಜೊತೆಗೆ, ಕುತುಬ್ ಮಿನಾರ್ ಪ್ರದೇಶದಲ್ಲಿ ಇರುವ ಕಬ್ಬಿಣದ ಸ್ತಂಭದಲ್ಲಿ ಹಿಂದೂ ಹೆಸರುಗಳಿವೆ ಇದರಿಂದ ಸತ್ಯ ತಿಳಿಯುತ್ತದೆ ಎಂದು ಪ್ರತಿಪಾದಿಸಿದ ಕಂಬವೊಂದರ ಫೋಟೋ ಕೂಡ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಹಾಗಿದ್ದರೆ, ವೈರಲ್ ಪೋಸ್ಟ್‌ನಲ್ಲಿ ಮಾಡಿರುವ ಪ್ರತಿಪಾದನೆ ನಿಜವೇ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ವೈರಲ್ ಫೋಟೋವನ್ನು  ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಸರ್ಚ್ ಮಾಡಿದಾಗ, ಹಲವು ವೆಬ್‌ಸೈಟ್‌ಗಳಲ್ಲಿ ಆ ಫೋಟೋ ಅಪ್ಲೋಡ್ ಆಗಿರುವುದು ಕಂಡು ಬಂದಿದೆ.

ಈ ಪೈಕಿ ಫ್ಲಿಕ್ಕರ್‌ ವೆಬ್‌ಸೈಟ್‌ನಲ್ಲಿ ಅಕ್ಟೋಬರ್ 19, 2009ರಂದು ಡೇವಿಡ್ ರಾಸ್‌ ಎಂಬವರು ಅಪ್ಲೋಡ್ ಮಾಡಿರುವ ಫೋಟೋವನ್ನು ಪರಿಶೀಲಿಸಿದಾಗ ಐರನ್‌ ಪಿಲ್ಲರ್ ಭರತ್‌ಪುರ ಫೋರ್ಟ್, ಭರತ್‌ಪುರ ಇಂಡಿಯಾ ಎಂದು ಬರೆದಿರುವುದು ಕಂಡು ಬಂದಿದೆ. ಆ ಫೋಟೋ ಮತ್ತು ವಾಟ್ಸಾಪ್‌ನಲ್ಲಿ ಹರಿದಾಡುತ್ತಿರುವ ಫೋಟೋವನ್ನು ಹೋಲಿಕೆ ಮಾಡಿ ನೋಡಿದಾಗ ಅವೆರಡು ಒಂದೇ ಫೋಟೋ ಎಂದು ಗೊತ್ತಾಗಿದೆ.

ಹಿಸ್ಟರಿ ಎನ್ಸೈಕ್ಲೋಪೀಡಿಯಾ ಎಂಬ ಎಕ್ಸ್‌ ಖಾತೆಯಲ್ಲೂ ನವೆಂಬರ್ 3, 2021ರಂದು ಹಾಕಿರುವ ಪೋಸ್ಟ್‌ನಲ್ಲಿ ವೈರಲ್ ಫೋಟೋ ಅಪ್ಲೋಡ್ ಮಾಡಿರುವುದು ಕಂಡು ಬಂದಿದೆ. ಅದರಲ್ಲಿ “ರಾಜಸ್ಥಾನದ ಭರತ್‌ಪುರ ಕೋಟೆಯಲ್ಲಿ (ಕಬ್ಬಿಣದ ಕೋಟೆ) ಕಬ್ಬಿಣದ ಕಂಬವನ್ನು ಭರತ್‌ಪುರದ ಜಾಟ್ ಆಡಳಿತಗಾರರು ನಿರ್ಮಿಸಿದ್ದಾರೆ. ಮಹಾರಾಜ ಸೂರಜ್ ಮಾಲ್ (1707-1763) ರ ಅಡಿಯಲ್ಲಿ ಜಾಟ್ ಸಾಮ್ರಾಜ್ಯವು ತನ್ನ ಉತ್ತುಂಗವನ್ನು ತಲುಪಿತ್ತು. ಅವರು ಸಾಮ್ರಾಜ್ಯದಾದ್ಯಂತ ಹಲವಾರು ಕೋಟೆಗಳು ಮತ್ತು ಅರಮನೆಗಳನ್ನು ನಿರ್ಮಿಸಿದರು. ಈ ಪೈಕಿ ಲೋಹಗಢ್ ಕೋಟೆಯು ಪ್ರಬಲವಾಗಿದೆ” ಎಂದು ಬರೆಯಲಾಗಿದೆ.

ಡಿಸೆಂಬರ್ 25, 2021ರಂದು  ದೈನಿಕ್‌ ಭಾಸ್ಕರ್  ಮಾಡಿರುವ ಫೇಸ್‌ಬುಕ್‌ ಪೋಸ್ಟ್‌ನಲ್ಲಿ ವೈರಲ್ ಫೋಟೋದಲ್ಲಿರುವ ಲೋಹಸ್ತಂಭದಲ್ಲಿ ಬರೆದಿರುವ ರಾಜರ ಹೆಸರುಗಳ ಬಗ್ಗೆಯೂ ವಿವರಗಳನ್ನು ನೀಡಲಾಗಿದೆ.

ಭರತ್‌ಪುರದ ಲೋಹಸ್ತಂಭದ ಬಗ್ಗೆ ನವೆಂಬರ್ 26, 2018ರಂದು  ನೇಹಾ ವಿಡಿಯೋ ಫಿಲ್ಮ್ ಪ್ರೊಡಕ್ಷನ್ ಯೂಟ್ಯೂಬ್‌ ಚಾನೆಲ್‌ನಲ್ಲಿ ವಿಡಿಯೋ ಅಪ್ಲೋಡ್ ಮಾಡಲಾಗಿದೆ.  ಅದರಲ್ಲಿ “ಜವಾಹರ್ ಬುರ್ಜ್ ಭರತ್‌ಪುರವನ್ನು ಮಹಾರಾಜ ಸೂರಜ್ ಮಾಲ್ ನಿರ್ಮಿಸಿದನು. ಆದರೆ, ಅದರ ಮೇಲಿನ ರಚನೆಗಳನ್ನು ಮಹಾರಾಜ ಜವಾಹರ್ ಸಿಂಗ್ ಅವರು ದೆಹಲಿಯ ವಿಜಯದ ಸ್ಮಾರಕದಲ್ಲಿ ರಚಿಸಿದರು” ಎಂದು ವಿವರಿಸಲಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಕುತುಬ್ ಮಿನಾರ್ ನಿರ್ಮಿಸಿದ್ದು ಮೊಘಲರಲ್ಲ ಎಂದು ರಾಜಸ್ಥಾನದ ಕಬ್ಬಿಣದ ಕಂಬದ ಫೋಟೊವನ್ನು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ. ವಾಸ್ತವವಾಗಿ ವೈರಲ್ ಫೋಟೊದಲ್ಲಿರುವ ಸ್ತಂಭವು ಕುತುಬ್ ಮಿನಾರ್ ಅಲ್ಲ, ಅದು ರಾಜಸ್ಥಾನದ ಭರತ್‌ಪುರದ ಜವಾಹರ್ ಭುರ್ಜ್ ಎಂಬ ಲೋಹಸ್ತಂಭದ್ದಾಗಿದೆ. ಹಾಗಾಗಿ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : ಪಾವಗಡದಲ್ಲಿ ಸಿಂಹ ಎಂದು ಸುಳ್ಳು ವಿಡಿಯೊ ಪ್ರಸಾರ ಮಾಡಿದ ‘ಝೀ ಕನ್ನಡ ನ್ಯೂಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...