Homeಫ್ಯಾಕ್ಟ್‌ಚೆಕ್FACT CHECK : ಫೇಸ್‌ಬುಕ್, ಇನ್‌ಸ್ಟಾಗ್ರಾಮ್‌ ವೀಕ್ಷಿಸುತ್ತಾ ಬೀದಿಯಲ್ಲಿ ತಿರುಗಾಡುವ ಯುವಕರ ಖಾತೆಗಳಿಗೆ ಹಣ ಹಾಕುತ್ತೇವೆಂದು...

FACT CHECK : ಫೇಸ್‌ಬುಕ್, ಇನ್‌ಸ್ಟಾಗ್ರಾಮ್‌ ವೀಕ್ಷಿಸುತ್ತಾ ಬೀದಿಯಲ್ಲಿ ತಿರುಗಾಡುವ ಯುವಕರ ಖಾತೆಗಳಿಗೆ ಹಣ ಹಾಕುತ್ತೇವೆಂದು ರಾಹುಲ್ ಗಾಂಧಿ ಹೇಳಿಲ್ಲ

- Advertisement -
- Advertisement -

“ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ಗಳನ್ನು ಬಳಸಿಕೊಂಡು ಬೀದಿಗಳಲ್ಲಿ ತಿರುಗುತ್ತಿರುವ ನಮ್ಮ ಯುವಕರ ಬ್ಯಾಂಕ್ ಖಾತೆಗಳಿಗೆ ವಾರ್ಷಿಕ ಒಂದು ಲಕ್ಷ ರೂಪಾಯಿ ಮತ್ತು ತಿಂಗಳಿಗೆ 8,500 ರೂಪಾಯಿಗಳನ್ನು ಜಮಾ ಮಾಡಲಾಗುತ್ತದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ” ಎಂಬ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.

ಬಲಪಂಥೀಯ ಫೇಸ್‌ಬುಕ್ ಖಾತೆ ಪೋಸ್ಟ್‌ ಕಾರ್ಡ್‌ ಕನ್ನಡದಲ್ಲಿ “ಇದು ಯುವಜನತೆಯ ಸಬಲೀಕರಣವೋ ಅಥವಾ ಸರ್ವನಾಶವೋ ಎಂಬ ಶೀರ್ಷಿಕೆಯೊಂದಿಗೆ ಪೋಸ್ಟರ್‌ ಅನ್ನು ಹಂಚಿಕೊಂಡಿದೆ. 24*7 ಇನ್‌ಸ್ಟಾಗ್ರಾಮ್‌ ಮತ್ತು ಫೇಸ್‌ಬುಕ್ ವೀಕ್ಷಿಸುತ್ತಾ ಬೀದಿಯಲ್ಲಿ ತಿರುಗುವ ಯುವಕರ ಖಾತೆಗಳಿಗೆ ನಾವು ಪ್ರತಿ ವರ್ಷ ಒಂದು ಲಕ್ಷ ರೂ ಅಥವಾ ಪ್ರತಿ ತಿಂಗಳೂ 8,500 ರೂಪಾಯಿ ಹಾಕುತ್ತೇವೆ. ಎಲ್ಲರೂ ಕೆಲಸ ಬಿಟ್ಟು ಮನೆಯಲ್ಲಿ ಕೂರಲು ಸಿದ್ದರಾಗಿ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂದಿದೆ.

Megh Updates (@MeghUpdates) ಎಂಬ ಬಲಪಂಥೀಯ ಎಕ್ಸ್‌ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, “ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್ ಅನ್ನು 24×7 ವೀಕ್ಷಿಸುವ ಮೂಲಕ ಬೇಸರದ ಕೆಲಸವನ್ನು ಮಾಡುತ್ತಿರುವ ಸಾಮಾನ್ಯ ಯುವಕರ ಖಾತೆಗಳಿಗೆ ಪ್ರತಿ ತಿಂಗಳು 8,500 ರೂಗಳನ್ನು ಟಕಾ ಟಕ್ ಟಕಾ ಟಕ್‌ ಜಮಾ ಮಾಡುತ್ತೇವೆ” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಸದಾ ಸುಳ್ಳು ಸುದ್ದಿಗಳನ್ನೇ ಹಬ್ಬುವ Rishi Bagree (@rishibagree)ಎಂಬ ಬಲ ಪಂಥೀಯ ಎಕ್ಸ್ ಬಳಕೆದಾರ ಕೂಡ ವಿಡಿಯೋ ಹಂಚಿಕೊಂಡಿದ್ದು, “ನಿರುದ್ಯೋಗವನ್ನು ತೊಡೆದುಹಾಕಲು ರಾಹುಲ್ ಗಾಂಧಿಯವರ ಆಲೋಚನೆಯು ಹಣದ ಮೂಲಕ ನಿರುದ್ಯೋಗವನ್ನು ಉತ್ತೇಜಿಸುವುದು” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಫ್ಯಾಕ್ಟ್‌ಚೆಕ್ : ರಾಹುಲ್ ಗಾಂಧಿ ಮಾತನಾಡಿರುವ ವೈರಲ್ ವಿಡಿಯೋದ ಸತ್ಯಾಸತ್ಯೆ ತಿಳಿಯುವ ಸಲುವಾಗಿ ನಾವು ಮೂಲ ವಿಡಿಯೋ ಹುಡುಕಾಡಿದ್ದೇವೆ. ಈ ವೇಳೆ 20 ಏಪ್ರಿಲ್‌ 2024ರಂದು ರಾಹುಲ್ ಗಾಂಧಿಯವರ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಲೋಡ್ ಮಾಡಲಾದ “LIVE: Lok Sabha 2024 Campaign | Public Meeting | Bhagalpur, Bihar” ಎಂಬ ಶೀರ್ಷಿಕೆಯ ನೇರ ಪ್ರಸಾರದ ವಿಡಿಯೋ ದೊರೆತಿದೆ.

ವಿಡಿಯೋ ಲಿಂಕ್ ಇಲ್ಲಿದೆ 

ಮೂಲ ವಿಡಿಯೋದಲ್ಲಿ “ನರೇಂದ್ರ ಮೋದಿಯವರು ದೇಶವನ್ನು ನಿರುದ್ಯೋಗದ ಕೇಂದ್ರವನ್ನಾಗಿ ಮಾರ್ಪಡಿಸಿದ್ದಾರೆ. ಯುವ ಜನರಲ್ಲಿ ಕೇಳಿ ನೀವು ಏನು ಮಾಡುತ್ತಿದ್ದೀರಾ? ಎಂದು ಅದಕ್ಕೆ ಅವರ ಉತ್ತರ ಏನೂ ಇಲ್ಲ ಎಂದು ಇರುತ್ತದೆ. ಇಂದು ಭಾರತದಲ್ಲಿ ಯುವಕರು ಇನ್‌ಸ್ಟಾಗ್ರಾಮ್‌, ಫೇಸ್‌ಬುಕ್‌ ನೋಡಿಕೊಂಡು ಬೀದಿಗಳಲ್ಲಿ ತಿರುಗುತ್ತಿದ್ದಾರೆ. ಏಕೆಂದರೆ, ಅವರಿಗೆ ಉದ್ಯೋಗವಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳನ್ನು ಕೆಲ ತಿಂಗಳು ವೇತನ ಸಹಿತ ತರಬೇತಿಯನ್ನು ನಾವು ಕೊಡುತ್ತೇವೆ. ಒಂದು ವೇಳೆ ಉದ್ಯೋಗದ ಕೊರತೆ ಎದುರಾದರೆ, ಅವರಿಗೆ ಹಣದ ನೆರವನ್ನು ನೀಡುವ ಮೂಲಕ ಸ್ವಉದ್ಯೋಗಕ್ಕೆ ಪ್ರೇರಣೆ ನೀಡುತ್ತೇವೆ” ಎಂದು ತಿಳಿಸಿದ್ದಾರೆ.

ಮುಂದುವರೆಸಿದ ರಾಹುಲ್ ಗಾಂಧಿ “ಪ್ರಧಾನಿ ಮೋದಿಯಿಂದಾಗಿ ಇವತ್ತು ಯಾರೆಲ್ಲ ನಿರುದ್ಯೋಗದಿಂದ ಬೀದಿಯಲ್ಲಿ ಇನ್ಸ್‌ಸ್ಟಾಗ್ರಾಮ್‌, ಫೇಸ್‌ಬುಕ್‌ ನೋಡುತ್ತಾ ಕುಳಿತಿರುತ್ತಾರೋ ಅವರ ಖಾತೆಗೆ ನಾವು ವರ್ಷಕ್ಕೆ 1 ಲಕ್ಷ ರೂ. ತಿಂಗಳಿಗೆ 8,500 ರೂ. ಹಾಕುತ್ತೇವೆ” ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯ ವಿಡಿಯೋವನ್ನು ಎಡಿಟ್‌ ಮಾಡಿ ಸುಳ್ಳು ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ : FACT CHECK : ಆಂಧ್ರದಲ್ಲಿ ಎಸ್‌ಸಿ, ಎಸ್‌ಟಿ ಮೀಸಲಾತಿ ಕಡಿತಗೊಳಿಸಿ ಮುಸ್ಲಿಮರಿಗೆ ನೀಡಲಾಗಿದೆ ಎಂಬ ಮೋದಿ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...