Homeಫ್ಯಾಕ್ಟ್‌ಚೆಕ್FACT CHECK : ಫೇಸ್‌ಬುಕ್, ಇನ್‌ಸ್ಟಾಗ್ರಾಮ್‌ ವೀಕ್ಷಿಸುತ್ತಾ ಬೀದಿಯಲ್ಲಿ ತಿರುಗಾಡುವ ಯುವಕರ ಖಾತೆಗಳಿಗೆ ಹಣ ಹಾಕುತ್ತೇವೆಂದು...

FACT CHECK : ಫೇಸ್‌ಬುಕ್, ಇನ್‌ಸ್ಟಾಗ್ರಾಮ್‌ ವೀಕ್ಷಿಸುತ್ತಾ ಬೀದಿಯಲ್ಲಿ ತಿರುಗಾಡುವ ಯುವಕರ ಖಾತೆಗಳಿಗೆ ಹಣ ಹಾಕುತ್ತೇವೆಂದು ರಾಹುಲ್ ಗಾಂಧಿ ಹೇಳಿಲ್ಲ

- Advertisement -
- Advertisement -

“ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ಗಳನ್ನು ಬಳಸಿಕೊಂಡು ಬೀದಿಗಳಲ್ಲಿ ತಿರುಗುತ್ತಿರುವ ನಮ್ಮ ಯುವಕರ ಬ್ಯಾಂಕ್ ಖಾತೆಗಳಿಗೆ ವಾರ್ಷಿಕ ಒಂದು ಲಕ್ಷ ರೂಪಾಯಿ ಮತ್ತು ತಿಂಗಳಿಗೆ 8,500 ರೂಪಾಯಿಗಳನ್ನು ಜಮಾ ಮಾಡಲಾಗುತ್ತದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ” ಎಂಬ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.

ಬಲಪಂಥೀಯ ಫೇಸ್‌ಬುಕ್ ಖಾತೆ ಪೋಸ್ಟ್‌ ಕಾರ್ಡ್‌ ಕನ್ನಡದಲ್ಲಿ “ಇದು ಯುವಜನತೆಯ ಸಬಲೀಕರಣವೋ ಅಥವಾ ಸರ್ವನಾಶವೋ ಎಂಬ ಶೀರ್ಷಿಕೆಯೊಂದಿಗೆ ಪೋಸ್ಟರ್‌ ಅನ್ನು ಹಂಚಿಕೊಂಡಿದೆ. 24*7 ಇನ್‌ಸ್ಟಾಗ್ರಾಮ್‌ ಮತ್ತು ಫೇಸ್‌ಬುಕ್ ವೀಕ್ಷಿಸುತ್ತಾ ಬೀದಿಯಲ್ಲಿ ತಿರುಗುವ ಯುವಕರ ಖಾತೆಗಳಿಗೆ ನಾವು ಪ್ರತಿ ವರ್ಷ ಒಂದು ಲಕ್ಷ ರೂ ಅಥವಾ ಪ್ರತಿ ತಿಂಗಳೂ 8,500 ರೂಪಾಯಿ ಹಾಕುತ್ತೇವೆ. ಎಲ್ಲರೂ ಕೆಲಸ ಬಿಟ್ಟು ಮನೆಯಲ್ಲಿ ಕೂರಲು ಸಿದ್ದರಾಗಿ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂದಿದೆ.

Megh Updates (@MeghUpdates) ಎಂಬ ಬಲಪಂಥೀಯ ಎಕ್ಸ್‌ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, “ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್ ಅನ್ನು 24×7 ವೀಕ್ಷಿಸುವ ಮೂಲಕ ಬೇಸರದ ಕೆಲಸವನ್ನು ಮಾಡುತ್ತಿರುವ ಸಾಮಾನ್ಯ ಯುವಕರ ಖಾತೆಗಳಿಗೆ ಪ್ರತಿ ತಿಂಗಳು 8,500 ರೂಗಳನ್ನು ಟಕಾ ಟಕ್ ಟಕಾ ಟಕ್‌ ಜಮಾ ಮಾಡುತ್ತೇವೆ” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಸದಾ ಸುಳ್ಳು ಸುದ್ದಿಗಳನ್ನೇ ಹಬ್ಬುವ Rishi Bagree (@rishibagree)ಎಂಬ ಬಲ ಪಂಥೀಯ ಎಕ್ಸ್ ಬಳಕೆದಾರ ಕೂಡ ವಿಡಿಯೋ ಹಂಚಿಕೊಂಡಿದ್ದು, “ನಿರುದ್ಯೋಗವನ್ನು ತೊಡೆದುಹಾಕಲು ರಾಹುಲ್ ಗಾಂಧಿಯವರ ಆಲೋಚನೆಯು ಹಣದ ಮೂಲಕ ನಿರುದ್ಯೋಗವನ್ನು ಉತ್ತೇಜಿಸುವುದು” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಫ್ಯಾಕ್ಟ್‌ಚೆಕ್ : ರಾಹುಲ್ ಗಾಂಧಿ ಮಾತನಾಡಿರುವ ವೈರಲ್ ವಿಡಿಯೋದ ಸತ್ಯಾಸತ್ಯೆ ತಿಳಿಯುವ ಸಲುವಾಗಿ ನಾವು ಮೂಲ ವಿಡಿಯೋ ಹುಡುಕಾಡಿದ್ದೇವೆ. ಈ ವೇಳೆ 20 ಏಪ್ರಿಲ್‌ 2024ರಂದು ರಾಹುಲ್ ಗಾಂಧಿಯವರ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಲೋಡ್ ಮಾಡಲಾದ “LIVE: Lok Sabha 2024 Campaign | Public Meeting | Bhagalpur, Bihar” ಎಂಬ ಶೀರ್ಷಿಕೆಯ ನೇರ ಪ್ರಸಾರದ ವಿಡಿಯೋ ದೊರೆತಿದೆ.

ವಿಡಿಯೋ ಲಿಂಕ್ ಇಲ್ಲಿದೆ 

ಮೂಲ ವಿಡಿಯೋದಲ್ಲಿ “ನರೇಂದ್ರ ಮೋದಿಯವರು ದೇಶವನ್ನು ನಿರುದ್ಯೋಗದ ಕೇಂದ್ರವನ್ನಾಗಿ ಮಾರ್ಪಡಿಸಿದ್ದಾರೆ. ಯುವ ಜನರಲ್ಲಿ ಕೇಳಿ ನೀವು ಏನು ಮಾಡುತ್ತಿದ್ದೀರಾ? ಎಂದು ಅದಕ್ಕೆ ಅವರ ಉತ್ತರ ಏನೂ ಇಲ್ಲ ಎಂದು ಇರುತ್ತದೆ. ಇಂದು ಭಾರತದಲ್ಲಿ ಯುವಕರು ಇನ್‌ಸ್ಟಾಗ್ರಾಮ್‌, ಫೇಸ್‌ಬುಕ್‌ ನೋಡಿಕೊಂಡು ಬೀದಿಗಳಲ್ಲಿ ತಿರುಗುತ್ತಿದ್ದಾರೆ. ಏಕೆಂದರೆ, ಅವರಿಗೆ ಉದ್ಯೋಗವಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳನ್ನು ಕೆಲ ತಿಂಗಳು ವೇತನ ಸಹಿತ ತರಬೇತಿಯನ್ನು ನಾವು ಕೊಡುತ್ತೇವೆ. ಒಂದು ವೇಳೆ ಉದ್ಯೋಗದ ಕೊರತೆ ಎದುರಾದರೆ, ಅವರಿಗೆ ಹಣದ ನೆರವನ್ನು ನೀಡುವ ಮೂಲಕ ಸ್ವಉದ್ಯೋಗಕ್ಕೆ ಪ್ರೇರಣೆ ನೀಡುತ್ತೇವೆ” ಎಂದು ತಿಳಿಸಿದ್ದಾರೆ.

ಮುಂದುವರೆಸಿದ ರಾಹುಲ್ ಗಾಂಧಿ “ಪ್ರಧಾನಿ ಮೋದಿಯಿಂದಾಗಿ ಇವತ್ತು ಯಾರೆಲ್ಲ ನಿರುದ್ಯೋಗದಿಂದ ಬೀದಿಯಲ್ಲಿ ಇನ್ಸ್‌ಸ್ಟಾಗ್ರಾಮ್‌, ಫೇಸ್‌ಬುಕ್‌ ನೋಡುತ್ತಾ ಕುಳಿತಿರುತ್ತಾರೋ ಅವರ ಖಾತೆಗೆ ನಾವು ವರ್ಷಕ್ಕೆ 1 ಲಕ್ಷ ರೂ. ತಿಂಗಳಿಗೆ 8,500 ರೂ. ಹಾಕುತ್ತೇವೆ” ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯ ವಿಡಿಯೋವನ್ನು ಎಡಿಟ್‌ ಮಾಡಿ ಸುಳ್ಳು ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ : FACT CHECK : ಆಂಧ್ರದಲ್ಲಿ ಎಸ್‌ಸಿ, ಎಸ್‌ಟಿ ಮೀಸಲಾತಿ ಕಡಿತಗೊಳಿಸಿ ಮುಸ್ಲಿಮರಿಗೆ ನೀಡಲಾಗಿದೆ ಎಂಬ ಮೋದಿ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...