Homeಫ್ಯಾಕ್ಟ್‌ಚೆಕ್FACT CHECK : ಫೇಸ್‌ಬುಕ್, ಇನ್‌ಸ್ಟಾಗ್ರಾಮ್‌ ವೀಕ್ಷಿಸುತ್ತಾ ಬೀದಿಯಲ್ಲಿ ತಿರುಗಾಡುವ ಯುವಕರ ಖಾತೆಗಳಿಗೆ ಹಣ ಹಾಕುತ್ತೇವೆಂದು...

FACT CHECK : ಫೇಸ್‌ಬುಕ್, ಇನ್‌ಸ್ಟಾಗ್ರಾಮ್‌ ವೀಕ್ಷಿಸುತ್ತಾ ಬೀದಿಯಲ್ಲಿ ತಿರುಗಾಡುವ ಯುವಕರ ಖಾತೆಗಳಿಗೆ ಹಣ ಹಾಕುತ್ತೇವೆಂದು ರಾಹುಲ್ ಗಾಂಧಿ ಹೇಳಿಲ್ಲ

- Advertisement -
- Advertisement -

“ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ಗಳನ್ನು ಬಳಸಿಕೊಂಡು ಬೀದಿಗಳಲ್ಲಿ ತಿರುಗುತ್ತಿರುವ ನಮ್ಮ ಯುವಕರ ಬ್ಯಾಂಕ್ ಖಾತೆಗಳಿಗೆ ವಾರ್ಷಿಕ ಒಂದು ಲಕ್ಷ ರೂಪಾಯಿ ಮತ್ತು ತಿಂಗಳಿಗೆ 8,500 ರೂಪಾಯಿಗಳನ್ನು ಜಮಾ ಮಾಡಲಾಗುತ್ತದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ” ಎಂಬ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.

ಬಲಪಂಥೀಯ ಫೇಸ್‌ಬುಕ್ ಖಾತೆ ಪೋಸ್ಟ್‌ ಕಾರ್ಡ್‌ ಕನ್ನಡದಲ್ಲಿ “ಇದು ಯುವಜನತೆಯ ಸಬಲೀಕರಣವೋ ಅಥವಾ ಸರ್ವನಾಶವೋ ಎಂಬ ಶೀರ್ಷಿಕೆಯೊಂದಿಗೆ ಪೋಸ್ಟರ್‌ ಅನ್ನು ಹಂಚಿಕೊಂಡಿದೆ. 24*7 ಇನ್‌ಸ್ಟಾಗ್ರಾಮ್‌ ಮತ್ತು ಫೇಸ್‌ಬುಕ್ ವೀಕ್ಷಿಸುತ್ತಾ ಬೀದಿಯಲ್ಲಿ ತಿರುಗುವ ಯುವಕರ ಖಾತೆಗಳಿಗೆ ನಾವು ಪ್ರತಿ ವರ್ಷ ಒಂದು ಲಕ್ಷ ರೂ ಅಥವಾ ಪ್ರತಿ ತಿಂಗಳೂ 8,500 ರೂಪಾಯಿ ಹಾಕುತ್ತೇವೆ. ಎಲ್ಲರೂ ಕೆಲಸ ಬಿಟ್ಟು ಮನೆಯಲ್ಲಿ ಕೂರಲು ಸಿದ್ದರಾಗಿ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂದಿದೆ.

Megh Updates (@MeghUpdates) ಎಂಬ ಬಲಪಂಥೀಯ ಎಕ್ಸ್‌ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, “ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್ ಅನ್ನು 24×7 ವೀಕ್ಷಿಸುವ ಮೂಲಕ ಬೇಸರದ ಕೆಲಸವನ್ನು ಮಾಡುತ್ತಿರುವ ಸಾಮಾನ್ಯ ಯುವಕರ ಖಾತೆಗಳಿಗೆ ಪ್ರತಿ ತಿಂಗಳು 8,500 ರೂಗಳನ್ನು ಟಕಾ ಟಕ್ ಟಕಾ ಟಕ್‌ ಜಮಾ ಮಾಡುತ್ತೇವೆ” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಸದಾ ಸುಳ್ಳು ಸುದ್ದಿಗಳನ್ನೇ ಹಬ್ಬುವ Rishi Bagree (@rishibagree)ಎಂಬ ಬಲ ಪಂಥೀಯ ಎಕ್ಸ್ ಬಳಕೆದಾರ ಕೂಡ ವಿಡಿಯೋ ಹಂಚಿಕೊಂಡಿದ್ದು, “ನಿರುದ್ಯೋಗವನ್ನು ತೊಡೆದುಹಾಕಲು ರಾಹುಲ್ ಗಾಂಧಿಯವರ ಆಲೋಚನೆಯು ಹಣದ ಮೂಲಕ ನಿರುದ್ಯೋಗವನ್ನು ಉತ್ತೇಜಿಸುವುದು” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಫ್ಯಾಕ್ಟ್‌ಚೆಕ್ : ರಾಹುಲ್ ಗಾಂಧಿ ಮಾತನಾಡಿರುವ ವೈರಲ್ ವಿಡಿಯೋದ ಸತ್ಯಾಸತ್ಯೆ ತಿಳಿಯುವ ಸಲುವಾಗಿ ನಾವು ಮೂಲ ವಿಡಿಯೋ ಹುಡುಕಾಡಿದ್ದೇವೆ. ಈ ವೇಳೆ 20 ಏಪ್ರಿಲ್‌ 2024ರಂದು ರಾಹುಲ್ ಗಾಂಧಿಯವರ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಲೋಡ್ ಮಾಡಲಾದ “LIVE: Lok Sabha 2024 Campaign | Public Meeting | Bhagalpur, Bihar” ಎಂಬ ಶೀರ್ಷಿಕೆಯ ನೇರ ಪ್ರಸಾರದ ವಿಡಿಯೋ ದೊರೆತಿದೆ.

ವಿಡಿಯೋ ಲಿಂಕ್ ಇಲ್ಲಿದೆ 

ಮೂಲ ವಿಡಿಯೋದಲ್ಲಿ “ನರೇಂದ್ರ ಮೋದಿಯವರು ದೇಶವನ್ನು ನಿರುದ್ಯೋಗದ ಕೇಂದ್ರವನ್ನಾಗಿ ಮಾರ್ಪಡಿಸಿದ್ದಾರೆ. ಯುವ ಜನರಲ್ಲಿ ಕೇಳಿ ನೀವು ಏನು ಮಾಡುತ್ತಿದ್ದೀರಾ? ಎಂದು ಅದಕ್ಕೆ ಅವರ ಉತ್ತರ ಏನೂ ಇಲ್ಲ ಎಂದು ಇರುತ್ತದೆ. ಇಂದು ಭಾರತದಲ್ಲಿ ಯುವಕರು ಇನ್‌ಸ್ಟಾಗ್ರಾಮ್‌, ಫೇಸ್‌ಬುಕ್‌ ನೋಡಿಕೊಂಡು ಬೀದಿಗಳಲ್ಲಿ ತಿರುಗುತ್ತಿದ್ದಾರೆ. ಏಕೆಂದರೆ, ಅವರಿಗೆ ಉದ್ಯೋಗವಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳನ್ನು ಕೆಲ ತಿಂಗಳು ವೇತನ ಸಹಿತ ತರಬೇತಿಯನ್ನು ನಾವು ಕೊಡುತ್ತೇವೆ. ಒಂದು ವೇಳೆ ಉದ್ಯೋಗದ ಕೊರತೆ ಎದುರಾದರೆ, ಅವರಿಗೆ ಹಣದ ನೆರವನ್ನು ನೀಡುವ ಮೂಲಕ ಸ್ವಉದ್ಯೋಗಕ್ಕೆ ಪ್ರೇರಣೆ ನೀಡುತ್ತೇವೆ” ಎಂದು ತಿಳಿಸಿದ್ದಾರೆ.

ಮುಂದುವರೆಸಿದ ರಾಹುಲ್ ಗಾಂಧಿ “ಪ್ರಧಾನಿ ಮೋದಿಯಿಂದಾಗಿ ಇವತ್ತು ಯಾರೆಲ್ಲ ನಿರುದ್ಯೋಗದಿಂದ ಬೀದಿಯಲ್ಲಿ ಇನ್ಸ್‌ಸ್ಟಾಗ್ರಾಮ್‌, ಫೇಸ್‌ಬುಕ್‌ ನೋಡುತ್ತಾ ಕುಳಿತಿರುತ್ತಾರೋ ಅವರ ಖಾತೆಗೆ ನಾವು ವರ್ಷಕ್ಕೆ 1 ಲಕ್ಷ ರೂ. ತಿಂಗಳಿಗೆ 8,500 ರೂ. ಹಾಕುತ್ತೇವೆ” ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯ ವಿಡಿಯೋವನ್ನು ಎಡಿಟ್‌ ಮಾಡಿ ಸುಳ್ಳು ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ : FACT CHECK : ಆಂಧ್ರದಲ್ಲಿ ಎಸ್‌ಸಿ, ಎಸ್‌ಟಿ ಮೀಸಲಾತಿ ಕಡಿತಗೊಳಿಸಿ ಮುಸ್ಲಿಮರಿಗೆ ನೀಡಲಾಗಿದೆ ಎಂಬ ಮೋದಿ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...