Homeಫ್ಯಾಕ್ಟ್‌ಚೆಕ್FACT CHECK : ಫೇಸ್‌ಬುಕ್, ಇನ್‌ಸ್ಟಾಗ್ರಾಮ್‌ ವೀಕ್ಷಿಸುತ್ತಾ ಬೀದಿಯಲ್ಲಿ ತಿರುಗಾಡುವ ಯುವಕರ ಖಾತೆಗಳಿಗೆ ಹಣ ಹಾಕುತ್ತೇವೆಂದು...

FACT CHECK : ಫೇಸ್‌ಬುಕ್, ಇನ್‌ಸ್ಟಾಗ್ರಾಮ್‌ ವೀಕ್ಷಿಸುತ್ತಾ ಬೀದಿಯಲ್ಲಿ ತಿರುಗಾಡುವ ಯುವಕರ ಖಾತೆಗಳಿಗೆ ಹಣ ಹಾಕುತ್ತೇವೆಂದು ರಾಹುಲ್ ಗಾಂಧಿ ಹೇಳಿಲ್ಲ

- Advertisement -
- Advertisement -

“ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ಗಳನ್ನು ಬಳಸಿಕೊಂಡು ಬೀದಿಗಳಲ್ಲಿ ತಿರುಗುತ್ತಿರುವ ನಮ್ಮ ಯುವಕರ ಬ್ಯಾಂಕ್ ಖಾತೆಗಳಿಗೆ ವಾರ್ಷಿಕ ಒಂದು ಲಕ್ಷ ರೂಪಾಯಿ ಮತ್ತು ತಿಂಗಳಿಗೆ 8,500 ರೂಪಾಯಿಗಳನ್ನು ಜಮಾ ಮಾಡಲಾಗುತ್ತದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ” ಎಂಬ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.

ಬಲಪಂಥೀಯ ಫೇಸ್‌ಬುಕ್ ಖಾತೆ ಪೋಸ್ಟ್‌ ಕಾರ್ಡ್‌ ಕನ್ನಡದಲ್ಲಿ “ಇದು ಯುವಜನತೆಯ ಸಬಲೀಕರಣವೋ ಅಥವಾ ಸರ್ವನಾಶವೋ ಎಂಬ ಶೀರ್ಷಿಕೆಯೊಂದಿಗೆ ಪೋಸ್ಟರ್‌ ಅನ್ನು ಹಂಚಿಕೊಂಡಿದೆ. 24*7 ಇನ್‌ಸ್ಟಾಗ್ರಾಮ್‌ ಮತ್ತು ಫೇಸ್‌ಬುಕ್ ವೀಕ್ಷಿಸುತ್ತಾ ಬೀದಿಯಲ್ಲಿ ತಿರುಗುವ ಯುವಕರ ಖಾತೆಗಳಿಗೆ ನಾವು ಪ್ರತಿ ವರ್ಷ ಒಂದು ಲಕ್ಷ ರೂ ಅಥವಾ ಪ್ರತಿ ತಿಂಗಳೂ 8,500 ರೂಪಾಯಿ ಹಾಕುತ್ತೇವೆ. ಎಲ್ಲರೂ ಕೆಲಸ ಬಿಟ್ಟು ಮನೆಯಲ್ಲಿ ಕೂರಲು ಸಿದ್ದರಾಗಿ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂದಿದೆ.

Megh Updates (@MeghUpdates) ಎಂಬ ಬಲಪಂಥೀಯ ಎಕ್ಸ್‌ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, “ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್ ಅನ್ನು 24×7 ವೀಕ್ಷಿಸುವ ಮೂಲಕ ಬೇಸರದ ಕೆಲಸವನ್ನು ಮಾಡುತ್ತಿರುವ ಸಾಮಾನ್ಯ ಯುವಕರ ಖಾತೆಗಳಿಗೆ ಪ್ರತಿ ತಿಂಗಳು 8,500 ರೂಗಳನ್ನು ಟಕಾ ಟಕ್ ಟಕಾ ಟಕ್‌ ಜಮಾ ಮಾಡುತ್ತೇವೆ” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಸದಾ ಸುಳ್ಳು ಸುದ್ದಿಗಳನ್ನೇ ಹಬ್ಬುವ Rishi Bagree (@rishibagree)ಎಂಬ ಬಲ ಪಂಥೀಯ ಎಕ್ಸ್ ಬಳಕೆದಾರ ಕೂಡ ವಿಡಿಯೋ ಹಂಚಿಕೊಂಡಿದ್ದು, “ನಿರುದ್ಯೋಗವನ್ನು ತೊಡೆದುಹಾಕಲು ರಾಹುಲ್ ಗಾಂಧಿಯವರ ಆಲೋಚನೆಯು ಹಣದ ಮೂಲಕ ನಿರುದ್ಯೋಗವನ್ನು ಉತ್ತೇಜಿಸುವುದು” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಫ್ಯಾಕ್ಟ್‌ಚೆಕ್ : ರಾಹುಲ್ ಗಾಂಧಿ ಮಾತನಾಡಿರುವ ವೈರಲ್ ವಿಡಿಯೋದ ಸತ್ಯಾಸತ್ಯೆ ತಿಳಿಯುವ ಸಲುವಾಗಿ ನಾವು ಮೂಲ ವಿಡಿಯೋ ಹುಡುಕಾಡಿದ್ದೇವೆ. ಈ ವೇಳೆ 20 ಏಪ್ರಿಲ್‌ 2024ರಂದು ರಾಹುಲ್ ಗಾಂಧಿಯವರ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಲೋಡ್ ಮಾಡಲಾದ “LIVE: Lok Sabha 2024 Campaign | Public Meeting | Bhagalpur, Bihar” ಎಂಬ ಶೀರ್ಷಿಕೆಯ ನೇರ ಪ್ರಸಾರದ ವಿಡಿಯೋ ದೊರೆತಿದೆ.

ವಿಡಿಯೋ ಲಿಂಕ್ ಇಲ್ಲಿದೆ 

ಮೂಲ ವಿಡಿಯೋದಲ್ಲಿ “ನರೇಂದ್ರ ಮೋದಿಯವರು ದೇಶವನ್ನು ನಿರುದ್ಯೋಗದ ಕೇಂದ್ರವನ್ನಾಗಿ ಮಾರ್ಪಡಿಸಿದ್ದಾರೆ. ಯುವ ಜನರಲ್ಲಿ ಕೇಳಿ ನೀವು ಏನು ಮಾಡುತ್ತಿದ್ದೀರಾ? ಎಂದು ಅದಕ್ಕೆ ಅವರ ಉತ್ತರ ಏನೂ ಇಲ್ಲ ಎಂದು ಇರುತ್ತದೆ. ಇಂದು ಭಾರತದಲ್ಲಿ ಯುವಕರು ಇನ್‌ಸ್ಟಾಗ್ರಾಮ್‌, ಫೇಸ್‌ಬುಕ್‌ ನೋಡಿಕೊಂಡು ಬೀದಿಗಳಲ್ಲಿ ತಿರುಗುತ್ತಿದ್ದಾರೆ. ಏಕೆಂದರೆ, ಅವರಿಗೆ ಉದ್ಯೋಗವಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳನ್ನು ಕೆಲ ತಿಂಗಳು ವೇತನ ಸಹಿತ ತರಬೇತಿಯನ್ನು ನಾವು ಕೊಡುತ್ತೇವೆ. ಒಂದು ವೇಳೆ ಉದ್ಯೋಗದ ಕೊರತೆ ಎದುರಾದರೆ, ಅವರಿಗೆ ಹಣದ ನೆರವನ್ನು ನೀಡುವ ಮೂಲಕ ಸ್ವಉದ್ಯೋಗಕ್ಕೆ ಪ್ರೇರಣೆ ನೀಡುತ್ತೇವೆ” ಎಂದು ತಿಳಿಸಿದ್ದಾರೆ.

ಮುಂದುವರೆಸಿದ ರಾಹುಲ್ ಗಾಂಧಿ “ಪ್ರಧಾನಿ ಮೋದಿಯಿಂದಾಗಿ ಇವತ್ತು ಯಾರೆಲ್ಲ ನಿರುದ್ಯೋಗದಿಂದ ಬೀದಿಯಲ್ಲಿ ಇನ್ಸ್‌ಸ್ಟಾಗ್ರಾಮ್‌, ಫೇಸ್‌ಬುಕ್‌ ನೋಡುತ್ತಾ ಕುಳಿತಿರುತ್ತಾರೋ ಅವರ ಖಾತೆಗೆ ನಾವು ವರ್ಷಕ್ಕೆ 1 ಲಕ್ಷ ರೂ. ತಿಂಗಳಿಗೆ 8,500 ರೂ. ಹಾಕುತ್ತೇವೆ” ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯ ವಿಡಿಯೋವನ್ನು ಎಡಿಟ್‌ ಮಾಡಿ ಸುಳ್ಳು ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ : FACT CHECK : ಆಂಧ್ರದಲ್ಲಿ ಎಸ್‌ಸಿ, ಎಸ್‌ಟಿ ಮೀಸಲಾತಿ ಕಡಿತಗೊಳಿಸಿ ಮುಸ್ಲಿಮರಿಗೆ ನೀಡಲಾಗಿದೆ ಎಂಬ ಮೋದಿ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....