Homeಫ್ಯಾಕ್ಟ್‌ಚೆಕ್FACT CHEK : ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಎಂದು ರಾಹುಲ್ ಗಾಂಧಿ ಹೇಳಿಲ್ಲ

FACT CHEK : ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಎಂದು ರಾಹುಲ್ ಗಾಂಧಿ ಹೇಳಿಲ್ಲ

- Advertisement -
- Advertisement -

ಕೋಲಾರದಲ್ಲಿ ನಡೆದ ಕಾಂಗ್ರೆಸ್‌ ಸಮಾವೇಶದಲ್ಲಿ ರಾಹುಲ್ ಗಾಂಧಿಯವರು ಸಿದ್ದರಾಮಯ್ಯ ಬದಲು ಡಿ.ಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಎಂದು ಸಂಬೋಧಿಸಿದ್ದಾರೆ. ಈ ಮೂಲಕ ಪರೋಕ್ಷವಾಗಿ ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವ ಸೂಚನೆ ನೀಡಿದ್ದಾರೆ ಎಂದು ಪ್ರತಿಪಾದಿಸಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗ್ತಿದೆ.

ಬಲಪಂಥೀಯ ಯೂಟ್ಯೂಬ್ ಚಾನೆಲ್ ‘ಟಿವಿ ವಿಕ್ರಮ’ “ಡಿಕೆಶಿ ಹೊಸ ಮುಖ್ಯಮಂತ್ರಿ, ಸಿದ್ದರಾಮಯ್ಯಂಗೆ ಅಧ್ಯಕ್ಷ ಪಟ್ಟ, ದಿಲ್ಲಿ ದೊರೆಯ ಹೊಸಾ ಆಟ” ಎಂಬ ಶೀರ್ಷಿಕೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ರಾಹುಲ್ ಗಾಂಧಿ ಡಿ.ಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಎಂದು ಕರೆದಿರುವುದು ದೊಡ್ಡ ಸಂಚಲನ ಸೃಷ್ಟಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈಗಲೂ ವಿಡಿಯೋಗಳು ಹರಿದಾಡುತ್ತಿವೆ ಎಂದು ಹೇಳಿದ್ದಾರೆ.

ವಿಡಿಯೋ ಲಿಂಕ್ ಇಲ್ಲಿದೆ

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದಲ್ಲಿರುವಂತೆ ರಾಹುಲ್ ಗಾಂಧಿ ನಿಜವಾಗಿಯೂ ಡಿ.ಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಅಂದ್ರಾ? ಅವರು ಹೇಳಿದ್ದು ನಿಜವಾಗಿದ್ದರೆ, ಉದ್ದೇಶಪೂರ್ವಕವಾಗಿ ಹೇಳಿದ್ರಾ? ಇಲ್ಲಾ..ಬಾಯಿ ತಪ್ಪಿ ಹೇಳಿದ್ರಾ? ಈ ಎಲ್ಲಾ ವಿಷಯಗಳ ಕುರಿತು ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ.

ಇದಕ್ಕಾಗಿ, ನಾವು ರಾಹುಲ್ ಗಾಂಧಿಯವರ ಭಾಷಣದ ಮೂಲ ವಿಡಿಯೋವನ್ನು ಹುಡುಕಿದ್ದೇವೆ. ಈ ವೇಳೆ ನ್ಯೂಸ್‌ 18 ಕನ್ನಡ ಏಪ್ರಿಲ್ 17, 2024ರಂದು “LIVE: Rahul Gandhi In Kolar | Congress Rally”ಎಂಬ ಶೀರ್ಷಿಕೆಯಲ್ಲಿ ಹಂಚಿಕೊಂಡ ವಿಡಿಯೋವೊಂದು ದೊರೆತಿದೆ.

ವಿಡಿಯೋ ಲಿಂಕ್ ಇಲ್ಲಿದೆ 

ಒಟ್ಟು 1 ಗಂಟೆ 36 ನಿಮಿಷ 40 ಸೆಕೆಂಡ್‌ ಅವಧಿಯ ನೇರ ಪ್ರಸಾರದ ವಿಡಿಯೋದಲ್ಲಿ, 22 ನಿಮಿಷ 6 ಸೆಕೆಂಡ್‌ನಿಂದ ರಾಹುಲ್ ಗಾಂಧಿಯವರ ಭಾಷಣವಿದೆ.

ವಿಡಿಯೋದಲ್ಲಿ 22 ನಿಮಿಷ 14 ಸೆಕೆಂಡ್‌ನಿಂದ ರಾಹುಲ್ ಗಾಂಧಿ ಈ ರೀತಿ ಹೇಳಿದ್ದಾರೆ…”ಖರ್ಗೆ ಅವರೇ.. ಕಾಂಗ್ರೆಸ್ ಅಧ್ಯಕ್ಷರು, ಸಿದ್ದರಾಮಯ್ಯ ಅವರೇ…ನಮ್ಮ ಮುಖ್ಯಮಂತ್ರಿಗಳು, ಡಿ.ಕೆ ಶಿವಕುಮಾರ್ ಅವರೇ…ಕೆ. ಹೆಚ್ ಮುನಿಯಪ್ಪ ಅವರೇ..ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರೇ..ನನ್ನ ಪ್ರೀತಿಯ ಪಕ್ಷದ ಕಾರ್ಯಕರ್ತರೇ..ಮಾಧ್ಯಮ ಮಿತ್ರರು, ಸಹೋದರ-ಸಹೋದರಿಯರು ಎಲ್ಲರಿಗೂ ನಾನು ಸ್ವಾಗತ ಕೋರುತ್ತೇನೆ”

ಅಂದರೆ, ಇಲ್ಲಿ ರಾಹುಲ್ ಗಾಂಧಿಯವರು ಮೊದಲು ವ್ಯಕ್ತಿಗಳ ಹೆಸರು ಹೇಳಿ ಬಳಿಕ ಅವರ ಹುದ್ದೆ ಉಲ್ಲೇಖಿಸಿದ್ದಾರೆ.

ಟಿವಿ ವಿಕ್ರಮ ಹಾಗೂ ಕೆಲ ಎಕ್ಸ್ ಬಳಕೆದಾರರು, “ಖರ್ಗೆ ಅವರೇ…ಕಾಂಗ್ರೆಸ್ ಅಧ್ಯಕ್ಷರು” ಎಂದು ಹೇಳಿರುವುದಲ್ಲಿ “ಖರ್ಗೆ ಅವರೇ”..ಎಂಬುವುದನ್ನು ಕಟ್ ಮಾಡಿ..”ಕಾಂಗ್ರೆಸ್ ಅಧ್ಯಕ್ಷರು, ಸಿದ್ದರಾಮಯ್ಯ ಅವರೇ, ನಮ್ಮ ಮುಖ್ಯಮಂತ್ರಿಗಳು ಡಿ.ಕೆ ಶಿವಕುಮಾರ್ ಅವರೇ..”ಎಂಬುವುದನ್ನು ಮಾತ್ರ ಪ್ರಸಾರ ಮಾಡಿದ್ದಾರೆ.

ಈ ವಿಡಿಯೋವನ್ನು ನೋಡುವಾಗ ರಾಹುಲ್ ಗಾಂಧಿಯವರು “ಕಾಂಗ್ರೆಸ್ ಅಧ್ಯಕ್ಷರು ಸಿದ್ದರಾಮಯ್ಯ ಅವರೇ, ನಮ್ಮ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೇ..” ಎಂದು ಹೇಳಿದಂತೆ ಭಾಸವಾಗುತ್ತದೆ.

ಕೋಲಾರದ ಕಾರ್ಯಕ್ರಮದ ನೇರ ಪ್ರಸಾರದ ವಿಡಿಯೋವನ್ನು ಇಂಡಿಯನ್ ನ್ಯಾಷನಲ್ ಕಾಂಗ್ರೆಸ್‌ನ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲೂ ಲಭ್ಯವಿದೆ. ಈ ವಿಡಿಯೋದಲ್ಲೂ ರಾಹುಲ್ ಗಾಂಧಿಯವರು ಖರ್ಗೆಯವರೇ ಕಾಂಗ್ರೆಸ್ ಅಧ್ಯಕ್ಷರು, ಸಿದ್ದರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿಗಳು” ಎಂದಿರುವುದು ಸ್ಪಷ್ಟವಾಗಿ ಇದೆ.

ವಿಡಿಯೋ ಲಿಂಕ್ ಇಲ್ಲಿದೆ

ಹಾಗಾಗಿ, ಟಿವಿ ವಿಕ್ರಮ ಕಾಂಗ್ರೆಸ್ ಕಾರ್ಯಕ್ರಮದ ವಿಡಿಯೋವನ್ನು ಎಡಿಟ್ ಮಾಡಿ ಪ್ರಸಾರ ಮಾಡುವ ಹಸಿ ಸುಳ್ಳು ಹೇಳಿರುವುದು ಇಲ್ಲಿ ಖಚಿತವಾಗಿದೆ.

ಇದನ್ನೂ ಓದಿ : Fact Check: ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಆಪ್ ನಾಯಕಿ ಅತಿಶಿ ಕ್ಷಮೆ ಕೇಳಿದ್ದಾರೆ ಎನ್ನುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...