Homeಫ್ಯಾಕ್ಟ್‌ಚೆಕ್FACT CHEK : ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಎಂದು ರಾಹುಲ್ ಗಾಂಧಿ ಹೇಳಿಲ್ಲ

FACT CHEK : ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಎಂದು ರಾಹುಲ್ ಗಾಂಧಿ ಹೇಳಿಲ್ಲ

- Advertisement -
- Advertisement -

ಕೋಲಾರದಲ್ಲಿ ನಡೆದ ಕಾಂಗ್ರೆಸ್‌ ಸಮಾವೇಶದಲ್ಲಿ ರಾಹುಲ್ ಗಾಂಧಿಯವರು ಸಿದ್ದರಾಮಯ್ಯ ಬದಲು ಡಿ.ಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಎಂದು ಸಂಬೋಧಿಸಿದ್ದಾರೆ. ಈ ಮೂಲಕ ಪರೋಕ್ಷವಾಗಿ ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವ ಸೂಚನೆ ನೀಡಿದ್ದಾರೆ ಎಂದು ಪ್ರತಿಪಾದಿಸಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗ್ತಿದೆ.

ಬಲಪಂಥೀಯ ಯೂಟ್ಯೂಬ್ ಚಾನೆಲ್ ‘ಟಿವಿ ವಿಕ್ರಮ’ “ಡಿಕೆಶಿ ಹೊಸ ಮುಖ್ಯಮಂತ್ರಿ, ಸಿದ್ದರಾಮಯ್ಯಂಗೆ ಅಧ್ಯಕ್ಷ ಪಟ್ಟ, ದಿಲ್ಲಿ ದೊರೆಯ ಹೊಸಾ ಆಟ” ಎಂಬ ಶೀರ್ಷಿಕೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ರಾಹುಲ್ ಗಾಂಧಿ ಡಿ.ಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಎಂದು ಕರೆದಿರುವುದು ದೊಡ್ಡ ಸಂಚಲನ ಸೃಷ್ಟಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈಗಲೂ ವಿಡಿಯೋಗಳು ಹರಿದಾಡುತ್ತಿವೆ ಎಂದು ಹೇಳಿದ್ದಾರೆ.

ವಿಡಿಯೋ ಲಿಂಕ್ ಇಲ್ಲಿದೆ

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದಲ್ಲಿರುವಂತೆ ರಾಹುಲ್ ಗಾಂಧಿ ನಿಜವಾಗಿಯೂ ಡಿ.ಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಅಂದ್ರಾ? ಅವರು ಹೇಳಿದ್ದು ನಿಜವಾಗಿದ್ದರೆ, ಉದ್ದೇಶಪೂರ್ವಕವಾಗಿ ಹೇಳಿದ್ರಾ? ಇಲ್ಲಾ..ಬಾಯಿ ತಪ್ಪಿ ಹೇಳಿದ್ರಾ? ಈ ಎಲ್ಲಾ ವಿಷಯಗಳ ಕುರಿತು ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ.

ಇದಕ್ಕಾಗಿ, ನಾವು ರಾಹುಲ್ ಗಾಂಧಿಯವರ ಭಾಷಣದ ಮೂಲ ವಿಡಿಯೋವನ್ನು ಹುಡುಕಿದ್ದೇವೆ. ಈ ವೇಳೆ ನ್ಯೂಸ್‌ 18 ಕನ್ನಡ ಏಪ್ರಿಲ್ 17, 2024ರಂದು “LIVE: Rahul Gandhi In Kolar | Congress Rally”ಎಂಬ ಶೀರ್ಷಿಕೆಯಲ್ಲಿ ಹಂಚಿಕೊಂಡ ವಿಡಿಯೋವೊಂದು ದೊರೆತಿದೆ.

ವಿಡಿಯೋ ಲಿಂಕ್ ಇಲ್ಲಿದೆ 

ಒಟ್ಟು 1 ಗಂಟೆ 36 ನಿಮಿಷ 40 ಸೆಕೆಂಡ್‌ ಅವಧಿಯ ನೇರ ಪ್ರಸಾರದ ವಿಡಿಯೋದಲ್ಲಿ, 22 ನಿಮಿಷ 6 ಸೆಕೆಂಡ್‌ನಿಂದ ರಾಹುಲ್ ಗಾಂಧಿಯವರ ಭಾಷಣವಿದೆ.

ವಿಡಿಯೋದಲ್ಲಿ 22 ನಿಮಿಷ 14 ಸೆಕೆಂಡ್‌ನಿಂದ ರಾಹುಲ್ ಗಾಂಧಿ ಈ ರೀತಿ ಹೇಳಿದ್ದಾರೆ…”ಖರ್ಗೆ ಅವರೇ.. ಕಾಂಗ್ರೆಸ್ ಅಧ್ಯಕ್ಷರು, ಸಿದ್ದರಾಮಯ್ಯ ಅವರೇ…ನಮ್ಮ ಮುಖ್ಯಮಂತ್ರಿಗಳು, ಡಿ.ಕೆ ಶಿವಕುಮಾರ್ ಅವರೇ…ಕೆ. ಹೆಚ್ ಮುನಿಯಪ್ಪ ಅವರೇ..ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರೇ..ನನ್ನ ಪ್ರೀತಿಯ ಪಕ್ಷದ ಕಾರ್ಯಕರ್ತರೇ..ಮಾಧ್ಯಮ ಮಿತ್ರರು, ಸಹೋದರ-ಸಹೋದರಿಯರು ಎಲ್ಲರಿಗೂ ನಾನು ಸ್ವಾಗತ ಕೋರುತ್ತೇನೆ”

ಅಂದರೆ, ಇಲ್ಲಿ ರಾಹುಲ್ ಗಾಂಧಿಯವರು ಮೊದಲು ವ್ಯಕ್ತಿಗಳ ಹೆಸರು ಹೇಳಿ ಬಳಿಕ ಅವರ ಹುದ್ದೆ ಉಲ್ಲೇಖಿಸಿದ್ದಾರೆ.

ಟಿವಿ ವಿಕ್ರಮ ಹಾಗೂ ಕೆಲ ಎಕ್ಸ್ ಬಳಕೆದಾರರು, “ಖರ್ಗೆ ಅವರೇ…ಕಾಂಗ್ರೆಸ್ ಅಧ್ಯಕ್ಷರು” ಎಂದು ಹೇಳಿರುವುದಲ್ಲಿ “ಖರ್ಗೆ ಅವರೇ”..ಎಂಬುವುದನ್ನು ಕಟ್ ಮಾಡಿ..”ಕಾಂಗ್ರೆಸ್ ಅಧ್ಯಕ್ಷರು, ಸಿದ್ದರಾಮಯ್ಯ ಅವರೇ, ನಮ್ಮ ಮುಖ್ಯಮಂತ್ರಿಗಳು ಡಿ.ಕೆ ಶಿವಕುಮಾರ್ ಅವರೇ..”ಎಂಬುವುದನ್ನು ಮಾತ್ರ ಪ್ರಸಾರ ಮಾಡಿದ್ದಾರೆ.

ಈ ವಿಡಿಯೋವನ್ನು ನೋಡುವಾಗ ರಾಹುಲ್ ಗಾಂಧಿಯವರು “ಕಾಂಗ್ರೆಸ್ ಅಧ್ಯಕ್ಷರು ಸಿದ್ದರಾಮಯ್ಯ ಅವರೇ, ನಮ್ಮ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೇ..” ಎಂದು ಹೇಳಿದಂತೆ ಭಾಸವಾಗುತ್ತದೆ.

ಕೋಲಾರದ ಕಾರ್ಯಕ್ರಮದ ನೇರ ಪ್ರಸಾರದ ವಿಡಿಯೋವನ್ನು ಇಂಡಿಯನ್ ನ್ಯಾಷನಲ್ ಕಾಂಗ್ರೆಸ್‌ನ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲೂ ಲಭ್ಯವಿದೆ. ಈ ವಿಡಿಯೋದಲ್ಲೂ ರಾಹುಲ್ ಗಾಂಧಿಯವರು ಖರ್ಗೆಯವರೇ ಕಾಂಗ್ರೆಸ್ ಅಧ್ಯಕ್ಷರು, ಸಿದ್ದರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿಗಳು” ಎಂದಿರುವುದು ಸ್ಪಷ್ಟವಾಗಿ ಇದೆ.

ವಿಡಿಯೋ ಲಿಂಕ್ ಇಲ್ಲಿದೆ

ಹಾಗಾಗಿ, ಟಿವಿ ವಿಕ್ರಮ ಕಾಂಗ್ರೆಸ್ ಕಾರ್ಯಕ್ರಮದ ವಿಡಿಯೋವನ್ನು ಎಡಿಟ್ ಮಾಡಿ ಪ್ರಸಾರ ಮಾಡುವ ಹಸಿ ಸುಳ್ಳು ಹೇಳಿರುವುದು ಇಲ್ಲಿ ಖಚಿತವಾಗಿದೆ.

ಇದನ್ನೂ ಓದಿ : Fact Check: ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಆಪ್ ನಾಯಕಿ ಅತಿಶಿ ಕ್ಷಮೆ ಕೇಳಿದ್ದಾರೆ ಎನ್ನುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...