Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್‌: ವಲಸಿಗರೊಂದಿಗೆ ರಾಹುಲ್‌ ಸಂವಾದ ನಾಟಕವೇ? ನಂತರ ಕಾರ್ಮಿಕರೆಲ್ಲಾ ಕಾರಿನಲ್ಲಿ ಹೊರಟರೆ?

ಫ್ಯಾಕ್ಟ್‌ಚೆಕ್‌: ವಲಸಿಗರೊಂದಿಗೆ ರಾಹುಲ್‌ ಸಂವಾದ ನಾಟಕವೇ? ನಂತರ ಕಾರ್ಮಿಕರೆಲ್ಲಾ ಕಾರಿನಲ್ಲಿ ಹೊರಟರೆ?

- Advertisement -
- Advertisement -

ಮೇ 16 ರಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ದೆಹಲಿಯ ಸುಖದೇವ್ ವಿಹಾರದಲ್ಲಿ ಹಲವಾರು ವಲಸೆ ಕಾರ್ಮಿಕರನ್ನು ಭೇಟಿಯಾದರು. ಇದನ್ನು ಮುಖ್ಯವಾಹಿನಿಯ ಮಾಧ್ಯಮಗಳು ಗಾಂಧಿಯವರು ಪಾದಚಾರಿ ಮಾರ್ಗದಲ್ಲಿ ಕುಳಿತು ವಲಸಿಗರೊಂದಿಗೆ ಮಾತನಾಡುವ ಚಿತ್ರದೊಂದಿಗೆ ವರದಿ ಮಾಡಿದ್ದವು.

ಸ್ವಲ್ಪ ಸಮಯದ ನಂತರ, ಫೇಸ್‌ಬುಕ್ ಮತ್ತು ವಾಟ್ಸಾಪ್‌ನಲ್ಲಿ ರಾಹುಲ್‌ ಪಕ್ಕ ಕುಳಿತಿದ್ದ ಮಹಿಳೆಯ ಎರಡು ಫೋಟೊಗಳನ್ನು ಹಾಕಿ ಇದು ರಾಹುಲ್‌ ಗಾಂಧಿಯ ನಾಟಕ. ನೋಡಿ ಆಕೆ ಕಾರಿನಲ್ಲಿ ಹೋಗುತ್ತಿದ್ದಾಳೆ, ಆಕೆ ವಲಸೆ ಕಾರ್ಮಿಕಳಲ್ಲ. ಪ್ರಚಾರಕ್ಕಾಗಿ ರಾಹುಲ್‌ ಗಾಂಧಿ ಹೀಗೆಲ್ಲಾ ಮಾಡಿದ್ದಾರೆ ಎಂದು ಸುದ್ದಿ ಹರಡಲಾಯಿತು.

ಹಲವಾರು ಫೇಸ್‌ಬುಕ್ ಬಳಕೆದಾರರು ಹಿಂದಿಯಲ್ಲಿ ವ್ಯಂಗ್ಯ ಶೀರ್ಷಿಕೆಯೊಂದಿಗೆ ಆ ಫೋಟೊವನ್ನು ಪೋಸ್ಟ್ ಮಾಡಿದ್ದಾರೆ. ಅದಕ್ಕೆ “ಇಲ್ಲಿ ಕೂಡ ಹಗರಣ? ರಾಹುಲ್ ಬಾಬಾ ಸುಖದೇವ್ ವಿಹಾರ್‌ನಲ್ಲಿ ಬಡವರನ್ನು ಭೇಟಿ ಮಾಡಲು ಹೋದರು. ಅಂತಹ ಒಬ್ಬ ಬಡವರು ಕಾರಿನಲ್ಲಿ ಹಿಂತಿರುಗುತ್ತಿರುವುದು ಕಂಡುಬಂತು. ದೇವರು ಎಲ್ಲರನ್ನೂ ಅವಳಂತೆ ಬಡವನನ್ನಾಗಿ ಮಾಡಬೇಕು”. ಎಂಬ ಶೀರ್ಷಿಕೆ ನೀಡಲಾಗಿತ್ತು.

ಇದನ್ನು ಕಾರ್ಮಿಕ ಹಗರಣವೆಂದು ಕರೆಯಬಹುದು. ದೇಶವೇ ಕೊರೊನಾ ಭೀತಿಯಲ್ಲಿರುವಾಗ ಕಾರ್ಮಿಕರು ಸ್ಯಾನಿಟೈಸ್‌ ಆಗಿ ಕಾರಿನಲ್ಲಿ ಬರುತ್ತಾರೆ. ಸುಳ್ಳುಗಾರನ ಹೆಸರು ರಾಹುಲ್‌ ಗಾಂಧಿ ಎಂದೆಲ್ಲಾ ಹರಡಲಾಯಿತು.

ಫ್ಯಾಕ್ಟ್‌ಚೆಕ್‌

ರಾಹುಲ್‌ ಗಾಂಧಿಯ ಸಂವಾದದ ಚಿತ್ರಗಳನ್ನು ಪ್ರಿಯಾಂಕ ಗಾಂಧಿ ಸೇರಿದಂತೆ ಹಲವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಅದರಲ್ಲಿ ರಾಹುಲ್‌ ಪಕ್ಕದಲ್ಲಿ ಮಹಿಳೆಯೊಬ್ಬರು ಕುಳತಿದ್ದಾರೆ.

ನಂತರ ಸುದ್ದಿ ಸಂಸ್ಥೆ ಎಎನ್‌ಐ ಕೂಡ ಸಂವಾದದ ಕೆಲವು ಚಿತ್ರಗಳನ್ನು ಟ್ವೀಟ್ ಮಾಡಿದೆ. ಅದರಲ್ಲಿ “ಸುಖದೇವ್ ವಿಹಾರ್ ಫ್ಲೈಓವರ್ ಬಳಿ ನಡೆದುಕೊಂಡು ಸ್ವಂತ ರಾಜ್ಯಗಳಿಗೆ ಹೋಗುತ್ತಿದ್ದ ವಲಸೆ ಕಾರ್ಮಿಕರೊಂದಿಗೆ ರಾಹುಲ್ ಗಾಂಧಿ ಸಂವಾದ ನಡೆಸಿದರು. ನಂತರ ಪಕ್ಷದ ಸ್ವಯಂಸೇವಕರು ವಲಸೆ ಕಾರ್ಮಿಕರು ತಮ್ಮ ಮನೆಗಳಿಗೆ ತಲುಪಲು ವಾಹನಗಳ ವ್ಯವಸ್ಥೆ ಮಾಡಿದರು” ಎಂದು ಬರೆದಿದೆ. ಅದರಲ್ಲಿ ಕಾರ್ಮಿಕನೊಬ್ಬ ಹರಿಯಾಣದಿಂದ ಬರುತ್ತಿದ್ದೇನೆ. ಝಾನ್ಸಿಗೆ ಹೋಗಬೇಕಾಗಿದೆ ಎಂದು ಹೇಳುತ್ತಾನೆ.

ಎಎನ್‌ಐ ಟ್ವೀಟ್‌ನಲ್ಲಿ, ವೈರಲ್ ಪೋಸ್ಟ್‌ನಲ್ಲಿ ಕಾಣುವ ಅದೇ ಮಹಿಳೆ ಕಾರಿನೊಳಗೆ ಅದೇ ಪುರುಷನ ಪಕ್ಕದಲ್ಲಿ ಕಪ್ಪು ಮಾಸ್ಕ್‌ ಧರಿಸಿ ಕುಳಿತಿರುವುದನ್ನು ಕಾಣಬಹುದು.

ಅಂದರೆ ಸುಖದೇವ್ ವಿಹಾರ್ ಫ್ಲೈಓವರ್ ಬಳಿ ವಲಸೆ ಕಾರ್ಮಿಕರು ನಡೆದುಕೊಂಡು ಹೋಗುತ್ತಿರುವುದನ್ನು ಕಂಡುಕೊಂಡ ರಾಹುಲ್‌ ಗಾಂಧಿಯವರು ಸಂವಾದದ ನಂತರ ಈ ವಲಸೆ ಕಾರ್ಮಿಕರಿಗೆ ಸಹಾಯ ಮಾಡಿದ್ದಾರೆ ಎಂದು ಎಎನ್‌ಐ ಮತ್ತು ಇತರ ಮಾಧ್ಯಮಗಳು ವರದಿ ಮಾಡಿದ್ದವು.

ರಾಹುಲ್‌ ಗಾಂಧಿ ಮತ್ತು ಅವರ ಪಕ್ಷದ ಕಾರ್ಯಕರ್ತರು ವಲಸೆ ಕಾರ್ಮಿಕರಿಗೆ ತಮ್ಮ ಸ್ವಂತ ರಾಜ್ಯಗಳಿಗೆ ಹಿಂತಿರುಗಲು ವಾಹನಗಳನ್ನು ವ್ಯವಸ್ಥೆಗೊಳಿಸಿದ್ದಾರೆ ಎಂದು “ಇಂಡಿಯಾ ಟಿವಿ” ಮತ್ತು “ಆರ್ 9 ಟಿವಿ” ಸೇರಿದಂತೆ ಹಲವಾರು ಮಾಧ್ಯಮಗಳು ವರದಿ ಮಾಡಿವೆ.

ಮೇ 16 ರಂದು ಸಂವಾದ ನಡೆದ ಸ್ಥಳದಲ್ಲಿ ಹಾಜರಿದ್ದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಅನಿಲ್ ಚೌಧರಿಯವರು “ಸಂವಾದದ ನಂತರ ಅವರಿಗೆ ಸಹಾಯ ಮಾಡುವುದಾಗಿ ರಾಹುಲ್‌ ಭರವಸೆ ನೀಡಿದ್ದರು. ಆದರೆ ಸ್ವಲ್ಪ ಸಮಯದಲ್ಲಿ ಪೊಲೀಸರು ಕಾರ್ಮಿಕರನ್ನು ಕರೆದೊಯ್ಯುತ್ತಿದ್ದರು. ಆಗ ನಾವು ಪ್ರಶ್ನಿಸಿದ್ದಕ್ಕೆ, ಸಾಮಾಜಿಕ ಅಂತರದ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ನೀವು ಅವರ ಪ್ರಯಾಣಕ್ಕೆ ವ್ಯವಸ್ಥೆ ಮಾಡಬಹುದಾದರೆ ಅವರಿಗೆ ಯಾವುದೇ ತೊಂದರೆ ಇಲ್ಲ ಎಂದು ಪೊಲೀಸರು ತಿಳಿಸಿದರು. ಆಗ ರಾಹುಲ್‌ ಗಾಂಧಿಯವರು ವಾಹನ ವ್ಯವಸ್ಥೆ ಮಾಡಲು ಸೂಚಿಸಿದರು. ಆಗ ನಾವು ನಮ್ಮಗಳ ಕಾರಿನಲ್ಲಿಯೇ ಅವರನ್ನು ಅವರ ಊರುಗಳಿಗೆ ತಲುಪಿಸಿದೆವು” ಎಂದಿದ್ದಾರೆ.

ನಂತರ ಆಗ್ನೇಯ ದೆಹಲಿಯ ಡಿಸಿಪಿ ಆರ್.ಪಿ. ಮೀನಾ ಸಹ “ಈ ವಲಸಿಗರ ಗುಂಪು ಸುಖದೇವ್ ವಿಹಾರ್ ಬಳಿ ನಡೆಯುತ್ತಿರುವಾಗ, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಬೆಂಗಾವಲು ಪಡೆ ತಲುಪಿತು. ರಾಹುಲ್ ಗಾಂಧಿ ಈ ಗುಂಪಿನೊಂದಿಗೆ ಮಾತನಾಡಿದರು, ಮತ್ತು ನಂತರ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಪ್ರಯಾಣಕ್ಕೆ ವ್ಯವಸ್ಥೆ ಮಾಡಿದರು” ಎಂದಿದ್ದಾರೆ.

ಮೇಲಿನ ಎಲ್ಲಾ ಅಂಶಗಳನ್ನು ಪರಿಶೀಲಿಸಿದಾಗ ರಾಹುಲ್‌ ಗಾಂಧಿ ವಲಸೆ ಕಾರ್ಮಿಕರೊಂದಿಗೆ ಸಂವಾದ ನಡೆಸಿದ್ದು ಪೂರ್ವನಿರ್ಧಾರಿತವಲ್ಲ, ನಾಟಕವಂತೂ ಅಲ್ಲವೇ ಅಲ್ಲ ಎಂದು ತಿಳಿದುರುತ್ತದೆ. ಅಲ್ಲದೇ ಅವರೆಲ್ಲರೂ ವಲಸೆ ಕಾರ್ಮಿಕರೆ ಆಗಿದ್ದು ಸಂವಾದದ ನಂತರ ಕಾಂಗ್ರೆಸ್‌ ಕಾರ್ಯಕರ್ತರು ವ್ಯವಸ್ಥೆ ಮಾಡಿದ ಕಾರಿನಲ್ಲಿ ಅವರು ತಮ್ಮ ಸ್ವಂತ ಊರುಗಳಿಗೆ ತಲುಪಿದ್ದಾರೆ ಎಂಬುದು ಸ್ಪಷ್ಟವಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಟೊಮೊಟೊಗೂ ಬಂತು ಕೊರೊನಾಗಿಂತ ಡೆಡ್ಲಿ ವೈರಸ್: ನೀವು ನಂಬುತ್ತೀರಾ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...