Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್‌: ವಲಸಿಗರೊಂದಿಗೆ ರಾಹುಲ್‌ ಸಂವಾದ ನಾಟಕವೇ? ನಂತರ ಕಾರ್ಮಿಕರೆಲ್ಲಾ ಕಾರಿನಲ್ಲಿ ಹೊರಟರೆ?

ಫ್ಯಾಕ್ಟ್‌ಚೆಕ್‌: ವಲಸಿಗರೊಂದಿಗೆ ರಾಹುಲ್‌ ಸಂವಾದ ನಾಟಕವೇ? ನಂತರ ಕಾರ್ಮಿಕರೆಲ್ಲಾ ಕಾರಿನಲ್ಲಿ ಹೊರಟರೆ?

- Advertisement -
- Advertisement -

ಮೇ 16 ರಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ದೆಹಲಿಯ ಸುಖದೇವ್ ವಿಹಾರದಲ್ಲಿ ಹಲವಾರು ವಲಸೆ ಕಾರ್ಮಿಕರನ್ನು ಭೇಟಿಯಾದರು. ಇದನ್ನು ಮುಖ್ಯವಾಹಿನಿಯ ಮಾಧ್ಯಮಗಳು ಗಾಂಧಿಯವರು ಪಾದಚಾರಿ ಮಾರ್ಗದಲ್ಲಿ ಕುಳಿತು ವಲಸಿಗರೊಂದಿಗೆ ಮಾತನಾಡುವ ಚಿತ್ರದೊಂದಿಗೆ ವರದಿ ಮಾಡಿದ್ದವು.

ಸ್ವಲ್ಪ ಸಮಯದ ನಂತರ, ಫೇಸ್‌ಬುಕ್ ಮತ್ತು ವಾಟ್ಸಾಪ್‌ನಲ್ಲಿ ರಾಹುಲ್‌ ಪಕ್ಕ ಕುಳಿತಿದ್ದ ಮಹಿಳೆಯ ಎರಡು ಫೋಟೊಗಳನ್ನು ಹಾಕಿ ಇದು ರಾಹುಲ್‌ ಗಾಂಧಿಯ ನಾಟಕ. ನೋಡಿ ಆಕೆ ಕಾರಿನಲ್ಲಿ ಹೋಗುತ್ತಿದ್ದಾಳೆ, ಆಕೆ ವಲಸೆ ಕಾರ್ಮಿಕಳಲ್ಲ. ಪ್ರಚಾರಕ್ಕಾಗಿ ರಾಹುಲ್‌ ಗಾಂಧಿ ಹೀಗೆಲ್ಲಾ ಮಾಡಿದ್ದಾರೆ ಎಂದು ಸುದ್ದಿ ಹರಡಲಾಯಿತು.

ಹಲವಾರು ಫೇಸ್‌ಬುಕ್ ಬಳಕೆದಾರರು ಹಿಂದಿಯಲ್ಲಿ ವ್ಯಂಗ್ಯ ಶೀರ್ಷಿಕೆಯೊಂದಿಗೆ ಆ ಫೋಟೊವನ್ನು ಪೋಸ್ಟ್ ಮಾಡಿದ್ದಾರೆ. ಅದಕ್ಕೆ “ಇಲ್ಲಿ ಕೂಡ ಹಗರಣ? ರಾಹುಲ್ ಬಾಬಾ ಸುಖದೇವ್ ವಿಹಾರ್‌ನಲ್ಲಿ ಬಡವರನ್ನು ಭೇಟಿ ಮಾಡಲು ಹೋದರು. ಅಂತಹ ಒಬ್ಬ ಬಡವರು ಕಾರಿನಲ್ಲಿ ಹಿಂತಿರುಗುತ್ತಿರುವುದು ಕಂಡುಬಂತು. ದೇವರು ಎಲ್ಲರನ್ನೂ ಅವಳಂತೆ ಬಡವನನ್ನಾಗಿ ಮಾಡಬೇಕು”. ಎಂಬ ಶೀರ್ಷಿಕೆ ನೀಡಲಾಗಿತ್ತು.

ಇದನ್ನು ಕಾರ್ಮಿಕ ಹಗರಣವೆಂದು ಕರೆಯಬಹುದು. ದೇಶವೇ ಕೊರೊನಾ ಭೀತಿಯಲ್ಲಿರುವಾಗ ಕಾರ್ಮಿಕರು ಸ್ಯಾನಿಟೈಸ್‌ ಆಗಿ ಕಾರಿನಲ್ಲಿ ಬರುತ್ತಾರೆ. ಸುಳ್ಳುಗಾರನ ಹೆಸರು ರಾಹುಲ್‌ ಗಾಂಧಿ ಎಂದೆಲ್ಲಾ ಹರಡಲಾಯಿತು.

ಫ್ಯಾಕ್ಟ್‌ಚೆಕ್‌

ರಾಹುಲ್‌ ಗಾಂಧಿಯ ಸಂವಾದದ ಚಿತ್ರಗಳನ್ನು ಪ್ರಿಯಾಂಕ ಗಾಂಧಿ ಸೇರಿದಂತೆ ಹಲವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಅದರಲ್ಲಿ ರಾಹುಲ್‌ ಪಕ್ಕದಲ್ಲಿ ಮಹಿಳೆಯೊಬ್ಬರು ಕುಳತಿದ್ದಾರೆ.

ನಂತರ ಸುದ್ದಿ ಸಂಸ್ಥೆ ಎಎನ್‌ಐ ಕೂಡ ಸಂವಾದದ ಕೆಲವು ಚಿತ್ರಗಳನ್ನು ಟ್ವೀಟ್ ಮಾಡಿದೆ. ಅದರಲ್ಲಿ “ಸುಖದೇವ್ ವಿಹಾರ್ ಫ್ಲೈಓವರ್ ಬಳಿ ನಡೆದುಕೊಂಡು ಸ್ವಂತ ರಾಜ್ಯಗಳಿಗೆ ಹೋಗುತ್ತಿದ್ದ ವಲಸೆ ಕಾರ್ಮಿಕರೊಂದಿಗೆ ರಾಹುಲ್ ಗಾಂಧಿ ಸಂವಾದ ನಡೆಸಿದರು. ನಂತರ ಪಕ್ಷದ ಸ್ವಯಂಸೇವಕರು ವಲಸೆ ಕಾರ್ಮಿಕರು ತಮ್ಮ ಮನೆಗಳಿಗೆ ತಲುಪಲು ವಾಹನಗಳ ವ್ಯವಸ್ಥೆ ಮಾಡಿದರು” ಎಂದು ಬರೆದಿದೆ. ಅದರಲ್ಲಿ ಕಾರ್ಮಿಕನೊಬ್ಬ ಹರಿಯಾಣದಿಂದ ಬರುತ್ತಿದ್ದೇನೆ. ಝಾನ್ಸಿಗೆ ಹೋಗಬೇಕಾಗಿದೆ ಎಂದು ಹೇಳುತ್ತಾನೆ.

ಎಎನ್‌ಐ ಟ್ವೀಟ್‌ನಲ್ಲಿ, ವೈರಲ್ ಪೋಸ್ಟ್‌ನಲ್ಲಿ ಕಾಣುವ ಅದೇ ಮಹಿಳೆ ಕಾರಿನೊಳಗೆ ಅದೇ ಪುರುಷನ ಪಕ್ಕದಲ್ಲಿ ಕಪ್ಪು ಮಾಸ್ಕ್‌ ಧರಿಸಿ ಕುಳಿತಿರುವುದನ್ನು ಕಾಣಬಹುದು.

ಅಂದರೆ ಸುಖದೇವ್ ವಿಹಾರ್ ಫ್ಲೈಓವರ್ ಬಳಿ ವಲಸೆ ಕಾರ್ಮಿಕರು ನಡೆದುಕೊಂಡು ಹೋಗುತ್ತಿರುವುದನ್ನು ಕಂಡುಕೊಂಡ ರಾಹುಲ್‌ ಗಾಂಧಿಯವರು ಸಂವಾದದ ನಂತರ ಈ ವಲಸೆ ಕಾರ್ಮಿಕರಿಗೆ ಸಹಾಯ ಮಾಡಿದ್ದಾರೆ ಎಂದು ಎಎನ್‌ಐ ಮತ್ತು ಇತರ ಮಾಧ್ಯಮಗಳು ವರದಿ ಮಾಡಿದ್ದವು.

ರಾಹುಲ್‌ ಗಾಂಧಿ ಮತ್ತು ಅವರ ಪಕ್ಷದ ಕಾರ್ಯಕರ್ತರು ವಲಸೆ ಕಾರ್ಮಿಕರಿಗೆ ತಮ್ಮ ಸ್ವಂತ ರಾಜ್ಯಗಳಿಗೆ ಹಿಂತಿರುಗಲು ವಾಹನಗಳನ್ನು ವ್ಯವಸ್ಥೆಗೊಳಿಸಿದ್ದಾರೆ ಎಂದು “ಇಂಡಿಯಾ ಟಿವಿ” ಮತ್ತು “ಆರ್ 9 ಟಿವಿ” ಸೇರಿದಂತೆ ಹಲವಾರು ಮಾಧ್ಯಮಗಳು ವರದಿ ಮಾಡಿವೆ.

ಮೇ 16 ರಂದು ಸಂವಾದ ನಡೆದ ಸ್ಥಳದಲ್ಲಿ ಹಾಜರಿದ್ದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಅನಿಲ್ ಚೌಧರಿಯವರು “ಸಂವಾದದ ನಂತರ ಅವರಿಗೆ ಸಹಾಯ ಮಾಡುವುದಾಗಿ ರಾಹುಲ್‌ ಭರವಸೆ ನೀಡಿದ್ದರು. ಆದರೆ ಸ್ವಲ್ಪ ಸಮಯದಲ್ಲಿ ಪೊಲೀಸರು ಕಾರ್ಮಿಕರನ್ನು ಕರೆದೊಯ್ಯುತ್ತಿದ್ದರು. ಆಗ ನಾವು ಪ್ರಶ್ನಿಸಿದ್ದಕ್ಕೆ, ಸಾಮಾಜಿಕ ಅಂತರದ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ನೀವು ಅವರ ಪ್ರಯಾಣಕ್ಕೆ ವ್ಯವಸ್ಥೆ ಮಾಡಬಹುದಾದರೆ ಅವರಿಗೆ ಯಾವುದೇ ತೊಂದರೆ ಇಲ್ಲ ಎಂದು ಪೊಲೀಸರು ತಿಳಿಸಿದರು. ಆಗ ರಾಹುಲ್‌ ಗಾಂಧಿಯವರು ವಾಹನ ವ್ಯವಸ್ಥೆ ಮಾಡಲು ಸೂಚಿಸಿದರು. ಆಗ ನಾವು ನಮ್ಮಗಳ ಕಾರಿನಲ್ಲಿಯೇ ಅವರನ್ನು ಅವರ ಊರುಗಳಿಗೆ ತಲುಪಿಸಿದೆವು” ಎಂದಿದ್ದಾರೆ.

ನಂತರ ಆಗ್ನೇಯ ದೆಹಲಿಯ ಡಿಸಿಪಿ ಆರ್.ಪಿ. ಮೀನಾ ಸಹ “ಈ ವಲಸಿಗರ ಗುಂಪು ಸುಖದೇವ್ ವಿಹಾರ್ ಬಳಿ ನಡೆಯುತ್ತಿರುವಾಗ, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಬೆಂಗಾವಲು ಪಡೆ ತಲುಪಿತು. ರಾಹುಲ್ ಗಾಂಧಿ ಈ ಗುಂಪಿನೊಂದಿಗೆ ಮಾತನಾಡಿದರು, ಮತ್ತು ನಂತರ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಪ್ರಯಾಣಕ್ಕೆ ವ್ಯವಸ್ಥೆ ಮಾಡಿದರು” ಎಂದಿದ್ದಾರೆ.

ಮೇಲಿನ ಎಲ್ಲಾ ಅಂಶಗಳನ್ನು ಪರಿಶೀಲಿಸಿದಾಗ ರಾಹುಲ್‌ ಗಾಂಧಿ ವಲಸೆ ಕಾರ್ಮಿಕರೊಂದಿಗೆ ಸಂವಾದ ನಡೆಸಿದ್ದು ಪೂರ್ವನಿರ್ಧಾರಿತವಲ್ಲ, ನಾಟಕವಂತೂ ಅಲ್ಲವೇ ಅಲ್ಲ ಎಂದು ತಿಳಿದುರುತ್ತದೆ. ಅಲ್ಲದೇ ಅವರೆಲ್ಲರೂ ವಲಸೆ ಕಾರ್ಮಿಕರೆ ಆಗಿದ್ದು ಸಂವಾದದ ನಂತರ ಕಾಂಗ್ರೆಸ್‌ ಕಾರ್ಯಕರ್ತರು ವ್ಯವಸ್ಥೆ ಮಾಡಿದ ಕಾರಿನಲ್ಲಿ ಅವರು ತಮ್ಮ ಸ್ವಂತ ಊರುಗಳಿಗೆ ತಲುಪಿದ್ದಾರೆ ಎಂಬುದು ಸ್ಪಷ್ಟವಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಟೊಮೊಟೊಗೂ ಬಂತು ಕೊರೊನಾಗಿಂತ ಡೆಡ್ಲಿ ವೈರಸ್: ನೀವು ನಂಬುತ್ತೀರಾ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...