Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್‌: ವಲಸಿಗರೊಂದಿಗೆ ರಾಹುಲ್‌ ಸಂವಾದ ನಾಟಕವೇ? ನಂತರ ಕಾರ್ಮಿಕರೆಲ್ಲಾ ಕಾರಿನಲ್ಲಿ ಹೊರಟರೆ?

ಫ್ಯಾಕ್ಟ್‌ಚೆಕ್‌: ವಲಸಿಗರೊಂದಿಗೆ ರಾಹುಲ್‌ ಸಂವಾದ ನಾಟಕವೇ? ನಂತರ ಕಾರ್ಮಿಕರೆಲ್ಲಾ ಕಾರಿನಲ್ಲಿ ಹೊರಟರೆ?

- Advertisement -
- Advertisement -

ಮೇ 16 ರಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ದೆಹಲಿಯ ಸುಖದೇವ್ ವಿಹಾರದಲ್ಲಿ ಹಲವಾರು ವಲಸೆ ಕಾರ್ಮಿಕರನ್ನು ಭೇಟಿಯಾದರು. ಇದನ್ನು ಮುಖ್ಯವಾಹಿನಿಯ ಮಾಧ್ಯಮಗಳು ಗಾಂಧಿಯವರು ಪಾದಚಾರಿ ಮಾರ್ಗದಲ್ಲಿ ಕುಳಿತು ವಲಸಿಗರೊಂದಿಗೆ ಮಾತನಾಡುವ ಚಿತ್ರದೊಂದಿಗೆ ವರದಿ ಮಾಡಿದ್ದವು.

ಸ್ವಲ್ಪ ಸಮಯದ ನಂತರ, ಫೇಸ್‌ಬುಕ್ ಮತ್ತು ವಾಟ್ಸಾಪ್‌ನಲ್ಲಿ ರಾಹುಲ್‌ ಪಕ್ಕ ಕುಳಿತಿದ್ದ ಮಹಿಳೆಯ ಎರಡು ಫೋಟೊಗಳನ್ನು ಹಾಕಿ ಇದು ರಾಹುಲ್‌ ಗಾಂಧಿಯ ನಾಟಕ. ನೋಡಿ ಆಕೆ ಕಾರಿನಲ್ಲಿ ಹೋಗುತ್ತಿದ್ದಾಳೆ, ಆಕೆ ವಲಸೆ ಕಾರ್ಮಿಕಳಲ್ಲ. ಪ್ರಚಾರಕ್ಕಾಗಿ ರಾಹುಲ್‌ ಗಾಂಧಿ ಹೀಗೆಲ್ಲಾ ಮಾಡಿದ್ದಾರೆ ಎಂದು ಸುದ್ದಿ ಹರಡಲಾಯಿತು.

ಹಲವಾರು ಫೇಸ್‌ಬುಕ್ ಬಳಕೆದಾರರು ಹಿಂದಿಯಲ್ಲಿ ವ್ಯಂಗ್ಯ ಶೀರ್ಷಿಕೆಯೊಂದಿಗೆ ಆ ಫೋಟೊವನ್ನು ಪೋಸ್ಟ್ ಮಾಡಿದ್ದಾರೆ. ಅದಕ್ಕೆ “ಇಲ್ಲಿ ಕೂಡ ಹಗರಣ? ರಾಹುಲ್ ಬಾಬಾ ಸುಖದೇವ್ ವಿಹಾರ್‌ನಲ್ಲಿ ಬಡವರನ್ನು ಭೇಟಿ ಮಾಡಲು ಹೋದರು. ಅಂತಹ ಒಬ್ಬ ಬಡವರು ಕಾರಿನಲ್ಲಿ ಹಿಂತಿರುಗುತ್ತಿರುವುದು ಕಂಡುಬಂತು. ದೇವರು ಎಲ್ಲರನ್ನೂ ಅವಳಂತೆ ಬಡವನನ್ನಾಗಿ ಮಾಡಬೇಕು”. ಎಂಬ ಶೀರ್ಷಿಕೆ ನೀಡಲಾಗಿತ್ತು.

ಇದನ್ನು ಕಾರ್ಮಿಕ ಹಗರಣವೆಂದು ಕರೆಯಬಹುದು. ದೇಶವೇ ಕೊರೊನಾ ಭೀತಿಯಲ್ಲಿರುವಾಗ ಕಾರ್ಮಿಕರು ಸ್ಯಾನಿಟೈಸ್‌ ಆಗಿ ಕಾರಿನಲ್ಲಿ ಬರುತ್ತಾರೆ. ಸುಳ್ಳುಗಾರನ ಹೆಸರು ರಾಹುಲ್‌ ಗಾಂಧಿ ಎಂದೆಲ್ಲಾ ಹರಡಲಾಯಿತು.

ಫ್ಯಾಕ್ಟ್‌ಚೆಕ್‌

ರಾಹುಲ್‌ ಗಾಂಧಿಯ ಸಂವಾದದ ಚಿತ್ರಗಳನ್ನು ಪ್ರಿಯಾಂಕ ಗಾಂಧಿ ಸೇರಿದಂತೆ ಹಲವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಅದರಲ್ಲಿ ರಾಹುಲ್‌ ಪಕ್ಕದಲ್ಲಿ ಮಹಿಳೆಯೊಬ್ಬರು ಕುಳತಿದ್ದಾರೆ.

ನಂತರ ಸುದ್ದಿ ಸಂಸ್ಥೆ ಎಎನ್‌ಐ ಕೂಡ ಸಂವಾದದ ಕೆಲವು ಚಿತ್ರಗಳನ್ನು ಟ್ವೀಟ್ ಮಾಡಿದೆ. ಅದರಲ್ಲಿ “ಸುಖದೇವ್ ವಿಹಾರ್ ಫ್ಲೈಓವರ್ ಬಳಿ ನಡೆದುಕೊಂಡು ಸ್ವಂತ ರಾಜ್ಯಗಳಿಗೆ ಹೋಗುತ್ತಿದ್ದ ವಲಸೆ ಕಾರ್ಮಿಕರೊಂದಿಗೆ ರಾಹುಲ್ ಗಾಂಧಿ ಸಂವಾದ ನಡೆಸಿದರು. ನಂತರ ಪಕ್ಷದ ಸ್ವಯಂಸೇವಕರು ವಲಸೆ ಕಾರ್ಮಿಕರು ತಮ್ಮ ಮನೆಗಳಿಗೆ ತಲುಪಲು ವಾಹನಗಳ ವ್ಯವಸ್ಥೆ ಮಾಡಿದರು” ಎಂದು ಬರೆದಿದೆ. ಅದರಲ್ಲಿ ಕಾರ್ಮಿಕನೊಬ್ಬ ಹರಿಯಾಣದಿಂದ ಬರುತ್ತಿದ್ದೇನೆ. ಝಾನ್ಸಿಗೆ ಹೋಗಬೇಕಾಗಿದೆ ಎಂದು ಹೇಳುತ್ತಾನೆ.

ಎಎನ್‌ಐ ಟ್ವೀಟ್‌ನಲ್ಲಿ, ವೈರಲ್ ಪೋಸ್ಟ್‌ನಲ್ಲಿ ಕಾಣುವ ಅದೇ ಮಹಿಳೆ ಕಾರಿನೊಳಗೆ ಅದೇ ಪುರುಷನ ಪಕ್ಕದಲ್ಲಿ ಕಪ್ಪು ಮಾಸ್ಕ್‌ ಧರಿಸಿ ಕುಳಿತಿರುವುದನ್ನು ಕಾಣಬಹುದು.

ಅಂದರೆ ಸುಖದೇವ್ ವಿಹಾರ್ ಫ್ಲೈಓವರ್ ಬಳಿ ವಲಸೆ ಕಾರ್ಮಿಕರು ನಡೆದುಕೊಂಡು ಹೋಗುತ್ತಿರುವುದನ್ನು ಕಂಡುಕೊಂಡ ರಾಹುಲ್‌ ಗಾಂಧಿಯವರು ಸಂವಾದದ ನಂತರ ಈ ವಲಸೆ ಕಾರ್ಮಿಕರಿಗೆ ಸಹಾಯ ಮಾಡಿದ್ದಾರೆ ಎಂದು ಎಎನ್‌ಐ ಮತ್ತು ಇತರ ಮಾಧ್ಯಮಗಳು ವರದಿ ಮಾಡಿದ್ದವು.

ರಾಹುಲ್‌ ಗಾಂಧಿ ಮತ್ತು ಅವರ ಪಕ್ಷದ ಕಾರ್ಯಕರ್ತರು ವಲಸೆ ಕಾರ್ಮಿಕರಿಗೆ ತಮ್ಮ ಸ್ವಂತ ರಾಜ್ಯಗಳಿಗೆ ಹಿಂತಿರುಗಲು ವಾಹನಗಳನ್ನು ವ್ಯವಸ್ಥೆಗೊಳಿಸಿದ್ದಾರೆ ಎಂದು “ಇಂಡಿಯಾ ಟಿವಿ” ಮತ್ತು “ಆರ್ 9 ಟಿವಿ” ಸೇರಿದಂತೆ ಹಲವಾರು ಮಾಧ್ಯಮಗಳು ವರದಿ ಮಾಡಿವೆ.

ಮೇ 16 ರಂದು ಸಂವಾದ ನಡೆದ ಸ್ಥಳದಲ್ಲಿ ಹಾಜರಿದ್ದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಅನಿಲ್ ಚೌಧರಿಯವರು “ಸಂವಾದದ ನಂತರ ಅವರಿಗೆ ಸಹಾಯ ಮಾಡುವುದಾಗಿ ರಾಹುಲ್‌ ಭರವಸೆ ನೀಡಿದ್ದರು. ಆದರೆ ಸ್ವಲ್ಪ ಸಮಯದಲ್ಲಿ ಪೊಲೀಸರು ಕಾರ್ಮಿಕರನ್ನು ಕರೆದೊಯ್ಯುತ್ತಿದ್ದರು. ಆಗ ನಾವು ಪ್ರಶ್ನಿಸಿದ್ದಕ್ಕೆ, ಸಾಮಾಜಿಕ ಅಂತರದ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ನೀವು ಅವರ ಪ್ರಯಾಣಕ್ಕೆ ವ್ಯವಸ್ಥೆ ಮಾಡಬಹುದಾದರೆ ಅವರಿಗೆ ಯಾವುದೇ ತೊಂದರೆ ಇಲ್ಲ ಎಂದು ಪೊಲೀಸರು ತಿಳಿಸಿದರು. ಆಗ ರಾಹುಲ್‌ ಗಾಂಧಿಯವರು ವಾಹನ ವ್ಯವಸ್ಥೆ ಮಾಡಲು ಸೂಚಿಸಿದರು. ಆಗ ನಾವು ನಮ್ಮಗಳ ಕಾರಿನಲ್ಲಿಯೇ ಅವರನ್ನು ಅವರ ಊರುಗಳಿಗೆ ತಲುಪಿಸಿದೆವು” ಎಂದಿದ್ದಾರೆ.

ನಂತರ ಆಗ್ನೇಯ ದೆಹಲಿಯ ಡಿಸಿಪಿ ಆರ್.ಪಿ. ಮೀನಾ ಸಹ “ಈ ವಲಸಿಗರ ಗುಂಪು ಸುಖದೇವ್ ವಿಹಾರ್ ಬಳಿ ನಡೆಯುತ್ತಿರುವಾಗ, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಬೆಂಗಾವಲು ಪಡೆ ತಲುಪಿತು. ರಾಹುಲ್ ಗಾಂಧಿ ಈ ಗುಂಪಿನೊಂದಿಗೆ ಮಾತನಾಡಿದರು, ಮತ್ತು ನಂತರ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಪ್ರಯಾಣಕ್ಕೆ ವ್ಯವಸ್ಥೆ ಮಾಡಿದರು” ಎಂದಿದ್ದಾರೆ.

ಮೇಲಿನ ಎಲ್ಲಾ ಅಂಶಗಳನ್ನು ಪರಿಶೀಲಿಸಿದಾಗ ರಾಹುಲ್‌ ಗಾಂಧಿ ವಲಸೆ ಕಾರ್ಮಿಕರೊಂದಿಗೆ ಸಂವಾದ ನಡೆಸಿದ್ದು ಪೂರ್ವನಿರ್ಧಾರಿತವಲ್ಲ, ನಾಟಕವಂತೂ ಅಲ್ಲವೇ ಅಲ್ಲ ಎಂದು ತಿಳಿದುರುತ್ತದೆ. ಅಲ್ಲದೇ ಅವರೆಲ್ಲರೂ ವಲಸೆ ಕಾರ್ಮಿಕರೆ ಆಗಿದ್ದು ಸಂವಾದದ ನಂತರ ಕಾಂಗ್ರೆಸ್‌ ಕಾರ್ಯಕರ್ತರು ವ್ಯವಸ್ಥೆ ಮಾಡಿದ ಕಾರಿನಲ್ಲಿ ಅವರು ತಮ್ಮ ಸ್ವಂತ ಊರುಗಳಿಗೆ ತಲುಪಿದ್ದಾರೆ ಎಂಬುದು ಸ್ಪಷ್ಟವಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಟೊಮೊಟೊಗೂ ಬಂತು ಕೊರೊನಾಗಿಂತ ಡೆಡ್ಲಿ ವೈರಸ್: ನೀವು ನಂಬುತ್ತೀರಾ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...