Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್‌: ವಲಸಿಗರೊಂದಿಗೆ ರಾಹುಲ್‌ ಸಂವಾದ ನಾಟಕವೇ? ನಂತರ ಕಾರ್ಮಿಕರೆಲ್ಲಾ ಕಾರಿನಲ್ಲಿ ಹೊರಟರೆ?

ಫ್ಯಾಕ್ಟ್‌ಚೆಕ್‌: ವಲಸಿಗರೊಂದಿಗೆ ರಾಹುಲ್‌ ಸಂವಾದ ನಾಟಕವೇ? ನಂತರ ಕಾರ್ಮಿಕರೆಲ್ಲಾ ಕಾರಿನಲ್ಲಿ ಹೊರಟರೆ?

- Advertisement -
- Advertisement -

ಮೇ 16 ರಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ದೆಹಲಿಯ ಸುಖದೇವ್ ವಿಹಾರದಲ್ಲಿ ಹಲವಾರು ವಲಸೆ ಕಾರ್ಮಿಕರನ್ನು ಭೇಟಿಯಾದರು. ಇದನ್ನು ಮುಖ್ಯವಾಹಿನಿಯ ಮಾಧ್ಯಮಗಳು ಗಾಂಧಿಯವರು ಪಾದಚಾರಿ ಮಾರ್ಗದಲ್ಲಿ ಕುಳಿತು ವಲಸಿಗರೊಂದಿಗೆ ಮಾತನಾಡುವ ಚಿತ್ರದೊಂದಿಗೆ ವರದಿ ಮಾಡಿದ್ದವು.

ಸ್ವಲ್ಪ ಸಮಯದ ನಂತರ, ಫೇಸ್‌ಬುಕ್ ಮತ್ತು ವಾಟ್ಸಾಪ್‌ನಲ್ಲಿ ರಾಹುಲ್‌ ಪಕ್ಕ ಕುಳಿತಿದ್ದ ಮಹಿಳೆಯ ಎರಡು ಫೋಟೊಗಳನ್ನು ಹಾಕಿ ಇದು ರಾಹುಲ್‌ ಗಾಂಧಿಯ ನಾಟಕ. ನೋಡಿ ಆಕೆ ಕಾರಿನಲ್ಲಿ ಹೋಗುತ್ತಿದ್ದಾಳೆ, ಆಕೆ ವಲಸೆ ಕಾರ್ಮಿಕಳಲ್ಲ. ಪ್ರಚಾರಕ್ಕಾಗಿ ರಾಹುಲ್‌ ಗಾಂಧಿ ಹೀಗೆಲ್ಲಾ ಮಾಡಿದ್ದಾರೆ ಎಂದು ಸುದ್ದಿ ಹರಡಲಾಯಿತು.

ಹಲವಾರು ಫೇಸ್‌ಬುಕ್ ಬಳಕೆದಾರರು ಹಿಂದಿಯಲ್ಲಿ ವ್ಯಂಗ್ಯ ಶೀರ್ಷಿಕೆಯೊಂದಿಗೆ ಆ ಫೋಟೊವನ್ನು ಪೋಸ್ಟ್ ಮಾಡಿದ್ದಾರೆ. ಅದಕ್ಕೆ “ಇಲ್ಲಿ ಕೂಡ ಹಗರಣ? ರಾಹುಲ್ ಬಾಬಾ ಸುಖದೇವ್ ವಿಹಾರ್‌ನಲ್ಲಿ ಬಡವರನ್ನು ಭೇಟಿ ಮಾಡಲು ಹೋದರು. ಅಂತಹ ಒಬ್ಬ ಬಡವರು ಕಾರಿನಲ್ಲಿ ಹಿಂತಿರುಗುತ್ತಿರುವುದು ಕಂಡುಬಂತು. ದೇವರು ಎಲ್ಲರನ್ನೂ ಅವಳಂತೆ ಬಡವನನ್ನಾಗಿ ಮಾಡಬೇಕು”. ಎಂಬ ಶೀರ್ಷಿಕೆ ನೀಡಲಾಗಿತ್ತು.

ಇದನ್ನು ಕಾರ್ಮಿಕ ಹಗರಣವೆಂದು ಕರೆಯಬಹುದು. ದೇಶವೇ ಕೊರೊನಾ ಭೀತಿಯಲ್ಲಿರುವಾಗ ಕಾರ್ಮಿಕರು ಸ್ಯಾನಿಟೈಸ್‌ ಆಗಿ ಕಾರಿನಲ್ಲಿ ಬರುತ್ತಾರೆ. ಸುಳ್ಳುಗಾರನ ಹೆಸರು ರಾಹುಲ್‌ ಗಾಂಧಿ ಎಂದೆಲ್ಲಾ ಹರಡಲಾಯಿತು.

ಫ್ಯಾಕ್ಟ್‌ಚೆಕ್‌

ರಾಹುಲ್‌ ಗಾಂಧಿಯ ಸಂವಾದದ ಚಿತ್ರಗಳನ್ನು ಪ್ರಿಯಾಂಕ ಗಾಂಧಿ ಸೇರಿದಂತೆ ಹಲವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಅದರಲ್ಲಿ ರಾಹುಲ್‌ ಪಕ್ಕದಲ್ಲಿ ಮಹಿಳೆಯೊಬ್ಬರು ಕುಳತಿದ್ದಾರೆ.

ನಂತರ ಸುದ್ದಿ ಸಂಸ್ಥೆ ಎಎನ್‌ಐ ಕೂಡ ಸಂವಾದದ ಕೆಲವು ಚಿತ್ರಗಳನ್ನು ಟ್ವೀಟ್ ಮಾಡಿದೆ. ಅದರಲ್ಲಿ “ಸುಖದೇವ್ ವಿಹಾರ್ ಫ್ಲೈಓವರ್ ಬಳಿ ನಡೆದುಕೊಂಡು ಸ್ವಂತ ರಾಜ್ಯಗಳಿಗೆ ಹೋಗುತ್ತಿದ್ದ ವಲಸೆ ಕಾರ್ಮಿಕರೊಂದಿಗೆ ರಾಹುಲ್ ಗಾಂಧಿ ಸಂವಾದ ನಡೆಸಿದರು. ನಂತರ ಪಕ್ಷದ ಸ್ವಯಂಸೇವಕರು ವಲಸೆ ಕಾರ್ಮಿಕರು ತಮ್ಮ ಮನೆಗಳಿಗೆ ತಲುಪಲು ವಾಹನಗಳ ವ್ಯವಸ್ಥೆ ಮಾಡಿದರು” ಎಂದು ಬರೆದಿದೆ. ಅದರಲ್ಲಿ ಕಾರ್ಮಿಕನೊಬ್ಬ ಹರಿಯಾಣದಿಂದ ಬರುತ್ತಿದ್ದೇನೆ. ಝಾನ್ಸಿಗೆ ಹೋಗಬೇಕಾಗಿದೆ ಎಂದು ಹೇಳುತ್ತಾನೆ.

ಎಎನ್‌ಐ ಟ್ವೀಟ್‌ನಲ್ಲಿ, ವೈರಲ್ ಪೋಸ್ಟ್‌ನಲ್ಲಿ ಕಾಣುವ ಅದೇ ಮಹಿಳೆ ಕಾರಿನೊಳಗೆ ಅದೇ ಪುರುಷನ ಪಕ್ಕದಲ್ಲಿ ಕಪ್ಪು ಮಾಸ್ಕ್‌ ಧರಿಸಿ ಕುಳಿತಿರುವುದನ್ನು ಕಾಣಬಹುದು.

ಅಂದರೆ ಸುಖದೇವ್ ವಿಹಾರ್ ಫ್ಲೈಓವರ್ ಬಳಿ ವಲಸೆ ಕಾರ್ಮಿಕರು ನಡೆದುಕೊಂಡು ಹೋಗುತ್ತಿರುವುದನ್ನು ಕಂಡುಕೊಂಡ ರಾಹುಲ್‌ ಗಾಂಧಿಯವರು ಸಂವಾದದ ನಂತರ ಈ ವಲಸೆ ಕಾರ್ಮಿಕರಿಗೆ ಸಹಾಯ ಮಾಡಿದ್ದಾರೆ ಎಂದು ಎಎನ್‌ಐ ಮತ್ತು ಇತರ ಮಾಧ್ಯಮಗಳು ವರದಿ ಮಾಡಿದ್ದವು.

ರಾಹುಲ್‌ ಗಾಂಧಿ ಮತ್ತು ಅವರ ಪಕ್ಷದ ಕಾರ್ಯಕರ್ತರು ವಲಸೆ ಕಾರ್ಮಿಕರಿಗೆ ತಮ್ಮ ಸ್ವಂತ ರಾಜ್ಯಗಳಿಗೆ ಹಿಂತಿರುಗಲು ವಾಹನಗಳನ್ನು ವ್ಯವಸ್ಥೆಗೊಳಿಸಿದ್ದಾರೆ ಎಂದು “ಇಂಡಿಯಾ ಟಿವಿ” ಮತ್ತು “ಆರ್ 9 ಟಿವಿ” ಸೇರಿದಂತೆ ಹಲವಾರು ಮಾಧ್ಯಮಗಳು ವರದಿ ಮಾಡಿವೆ.

ಮೇ 16 ರಂದು ಸಂವಾದ ನಡೆದ ಸ್ಥಳದಲ್ಲಿ ಹಾಜರಿದ್ದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಅನಿಲ್ ಚೌಧರಿಯವರು “ಸಂವಾದದ ನಂತರ ಅವರಿಗೆ ಸಹಾಯ ಮಾಡುವುದಾಗಿ ರಾಹುಲ್‌ ಭರವಸೆ ನೀಡಿದ್ದರು. ಆದರೆ ಸ್ವಲ್ಪ ಸಮಯದಲ್ಲಿ ಪೊಲೀಸರು ಕಾರ್ಮಿಕರನ್ನು ಕರೆದೊಯ್ಯುತ್ತಿದ್ದರು. ಆಗ ನಾವು ಪ್ರಶ್ನಿಸಿದ್ದಕ್ಕೆ, ಸಾಮಾಜಿಕ ಅಂತರದ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ನೀವು ಅವರ ಪ್ರಯಾಣಕ್ಕೆ ವ್ಯವಸ್ಥೆ ಮಾಡಬಹುದಾದರೆ ಅವರಿಗೆ ಯಾವುದೇ ತೊಂದರೆ ಇಲ್ಲ ಎಂದು ಪೊಲೀಸರು ತಿಳಿಸಿದರು. ಆಗ ರಾಹುಲ್‌ ಗಾಂಧಿಯವರು ವಾಹನ ವ್ಯವಸ್ಥೆ ಮಾಡಲು ಸೂಚಿಸಿದರು. ಆಗ ನಾವು ನಮ್ಮಗಳ ಕಾರಿನಲ್ಲಿಯೇ ಅವರನ್ನು ಅವರ ಊರುಗಳಿಗೆ ತಲುಪಿಸಿದೆವು” ಎಂದಿದ್ದಾರೆ.

ನಂತರ ಆಗ್ನೇಯ ದೆಹಲಿಯ ಡಿಸಿಪಿ ಆರ್.ಪಿ. ಮೀನಾ ಸಹ “ಈ ವಲಸಿಗರ ಗುಂಪು ಸುಖದೇವ್ ವಿಹಾರ್ ಬಳಿ ನಡೆಯುತ್ತಿರುವಾಗ, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಬೆಂಗಾವಲು ಪಡೆ ತಲುಪಿತು. ರಾಹುಲ್ ಗಾಂಧಿ ಈ ಗುಂಪಿನೊಂದಿಗೆ ಮಾತನಾಡಿದರು, ಮತ್ತು ನಂತರ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಪ್ರಯಾಣಕ್ಕೆ ವ್ಯವಸ್ಥೆ ಮಾಡಿದರು” ಎಂದಿದ್ದಾರೆ.

ಮೇಲಿನ ಎಲ್ಲಾ ಅಂಶಗಳನ್ನು ಪರಿಶೀಲಿಸಿದಾಗ ರಾಹುಲ್‌ ಗಾಂಧಿ ವಲಸೆ ಕಾರ್ಮಿಕರೊಂದಿಗೆ ಸಂವಾದ ನಡೆಸಿದ್ದು ಪೂರ್ವನಿರ್ಧಾರಿತವಲ್ಲ, ನಾಟಕವಂತೂ ಅಲ್ಲವೇ ಅಲ್ಲ ಎಂದು ತಿಳಿದುರುತ್ತದೆ. ಅಲ್ಲದೇ ಅವರೆಲ್ಲರೂ ವಲಸೆ ಕಾರ್ಮಿಕರೆ ಆಗಿದ್ದು ಸಂವಾದದ ನಂತರ ಕಾಂಗ್ರೆಸ್‌ ಕಾರ್ಯಕರ್ತರು ವ್ಯವಸ್ಥೆ ಮಾಡಿದ ಕಾರಿನಲ್ಲಿ ಅವರು ತಮ್ಮ ಸ್ವಂತ ಊರುಗಳಿಗೆ ತಲುಪಿದ್ದಾರೆ ಎಂಬುದು ಸ್ಪಷ್ಟವಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಟೊಮೊಟೊಗೂ ಬಂತು ಕೊರೊನಾಗಿಂತ ಡೆಡ್ಲಿ ವೈರಸ್: ನೀವು ನಂಬುತ್ತೀರಾ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...