Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್‌: ವಲಸಿಗರೊಂದಿಗೆ ರಾಹುಲ್‌ ಸಂವಾದ ನಾಟಕವೇ? ನಂತರ ಕಾರ್ಮಿಕರೆಲ್ಲಾ ಕಾರಿನಲ್ಲಿ ಹೊರಟರೆ?

ಫ್ಯಾಕ್ಟ್‌ಚೆಕ್‌: ವಲಸಿಗರೊಂದಿಗೆ ರಾಹುಲ್‌ ಸಂವಾದ ನಾಟಕವೇ? ನಂತರ ಕಾರ್ಮಿಕರೆಲ್ಲಾ ಕಾರಿನಲ್ಲಿ ಹೊರಟರೆ?

- Advertisement -
- Advertisement -

ಮೇ 16 ರಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ದೆಹಲಿಯ ಸುಖದೇವ್ ವಿಹಾರದಲ್ಲಿ ಹಲವಾರು ವಲಸೆ ಕಾರ್ಮಿಕರನ್ನು ಭೇಟಿಯಾದರು. ಇದನ್ನು ಮುಖ್ಯವಾಹಿನಿಯ ಮಾಧ್ಯಮಗಳು ಗಾಂಧಿಯವರು ಪಾದಚಾರಿ ಮಾರ್ಗದಲ್ಲಿ ಕುಳಿತು ವಲಸಿಗರೊಂದಿಗೆ ಮಾತನಾಡುವ ಚಿತ್ರದೊಂದಿಗೆ ವರದಿ ಮಾಡಿದ್ದವು.

ಸ್ವಲ್ಪ ಸಮಯದ ನಂತರ, ಫೇಸ್‌ಬುಕ್ ಮತ್ತು ವಾಟ್ಸಾಪ್‌ನಲ್ಲಿ ರಾಹುಲ್‌ ಪಕ್ಕ ಕುಳಿತಿದ್ದ ಮಹಿಳೆಯ ಎರಡು ಫೋಟೊಗಳನ್ನು ಹಾಕಿ ಇದು ರಾಹುಲ್‌ ಗಾಂಧಿಯ ನಾಟಕ. ನೋಡಿ ಆಕೆ ಕಾರಿನಲ್ಲಿ ಹೋಗುತ್ತಿದ್ದಾಳೆ, ಆಕೆ ವಲಸೆ ಕಾರ್ಮಿಕಳಲ್ಲ. ಪ್ರಚಾರಕ್ಕಾಗಿ ರಾಹುಲ್‌ ಗಾಂಧಿ ಹೀಗೆಲ್ಲಾ ಮಾಡಿದ್ದಾರೆ ಎಂದು ಸುದ್ದಿ ಹರಡಲಾಯಿತು.

ಹಲವಾರು ಫೇಸ್‌ಬುಕ್ ಬಳಕೆದಾರರು ಹಿಂದಿಯಲ್ಲಿ ವ್ಯಂಗ್ಯ ಶೀರ್ಷಿಕೆಯೊಂದಿಗೆ ಆ ಫೋಟೊವನ್ನು ಪೋಸ್ಟ್ ಮಾಡಿದ್ದಾರೆ. ಅದಕ್ಕೆ “ಇಲ್ಲಿ ಕೂಡ ಹಗರಣ? ರಾಹುಲ್ ಬಾಬಾ ಸುಖದೇವ್ ವಿಹಾರ್‌ನಲ್ಲಿ ಬಡವರನ್ನು ಭೇಟಿ ಮಾಡಲು ಹೋದರು. ಅಂತಹ ಒಬ್ಬ ಬಡವರು ಕಾರಿನಲ್ಲಿ ಹಿಂತಿರುಗುತ್ತಿರುವುದು ಕಂಡುಬಂತು. ದೇವರು ಎಲ್ಲರನ್ನೂ ಅವಳಂತೆ ಬಡವನನ್ನಾಗಿ ಮಾಡಬೇಕು”. ಎಂಬ ಶೀರ್ಷಿಕೆ ನೀಡಲಾಗಿತ್ತು.

ಇದನ್ನು ಕಾರ್ಮಿಕ ಹಗರಣವೆಂದು ಕರೆಯಬಹುದು. ದೇಶವೇ ಕೊರೊನಾ ಭೀತಿಯಲ್ಲಿರುವಾಗ ಕಾರ್ಮಿಕರು ಸ್ಯಾನಿಟೈಸ್‌ ಆಗಿ ಕಾರಿನಲ್ಲಿ ಬರುತ್ತಾರೆ. ಸುಳ್ಳುಗಾರನ ಹೆಸರು ರಾಹುಲ್‌ ಗಾಂಧಿ ಎಂದೆಲ್ಲಾ ಹರಡಲಾಯಿತು.

ಫ್ಯಾಕ್ಟ್‌ಚೆಕ್‌

ರಾಹುಲ್‌ ಗಾಂಧಿಯ ಸಂವಾದದ ಚಿತ್ರಗಳನ್ನು ಪ್ರಿಯಾಂಕ ಗಾಂಧಿ ಸೇರಿದಂತೆ ಹಲವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಅದರಲ್ಲಿ ರಾಹುಲ್‌ ಪಕ್ಕದಲ್ಲಿ ಮಹಿಳೆಯೊಬ್ಬರು ಕುಳತಿದ್ದಾರೆ.

ನಂತರ ಸುದ್ದಿ ಸಂಸ್ಥೆ ಎಎನ್‌ಐ ಕೂಡ ಸಂವಾದದ ಕೆಲವು ಚಿತ್ರಗಳನ್ನು ಟ್ವೀಟ್ ಮಾಡಿದೆ. ಅದರಲ್ಲಿ “ಸುಖದೇವ್ ವಿಹಾರ್ ಫ್ಲೈಓವರ್ ಬಳಿ ನಡೆದುಕೊಂಡು ಸ್ವಂತ ರಾಜ್ಯಗಳಿಗೆ ಹೋಗುತ್ತಿದ್ದ ವಲಸೆ ಕಾರ್ಮಿಕರೊಂದಿಗೆ ರಾಹುಲ್ ಗಾಂಧಿ ಸಂವಾದ ನಡೆಸಿದರು. ನಂತರ ಪಕ್ಷದ ಸ್ವಯಂಸೇವಕರು ವಲಸೆ ಕಾರ್ಮಿಕರು ತಮ್ಮ ಮನೆಗಳಿಗೆ ತಲುಪಲು ವಾಹನಗಳ ವ್ಯವಸ್ಥೆ ಮಾಡಿದರು” ಎಂದು ಬರೆದಿದೆ. ಅದರಲ್ಲಿ ಕಾರ್ಮಿಕನೊಬ್ಬ ಹರಿಯಾಣದಿಂದ ಬರುತ್ತಿದ್ದೇನೆ. ಝಾನ್ಸಿಗೆ ಹೋಗಬೇಕಾಗಿದೆ ಎಂದು ಹೇಳುತ್ತಾನೆ.

ಎಎನ್‌ಐ ಟ್ವೀಟ್‌ನಲ್ಲಿ, ವೈರಲ್ ಪೋಸ್ಟ್‌ನಲ್ಲಿ ಕಾಣುವ ಅದೇ ಮಹಿಳೆ ಕಾರಿನೊಳಗೆ ಅದೇ ಪುರುಷನ ಪಕ್ಕದಲ್ಲಿ ಕಪ್ಪು ಮಾಸ್ಕ್‌ ಧರಿಸಿ ಕುಳಿತಿರುವುದನ್ನು ಕಾಣಬಹುದು.

ಅಂದರೆ ಸುಖದೇವ್ ವಿಹಾರ್ ಫ್ಲೈಓವರ್ ಬಳಿ ವಲಸೆ ಕಾರ್ಮಿಕರು ನಡೆದುಕೊಂಡು ಹೋಗುತ್ತಿರುವುದನ್ನು ಕಂಡುಕೊಂಡ ರಾಹುಲ್‌ ಗಾಂಧಿಯವರು ಸಂವಾದದ ನಂತರ ಈ ವಲಸೆ ಕಾರ್ಮಿಕರಿಗೆ ಸಹಾಯ ಮಾಡಿದ್ದಾರೆ ಎಂದು ಎಎನ್‌ಐ ಮತ್ತು ಇತರ ಮಾಧ್ಯಮಗಳು ವರದಿ ಮಾಡಿದ್ದವು.

ರಾಹುಲ್‌ ಗಾಂಧಿ ಮತ್ತು ಅವರ ಪಕ್ಷದ ಕಾರ್ಯಕರ್ತರು ವಲಸೆ ಕಾರ್ಮಿಕರಿಗೆ ತಮ್ಮ ಸ್ವಂತ ರಾಜ್ಯಗಳಿಗೆ ಹಿಂತಿರುಗಲು ವಾಹನಗಳನ್ನು ವ್ಯವಸ್ಥೆಗೊಳಿಸಿದ್ದಾರೆ ಎಂದು “ಇಂಡಿಯಾ ಟಿವಿ” ಮತ್ತು “ಆರ್ 9 ಟಿವಿ” ಸೇರಿದಂತೆ ಹಲವಾರು ಮಾಧ್ಯಮಗಳು ವರದಿ ಮಾಡಿವೆ.

ಮೇ 16 ರಂದು ಸಂವಾದ ನಡೆದ ಸ್ಥಳದಲ್ಲಿ ಹಾಜರಿದ್ದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಅನಿಲ್ ಚೌಧರಿಯವರು “ಸಂವಾದದ ನಂತರ ಅವರಿಗೆ ಸಹಾಯ ಮಾಡುವುದಾಗಿ ರಾಹುಲ್‌ ಭರವಸೆ ನೀಡಿದ್ದರು. ಆದರೆ ಸ್ವಲ್ಪ ಸಮಯದಲ್ಲಿ ಪೊಲೀಸರು ಕಾರ್ಮಿಕರನ್ನು ಕರೆದೊಯ್ಯುತ್ತಿದ್ದರು. ಆಗ ನಾವು ಪ್ರಶ್ನಿಸಿದ್ದಕ್ಕೆ, ಸಾಮಾಜಿಕ ಅಂತರದ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ನೀವು ಅವರ ಪ್ರಯಾಣಕ್ಕೆ ವ್ಯವಸ್ಥೆ ಮಾಡಬಹುದಾದರೆ ಅವರಿಗೆ ಯಾವುದೇ ತೊಂದರೆ ಇಲ್ಲ ಎಂದು ಪೊಲೀಸರು ತಿಳಿಸಿದರು. ಆಗ ರಾಹುಲ್‌ ಗಾಂಧಿಯವರು ವಾಹನ ವ್ಯವಸ್ಥೆ ಮಾಡಲು ಸೂಚಿಸಿದರು. ಆಗ ನಾವು ನಮ್ಮಗಳ ಕಾರಿನಲ್ಲಿಯೇ ಅವರನ್ನು ಅವರ ಊರುಗಳಿಗೆ ತಲುಪಿಸಿದೆವು” ಎಂದಿದ್ದಾರೆ.

ನಂತರ ಆಗ್ನೇಯ ದೆಹಲಿಯ ಡಿಸಿಪಿ ಆರ್.ಪಿ. ಮೀನಾ ಸಹ “ಈ ವಲಸಿಗರ ಗುಂಪು ಸುಖದೇವ್ ವಿಹಾರ್ ಬಳಿ ನಡೆಯುತ್ತಿರುವಾಗ, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಬೆಂಗಾವಲು ಪಡೆ ತಲುಪಿತು. ರಾಹುಲ್ ಗಾಂಧಿ ಈ ಗುಂಪಿನೊಂದಿಗೆ ಮಾತನಾಡಿದರು, ಮತ್ತು ನಂತರ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಪ್ರಯಾಣಕ್ಕೆ ವ್ಯವಸ್ಥೆ ಮಾಡಿದರು” ಎಂದಿದ್ದಾರೆ.

ಮೇಲಿನ ಎಲ್ಲಾ ಅಂಶಗಳನ್ನು ಪರಿಶೀಲಿಸಿದಾಗ ರಾಹುಲ್‌ ಗಾಂಧಿ ವಲಸೆ ಕಾರ್ಮಿಕರೊಂದಿಗೆ ಸಂವಾದ ನಡೆಸಿದ್ದು ಪೂರ್ವನಿರ್ಧಾರಿತವಲ್ಲ, ನಾಟಕವಂತೂ ಅಲ್ಲವೇ ಅಲ್ಲ ಎಂದು ತಿಳಿದುರುತ್ತದೆ. ಅಲ್ಲದೇ ಅವರೆಲ್ಲರೂ ವಲಸೆ ಕಾರ್ಮಿಕರೆ ಆಗಿದ್ದು ಸಂವಾದದ ನಂತರ ಕಾಂಗ್ರೆಸ್‌ ಕಾರ್ಯಕರ್ತರು ವ್ಯವಸ್ಥೆ ಮಾಡಿದ ಕಾರಿನಲ್ಲಿ ಅವರು ತಮ್ಮ ಸ್ವಂತ ಊರುಗಳಿಗೆ ತಲುಪಿದ್ದಾರೆ ಎಂಬುದು ಸ್ಪಷ್ಟವಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಟೊಮೊಟೊಗೂ ಬಂತು ಕೊರೊನಾಗಿಂತ ಡೆಡ್ಲಿ ವೈರಸ್: ನೀವು ನಂಬುತ್ತೀರಾ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...