Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ರಾಹುಲ್ ಗಾಂಧಿ ಮಹಿಳೆಯರನ್ನು ಅವಮಾನಿಸಿಲ್ಲ, ಅರ್ಧ ಭಾಷಣ ಹಂಚಿಕೊಳ್ಳಲಾಗುತ್ತಿದೆ

ಫ್ಯಾಕ್ಟ್‌ಚೆಕ್: ರಾಹುಲ್ ಗಾಂಧಿ ಮಹಿಳೆಯರನ್ನು ಅವಮಾನಿಸಿಲ್ಲ, ಅರ್ಧ ಭಾಷಣ ಹಂಚಿಕೊಳ್ಳಲಾಗುತ್ತಿದೆ

ಕಾಂಗ್ರೆಸ್ ಪಕ್ಷದ ರಾಜಕೀಯದಲ್ಲಿ'ಪ್ರತಿಯೊಬ್ಬ ಪುರುಷನಿಗೂ ಮಹಿಳೆಯರಿರುವುದು ಅಗತ್ಯ ಮತ್ತು ಸಹಜ' ಎಂದು ರಾಹುಲ್ ಗಾಂಧಿ ಭಾಷಣದಲ್ಲಿ ಹೇಳಿದ್ದಾರೆ ಎಂದು ‍ಶೇರ್ ಮಾಡಲಾಗುತ್ತಿದೆ.

- Advertisement -
- Advertisement -

’ಮಹಾತ್ಮಾ ಗಾಂಧಿ ಅವರ ಜೊತೆಯಲ್ಲಿ ಮಹಿಳೆಯರನ್ನು ಕಾಣಬಹುದು ಹೊರತು ನೀವು ಎಂದಾದರೂ ಮೋಹನ್ ಭಾಗವತ್ ಜೊತೆಗೆ ಮಹಿಳೆಯರನ್ನು ನೋಡಿದ್ದೀರಾ..?’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. “ಮೋಹನ್ ಭಾಗವತ್ ಅವರನ್ನು ತೆಗಳುವ ಭರದಲ್ಲಿ ರಾಹುಲ್ ಗಾಂಧಿ ಮೋಹನದಾಸ ಕರಮಚಂದ್ರ ಗಾಂಧಿಯವರನ್ನು ಅವಮಾನಿಸಿದ್ದು ಗೊತ್ತೇ ಆಗಲಿಲ್ಲ. ಮಹಿಳೆಯರಿಗೆ ಬೇರೆ ಅಸ್ತಿತ್ವ ಇಲ್ಲ ಎಂದಿದ್ದಾರೆ ಎಂದು ಹಲವು ಪೋಸ್ಟ್‌ಗಳನ್ನು ಷೇರ್ ಮಾಡಲಾಗುತ್ತಿದೆ. ಇದು ನಿಜವೇ ಎಂಬುದನ್ನು ಪರಿಶೀಲಿಸೋಣ..

ಈ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ 

ಪ್ರತಿಪಾದನೆ: ಕಾಂಗ್ರೆಸ್ ಪಕ್ಷದ ರಾಜಕೀಯದಲ್ಲಿ’ಪ್ರತಿಯೊಬ್ಬ ಪುರುಷನಿಗೂ ಮಹಿಳೆಯರಿರುವುದು ಅಗತ್ಯ ಮತ್ತು ಸಹಜ’ ಎಂದು ರಾಹುಲ್ ಗಾಂಧಿಯವರು ಭಾಷಣದಲ್ಲಿ ಹೇಳಿದ್ದಾರೆ.

ಫ್ಯಾಕ್ಟ್‌ ಚೆಕ್

2021 ರ ಸೆಪ್ಟೆಂಬರ್ 15 ರಂದು ದೆಹಲಿಯಲ್ಲಿ ಮಹಿಳಾ ಕಾಂಗ್ರೆಸ್ ಸ್ಥಾಪನೆಯ ದಿನದಂದು ನಡೆದ ಸಭೆಯಲ್ಲಿ ರಾಹುಲ್ ಗಾಂಧಿಯವರ ಭಾಷಣದಿಂದ ಈ ಹೇಳಿಕೆಗಳನ್ನು ತೆಗೆದುಕೊಳ್ಳಲಾಗಿದೆ. ಈ ವಿಡಿಯೊದಲ್ಲಿ ನೀವು ರಾಹುಲ್ ಗಾಂಧಿ 17:50 ನಿಮಿಷದಲ್ಲಿ ಈ ಹೇಳಿಕೆಗಳನ್ನು ನೀಡುವುದನ್ನು ನೋಡಬಹುದು.

ರಾಹುಲ್ ಗಾಂಧಿ ಈ ಸಭೆಯಲ್ಲಿ ಮಹಿಳಾ ಸಬಲೀಕರಣವನ್ನು ಉದ್ದೇಶಿಸಿ ಮಾತನಾಡುವಾಗ ಒಂದು ಸಂದರ್ಭದಲ್ಲಿ ‘ಚಿತ್ರಗಳಲ್ಲಿ ಮಹಾತ್ಮ ಗಾಂಧಿಯವರೊಂದಿಗೆ ಮೂರು-ನಾಲ್ಕು ಮಹಿಳೆಯರನ್ನು ನೀವು ನೋಡಬಹುದು. ಆದರೆ, ಮೋಹನ್ ಭಾಗವತ್ ಎಂದಾದರೂ ಮಹಿಳೆಯರನ್ನು ನೋಡಿದ್ದಾರೆಯೇ? ಮೋಹನ್ ಭಾಗವತ್ ಜೊತೆಯಲ್ಲಿ ಮಹಿಳೆಯರನ್ನು ನೋಡಲು ಸಾಧ್ಯವಿಲ್ಲ. ಏಕೆಂದರೆ ಅವರ ಸಂಘಟನೆ (ಆರೆಸ್ಸೆಸ್) ಮಹಿಳೆಯರನ್ನು ತುಳಿಯುತ್ತದೆ, ಆದರೆ ನಮ್ಮ ಸಂಘಟನೆ ಮಹಿಳಾ ಸಬಲೀಕರಣಕ್ಕೆ ವೇದಿಕೆಯನ್ನು ನೀಡುತ್ತದೆ’ಎಂದು ಹೇಳಿದ್ದಾರೆ.

ಈ ರಾಹುಲ್ ಗಾಂಧಿ ಭಾಷಣದ, ‘ಮಹಾತ್ಮ ಗಾಂಧಿಯವರ ಜೊತೆಯಲ್ಲಿ ಮಹಿಳೆಯರು ಕಾಣಿಸಿಕೊಳ್ಳುತ್ತಾರೆ. ನೀವು ಎಂದಾದರೂ ಮೋಹನ್ ಭಾಗವತ್ ಜೊತೆಯಲ್ಲಿ ಮಹಿಳೆಯರನ್ನು ನೋಡಿದ್ದೀರಾ?’ ಎಂಬ ಭಾಗವನ್ನು ಮಾತ್ರ ತೆಗೆದುಕೊಂಡು ಶೇರ್ ಮಾಡಲಾಗುತ್ತಿದೆ. ಭಾಷಣದ ಮುಂದುವರಿದ ಭಾಗವಾದ ಆರೆಸ್ಸೆಸ್ ಮಹಿಳೆಯರನ್ನು ತುಳಿಯುತ್ತದೆ. ಆದರೆ, ನಮ್ಮ ಸಂಸ್ಥೆಯು ಮಹಿಳಾ ಸಬಲೀಕರಣಕ್ಕೆ ವೇದಿಕೆಯನ್ನು ನೀಡುತ್ತದೆ’ ಎಂಬ ಹೇಳಿಕೆಗಳನ್ನು ತೆಗೆದುಹಾಕಿದ್ದಾರೆ. ಆ ವಿಡಿಯೋದ ಪೂರ್ಣ ಭಾಗ ಕಾಂಗ್ರೆಸ್ ಯೂಟ್ಯೂಬ್‌ನಲ್ಲಿದೆ.

 

ಈ ವಿಡಿಯೊ ತಿಳಿಸುವುದೇನೆಂದರೆ, ಮಹಿಳೆಯರಿಗೆ ಅವಕಾಶಗಳನ್ನು ಒದಗಿಸುವ ಬಗ್ಗೆ ರಾಹುಲ್ ಗಾಂಧಿ ಪ್ರಸ್ತಾಪಿಸಿದ್ದಾರೆ ಹೊರತು, ಕಾಂಗ್ರೆಸ್ ಪಕ್ಷದ ರಾಜಕೀಯದಲ್ಲಿ’ಪ್ರತಿಯೊಬ್ಬ ಪುರುಷನಿಗೂ ಮಹಿಳೆಯರಿರುವುದು ಅಗತ್ಯ ಮತ್ತು ಸಹಜ’ ಎಂದು ಹೇಳಿಲ್ಲ.

ಹೀಗಾಗಿ ರಾಹುಲ್ ಗಾಂಧಿ ಅವರ ಭಾಷಣದ ಕೆಲ ಸಾಲುಗಳನ್ನು ಇಟ್ಟುಕೊಂಡು ಮಹಿಳೆಯರು ಮತ್ತು ಮಹಾತ್ಮಾ ಗಾಂಧಿ ಅವರನ್ನು ಅವಮಾನ ಮಾಡುತ್ತಿದ್ದಾರೆ ಎಂದು ಪೋಸ್ಟ್‌ಗಳಲ್ಲಿ ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ.


ಇದನ್ನೂ ಓದಿ: ಕಿಸಾನ್ ಮಹಾಪಂಚಾಯತ್‌ನಲ್ಲಿ ಮದ್ಯಕ್ಕಾಗಿ ರೈತರ ಕಿತ್ತಾಟವೆಂದು ತಪ್ಪು ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...