Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ರಾಹುಲ್ ಗಾಂಧಿ ಮಹಿಳೆಯರನ್ನು ಅವಮಾನಿಸಿಲ್ಲ, ಅರ್ಧ ಭಾಷಣ ಹಂಚಿಕೊಳ್ಳಲಾಗುತ್ತಿದೆ

ಫ್ಯಾಕ್ಟ್‌ಚೆಕ್: ರಾಹುಲ್ ಗಾಂಧಿ ಮಹಿಳೆಯರನ್ನು ಅವಮಾನಿಸಿಲ್ಲ, ಅರ್ಧ ಭಾಷಣ ಹಂಚಿಕೊಳ್ಳಲಾಗುತ್ತಿದೆ

ಕಾಂಗ್ರೆಸ್ ಪಕ್ಷದ ರಾಜಕೀಯದಲ್ಲಿ'ಪ್ರತಿಯೊಬ್ಬ ಪುರುಷನಿಗೂ ಮಹಿಳೆಯರಿರುವುದು ಅಗತ್ಯ ಮತ್ತು ಸಹಜ' ಎಂದು ರಾಹುಲ್ ಗಾಂಧಿ ಭಾಷಣದಲ್ಲಿ ಹೇಳಿದ್ದಾರೆ ಎಂದು ‍ಶೇರ್ ಮಾಡಲಾಗುತ್ತಿದೆ.

- Advertisement -
- Advertisement -

’ಮಹಾತ್ಮಾ ಗಾಂಧಿ ಅವರ ಜೊತೆಯಲ್ಲಿ ಮಹಿಳೆಯರನ್ನು ಕಾಣಬಹುದು ಹೊರತು ನೀವು ಎಂದಾದರೂ ಮೋಹನ್ ಭಾಗವತ್ ಜೊತೆಗೆ ಮಹಿಳೆಯರನ್ನು ನೋಡಿದ್ದೀರಾ..?’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. “ಮೋಹನ್ ಭಾಗವತ್ ಅವರನ್ನು ತೆಗಳುವ ಭರದಲ್ಲಿ ರಾಹುಲ್ ಗಾಂಧಿ ಮೋಹನದಾಸ ಕರಮಚಂದ್ರ ಗಾಂಧಿಯವರನ್ನು ಅವಮಾನಿಸಿದ್ದು ಗೊತ್ತೇ ಆಗಲಿಲ್ಲ. ಮಹಿಳೆಯರಿಗೆ ಬೇರೆ ಅಸ್ತಿತ್ವ ಇಲ್ಲ ಎಂದಿದ್ದಾರೆ ಎಂದು ಹಲವು ಪೋಸ್ಟ್‌ಗಳನ್ನು ಷೇರ್ ಮಾಡಲಾಗುತ್ತಿದೆ. ಇದು ನಿಜವೇ ಎಂಬುದನ್ನು ಪರಿಶೀಲಿಸೋಣ..

ಈ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ 

ಪ್ರತಿಪಾದನೆ: ಕಾಂಗ್ರೆಸ್ ಪಕ್ಷದ ರಾಜಕೀಯದಲ್ಲಿ’ಪ್ರತಿಯೊಬ್ಬ ಪುರುಷನಿಗೂ ಮಹಿಳೆಯರಿರುವುದು ಅಗತ್ಯ ಮತ್ತು ಸಹಜ’ ಎಂದು ರಾಹುಲ್ ಗಾಂಧಿಯವರು ಭಾಷಣದಲ್ಲಿ ಹೇಳಿದ್ದಾರೆ.

ಫ್ಯಾಕ್ಟ್‌ ಚೆಕ್

2021 ರ ಸೆಪ್ಟೆಂಬರ್ 15 ರಂದು ದೆಹಲಿಯಲ್ಲಿ ಮಹಿಳಾ ಕಾಂಗ್ರೆಸ್ ಸ್ಥಾಪನೆಯ ದಿನದಂದು ನಡೆದ ಸಭೆಯಲ್ಲಿ ರಾಹುಲ್ ಗಾಂಧಿಯವರ ಭಾಷಣದಿಂದ ಈ ಹೇಳಿಕೆಗಳನ್ನು ತೆಗೆದುಕೊಳ್ಳಲಾಗಿದೆ. ಈ ವಿಡಿಯೊದಲ್ಲಿ ನೀವು ರಾಹುಲ್ ಗಾಂಧಿ 17:50 ನಿಮಿಷದಲ್ಲಿ ಈ ಹೇಳಿಕೆಗಳನ್ನು ನೀಡುವುದನ್ನು ನೋಡಬಹುದು.

ರಾಹುಲ್ ಗಾಂಧಿ ಈ ಸಭೆಯಲ್ಲಿ ಮಹಿಳಾ ಸಬಲೀಕರಣವನ್ನು ಉದ್ದೇಶಿಸಿ ಮಾತನಾಡುವಾಗ ಒಂದು ಸಂದರ್ಭದಲ್ಲಿ ‘ಚಿತ್ರಗಳಲ್ಲಿ ಮಹಾತ್ಮ ಗಾಂಧಿಯವರೊಂದಿಗೆ ಮೂರು-ನಾಲ್ಕು ಮಹಿಳೆಯರನ್ನು ನೀವು ನೋಡಬಹುದು. ಆದರೆ, ಮೋಹನ್ ಭಾಗವತ್ ಎಂದಾದರೂ ಮಹಿಳೆಯರನ್ನು ನೋಡಿದ್ದಾರೆಯೇ? ಮೋಹನ್ ಭಾಗವತ್ ಜೊತೆಯಲ್ಲಿ ಮಹಿಳೆಯರನ್ನು ನೋಡಲು ಸಾಧ್ಯವಿಲ್ಲ. ಏಕೆಂದರೆ ಅವರ ಸಂಘಟನೆ (ಆರೆಸ್ಸೆಸ್) ಮಹಿಳೆಯರನ್ನು ತುಳಿಯುತ್ತದೆ, ಆದರೆ ನಮ್ಮ ಸಂಘಟನೆ ಮಹಿಳಾ ಸಬಲೀಕರಣಕ್ಕೆ ವೇದಿಕೆಯನ್ನು ನೀಡುತ್ತದೆ’ಎಂದು ಹೇಳಿದ್ದಾರೆ.

ಈ ರಾಹುಲ್ ಗಾಂಧಿ ಭಾಷಣದ, ‘ಮಹಾತ್ಮ ಗಾಂಧಿಯವರ ಜೊತೆಯಲ್ಲಿ ಮಹಿಳೆಯರು ಕಾಣಿಸಿಕೊಳ್ಳುತ್ತಾರೆ. ನೀವು ಎಂದಾದರೂ ಮೋಹನ್ ಭಾಗವತ್ ಜೊತೆಯಲ್ಲಿ ಮಹಿಳೆಯರನ್ನು ನೋಡಿದ್ದೀರಾ?’ ಎಂಬ ಭಾಗವನ್ನು ಮಾತ್ರ ತೆಗೆದುಕೊಂಡು ಶೇರ್ ಮಾಡಲಾಗುತ್ತಿದೆ. ಭಾಷಣದ ಮುಂದುವರಿದ ಭಾಗವಾದ ಆರೆಸ್ಸೆಸ್ ಮಹಿಳೆಯರನ್ನು ತುಳಿಯುತ್ತದೆ. ಆದರೆ, ನಮ್ಮ ಸಂಸ್ಥೆಯು ಮಹಿಳಾ ಸಬಲೀಕರಣಕ್ಕೆ ವೇದಿಕೆಯನ್ನು ನೀಡುತ್ತದೆ’ ಎಂಬ ಹೇಳಿಕೆಗಳನ್ನು ತೆಗೆದುಹಾಕಿದ್ದಾರೆ. ಆ ವಿಡಿಯೋದ ಪೂರ್ಣ ಭಾಗ ಕಾಂಗ್ರೆಸ್ ಯೂಟ್ಯೂಬ್‌ನಲ್ಲಿದೆ.

 

ಈ ವಿಡಿಯೊ ತಿಳಿಸುವುದೇನೆಂದರೆ, ಮಹಿಳೆಯರಿಗೆ ಅವಕಾಶಗಳನ್ನು ಒದಗಿಸುವ ಬಗ್ಗೆ ರಾಹುಲ್ ಗಾಂಧಿ ಪ್ರಸ್ತಾಪಿಸಿದ್ದಾರೆ ಹೊರತು, ಕಾಂಗ್ರೆಸ್ ಪಕ್ಷದ ರಾಜಕೀಯದಲ್ಲಿ’ಪ್ರತಿಯೊಬ್ಬ ಪುರುಷನಿಗೂ ಮಹಿಳೆಯರಿರುವುದು ಅಗತ್ಯ ಮತ್ತು ಸಹಜ’ ಎಂದು ಹೇಳಿಲ್ಲ.

ಹೀಗಾಗಿ ರಾಹುಲ್ ಗಾಂಧಿ ಅವರ ಭಾಷಣದ ಕೆಲ ಸಾಲುಗಳನ್ನು ಇಟ್ಟುಕೊಂಡು ಮಹಿಳೆಯರು ಮತ್ತು ಮಹಾತ್ಮಾ ಗಾಂಧಿ ಅವರನ್ನು ಅವಮಾನ ಮಾಡುತ್ತಿದ್ದಾರೆ ಎಂದು ಪೋಸ್ಟ್‌ಗಳಲ್ಲಿ ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ.


ಇದನ್ನೂ ಓದಿ: ಕಿಸಾನ್ ಮಹಾಪಂಚಾಯತ್‌ನಲ್ಲಿ ಮದ್ಯಕ್ಕಾಗಿ ರೈತರ ಕಿತ್ತಾಟವೆಂದು ತಪ್ಪು ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...