Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ರಾಹುಲ್ ಗಾಂಧಿ ಮಹಿಳೆಯರನ್ನು ಅವಮಾನಿಸಿಲ್ಲ, ಅರ್ಧ ಭಾಷಣ ಹಂಚಿಕೊಳ್ಳಲಾಗುತ್ತಿದೆ

ಫ್ಯಾಕ್ಟ್‌ಚೆಕ್: ರಾಹುಲ್ ಗಾಂಧಿ ಮಹಿಳೆಯರನ್ನು ಅವಮಾನಿಸಿಲ್ಲ, ಅರ್ಧ ಭಾಷಣ ಹಂಚಿಕೊಳ್ಳಲಾಗುತ್ತಿದೆ

ಕಾಂಗ್ರೆಸ್ ಪಕ್ಷದ ರಾಜಕೀಯದಲ್ಲಿ'ಪ್ರತಿಯೊಬ್ಬ ಪುರುಷನಿಗೂ ಮಹಿಳೆಯರಿರುವುದು ಅಗತ್ಯ ಮತ್ತು ಸಹಜ' ಎಂದು ರಾಹುಲ್ ಗಾಂಧಿ ಭಾಷಣದಲ್ಲಿ ಹೇಳಿದ್ದಾರೆ ಎಂದು ‍ಶೇರ್ ಮಾಡಲಾಗುತ್ತಿದೆ.

- Advertisement -
- Advertisement -

’ಮಹಾತ್ಮಾ ಗಾಂಧಿ ಅವರ ಜೊತೆಯಲ್ಲಿ ಮಹಿಳೆಯರನ್ನು ಕಾಣಬಹುದು ಹೊರತು ನೀವು ಎಂದಾದರೂ ಮೋಹನ್ ಭಾಗವತ್ ಜೊತೆಗೆ ಮಹಿಳೆಯರನ್ನು ನೋಡಿದ್ದೀರಾ..?’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. “ಮೋಹನ್ ಭಾಗವತ್ ಅವರನ್ನು ತೆಗಳುವ ಭರದಲ್ಲಿ ರಾಹುಲ್ ಗಾಂಧಿ ಮೋಹನದಾಸ ಕರಮಚಂದ್ರ ಗಾಂಧಿಯವರನ್ನು ಅವಮಾನಿಸಿದ್ದು ಗೊತ್ತೇ ಆಗಲಿಲ್ಲ. ಮಹಿಳೆಯರಿಗೆ ಬೇರೆ ಅಸ್ತಿತ್ವ ಇಲ್ಲ ಎಂದಿದ್ದಾರೆ ಎಂದು ಹಲವು ಪೋಸ್ಟ್‌ಗಳನ್ನು ಷೇರ್ ಮಾಡಲಾಗುತ್ತಿದೆ. ಇದು ನಿಜವೇ ಎಂಬುದನ್ನು ಪರಿಶೀಲಿಸೋಣ..

ಈ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ 

ಪ್ರತಿಪಾದನೆ: ಕಾಂಗ್ರೆಸ್ ಪಕ್ಷದ ರಾಜಕೀಯದಲ್ಲಿ’ಪ್ರತಿಯೊಬ್ಬ ಪುರುಷನಿಗೂ ಮಹಿಳೆಯರಿರುವುದು ಅಗತ್ಯ ಮತ್ತು ಸಹಜ’ ಎಂದು ರಾಹುಲ್ ಗಾಂಧಿಯವರು ಭಾಷಣದಲ್ಲಿ ಹೇಳಿದ್ದಾರೆ.

ಫ್ಯಾಕ್ಟ್‌ ಚೆಕ್

2021 ರ ಸೆಪ್ಟೆಂಬರ್ 15 ರಂದು ದೆಹಲಿಯಲ್ಲಿ ಮಹಿಳಾ ಕಾಂಗ್ರೆಸ್ ಸ್ಥಾಪನೆಯ ದಿನದಂದು ನಡೆದ ಸಭೆಯಲ್ಲಿ ರಾಹುಲ್ ಗಾಂಧಿಯವರ ಭಾಷಣದಿಂದ ಈ ಹೇಳಿಕೆಗಳನ್ನು ತೆಗೆದುಕೊಳ್ಳಲಾಗಿದೆ. ಈ ವಿಡಿಯೊದಲ್ಲಿ ನೀವು ರಾಹುಲ್ ಗಾಂಧಿ 17:50 ನಿಮಿಷದಲ್ಲಿ ಈ ಹೇಳಿಕೆಗಳನ್ನು ನೀಡುವುದನ್ನು ನೋಡಬಹುದು.

ರಾಹುಲ್ ಗಾಂಧಿ ಈ ಸಭೆಯಲ್ಲಿ ಮಹಿಳಾ ಸಬಲೀಕರಣವನ್ನು ಉದ್ದೇಶಿಸಿ ಮಾತನಾಡುವಾಗ ಒಂದು ಸಂದರ್ಭದಲ್ಲಿ ‘ಚಿತ್ರಗಳಲ್ಲಿ ಮಹಾತ್ಮ ಗಾಂಧಿಯವರೊಂದಿಗೆ ಮೂರು-ನಾಲ್ಕು ಮಹಿಳೆಯರನ್ನು ನೀವು ನೋಡಬಹುದು. ಆದರೆ, ಮೋಹನ್ ಭಾಗವತ್ ಎಂದಾದರೂ ಮಹಿಳೆಯರನ್ನು ನೋಡಿದ್ದಾರೆಯೇ? ಮೋಹನ್ ಭಾಗವತ್ ಜೊತೆಯಲ್ಲಿ ಮಹಿಳೆಯರನ್ನು ನೋಡಲು ಸಾಧ್ಯವಿಲ್ಲ. ಏಕೆಂದರೆ ಅವರ ಸಂಘಟನೆ (ಆರೆಸ್ಸೆಸ್) ಮಹಿಳೆಯರನ್ನು ತುಳಿಯುತ್ತದೆ, ಆದರೆ ನಮ್ಮ ಸಂಘಟನೆ ಮಹಿಳಾ ಸಬಲೀಕರಣಕ್ಕೆ ವೇದಿಕೆಯನ್ನು ನೀಡುತ್ತದೆ’ಎಂದು ಹೇಳಿದ್ದಾರೆ.

ಈ ರಾಹುಲ್ ಗಾಂಧಿ ಭಾಷಣದ, ‘ಮಹಾತ್ಮ ಗಾಂಧಿಯವರ ಜೊತೆಯಲ್ಲಿ ಮಹಿಳೆಯರು ಕಾಣಿಸಿಕೊಳ್ಳುತ್ತಾರೆ. ನೀವು ಎಂದಾದರೂ ಮೋಹನ್ ಭಾಗವತ್ ಜೊತೆಯಲ್ಲಿ ಮಹಿಳೆಯರನ್ನು ನೋಡಿದ್ದೀರಾ?’ ಎಂಬ ಭಾಗವನ್ನು ಮಾತ್ರ ತೆಗೆದುಕೊಂಡು ಶೇರ್ ಮಾಡಲಾಗುತ್ತಿದೆ. ಭಾಷಣದ ಮುಂದುವರಿದ ಭಾಗವಾದ ಆರೆಸ್ಸೆಸ್ ಮಹಿಳೆಯರನ್ನು ತುಳಿಯುತ್ತದೆ. ಆದರೆ, ನಮ್ಮ ಸಂಸ್ಥೆಯು ಮಹಿಳಾ ಸಬಲೀಕರಣಕ್ಕೆ ವೇದಿಕೆಯನ್ನು ನೀಡುತ್ತದೆ’ ಎಂಬ ಹೇಳಿಕೆಗಳನ್ನು ತೆಗೆದುಹಾಕಿದ್ದಾರೆ. ಆ ವಿಡಿಯೋದ ಪೂರ್ಣ ಭಾಗ ಕಾಂಗ್ರೆಸ್ ಯೂಟ್ಯೂಬ್‌ನಲ್ಲಿದೆ.

 

ಈ ವಿಡಿಯೊ ತಿಳಿಸುವುದೇನೆಂದರೆ, ಮಹಿಳೆಯರಿಗೆ ಅವಕಾಶಗಳನ್ನು ಒದಗಿಸುವ ಬಗ್ಗೆ ರಾಹುಲ್ ಗಾಂಧಿ ಪ್ರಸ್ತಾಪಿಸಿದ್ದಾರೆ ಹೊರತು, ಕಾಂಗ್ರೆಸ್ ಪಕ್ಷದ ರಾಜಕೀಯದಲ್ಲಿ’ಪ್ರತಿಯೊಬ್ಬ ಪುರುಷನಿಗೂ ಮಹಿಳೆಯರಿರುವುದು ಅಗತ್ಯ ಮತ್ತು ಸಹಜ’ ಎಂದು ಹೇಳಿಲ್ಲ.

ಹೀಗಾಗಿ ರಾಹುಲ್ ಗಾಂಧಿ ಅವರ ಭಾಷಣದ ಕೆಲ ಸಾಲುಗಳನ್ನು ಇಟ್ಟುಕೊಂಡು ಮಹಿಳೆಯರು ಮತ್ತು ಮಹಾತ್ಮಾ ಗಾಂಧಿ ಅವರನ್ನು ಅವಮಾನ ಮಾಡುತ್ತಿದ್ದಾರೆ ಎಂದು ಪೋಸ್ಟ್‌ಗಳಲ್ಲಿ ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ.


ಇದನ್ನೂ ಓದಿ: ಕಿಸಾನ್ ಮಹಾಪಂಚಾಯತ್‌ನಲ್ಲಿ ಮದ್ಯಕ್ಕಾಗಿ ರೈತರ ಕಿತ್ತಾಟವೆಂದು ತಪ್ಪು ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...