Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ರಾಹುಲ್ ಗಾಂಧಿ ಮಹಿಳೆಯರನ್ನು ಅವಮಾನಿಸಿಲ್ಲ, ಅರ್ಧ ಭಾಷಣ ಹಂಚಿಕೊಳ್ಳಲಾಗುತ್ತಿದೆ

ಫ್ಯಾಕ್ಟ್‌ಚೆಕ್: ರಾಹುಲ್ ಗಾಂಧಿ ಮಹಿಳೆಯರನ್ನು ಅವಮಾನಿಸಿಲ್ಲ, ಅರ್ಧ ಭಾಷಣ ಹಂಚಿಕೊಳ್ಳಲಾಗುತ್ತಿದೆ

ಕಾಂಗ್ರೆಸ್ ಪಕ್ಷದ ರಾಜಕೀಯದಲ್ಲಿ'ಪ್ರತಿಯೊಬ್ಬ ಪುರುಷನಿಗೂ ಮಹಿಳೆಯರಿರುವುದು ಅಗತ್ಯ ಮತ್ತು ಸಹಜ' ಎಂದು ರಾಹುಲ್ ಗಾಂಧಿ ಭಾಷಣದಲ್ಲಿ ಹೇಳಿದ್ದಾರೆ ಎಂದು ‍ಶೇರ್ ಮಾಡಲಾಗುತ್ತಿದೆ.

- Advertisement -
- Advertisement -

’ಮಹಾತ್ಮಾ ಗಾಂಧಿ ಅವರ ಜೊತೆಯಲ್ಲಿ ಮಹಿಳೆಯರನ್ನು ಕಾಣಬಹುದು ಹೊರತು ನೀವು ಎಂದಾದರೂ ಮೋಹನ್ ಭಾಗವತ್ ಜೊತೆಗೆ ಮಹಿಳೆಯರನ್ನು ನೋಡಿದ್ದೀರಾ..?’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. “ಮೋಹನ್ ಭಾಗವತ್ ಅವರನ್ನು ತೆಗಳುವ ಭರದಲ್ಲಿ ರಾಹುಲ್ ಗಾಂಧಿ ಮೋಹನದಾಸ ಕರಮಚಂದ್ರ ಗಾಂಧಿಯವರನ್ನು ಅವಮಾನಿಸಿದ್ದು ಗೊತ್ತೇ ಆಗಲಿಲ್ಲ. ಮಹಿಳೆಯರಿಗೆ ಬೇರೆ ಅಸ್ತಿತ್ವ ಇಲ್ಲ ಎಂದಿದ್ದಾರೆ ಎಂದು ಹಲವು ಪೋಸ್ಟ್‌ಗಳನ್ನು ಷೇರ್ ಮಾಡಲಾಗುತ್ತಿದೆ. ಇದು ನಿಜವೇ ಎಂಬುದನ್ನು ಪರಿಶೀಲಿಸೋಣ..

ಈ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ 

ಪ್ರತಿಪಾದನೆ: ಕಾಂಗ್ರೆಸ್ ಪಕ್ಷದ ರಾಜಕೀಯದಲ್ಲಿ’ಪ್ರತಿಯೊಬ್ಬ ಪುರುಷನಿಗೂ ಮಹಿಳೆಯರಿರುವುದು ಅಗತ್ಯ ಮತ್ತು ಸಹಜ’ ಎಂದು ರಾಹುಲ್ ಗಾಂಧಿಯವರು ಭಾಷಣದಲ್ಲಿ ಹೇಳಿದ್ದಾರೆ.

ಫ್ಯಾಕ್ಟ್‌ ಚೆಕ್

2021 ರ ಸೆಪ್ಟೆಂಬರ್ 15 ರಂದು ದೆಹಲಿಯಲ್ಲಿ ಮಹಿಳಾ ಕಾಂಗ್ರೆಸ್ ಸ್ಥಾಪನೆಯ ದಿನದಂದು ನಡೆದ ಸಭೆಯಲ್ಲಿ ರಾಹುಲ್ ಗಾಂಧಿಯವರ ಭಾಷಣದಿಂದ ಈ ಹೇಳಿಕೆಗಳನ್ನು ತೆಗೆದುಕೊಳ್ಳಲಾಗಿದೆ. ಈ ವಿಡಿಯೊದಲ್ಲಿ ನೀವು ರಾಹುಲ್ ಗಾಂಧಿ 17:50 ನಿಮಿಷದಲ್ಲಿ ಈ ಹೇಳಿಕೆಗಳನ್ನು ನೀಡುವುದನ್ನು ನೋಡಬಹುದು.

ರಾಹುಲ್ ಗಾಂಧಿ ಈ ಸಭೆಯಲ್ಲಿ ಮಹಿಳಾ ಸಬಲೀಕರಣವನ್ನು ಉದ್ದೇಶಿಸಿ ಮಾತನಾಡುವಾಗ ಒಂದು ಸಂದರ್ಭದಲ್ಲಿ ‘ಚಿತ್ರಗಳಲ್ಲಿ ಮಹಾತ್ಮ ಗಾಂಧಿಯವರೊಂದಿಗೆ ಮೂರು-ನಾಲ್ಕು ಮಹಿಳೆಯರನ್ನು ನೀವು ನೋಡಬಹುದು. ಆದರೆ, ಮೋಹನ್ ಭಾಗವತ್ ಎಂದಾದರೂ ಮಹಿಳೆಯರನ್ನು ನೋಡಿದ್ದಾರೆಯೇ? ಮೋಹನ್ ಭಾಗವತ್ ಜೊತೆಯಲ್ಲಿ ಮಹಿಳೆಯರನ್ನು ನೋಡಲು ಸಾಧ್ಯವಿಲ್ಲ. ಏಕೆಂದರೆ ಅವರ ಸಂಘಟನೆ (ಆರೆಸ್ಸೆಸ್) ಮಹಿಳೆಯರನ್ನು ತುಳಿಯುತ್ತದೆ, ಆದರೆ ನಮ್ಮ ಸಂಘಟನೆ ಮಹಿಳಾ ಸಬಲೀಕರಣಕ್ಕೆ ವೇದಿಕೆಯನ್ನು ನೀಡುತ್ತದೆ’ಎಂದು ಹೇಳಿದ್ದಾರೆ.

ಈ ರಾಹುಲ್ ಗಾಂಧಿ ಭಾಷಣದ, ‘ಮಹಾತ್ಮ ಗಾಂಧಿಯವರ ಜೊತೆಯಲ್ಲಿ ಮಹಿಳೆಯರು ಕಾಣಿಸಿಕೊಳ್ಳುತ್ತಾರೆ. ನೀವು ಎಂದಾದರೂ ಮೋಹನ್ ಭಾಗವತ್ ಜೊತೆಯಲ್ಲಿ ಮಹಿಳೆಯರನ್ನು ನೋಡಿದ್ದೀರಾ?’ ಎಂಬ ಭಾಗವನ್ನು ಮಾತ್ರ ತೆಗೆದುಕೊಂಡು ಶೇರ್ ಮಾಡಲಾಗುತ್ತಿದೆ. ಭಾಷಣದ ಮುಂದುವರಿದ ಭಾಗವಾದ ಆರೆಸ್ಸೆಸ್ ಮಹಿಳೆಯರನ್ನು ತುಳಿಯುತ್ತದೆ. ಆದರೆ, ನಮ್ಮ ಸಂಸ್ಥೆಯು ಮಹಿಳಾ ಸಬಲೀಕರಣಕ್ಕೆ ವೇದಿಕೆಯನ್ನು ನೀಡುತ್ತದೆ’ ಎಂಬ ಹೇಳಿಕೆಗಳನ್ನು ತೆಗೆದುಹಾಕಿದ್ದಾರೆ. ಆ ವಿಡಿಯೋದ ಪೂರ್ಣ ಭಾಗ ಕಾಂಗ್ರೆಸ್ ಯೂಟ್ಯೂಬ್‌ನಲ್ಲಿದೆ.

 

ಈ ವಿಡಿಯೊ ತಿಳಿಸುವುದೇನೆಂದರೆ, ಮಹಿಳೆಯರಿಗೆ ಅವಕಾಶಗಳನ್ನು ಒದಗಿಸುವ ಬಗ್ಗೆ ರಾಹುಲ್ ಗಾಂಧಿ ಪ್ರಸ್ತಾಪಿಸಿದ್ದಾರೆ ಹೊರತು, ಕಾಂಗ್ರೆಸ್ ಪಕ್ಷದ ರಾಜಕೀಯದಲ್ಲಿ’ಪ್ರತಿಯೊಬ್ಬ ಪುರುಷನಿಗೂ ಮಹಿಳೆಯರಿರುವುದು ಅಗತ್ಯ ಮತ್ತು ಸಹಜ’ ಎಂದು ಹೇಳಿಲ್ಲ.

ಹೀಗಾಗಿ ರಾಹುಲ್ ಗಾಂಧಿ ಅವರ ಭಾಷಣದ ಕೆಲ ಸಾಲುಗಳನ್ನು ಇಟ್ಟುಕೊಂಡು ಮಹಿಳೆಯರು ಮತ್ತು ಮಹಾತ್ಮಾ ಗಾಂಧಿ ಅವರನ್ನು ಅವಮಾನ ಮಾಡುತ್ತಿದ್ದಾರೆ ಎಂದು ಪೋಸ್ಟ್‌ಗಳಲ್ಲಿ ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ.


ಇದನ್ನೂ ಓದಿ: ಕಿಸಾನ್ ಮಹಾಪಂಚಾಯತ್‌ನಲ್ಲಿ ಮದ್ಯಕ್ಕಾಗಿ ರೈತರ ಕಿತ್ತಾಟವೆಂದು ತಪ್ಪು ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...