Homeಫ್ಯಾಕ್ಟ್‌ಚೆಕ್FACT CHECK : ರಾಹುಲ್ ಗಾಂಧಿ ಯಾವತ್ತೂ ಹಿಂದೂ ದೇವರ ಪೋಟೋ ಪೋಸ್ಟ್ ಮಾಡಿಲ್ವಾ? ಸತ್ಯಾಸತ್ಯತೆ...

FACT CHECK : ರಾಹುಲ್ ಗಾಂಧಿ ಯಾವತ್ತೂ ಹಿಂದೂ ದೇವರ ಪೋಟೋ ಪೋಸ್ಟ್ ಮಾಡಿಲ್ವಾ? ಸತ್ಯಾಸತ್ಯತೆ ಏನು?

- Advertisement -
- Advertisement -

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರು ಹಿಂದೂ ದೇವರು ‘ಶ್ರೀಕೃಷ್ಣ’ನ ಫೋಟೋ ಬಳಸದೆ ಸಾಮಾಜಿಕ ಜಾಲತಾಣಗಳಲ್ಲಿ ಜನ್ಮಾಷ್ಟಮಿಗೆ ಶುಭಕೋರಿದ್ದಾರೆ ಎಂದು ಬಲಪಂಥೀಯರು ಟೀಕಿಸಿದ್ದಾರೆ.

ಬಲಪಂಥೀಯ ಸುದ್ದಿ ವೆಬ್‌ಸೈಟ್‌ ‘ಓಪ್‌ಇಂಡಿಯಾ‘ ಈ ಕುರಿತು ಲೇಖನವೊಂದನ್ನು ಪ್ರಕಟಿಸಿದ್ದು, ಅದರಲ್ಲಿ ರಾಹುಲ್ ಗಾಂಧಿಯವರು ಹಿಂದೂ ಹಬ್ಬಗಳಿಗೆ ಶುಭಾಷಯ ಕೋರುವಾಗ, ಹಿಂದೂ ದೇವರುಗಳ ಫೋಟೋ ಏಕೆ ಪೋಸ್ಟ್ ಮಾಡುವುದಿಲ್ಲ? ಎಂದು ಪ್ರಶ್ನಿಸಿದೆ. ಎಲ್ಲಾ ಧರ್ಮಗಳನ್ನು ಸಮಾನವಾಗಿ ಗೌರವಿಸುವ ತಟಸ್ಥ ಅಥವಾ ನಿಷ್ಪಕ್ಷಪಾತ ನಿಲುವು ವ್ಯಕ್ತಪಡಿಸಲು ಅವರು ಹಾಗೆ ಮಾಡುತ್ತಿದ್ದಾರೆ ಎಂದಿದೆ.

ಹಿಂದೂ ಧರ್ಮವನ್ನು ಸಂಪೂರ್ಣ ಜಾತ್ಯತೀತ ಎಂದು ವಾದಿಸಿರುವ ಓಪ್‌ಇಂಡಿಯಾದ ಲೇಖಕ, ‘ಧರ್ಮವು ಒಂದು ಪ್ರತ್ಯೇಕ ಅಂಶವಾಗಿದೆ. ಅದು ಜಾತ್ಯತೀತವಾಗಿರಬಾರದು. ಹಳೆಯ ಪಕ್ಷದ (ಕಾಂಗ್ರೆಸ್‌) ರಾಜಕುಮಾರ (ರಾಹುಲ್ ಗಾಂಧಿ) ತನ್ನ ಜಾತ್ಯತೀತೆಯನ್ನು ಬಲಪಡಿಸಲು ಹಿಂದೂ ಧರ್ಮವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಸದಾ ಕೋಮುದ್ವೇಷ ಪೂರಿತ ಸುದ್ದಿಗಳನ್ನು ಹಂಚಿಕೊಳ್ಳುವ ಬಲಪಂಥೀಯ ಎಕ್ಸ್‌ ಬಳಕೆದಾರ ಮಿ.ಸಿನ್ಹಾ (MrSinha)ರಾಹುಲ್ ಗಾಂಧಿಯವರು ಈ ಹಿಂದೆ ಹಲವು ಹಿಂದೂ ಹಬ್ಬಗಳಿಗೆ ಶುಭಕೋರಿರುವ ಪೋಸ್ಟ್‌ಗಳ ಸ್ಕ್ರೀನ್ ಶಾಟ್ ಹಂಚಿಕೊಂಡು “ನಮ್ಮ ಹಬ್ಬ ಹರಿದಿನಗಳಿಗೆ ಶುಭ ಹಾರೈಸುವಾಗ ರಾಹುಲ್ ಗಾಂಧಿ ಎಂದಿಗೂ ಹಿಂದೂ ದೇವರು/ದೇವತೆಗಳ ಫೋಟೋಗಳನ್ನು ಬಳಸುವುದಿಲ್ಲ. ಅವರು ‘ವಿಗ್ರಹಾರಾಧನೆ ಹರಾಮ್’ ಎಂಬ ತತ್ವವನ್ನು ಅನುಸರಿಸುತ್ತಿದ್ದಾರೆಂದು ತೋರುತ್ತದೆ” ಎಂದು ಬರೆದುಕೊಂಡಿದ್ದಾರೆ.

ಬಿಜೆಪಿ ನಾಯಕ ಗಿರಿರಾಜ್ ಸಿಂಗ್ (@girirajsinghbjp) ಕೂಡ ಎಕ್ಸ್‌ನಲ್ಲಿ ರಾಹುಲ್ ಗಾಂಧಿ ಹಿಂದೂ ಹಬ್ಬಗಳಿಗೆ ಶುಭಕೋರಿರುವ ಪೋಸ್ಟ್‌ಗಳ ಸ್ಕ್ರೀನ್ ಶಾಟ್ ಹಂಚಿಕೊಂಡು “OMG”ಎಂದು ಬರೆದುಕೊಂಡಿದ್ದಾರೆ.

ಇನ್ನೂ ಅನೇಕ ಬಲಪಂಥೀಯ ಎಕ್ಸ್‌, ಫೇಸ್‌ಬುಕ್ ಬಳಕೆದಾರರು ರಾಹುಲ್ ಗಾಂಧಿಯ ಪೋಸ್ಟ್‌ನ ಸ್ಕ್ರೀನ್‌ಶಾಟ್ ಹಂಚಿಕೊಂಡು ಅವರನ್ನು ಟೀಕಿಸಿದ್ದಾರೆ.

ಓಪ್‌ಇಂಡಿಯಾ ಸುದ್ದಿವೆಬ್‌ಸೈಟ್‌ ಮತ್ತು ಇತರ ಸಾಮಾಜಿಕ ಜಾಲತಾಣ ಬಳಕೆದಾರರು ಆರೋಪಿಸಿದಂತೆ ರಾಹುಲ್ ಗಾಂಧಿ ಹಿಂದೂ ದೇವರುಗಳ ಫೋಟೋ ಬಳಸಿ ಯಾವತ್ತೂ ಹಬ್ಬಗಳಿಗೆ ಶುಭಕೋರಿಯೇ ಇಲ್ವಾ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ರಾಹುಲ್ ಗಾಂಧಿ ಹಿಂದೂ ದೇವರುಗಳ ಫೋಟೋ ಬಳಸುವುದಿಲ್ಲ ಎಂಬ ಆರೋಪದ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಆ ಆರೋಪ ಸುಳ್ಳು ಎಂಬುವುದು ರುಜುವಾತಾಗಿದೆ. ಏಕೆಂದರೆ, ಈ ಹಿಂದೆ ಹಲವು ಬಾರಿ ಹಿಂದೂ ದೇವರುಗಳ ಫೋಟೋ ಬಳಸಿಕೊಂಡು ರಾಹುಲ್ ಗಾಂಧಿ ಹಬ್ಬಗಳಿಗೆ ಶುಭಕೋರಿದ್ದಾರೆ.

ಆಗಸ್ಟ್ 23, 2019ರಂದು ಹಿಂದೂ ದೇವರು ಶ್ರೀಕೃಷ್ಣ (ಬಾಲಕೃಷ್ಣ) ನ ಫೋಟೋ ಇರುವ ಪೋಸ್ಟರ್‌ ಬಳಸಿಕೊಂಡು ರಾಹುಲ್ ಗಾಂಧಿ ಜನ್ಮಾಷ್ಟಮಿಗೆ ಶುಭಕೋರಿದ್ದಾರೆ.

ಸೆಪ್ಟೆಂಬರ್ 25, 2017ರಂದು ಗುಜರಾತ್‌ನ ಜಾಮ್‌ನಗರದ ಚಂಡೀ ಬಝಾರ್‌ನ ನವರಾತ್ರಿ ಪೆಂಡಾಲ್‌ನ ಫೋಟೋವನ್ನು ಪೋಸ್ಟ್ ಮಾಡಿದ್ದ ರಾಹುಲ್ ಗಾಂಧಿ, “ಜಾಮ್‌ನಗರದ ಚಂಡೀ ಬಝಾರ್‌ನ ನವರಾತ್ರಿ ಪೆಂಡಾಲ್‌ಗೆ ಭೇಟಿ ನೀಡುವ ಮೂಲಕ ದಿನ ಮುಕ್ತಾಯಗೊಂಡಿತು” ಎಂದು ಬರೆದುಕೊಂಡಿದ್ದರು. ಆ ಪೆಂಡಾಲ್‌ ಫೋಟೋದಲ್ಲಿ ಹಿಂದೂ ದೇವ, ದೇವತೆಗಳ ಮೂರ್ತಿಗಳನ್ನು ನೋಡಬಹುದು.

ಅಕ್ಟೋಬರ್ 19, 2015ರಂದು ದುರ್ಗಾ ದೇವಿ ಮೂರ್ತಿಯ ಫೋಟೋ ಹಂಚಿಕೊಂಡು ” ದುರ್ಗಾ ಪೂಜೆಗೆ ರಾಹುಲ್ ಗಾಂಧಿ ಶುಭಕೋರಿದ್ದರು.

ಇದಲ್ಲದೆ, ಗಣಪತಿ ಫೋಟೋ ಹಾಕಿ ಗಣೇಶ ಚತುರ್ಥಿಗೆ, ಕೃಷ್ಣನ ಫೋಟೋ ಹಾಕಿ ವಿಶು ಹಬ್ಬಕ್ಕೆ, ಬಸವಣ್ಣನ ಫೋಟೋ ಹಾಕಿ ಬಸವ ಜಯಂತಿಗೆ, ಗೌತಮ ಬುದ್ದನ ಫೋಟೋ ಹಾಕಿ ಬುದ್ದ ಪೂರ್ಣಿಮೆಗೆ ರಾಹುಲ್ ಗಾಂಧಿ ಶುಭ ಕೋರಿರುವ ಪೋಸ್ಟ್‌ಗಳು ಈಗಲೂ ಅವರ ಎಕ್ಸ್‌ ಖಾತೆಯಲ್ಲಿ ಇವೆ.

ಹಾಗಾಗಿ, ರಾಹುಲ್ ಗಾಂಧಿ ಹಿಂದೂ ದೇವರುಗಳ ಫೋಟೋ ಬಳಸಿ ಫೋಸ್ಟ್ ಹಾಕುವುದಿಲ್ಲ. ಅವರು ಹಿಂದೂ ಧರ್ಮ ವಿರೋಧಿ ಎಂಬರ್ಥದ ಓಪ್‌ಇಂಡಿಯಾದ ಲೇಖನ ಮತ್ತು ಇತರ ಬಲಪಂಥೀಯರ ಪೋಸ್ಟ್‌ಗಳು ಸುಳ್ಳು ಮತ್ತು ದಾರಿ ತಪ್ಪಿಸುವಂತಿದೆ ಎಂದು ಹೇಳಬಹುದು.

ಇದನ್ನೂ ಓದಿ : FACT CHECK : ಬಿಜೆಪಿ ಪ್ರತಿಭಟನೆಯಲ್ಲಿ ಯುವತಿಯ ಡ್ಯಾನ್ಸ್… ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...