Homeಫ್ಯಾಕ್ಟ್‌ಚೆಕ್FACT CHECK : ರಾಹುಲ್ ಗಾಂಧಿ ಯಾವತ್ತೂ ಹಿಂದೂ ದೇವರ ಪೋಟೋ ಪೋಸ್ಟ್ ಮಾಡಿಲ್ವಾ? ಸತ್ಯಾಸತ್ಯತೆ...

FACT CHECK : ರಾಹುಲ್ ಗಾಂಧಿ ಯಾವತ್ತೂ ಹಿಂದೂ ದೇವರ ಪೋಟೋ ಪೋಸ್ಟ್ ಮಾಡಿಲ್ವಾ? ಸತ್ಯಾಸತ್ಯತೆ ಏನು?

- Advertisement -
- Advertisement -

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರು ಹಿಂದೂ ದೇವರು ‘ಶ್ರೀಕೃಷ್ಣ’ನ ಫೋಟೋ ಬಳಸದೆ ಸಾಮಾಜಿಕ ಜಾಲತಾಣಗಳಲ್ಲಿ ಜನ್ಮಾಷ್ಟಮಿಗೆ ಶುಭಕೋರಿದ್ದಾರೆ ಎಂದು ಬಲಪಂಥೀಯರು ಟೀಕಿಸಿದ್ದಾರೆ.

ಬಲಪಂಥೀಯ ಸುದ್ದಿ ವೆಬ್‌ಸೈಟ್‌ ‘ಓಪ್‌ಇಂಡಿಯಾ‘ ಈ ಕುರಿತು ಲೇಖನವೊಂದನ್ನು ಪ್ರಕಟಿಸಿದ್ದು, ಅದರಲ್ಲಿ ರಾಹುಲ್ ಗಾಂಧಿಯವರು ಹಿಂದೂ ಹಬ್ಬಗಳಿಗೆ ಶುಭಾಷಯ ಕೋರುವಾಗ, ಹಿಂದೂ ದೇವರುಗಳ ಫೋಟೋ ಏಕೆ ಪೋಸ್ಟ್ ಮಾಡುವುದಿಲ್ಲ? ಎಂದು ಪ್ರಶ್ನಿಸಿದೆ. ಎಲ್ಲಾ ಧರ್ಮಗಳನ್ನು ಸಮಾನವಾಗಿ ಗೌರವಿಸುವ ತಟಸ್ಥ ಅಥವಾ ನಿಷ್ಪಕ್ಷಪಾತ ನಿಲುವು ವ್ಯಕ್ತಪಡಿಸಲು ಅವರು ಹಾಗೆ ಮಾಡುತ್ತಿದ್ದಾರೆ ಎಂದಿದೆ.

ಹಿಂದೂ ಧರ್ಮವನ್ನು ಸಂಪೂರ್ಣ ಜಾತ್ಯತೀತ ಎಂದು ವಾದಿಸಿರುವ ಓಪ್‌ಇಂಡಿಯಾದ ಲೇಖಕ, ‘ಧರ್ಮವು ಒಂದು ಪ್ರತ್ಯೇಕ ಅಂಶವಾಗಿದೆ. ಅದು ಜಾತ್ಯತೀತವಾಗಿರಬಾರದು. ಹಳೆಯ ಪಕ್ಷದ (ಕಾಂಗ್ರೆಸ್‌) ರಾಜಕುಮಾರ (ರಾಹುಲ್ ಗಾಂಧಿ) ತನ್ನ ಜಾತ್ಯತೀತೆಯನ್ನು ಬಲಪಡಿಸಲು ಹಿಂದೂ ಧರ್ಮವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಸದಾ ಕೋಮುದ್ವೇಷ ಪೂರಿತ ಸುದ್ದಿಗಳನ್ನು ಹಂಚಿಕೊಳ್ಳುವ ಬಲಪಂಥೀಯ ಎಕ್ಸ್‌ ಬಳಕೆದಾರ ಮಿ.ಸಿನ್ಹಾ (MrSinha)ರಾಹುಲ್ ಗಾಂಧಿಯವರು ಈ ಹಿಂದೆ ಹಲವು ಹಿಂದೂ ಹಬ್ಬಗಳಿಗೆ ಶುಭಕೋರಿರುವ ಪೋಸ್ಟ್‌ಗಳ ಸ್ಕ್ರೀನ್ ಶಾಟ್ ಹಂಚಿಕೊಂಡು “ನಮ್ಮ ಹಬ್ಬ ಹರಿದಿನಗಳಿಗೆ ಶುಭ ಹಾರೈಸುವಾಗ ರಾಹುಲ್ ಗಾಂಧಿ ಎಂದಿಗೂ ಹಿಂದೂ ದೇವರು/ದೇವತೆಗಳ ಫೋಟೋಗಳನ್ನು ಬಳಸುವುದಿಲ್ಲ. ಅವರು ‘ವಿಗ್ರಹಾರಾಧನೆ ಹರಾಮ್’ ಎಂಬ ತತ್ವವನ್ನು ಅನುಸರಿಸುತ್ತಿದ್ದಾರೆಂದು ತೋರುತ್ತದೆ” ಎಂದು ಬರೆದುಕೊಂಡಿದ್ದಾರೆ.

ಬಿಜೆಪಿ ನಾಯಕ ಗಿರಿರಾಜ್ ಸಿಂಗ್ (@girirajsinghbjp) ಕೂಡ ಎಕ್ಸ್‌ನಲ್ಲಿ ರಾಹುಲ್ ಗಾಂಧಿ ಹಿಂದೂ ಹಬ್ಬಗಳಿಗೆ ಶುಭಕೋರಿರುವ ಪೋಸ್ಟ್‌ಗಳ ಸ್ಕ್ರೀನ್ ಶಾಟ್ ಹಂಚಿಕೊಂಡು “OMG”ಎಂದು ಬರೆದುಕೊಂಡಿದ್ದಾರೆ.

ಇನ್ನೂ ಅನೇಕ ಬಲಪಂಥೀಯ ಎಕ್ಸ್‌, ಫೇಸ್‌ಬುಕ್ ಬಳಕೆದಾರರು ರಾಹುಲ್ ಗಾಂಧಿಯ ಪೋಸ್ಟ್‌ನ ಸ್ಕ್ರೀನ್‌ಶಾಟ್ ಹಂಚಿಕೊಂಡು ಅವರನ್ನು ಟೀಕಿಸಿದ್ದಾರೆ.

ಓಪ್‌ಇಂಡಿಯಾ ಸುದ್ದಿವೆಬ್‌ಸೈಟ್‌ ಮತ್ತು ಇತರ ಸಾಮಾಜಿಕ ಜಾಲತಾಣ ಬಳಕೆದಾರರು ಆರೋಪಿಸಿದಂತೆ ರಾಹುಲ್ ಗಾಂಧಿ ಹಿಂದೂ ದೇವರುಗಳ ಫೋಟೋ ಬಳಸಿ ಯಾವತ್ತೂ ಹಬ್ಬಗಳಿಗೆ ಶುಭಕೋರಿಯೇ ಇಲ್ವಾ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ರಾಹುಲ್ ಗಾಂಧಿ ಹಿಂದೂ ದೇವರುಗಳ ಫೋಟೋ ಬಳಸುವುದಿಲ್ಲ ಎಂಬ ಆರೋಪದ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಆ ಆರೋಪ ಸುಳ್ಳು ಎಂಬುವುದು ರುಜುವಾತಾಗಿದೆ. ಏಕೆಂದರೆ, ಈ ಹಿಂದೆ ಹಲವು ಬಾರಿ ಹಿಂದೂ ದೇವರುಗಳ ಫೋಟೋ ಬಳಸಿಕೊಂಡು ರಾಹುಲ್ ಗಾಂಧಿ ಹಬ್ಬಗಳಿಗೆ ಶುಭಕೋರಿದ್ದಾರೆ.

ಆಗಸ್ಟ್ 23, 2019ರಂದು ಹಿಂದೂ ದೇವರು ಶ್ರೀಕೃಷ್ಣ (ಬಾಲಕೃಷ್ಣ) ನ ಫೋಟೋ ಇರುವ ಪೋಸ್ಟರ್‌ ಬಳಸಿಕೊಂಡು ರಾಹುಲ್ ಗಾಂಧಿ ಜನ್ಮಾಷ್ಟಮಿಗೆ ಶುಭಕೋರಿದ್ದಾರೆ.

ಸೆಪ್ಟೆಂಬರ್ 25, 2017ರಂದು ಗುಜರಾತ್‌ನ ಜಾಮ್‌ನಗರದ ಚಂಡೀ ಬಝಾರ್‌ನ ನವರಾತ್ರಿ ಪೆಂಡಾಲ್‌ನ ಫೋಟೋವನ್ನು ಪೋಸ್ಟ್ ಮಾಡಿದ್ದ ರಾಹುಲ್ ಗಾಂಧಿ, “ಜಾಮ್‌ನಗರದ ಚಂಡೀ ಬಝಾರ್‌ನ ನವರಾತ್ರಿ ಪೆಂಡಾಲ್‌ಗೆ ಭೇಟಿ ನೀಡುವ ಮೂಲಕ ದಿನ ಮುಕ್ತಾಯಗೊಂಡಿತು” ಎಂದು ಬರೆದುಕೊಂಡಿದ್ದರು. ಆ ಪೆಂಡಾಲ್‌ ಫೋಟೋದಲ್ಲಿ ಹಿಂದೂ ದೇವ, ದೇವತೆಗಳ ಮೂರ್ತಿಗಳನ್ನು ನೋಡಬಹುದು.

ಅಕ್ಟೋಬರ್ 19, 2015ರಂದು ದುರ್ಗಾ ದೇವಿ ಮೂರ್ತಿಯ ಫೋಟೋ ಹಂಚಿಕೊಂಡು ” ದುರ್ಗಾ ಪೂಜೆಗೆ ರಾಹುಲ್ ಗಾಂಧಿ ಶುಭಕೋರಿದ್ದರು.

ಇದಲ್ಲದೆ, ಗಣಪತಿ ಫೋಟೋ ಹಾಕಿ ಗಣೇಶ ಚತುರ್ಥಿಗೆ, ಕೃಷ್ಣನ ಫೋಟೋ ಹಾಕಿ ವಿಶು ಹಬ್ಬಕ್ಕೆ, ಬಸವಣ್ಣನ ಫೋಟೋ ಹಾಕಿ ಬಸವ ಜಯಂತಿಗೆ, ಗೌತಮ ಬುದ್ದನ ಫೋಟೋ ಹಾಕಿ ಬುದ್ದ ಪೂರ್ಣಿಮೆಗೆ ರಾಹುಲ್ ಗಾಂಧಿ ಶುಭ ಕೋರಿರುವ ಪೋಸ್ಟ್‌ಗಳು ಈಗಲೂ ಅವರ ಎಕ್ಸ್‌ ಖಾತೆಯಲ್ಲಿ ಇವೆ.

ಹಾಗಾಗಿ, ರಾಹುಲ್ ಗಾಂಧಿ ಹಿಂದೂ ದೇವರುಗಳ ಫೋಟೋ ಬಳಸಿ ಫೋಸ್ಟ್ ಹಾಕುವುದಿಲ್ಲ. ಅವರು ಹಿಂದೂ ಧರ್ಮ ವಿರೋಧಿ ಎಂಬರ್ಥದ ಓಪ್‌ಇಂಡಿಯಾದ ಲೇಖನ ಮತ್ತು ಇತರ ಬಲಪಂಥೀಯರ ಪೋಸ್ಟ್‌ಗಳು ಸುಳ್ಳು ಮತ್ತು ದಾರಿ ತಪ್ಪಿಸುವಂತಿದೆ ಎಂದು ಹೇಳಬಹುದು.

ಇದನ್ನೂ ಓದಿ : FACT CHECK : ಬಿಜೆಪಿ ಪ್ರತಿಭಟನೆಯಲ್ಲಿ ಯುವತಿಯ ಡ್ಯಾನ್ಸ್… ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...