Homeಫ್ಯಾಕ್ಟ್‌ಚೆಕ್FACT CHECK : ರಾಹುಲ್ ಗಾಂಧಿ ಯಾವತ್ತೂ ಹಿಂದೂ ದೇವರ ಪೋಟೋ ಪೋಸ್ಟ್ ಮಾಡಿಲ್ವಾ? ಸತ್ಯಾಸತ್ಯತೆ...

FACT CHECK : ರಾಹುಲ್ ಗಾಂಧಿ ಯಾವತ್ತೂ ಹಿಂದೂ ದೇವರ ಪೋಟೋ ಪೋಸ್ಟ್ ಮಾಡಿಲ್ವಾ? ಸತ್ಯಾಸತ್ಯತೆ ಏನು?

- Advertisement -
- Advertisement -

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರು ಹಿಂದೂ ದೇವರು ‘ಶ್ರೀಕೃಷ್ಣ’ನ ಫೋಟೋ ಬಳಸದೆ ಸಾಮಾಜಿಕ ಜಾಲತಾಣಗಳಲ್ಲಿ ಜನ್ಮಾಷ್ಟಮಿಗೆ ಶುಭಕೋರಿದ್ದಾರೆ ಎಂದು ಬಲಪಂಥೀಯರು ಟೀಕಿಸಿದ್ದಾರೆ.

ಬಲಪಂಥೀಯ ಸುದ್ದಿ ವೆಬ್‌ಸೈಟ್‌ ‘ಓಪ್‌ಇಂಡಿಯಾ‘ ಈ ಕುರಿತು ಲೇಖನವೊಂದನ್ನು ಪ್ರಕಟಿಸಿದ್ದು, ಅದರಲ್ಲಿ ರಾಹುಲ್ ಗಾಂಧಿಯವರು ಹಿಂದೂ ಹಬ್ಬಗಳಿಗೆ ಶುಭಾಷಯ ಕೋರುವಾಗ, ಹಿಂದೂ ದೇವರುಗಳ ಫೋಟೋ ಏಕೆ ಪೋಸ್ಟ್ ಮಾಡುವುದಿಲ್ಲ? ಎಂದು ಪ್ರಶ್ನಿಸಿದೆ. ಎಲ್ಲಾ ಧರ್ಮಗಳನ್ನು ಸಮಾನವಾಗಿ ಗೌರವಿಸುವ ತಟಸ್ಥ ಅಥವಾ ನಿಷ್ಪಕ್ಷಪಾತ ನಿಲುವು ವ್ಯಕ್ತಪಡಿಸಲು ಅವರು ಹಾಗೆ ಮಾಡುತ್ತಿದ್ದಾರೆ ಎಂದಿದೆ.

ಹಿಂದೂ ಧರ್ಮವನ್ನು ಸಂಪೂರ್ಣ ಜಾತ್ಯತೀತ ಎಂದು ವಾದಿಸಿರುವ ಓಪ್‌ಇಂಡಿಯಾದ ಲೇಖಕ, ‘ಧರ್ಮವು ಒಂದು ಪ್ರತ್ಯೇಕ ಅಂಶವಾಗಿದೆ. ಅದು ಜಾತ್ಯತೀತವಾಗಿರಬಾರದು. ಹಳೆಯ ಪಕ್ಷದ (ಕಾಂಗ್ರೆಸ್‌) ರಾಜಕುಮಾರ (ರಾಹುಲ್ ಗಾಂಧಿ) ತನ್ನ ಜಾತ್ಯತೀತೆಯನ್ನು ಬಲಪಡಿಸಲು ಹಿಂದೂ ಧರ್ಮವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಸದಾ ಕೋಮುದ್ವೇಷ ಪೂರಿತ ಸುದ್ದಿಗಳನ್ನು ಹಂಚಿಕೊಳ್ಳುವ ಬಲಪಂಥೀಯ ಎಕ್ಸ್‌ ಬಳಕೆದಾರ ಮಿ.ಸಿನ್ಹಾ (MrSinha)ರಾಹುಲ್ ಗಾಂಧಿಯವರು ಈ ಹಿಂದೆ ಹಲವು ಹಿಂದೂ ಹಬ್ಬಗಳಿಗೆ ಶುಭಕೋರಿರುವ ಪೋಸ್ಟ್‌ಗಳ ಸ್ಕ್ರೀನ್ ಶಾಟ್ ಹಂಚಿಕೊಂಡು “ನಮ್ಮ ಹಬ್ಬ ಹರಿದಿನಗಳಿಗೆ ಶುಭ ಹಾರೈಸುವಾಗ ರಾಹುಲ್ ಗಾಂಧಿ ಎಂದಿಗೂ ಹಿಂದೂ ದೇವರು/ದೇವತೆಗಳ ಫೋಟೋಗಳನ್ನು ಬಳಸುವುದಿಲ್ಲ. ಅವರು ‘ವಿಗ್ರಹಾರಾಧನೆ ಹರಾಮ್’ ಎಂಬ ತತ್ವವನ್ನು ಅನುಸರಿಸುತ್ತಿದ್ದಾರೆಂದು ತೋರುತ್ತದೆ” ಎಂದು ಬರೆದುಕೊಂಡಿದ್ದಾರೆ.

ಬಿಜೆಪಿ ನಾಯಕ ಗಿರಿರಾಜ್ ಸಿಂಗ್ (@girirajsinghbjp) ಕೂಡ ಎಕ್ಸ್‌ನಲ್ಲಿ ರಾಹುಲ್ ಗಾಂಧಿ ಹಿಂದೂ ಹಬ್ಬಗಳಿಗೆ ಶುಭಕೋರಿರುವ ಪೋಸ್ಟ್‌ಗಳ ಸ್ಕ್ರೀನ್ ಶಾಟ್ ಹಂಚಿಕೊಂಡು “OMG”ಎಂದು ಬರೆದುಕೊಂಡಿದ್ದಾರೆ.

ಇನ್ನೂ ಅನೇಕ ಬಲಪಂಥೀಯ ಎಕ್ಸ್‌, ಫೇಸ್‌ಬುಕ್ ಬಳಕೆದಾರರು ರಾಹುಲ್ ಗಾಂಧಿಯ ಪೋಸ್ಟ್‌ನ ಸ್ಕ್ರೀನ್‌ಶಾಟ್ ಹಂಚಿಕೊಂಡು ಅವರನ್ನು ಟೀಕಿಸಿದ್ದಾರೆ.

ಓಪ್‌ಇಂಡಿಯಾ ಸುದ್ದಿವೆಬ್‌ಸೈಟ್‌ ಮತ್ತು ಇತರ ಸಾಮಾಜಿಕ ಜಾಲತಾಣ ಬಳಕೆದಾರರು ಆರೋಪಿಸಿದಂತೆ ರಾಹುಲ್ ಗಾಂಧಿ ಹಿಂದೂ ದೇವರುಗಳ ಫೋಟೋ ಬಳಸಿ ಯಾವತ್ತೂ ಹಬ್ಬಗಳಿಗೆ ಶುಭಕೋರಿಯೇ ಇಲ್ವಾ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ರಾಹುಲ್ ಗಾಂಧಿ ಹಿಂದೂ ದೇವರುಗಳ ಫೋಟೋ ಬಳಸುವುದಿಲ್ಲ ಎಂಬ ಆರೋಪದ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಆ ಆರೋಪ ಸುಳ್ಳು ಎಂಬುವುದು ರುಜುವಾತಾಗಿದೆ. ಏಕೆಂದರೆ, ಈ ಹಿಂದೆ ಹಲವು ಬಾರಿ ಹಿಂದೂ ದೇವರುಗಳ ಫೋಟೋ ಬಳಸಿಕೊಂಡು ರಾಹುಲ್ ಗಾಂಧಿ ಹಬ್ಬಗಳಿಗೆ ಶುಭಕೋರಿದ್ದಾರೆ.

ಆಗಸ್ಟ್ 23, 2019ರಂದು ಹಿಂದೂ ದೇವರು ಶ್ರೀಕೃಷ್ಣ (ಬಾಲಕೃಷ್ಣ) ನ ಫೋಟೋ ಇರುವ ಪೋಸ್ಟರ್‌ ಬಳಸಿಕೊಂಡು ರಾಹುಲ್ ಗಾಂಧಿ ಜನ್ಮಾಷ್ಟಮಿಗೆ ಶುಭಕೋರಿದ್ದಾರೆ.

ಸೆಪ್ಟೆಂಬರ್ 25, 2017ರಂದು ಗುಜರಾತ್‌ನ ಜಾಮ್‌ನಗರದ ಚಂಡೀ ಬಝಾರ್‌ನ ನವರಾತ್ರಿ ಪೆಂಡಾಲ್‌ನ ಫೋಟೋವನ್ನು ಪೋಸ್ಟ್ ಮಾಡಿದ್ದ ರಾಹುಲ್ ಗಾಂಧಿ, “ಜಾಮ್‌ನಗರದ ಚಂಡೀ ಬಝಾರ್‌ನ ನವರಾತ್ರಿ ಪೆಂಡಾಲ್‌ಗೆ ಭೇಟಿ ನೀಡುವ ಮೂಲಕ ದಿನ ಮುಕ್ತಾಯಗೊಂಡಿತು” ಎಂದು ಬರೆದುಕೊಂಡಿದ್ದರು. ಆ ಪೆಂಡಾಲ್‌ ಫೋಟೋದಲ್ಲಿ ಹಿಂದೂ ದೇವ, ದೇವತೆಗಳ ಮೂರ್ತಿಗಳನ್ನು ನೋಡಬಹುದು.

ಅಕ್ಟೋಬರ್ 19, 2015ರಂದು ದುರ್ಗಾ ದೇವಿ ಮೂರ್ತಿಯ ಫೋಟೋ ಹಂಚಿಕೊಂಡು ” ದುರ್ಗಾ ಪೂಜೆಗೆ ರಾಹುಲ್ ಗಾಂಧಿ ಶುಭಕೋರಿದ್ದರು.

ಇದಲ್ಲದೆ, ಗಣಪತಿ ಫೋಟೋ ಹಾಕಿ ಗಣೇಶ ಚತುರ್ಥಿಗೆ, ಕೃಷ್ಣನ ಫೋಟೋ ಹಾಕಿ ವಿಶು ಹಬ್ಬಕ್ಕೆ, ಬಸವಣ್ಣನ ಫೋಟೋ ಹಾಕಿ ಬಸವ ಜಯಂತಿಗೆ, ಗೌತಮ ಬುದ್ದನ ಫೋಟೋ ಹಾಕಿ ಬುದ್ದ ಪೂರ್ಣಿಮೆಗೆ ರಾಹುಲ್ ಗಾಂಧಿ ಶುಭ ಕೋರಿರುವ ಪೋಸ್ಟ್‌ಗಳು ಈಗಲೂ ಅವರ ಎಕ್ಸ್‌ ಖಾತೆಯಲ್ಲಿ ಇವೆ.

ಹಾಗಾಗಿ, ರಾಹುಲ್ ಗಾಂಧಿ ಹಿಂದೂ ದೇವರುಗಳ ಫೋಟೋ ಬಳಸಿ ಫೋಸ್ಟ್ ಹಾಕುವುದಿಲ್ಲ. ಅವರು ಹಿಂದೂ ಧರ್ಮ ವಿರೋಧಿ ಎಂಬರ್ಥದ ಓಪ್‌ಇಂಡಿಯಾದ ಲೇಖನ ಮತ್ತು ಇತರ ಬಲಪಂಥೀಯರ ಪೋಸ್ಟ್‌ಗಳು ಸುಳ್ಳು ಮತ್ತು ದಾರಿ ತಪ್ಪಿಸುವಂತಿದೆ ಎಂದು ಹೇಳಬಹುದು.

ಇದನ್ನೂ ಓದಿ : FACT CHECK : ಬಿಜೆಪಿ ಪ್ರತಿಭಟನೆಯಲ್ಲಿ ಯುವತಿಯ ಡ್ಯಾನ್ಸ್… ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...