Homeಫ್ಯಾಕ್ಟ್‌ಚೆಕ್FACT CHECK : ರಾಹುಲ್ ಗಾಂಧಿ ಯಾವತ್ತೂ ಹಿಂದೂ ದೇವರ ಪೋಟೋ ಪೋಸ್ಟ್ ಮಾಡಿಲ್ವಾ? ಸತ್ಯಾಸತ್ಯತೆ...

FACT CHECK : ರಾಹುಲ್ ಗಾಂಧಿ ಯಾವತ್ತೂ ಹಿಂದೂ ದೇವರ ಪೋಟೋ ಪೋಸ್ಟ್ ಮಾಡಿಲ್ವಾ? ಸತ್ಯಾಸತ್ಯತೆ ಏನು?

- Advertisement -
- Advertisement -

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರು ಹಿಂದೂ ದೇವರು ‘ಶ್ರೀಕೃಷ್ಣ’ನ ಫೋಟೋ ಬಳಸದೆ ಸಾಮಾಜಿಕ ಜಾಲತಾಣಗಳಲ್ಲಿ ಜನ್ಮಾಷ್ಟಮಿಗೆ ಶುಭಕೋರಿದ್ದಾರೆ ಎಂದು ಬಲಪಂಥೀಯರು ಟೀಕಿಸಿದ್ದಾರೆ.

ಬಲಪಂಥೀಯ ಸುದ್ದಿ ವೆಬ್‌ಸೈಟ್‌ ‘ಓಪ್‌ಇಂಡಿಯಾ‘ ಈ ಕುರಿತು ಲೇಖನವೊಂದನ್ನು ಪ್ರಕಟಿಸಿದ್ದು, ಅದರಲ್ಲಿ ರಾಹುಲ್ ಗಾಂಧಿಯವರು ಹಿಂದೂ ಹಬ್ಬಗಳಿಗೆ ಶುಭಾಷಯ ಕೋರುವಾಗ, ಹಿಂದೂ ದೇವರುಗಳ ಫೋಟೋ ಏಕೆ ಪೋಸ್ಟ್ ಮಾಡುವುದಿಲ್ಲ? ಎಂದು ಪ್ರಶ್ನಿಸಿದೆ. ಎಲ್ಲಾ ಧರ್ಮಗಳನ್ನು ಸಮಾನವಾಗಿ ಗೌರವಿಸುವ ತಟಸ್ಥ ಅಥವಾ ನಿಷ್ಪಕ್ಷಪಾತ ನಿಲುವು ವ್ಯಕ್ತಪಡಿಸಲು ಅವರು ಹಾಗೆ ಮಾಡುತ್ತಿದ್ದಾರೆ ಎಂದಿದೆ.

ಹಿಂದೂ ಧರ್ಮವನ್ನು ಸಂಪೂರ್ಣ ಜಾತ್ಯತೀತ ಎಂದು ವಾದಿಸಿರುವ ಓಪ್‌ಇಂಡಿಯಾದ ಲೇಖಕ, ‘ಧರ್ಮವು ಒಂದು ಪ್ರತ್ಯೇಕ ಅಂಶವಾಗಿದೆ. ಅದು ಜಾತ್ಯತೀತವಾಗಿರಬಾರದು. ಹಳೆಯ ಪಕ್ಷದ (ಕಾಂಗ್ರೆಸ್‌) ರಾಜಕುಮಾರ (ರಾಹುಲ್ ಗಾಂಧಿ) ತನ್ನ ಜಾತ್ಯತೀತೆಯನ್ನು ಬಲಪಡಿಸಲು ಹಿಂದೂ ಧರ್ಮವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಸದಾ ಕೋಮುದ್ವೇಷ ಪೂರಿತ ಸುದ್ದಿಗಳನ್ನು ಹಂಚಿಕೊಳ್ಳುವ ಬಲಪಂಥೀಯ ಎಕ್ಸ್‌ ಬಳಕೆದಾರ ಮಿ.ಸಿನ್ಹಾ (MrSinha)ರಾಹುಲ್ ಗಾಂಧಿಯವರು ಈ ಹಿಂದೆ ಹಲವು ಹಿಂದೂ ಹಬ್ಬಗಳಿಗೆ ಶುಭಕೋರಿರುವ ಪೋಸ್ಟ್‌ಗಳ ಸ್ಕ್ರೀನ್ ಶಾಟ್ ಹಂಚಿಕೊಂಡು “ನಮ್ಮ ಹಬ್ಬ ಹರಿದಿನಗಳಿಗೆ ಶುಭ ಹಾರೈಸುವಾಗ ರಾಹುಲ್ ಗಾಂಧಿ ಎಂದಿಗೂ ಹಿಂದೂ ದೇವರು/ದೇವತೆಗಳ ಫೋಟೋಗಳನ್ನು ಬಳಸುವುದಿಲ್ಲ. ಅವರು ‘ವಿಗ್ರಹಾರಾಧನೆ ಹರಾಮ್’ ಎಂಬ ತತ್ವವನ್ನು ಅನುಸರಿಸುತ್ತಿದ್ದಾರೆಂದು ತೋರುತ್ತದೆ” ಎಂದು ಬರೆದುಕೊಂಡಿದ್ದಾರೆ.

ಬಿಜೆಪಿ ನಾಯಕ ಗಿರಿರಾಜ್ ಸಿಂಗ್ (@girirajsinghbjp) ಕೂಡ ಎಕ್ಸ್‌ನಲ್ಲಿ ರಾಹುಲ್ ಗಾಂಧಿ ಹಿಂದೂ ಹಬ್ಬಗಳಿಗೆ ಶುಭಕೋರಿರುವ ಪೋಸ್ಟ್‌ಗಳ ಸ್ಕ್ರೀನ್ ಶಾಟ್ ಹಂಚಿಕೊಂಡು “OMG”ಎಂದು ಬರೆದುಕೊಂಡಿದ್ದಾರೆ.

ಇನ್ನೂ ಅನೇಕ ಬಲಪಂಥೀಯ ಎಕ್ಸ್‌, ಫೇಸ್‌ಬುಕ್ ಬಳಕೆದಾರರು ರಾಹುಲ್ ಗಾಂಧಿಯ ಪೋಸ್ಟ್‌ನ ಸ್ಕ್ರೀನ್‌ಶಾಟ್ ಹಂಚಿಕೊಂಡು ಅವರನ್ನು ಟೀಕಿಸಿದ್ದಾರೆ.

ಓಪ್‌ಇಂಡಿಯಾ ಸುದ್ದಿವೆಬ್‌ಸೈಟ್‌ ಮತ್ತು ಇತರ ಸಾಮಾಜಿಕ ಜಾಲತಾಣ ಬಳಕೆದಾರರು ಆರೋಪಿಸಿದಂತೆ ರಾಹುಲ್ ಗಾಂಧಿ ಹಿಂದೂ ದೇವರುಗಳ ಫೋಟೋ ಬಳಸಿ ಯಾವತ್ತೂ ಹಬ್ಬಗಳಿಗೆ ಶುಭಕೋರಿಯೇ ಇಲ್ವಾ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ರಾಹುಲ್ ಗಾಂಧಿ ಹಿಂದೂ ದೇವರುಗಳ ಫೋಟೋ ಬಳಸುವುದಿಲ್ಲ ಎಂಬ ಆರೋಪದ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಆ ಆರೋಪ ಸುಳ್ಳು ಎಂಬುವುದು ರುಜುವಾತಾಗಿದೆ. ಏಕೆಂದರೆ, ಈ ಹಿಂದೆ ಹಲವು ಬಾರಿ ಹಿಂದೂ ದೇವರುಗಳ ಫೋಟೋ ಬಳಸಿಕೊಂಡು ರಾಹುಲ್ ಗಾಂಧಿ ಹಬ್ಬಗಳಿಗೆ ಶುಭಕೋರಿದ್ದಾರೆ.

ಆಗಸ್ಟ್ 23, 2019ರಂದು ಹಿಂದೂ ದೇವರು ಶ್ರೀಕೃಷ್ಣ (ಬಾಲಕೃಷ್ಣ) ನ ಫೋಟೋ ಇರುವ ಪೋಸ್ಟರ್‌ ಬಳಸಿಕೊಂಡು ರಾಹುಲ್ ಗಾಂಧಿ ಜನ್ಮಾಷ್ಟಮಿಗೆ ಶುಭಕೋರಿದ್ದಾರೆ.

ಸೆಪ್ಟೆಂಬರ್ 25, 2017ರಂದು ಗುಜರಾತ್‌ನ ಜಾಮ್‌ನಗರದ ಚಂಡೀ ಬಝಾರ್‌ನ ನವರಾತ್ರಿ ಪೆಂಡಾಲ್‌ನ ಫೋಟೋವನ್ನು ಪೋಸ್ಟ್ ಮಾಡಿದ್ದ ರಾಹುಲ್ ಗಾಂಧಿ, “ಜಾಮ್‌ನಗರದ ಚಂಡೀ ಬಝಾರ್‌ನ ನವರಾತ್ರಿ ಪೆಂಡಾಲ್‌ಗೆ ಭೇಟಿ ನೀಡುವ ಮೂಲಕ ದಿನ ಮುಕ್ತಾಯಗೊಂಡಿತು” ಎಂದು ಬರೆದುಕೊಂಡಿದ್ದರು. ಆ ಪೆಂಡಾಲ್‌ ಫೋಟೋದಲ್ಲಿ ಹಿಂದೂ ದೇವ, ದೇವತೆಗಳ ಮೂರ್ತಿಗಳನ್ನು ನೋಡಬಹುದು.

ಅಕ್ಟೋಬರ್ 19, 2015ರಂದು ದುರ್ಗಾ ದೇವಿ ಮೂರ್ತಿಯ ಫೋಟೋ ಹಂಚಿಕೊಂಡು ” ದುರ್ಗಾ ಪೂಜೆಗೆ ರಾಹುಲ್ ಗಾಂಧಿ ಶುಭಕೋರಿದ್ದರು.

ಇದಲ್ಲದೆ, ಗಣಪತಿ ಫೋಟೋ ಹಾಕಿ ಗಣೇಶ ಚತುರ್ಥಿಗೆ, ಕೃಷ್ಣನ ಫೋಟೋ ಹಾಕಿ ವಿಶು ಹಬ್ಬಕ್ಕೆ, ಬಸವಣ್ಣನ ಫೋಟೋ ಹಾಕಿ ಬಸವ ಜಯಂತಿಗೆ, ಗೌತಮ ಬುದ್ದನ ಫೋಟೋ ಹಾಕಿ ಬುದ್ದ ಪೂರ್ಣಿಮೆಗೆ ರಾಹುಲ್ ಗಾಂಧಿ ಶುಭ ಕೋರಿರುವ ಪೋಸ್ಟ್‌ಗಳು ಈಗಲೂ ಅವರ ಎಕ್ಸ್‌ ಖಾತೆಯಲ್ಲಿ ಇವೆ.

ಹಾಗಾಗಿ, ರಾಹುಲ್ ಗಾಂಧಿ ಹಿಂದೂ ದೇವರುಗಳ ಫೋಟೋ ಬಳಸಿ ಫೋಸ್ಟ್ ಹಾಕುವುದಿಲ್ಲ. ಅವರು ಹಿಂದೂ ಧರ್ಮ ವಿರೋಧಿ ಎಂಬರ್ಥದ ಓಪ್‌ಇಂಡಿಯಾದ ಲೇಖನ ಮತ್ತು ಇತರ ಬಲಪಂಥೀಯರ ಪೋಸ್ಟ್‌ಗಳು ಸುಳ್ಳು ಮತ್ತು ದಾರಿ ತಪ್ಪಿಸುವಂತಿದೆ ಎಂದು ಹೇಳಬಹುದು.

ಇದನ್ನೂ ಓದಿ : FACT CHECK : ಬಿಜೆಪಿ ಪ್ರತಿಭಟನೆಯಲ್ಲಿ ಯುವತಿಯ ಡ್ಯಾನ್ಸ್… ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...