Homeಫ್ಯಾಕ್ಟ್‌ಚೆಕ್FACT CHECK : ರಾಹುಲ್ ಗಾಂಧಿ ಯಾವತ್ತೂ ಹಿಂದೂ ದೇವರ ಪೋಟೋ ಪೋಸ್ಟ್ ಮಾಡಿಲ್ವಾ? ಸತ್ಯಾಸತ್ಯತೆ...

FACT CHECK : ರಾಹುಲ್ ಗಾಂಧಿ ಯಾವತ್ತೂ ಹಿಂದೂ ದೇವರ ಪೋಟೋ ಪೋಸ್ಟ್ ಮಾಡಿಲ್ವಾ? ಸತ್ಯಾಸತ್ಯತೆ ಏನು?

- Advertisement -
- Advertisement -

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರು ಹಿಂದೂ ದೇವರು ‘ಶ್ರೀಕೃಷ್ಣ’ನ ಫೋಟೋ ಬಳಸದೆ ಸಾಮಾಜಿಕ ಜಾಲತಾಣಗಳಲ್ಲಿ ಜನ್ಮಾಷ್ಟಮಿಗೆ ಶುಭಕೋರಿದ್ದಾರೆ ಎಂದು ಬಲಪಂಥೀಯರು ಟೀಕಿಸಿದ್ದಾರೆ.

ಬಲಪಂಥೀಯ ಸುದ್ದಿ ವೆಬ್‌ಸೈಟ್‌ ‘ಓಪ್‌ಇಂಡಿಯಾ‘ ಈ ಕುರಿತು ಲೇಖನವೊಂದನ್ನು ಪ್ರಕಟಿಸಿದ್ದು, ಅದರಲ್ಲಿ ರಾಹುಲ್ ಗಾಂಧಿಯವರು ಹಿಂದೂ ಹಬ್ಬಗಳಿಗೆ ಶುಭಾಷಯ ಕೋರುವಾಗ, ಹಿಂದೂ ದೇವರುಗಳ ಫೋಟೋ ಏಕೆ ಪೋಸ್ಟ್ ಮಾಡುವುದಿಲ್ಲ? ಎಂದು ಪ್ರಶ್ನಿಸಿದೆ. ಎಲ್ಲಾ ಧರ್ಮಗಳನ್ನು ಸಮಾನವಾಗಿ ಗೌರವಿಸುವ ತಟಸ್ಥ ಅಥವಾ ನಿಷ್ಪಕ್ಷಪಾತ ನಿಲುವು ವ್ಯಕ್ತಪಡಿಸಲು ಅವರು ಹಾಗೆ ಮಾಡುತ್ತಿದ್ದಾರೆ ಎಂದಿದೆ.

ಹಿಂದೂ ಧರ್ಮವನ್ನು ಸಂಪೂರ್ಣ ಜಾತ್ಯತೀತ ಎಂದು ವಾದಿಸಿರುವ ಓಪ್‌ಇಂಡಿಯಾದ ಲೇಖಕ, ‘ಧರ್ಮವು ಒಂದು ಪ್ರತ್ಯೇಕ ಅಂಶವಾಗಿದೆ. ಅದು ಜಾತ್ಯತೀತವಾಗಿರಬಾರದು. ಹಳೆಯ ಪಕ್ಷದ (ಕಾಂಗ್ರೆಸ್‌) ರಾಜಕುಮಾರ (ರಾಹುಲ್ ಗಾಂಧಿ) ತನ್ನ ಜಾತ್ಯತೀತೆಯನ್ನು ಬಲಪಡಿಸಲು ಹಿಂದೂ ಧರ್ಮವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಸದಾ ಕೋಮುದ್ವೇಷ ಪೂರಿತ ಸುದ್ದಿಗಳನ್ನು ಹಂಚಿಕೊಳ್ಳುವ ಬಲಪಂಥೀಯ ಎಕ್ಸ್‌ ಬಳಕೆದಾರ ಮಿ.ಸಿನ್ಹಾ (MrSinha)ರಾಹುಲ್ ಗಾಂಧಿಯವರು ಈ ಹಿಂದೆ ಹಲವು ಹಿಂದೂ ಹಬ್ಬಗಳಿಗೆ ಶುಭಕೋರಿರುವ ಪೋಸ್ಟ್‌ಗಳ ಸ್ಕ್ರೀನ್ ಶಾಟ್ ಹಂಚಿಕೊಂಡು “ನಮ್ಮ ಹಬ್ಬ ಹರಿದಿನಗಳಿಗೆ ಶುಭ ಹಾರೈಸುವಾಗ ರಾಹುಲ್ ಗಾಂಧಿ ಎಂದಿಗೂ ಹಿಂದೂ ದೇವರು/ದೇವತೆಗಳ ಫೋಟೋಗಳನ್ನು ಬಳಸುವುದಿಲ್ಲ. ಅವರು ‘ವಿಗ್ರಹಾರಾಧನೆ ಹರಾಮ್’ ಎಂಬ ತತ್ವವನ್ನು ಅನುಸರಿಸುತ್ತಿದ್ದಾರೆಂದು ತೋರುತ್ತದೆ” ಎಂದು ಬರೆದುಕೊಂಡಿದ್ದಾರೆ.

ಬಿಜೆಪಿ ನಾಯಕ ಗಿರಿರಾಜ್ ಸಿಂಗ್ (@girirajsinghbjp) ಕೂಡ ಎಕ್ಸ್‌ನಲ್ಲಿ ರಾಹುಲ್ ಗಾಂಧಿ ಹಿಂದೂ ಹಬ್ಬಗಳಿಗೆ ಶುಭಕೋರಿರುವ ಪೋಸ್ಟ್‌ಗಳ ಸ್ಕ್ರೀನ್ ಶಾಟ್ ಹಂಚಿಕೊಂಡು “OMG”ಎಂದು ಬರೆದುಕೊಂಡಿದ್ದಾರೆ.

ಇನ್ನೂ ಅನೇಕ ಬಲಪಂಥೀಯ ಎಕ್ಸ್‌, ಫೇಸ್‌ಬುಕ್ ಬಳಕೆದಾರರು ರಾಹುಲ್ ಗಾಂಧಿಯ ಪೋಸ್ಟ್‌ನ ಸ್ಕ್ರೀನ್‌ಶಾಟ್ ಹಂಚಿಕೊಂಡು ಅವರನ್ನು ಟೀಕಿಸಿದ್ದಾರೆ.

ಓಪ್‌ಇಂಡಿಯಾ ಸುದ್ದಿವೆಬ್‌ಸೈಟ್‌ ಮತ್ತು ಇತರ ಸಾಮಾಜಿಕ ಜಾಲತಾಣ ಬಳಕೆದಾರರು ಆರೋಪಿಸಿದಂತೆ ರಾಹುಲ್ ಗಾಂಧಿ ಹಿಂದೂ ದೇವರುಗಳ ಫೋಟೋ ಬಳಸಿ ಯಾವತ್ತೂ ಹಬ್ಬಗಳಿಗೆ ಶುಭಕೋರಿಯೇ ಇಲ್ವಾ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ರಾಹುಲ್ ಗಾಂಧಿ ಹಿಂದೂ ದೇವರುಗಳ ಫೋಟೋ ಬಳಸುವುದಿಲ್ಲ ಎಂಬ ಆರೋಪದ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಆ ಆರೋಪ ಸುಳ್ಳು ಎಂಬುವುದು ರುಜುವಾತಾಗಿದೆ. ಏಕೆಂದರೆ, ಈ ಹಿಂದೆ ಹಲವು ಬಾರಿ ಹಿಂದೂ ದೇವರುಗಳ ಫೋಟೋ ಬಳಸಿಕೊಂಡು ರಾಹುಲ್ ಗಾಂಧಿ ಹಬ್ಬಗಳಿಗೆ ಶುಭಕೋರಿದ್ದಾರೆ.

ಆಗಸ್ಟ್ 23, 2019ರಂದು ಹಿಂದೂ ದೇವರು ಶ್ರೀಕೃಷ್ಣ (ಬಾಲಕೃಷ್ಣ) ನ ಫೋಟೋ ಇರುವ ಪೋಸ್ಟರ್‌ ಬಳಸಿಕೊಂಡು ರಾಹುಲ್ ಗಾಂಧಿ ಜನ್ಮಾಷ್ಟಮಿಗೆ ಶುಭಕೋರಿದ್ದಾರೆ.

ಸೆಪ್ಟೆಂಬರ್ 25, 2017ರಂದು ಗುಜರಾತ್‌ನ ಜಾಮ್‌ನಗರದ ಚಂಡೀ ಬಝಾರ್‌ನ ನವರಾತ್ರಿ ಪೆಂಡಾಲ್‌ನ ಫೋಟೋವನ್ನು ಪೋಸ್ಟ್ ಮಾಡಿದ್ದ ರಾಹುಲ್ ಗಾಂಧಿ, “ಜಾಮ್‌ನಗರದ ಚಂಡೀ ಬಝಾರ್‌ನ ನವರಾತ್ರಿ ಪೆಂಡಾಲ್‌ಗೆ ಭೇಟಿ ನೀಡುವ ಮೂಲಕ ದಿನ ಮುಕ್ತಾಯಗೊಂಡಿತು” ಎಂದು ಬರೆದುಕೊಂಡಿದ್ದರು. ಆ ಪೆಂಡಾಲ್‌ ಫೋಟೋದಲ್ಲಿ ಹಿಂದೂ ದೇವ, ದೇವತೆಗಳ ಮೂರ್ತಿಗಳನ್ನು ನೋಡಬಹುದು.

ಅಕ್ಟೋಬರ್ 19, 2015ರಂದು ದುರ್ಗಾ ದೇವಿ ಮೂರ್ತಿಯ ಫೋಟೋ ಹಂಚಿಕೊಂಡು ” ದುರ್ಗಾ ಪೂಜೆಗೆ ರಾಹುಲ್ ಗಾಂಧಿ ಶುಭಕೋರಿದ್ದರು.

ಇದಲ್ಲದೆ, ಗಣಪತಿ ಫೋಟೋ ಹಾಕಿ ಗಣೇಶ ಚತುರ್ಥಿಗೆ, ಕೃಷ್ಣನ ಫೋಟೋ ಹಾಕಿ ವಿಶು ಹಬ್ಬಕ್ಕೆ, ಬಸವಣ್ಣನ ಫೋಟೋ ಹಾಕಿ ಬಸವ ಜಯಂತಿಗೆ, ಗೌತಮ ಬುದ್ದನ ಫೋಟೋ ಹಾಕಿ ಬುದ್ದ ಪೂರ್ಣಿಮೆಗೆ ರಾಹುಲ್ ಗಾಂಧಿ ಶುಭ ಕೋರಿರುವ ಪೋಸ್ಟ್‌ಗಳು ಈಗಲೂ ಅವರ ಎಕ್ಸ್‌ ಖಾತೆಯಲ್ಲಿ ಇವೆ.

ಹಾಗಾಗಿ, ರಾಹುಲ್ ಗಾಂಧಿ ಹಿಂದೂ ದೇವರುಗಳ ಫೋಟೋ ಬಳಸಿ ಫೋಸ್ಟ್ ಹಾಕುವುದಿಲ್ಲ. ಅವರು ಹಿಂದೂ ಧರ್ಮ ವಿರೋಧಿ ಎಂಬರ್ಥದ ಓಪ್‌ಇಂಡಿಯಾದ ಲೇಖನ ಮತ್ತು ಇತರ ಬಲಪಂಥೀಯರ ಪೋಸ್ಟ್‌ಗಳು ಸುಳ್ಳು ಮತ್ತು ದಾರಿ ತಪ್ಪಿಸುವಂತಿದೆ ಎಂದು ಹೇಳಬಹುದು.

ಇದನ್ನೂ ಓದಿ : FACT CHECK : ಬಿಜೆಪಿ ಪ್ರತಿಭಟನೆಯಲ್ಲಿ ಯುವತಿಯ ಡ್ಯಾನ್ಸ್… ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...