Homeಫ್ಯಾಕ್ಟ್‌ಚೆಕ್FACT CHECK : ರಾಹುಲ್ ಗಾಂಧಿ ಯಾವತ್ತೂ ಹಿಂದೂ ದೇವರ ಪೋಟೋ ಪೋಸ್ಟ್ ಮಾಡಿಲ್ವಾ? ಸತ್ಯಾಸತ್ಯತೆ...

FACT CHECK : ರಾಹುಲ್ ಗಾಂಧಿ ಯಾವತ್ತೂ ಹಿಂದೂ ದೇವರ ಪೋಟೋ ಪೋಸ್ಟ್ ಮಾಡಿಲ್ವಾ? ಸತ್ಯಾಸತ್ಯತೆ ಏನು?

- Advertisement -
- Advertisement -

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರು ಹಿಂದೂ ದೇವರು ‘ಶ್ರೀಕೃಷ್ಣ’ನ ಫೋಟೋ ಬಳಸದೆ ಸಾಮಾಜಿಕ ಜಾಲತಾಣಗಳಲ್ಲಿ ಜನ್ಮಾಷ್ಟಮಿಗೆ ಶುಭಕೋರಿದ್ದಾರೆ ಎಂದು ಬಲಪಂಥೀಯರು ಟೀಕಿಸಿದ್ದಾರೆ.

ಬಲಪಂಥೀಯ ಸುದ್ದಿ ವೆಬ್‌ಸೈಟ್‌ ‘ಓಪ್‌ಇಂಡಿಯಾ‘ ಈ ಕುರಿತು ಲೇಖನವೊಂದನ್ನು ಪ್ರಕಟಿಸಿದ್ದು, ಅದರಲ್ಲಿ ರಾಹುಲ್ ಗಾಂಧಿಯವರು ಹಿಂದೂ ಹಬ್ಬಗಳಿಗೆ ಶುಭಾಷಯ ಕೋರುವಾಗ, ಹಿಂದೂ ದೇವರುಗಳ ಫೋಟೋ ಏಕೆ ಪೋಸ್ಟ್ ಮಾಡುವುದಿಲ್ಲ? ಎಂದು ಪ್ರಶ್ನಿಸಿದೆ. ಎಲ್ಲಾ ಧರ್ಮಗಳನ್ನು ಸಮಾನವಾಗಿ ಗೌರವಿಸುವ ತಟಸ್ಥ ಅಥವಾ ನಿಷ್ಪಕ್ಷಪಾತ ನಿಲುವು ವ್ಯಕ್ತಪಡಿಸಲು ಅವರು ಹಾಗೆ ಮಾಡುತ್ತಿದ್ದಾರೆ ಎಂದಿದೆ.

ಹಿಂದೂ ಧರ್ಮವನ್ನು ಸಂಪೂರ್ಣ ಜಾತ್ಯತೀತ ಎಂದು ವಾದಿಸಿರುವ ಓಪ್‌ಇಂಡಿಯಾದ ಲೇಖಕ, ‘ಧರ್ಮವು ಒಂದು ಪ್ರತ್ಯೇಕ ಅಂಶವಾಗಿದೆ. ಅದು ಜಾತ್ಯತೀತವಾಗಿರಬಾರದು. ಹಳೆಯ ಪಕ್ಷದ (ಕಾಂಗ್ರೆಸ್‌) ರಾಜಕುಮಾರ (ರಾಹುಲ್ ಗಾಂಧಿ) ತನ್ನ ಜಾತ್ಯತೀತೆಯನ್ನು ಬಲಪಡಿಸಲು ಹಿಂದೂ ಧರ್ಮವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಸದಾ ಕೋಮುದ್ವೇಷ ಪೂರಿತ ಸುದ್ದಿಗಳನ್ನು ಹಂಚಿಕೊಳ್ಳುವ ಬಲಪಂಥೀಯ ಎಕ್ಸ್‌ ಬಳಕೆದಾರ ಮಿ.ಸಿನ್ಹಾ (MrSinha)ರಾಹುಲ್ ಗಾಂಧಿಯವರು ಈ ಹಿಂದೆ ಹಲವು ಹಿಂದೂ ಹಬ್ಬಗಳಿಗೆ ಶುಭಕೋರಿರುವ ಪೋಸ್ಟ್‌ಗಳ ಸ್ಕ್ರೀನ್ ಶಾಟ್ ಹಂಚಿಕೊಂಡು “ನಮ್ಮ ಹಬ್ಬ ಹರಿದಿನಗಳಿಗೆ ಶುಭ ಹಾರೈಸುವಾಗ ರಾಹುಲ್ ಗಾಂಧಿ ಎಂದಿಗೂ ಹಿಂದೂ ದೇವರು/ದೇವತೆಗಳ ಫೋಟೋಗಳನ್ನು ಬಳಸುವುದಿಲ್ಲ. ಅವರು ‘ವಿಗ್ರಹಾರಾಧನೆ ಹರಾಮ್’ ಎಂಬ ತತ್ವವನ್ನು ಅನುಸರಿಸುತ್ತಿದ್ದಾರೆಂದು ತೋರುತ್ತದೆ” ಎಂದು ಬರೆದುಕೊಂಡಿದ್ದಾರೆ.

ಬಿಜೆಪಿ ನಾಯಕ ಗಿರಿರಾಜ್ ಸಿಂಗ್ (@girirajsinghbjp) ಕೂಡ ಎಕ್ಸ್‌ನಲ್ಲಿ ರಾಹುಲ್ ಗಾಂಧಿ ಹಿಂದೂ ಹಬ್ಬಗಳಿಗೆ ಶುಭಕೋರಿರುವ ಪೋಸ್ಟ್‌ಗಳ ಸ್ಕ್ರೀನ್ ಶಾಟ್ ಹಂಚಿಕೊಂಡು “OMG”ಎಂದು ಬರೆದುಕೊಂಡಿದ್ದಾರೆ.

ಇನ್ನೂ ಅನೇಕ ಬಲಪಂಥೀಯ ಎಕ್ಸ್‌, ಫೇಸ್‌ಬುಕ್ ಬಳಕೆದಾರರು ರಾಹುಲ್ ಗಾಂಧಿಯ ಪೋಸ್ಟ್‌ನ ಸ್ಕ್ರೀನ್‌ಶಾಟ್ ಹಂಚಿಕೊಂಡು ಅವರನ್ನು ಟೀಕಿಸಿದ್ದಾರೆ.

ಓಪ್‌ಇಂಡಿಯಾ ಸುದ್ದಿವೆಬ್‌ಸೈಟ್‌ ಮತ್ತು ಇತರ ಸಾಮಾಜಿಕ ಜಾಲತಾಣ ಬಳಕೆದಾರರು ಆರೋಪಿಸಿದಂತೆ ರಾಹುಲ್ ಗಾಂಧಿ ಹಿಂದೂ ದೇವರುಗಳ ಫೋಟೋ ಬಳಸಿ ಯಾವತ್ತೂ ಹಬ್ಬಗಳಿಗೆ ಶುಭಕೋರಿಯೇ ಇಲ್ವಾ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ರಾಹುಲ್ ಗಾಂಧಿ ಹಿಂದೂ ದೇವರುಗಳ ಫೋಟೋ ಬಳಸುವುದಿಲ್ಲ ಎಂಬ ಆರೋಪದ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಆ ಆರೋಪ ಸುಳ್ಳು ಎಂಬುವುದು ರುಜುವಾತಾಗಿದೆ. ಏಕೆಂದರೆ, ಈ ಹಿಂದೆ ಹಲವು ಬಾರಿ ಹಿಂದೂ ದೇವರುಗಳ ಫೋಟೋ ಬಳಸಿಕೊಂಡು ರಾಹುಲ್ ಗಾಂಧಿ ಹಬ್ಬಗಳಿಗೆ ಶುಭಕೋರಿದ್ದಾರೆ.

ಆಗಸ್ಟ್ 23, 2019ರಂದು ಹಿಂದೂ ದೇವರು ಶ್ರೀಕೃಷ್ಣ (ಬಾಲಕೃಷ್ಣ) ನ ಫೋಟೋ ಇರುವ ಪೋಸ್ಟರ್‌ ಬಳಸಿಕೊಂಡು ರಾಹುಲ್ ಗಾಂಧಿ ಜನ್ಮಾಷ್ಟಮಿಗೆ ಶುಭಕೋರಿದ್ದಾರೆ.

ಸೆಪ್ಟೆಂಬರ್ 25, 2017ರಂದು ಗುಜರಾತ್‌ನ ಜಾಮ್‌ನಗರದ ಚಂಡೀ ಬಝಾರ್‌ನ ನವರಾತ್ರಿ ಪೆಂಡಾಲ್‌ನ ಫೋಟೋವನ್ನು ಪೋಸ್ಟ್ ಮಾಡಿದ್ದ ರಾಹುಲ್ ಗಾಂಧಿ, “ಜಾಮ್‌ನಗರದ ಚಂಡೀ ಬಝಾರ್‌ನ ನವರಾತ್ರಿ ಪೆಂಡಾಲ್‌ಗೆ ಭೇಟಿ ನೀಡುವ ಮೂಲಕ ದಿನ ಮುಕ್ತಾಯಗೊಂಡಿತು” ಎಂದು ಬರೆದುಕೊಂಡಿದ್ದರು. ಆ ಪೆಂಡಾಲ್‌ ಫೋಟೋದಲ್ಲಿ ಹಿಂದೂ ದೇವ, ದೇವತೆಗಳ ಮೂರ್ತಿಗಳನ್ನು ನೋಡಬಹುದು.

ಅಕ್ಟೋಬರ್ 19, 2015ರಂದು ದುರ್ಗಾ ದೇವಿ ಮೂರ್ತಿಯ ಫೋಟೋ ಹಂಚಿಕೊಂಡು ” ದುರ್ಗಾ ಪೂಜೆಗೆ ರಾಹುಲ್ ಗಾಂಧಿ ಶುಭಕೋರಿದ್ದರು.

ಇದಲ್ಲದೆ, ಗಣಪತಿ ಫೋಟೋ ಹಾಕಿ ಗಣೇಶ ಚತುರ್ಥಿಗೆ, ಕೃಷ್ಣನ ಫೋಟೋ ಹಾಕಿ ವಿಶು ಹಬ್ಬಕ್ಕೆ, ಬಸವಣ್ಣನ ಫೋಟೋ ಹಾಕಿ ಬಸವ ಜಯಂತಿಗೆ, ಗೌತಮ ಬುದ್ದನ ಫೋಟೋ ಹಾಕಿ ಬುದ್ದ ಪೂರ್ಣಿಮೆಗೆ ರಾಹುಲ್ ಗಾಂಧಿ ಶುಭ ಕೋರಿರುವ ಪೋಸ್ಟ್‌ಗಳು ಈಗಲೂ ಅವರ ಎಕ್ಸ್‌ ಖಾತೆಯಲ್ಲಿ ಇವೆ.

ಹಾಗಾಗಿ, ರಾಹುಲ್ ಗಾಂಧಿ ಹಿಂದೂ ದೇವರುಗಳ ಫೋಟೋ ಬಳಸಿ ಫೋಸ್ಟ್ ಹಾಕುವುದಿಲ್ಲ. ಅವರು ಹಿಂದೂ ಧರ್ಮ ವಿರೋಧಿ ಎಂಬರ್ಥದ ಓಪ್‌ಇಂಡಿಯಾದ ಲೇಖನ ಮತ್ತು ಇತರ ಬಲಪಂಥೀಯರ ಪೋಸ್ಟ್‌ಗಳು ಸುಳ್ಳು ಮತ್ತು ದಾರಿ ತಪ್ಪಿಸುವಂತಿದೆ ಎಂದು ಹೇಳಬಹುದು.

ಇದನ್ನೂ ಓದಿ : FACT CHECK : ಬಿಜೆಪಿ ಪ್ರತಿಭಟನೆಯಲ್ಲಿ ಯುವತಿಯ ಡ್ಯಾನ್ಸ್… ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...