Homeಫ್ಯಾಕ್ಟ್‌ಚೆಕ್FACT CHECK : ರಾಹುಲ್ ಗಾಂಧಿ ಯಾವತ್ತೂ ಹಿಂದೂ ದೇವರ ಪೋಟೋ ಪೋಸ್ಟ್ ಮಾಡಿಲ್ವಾ? ಸತ್ಯಾಸತ್ಯತೆ...

FACT CHECK : ರಾಹುಲ್ ಗಾಂಧಿ ಯಾವತ್ತೂ ಹಿಂದೂ ದೇವರ ಪೋಟೋ ಪೋಸ್ಟ್ ಮಾಡಿಲ್ವಾ? ಸತ್ಯಾಸತ್ಯತೆ ಏನು?

- Advertisement -
- Advertisement -

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರು ಹಿಂದೂ ದೇವರು ‘ಶ್ರೀಕೃಷ್ಣ’ನ ಫೋಟೋ ಬಳಸದೆ ಸಾಮಾಜಿಕ ಜಾಲತಾಣಗಳಲ್ಲಿ ಜನ್ಮಾಷ್ಟಮಿಗೆ ಶುಭಕೋರಿದ್ದಾರೆ ಎಂದು ಬಲಪಂಥೀಯರು ಟೀಕಿಸಿದ್ದಾರೆ.

ಬಲಪಂಥೀಯ ಸುದ್ದಿ ವೆಬ್‌ಸೈಟ್‌ ‘ಓಪ್‌ಇಂಡಿಯಾ‘ ಈ ಕುರಿತು ಲೇಖನವೊಂದನ್ನು ಪ್ರಕಟಿಸಿದ್ದು, ಅದರಲ್ಲಿ ರಾಹುಲ್ ಗಾಂಧಿಯವರು ಹಿಂದೂ ಹಬ್ಬಗಳಿಗೆ ಶುಭಾಷಯ ಕೋರುವಾಗ, ಹಿಂದೂ ದೇವರುಗಳ ಫೋಟೋ ಏಕೆ ಪೋಸ್ಟ್ ಮಾಡುವುದಿಲ್ಲ? ಎಂದು ಪ್ರಶ್ನಿಸಿದೆ. ಎಲ್ಲಾ ಧರ್ಮಗಳನ್ನು ಸಮಾನವಾಗಿ ಗೌರವಿಸುವ ತಟಸ್ಥ ಅಥವಾ ನಿಷ್ಪಕ್ಷಪಾತ ನಿಲುವು ವ್ಯಕ್ತಪಡಿಸಲು ಅವರು ಹಾಗೆ ಮಾಡುತ್ತಿದ್ದಾರೆ ಎಂದಿದೆ.

ಹಿಂದೂ ಧರ್ಮವನ್ನು ಸಂಪೂರ್ಣ ಜಾತ್ಯತೀತ ಎಂದು ವಾದಿಸಿರುವ ಓಪ್‌ಇಂಡಿಯಾದ ಲೇಖಕ, ‘ಧರ್ಮವು ಒಂದು ಪ್ರತ್ಯೇಕ ಅಂಶವಾಗಿದೆ. ಅದು ಜಾತ್ಯತೀತವಾಗಿರಬಾರದು. ಹಳೆಯ ಪಕ್ಷದ (ಕಾಂಗ್ರೆಸ್‌) ರಾಜಕುಮಾರ (ರಾಹುಲ್ ಗಾಂಧಿ) ತನ್ನ ಜಾತ್ಯತೀತೆಯನ್ನು ಬಲಪಡಿಸಲು ಹಿಂದೂ ಧರ್ಮವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಸದಾ ಕೋಮುದ್ವೇಷ ಪೂರಿತ ಸುದ್ದಿಗಳನ್ನು ಹಂಚಿಕೊಳ್ಳುವ ಬಲಪಂಥೀಯ ಎಕ್ಸ್‌ ಬಳಕೆದಾರ ಮಿ.ಸಿನ್ಹಾ (MrSinha)ರಾಹುಲ್ ಗಾಂಧಿಯವರು ಈ ಹಿಂದೆ ಹಲವು ಹಿಂದೂ ಹಬ್ಬಗಳಿಗೆ ಶುಭಕೋರಿರುವ ಪೋಸ್ಟ್‌ಗಳ ಸ್ಕ್ರೀನ್ ಶಾಟ್ ಹಂಚಿಕೊಂಡು “ನಮ್ಮ ಹಬ್ಬ ಹರಿದಿನಗಳಿಗೆ ಶುಭ ಹಾರೈಸುವಾಗ ರಾಹುಲ್ ಗಾಂಧಿ ಎಂದಿಗೂ ಹಿಂದೂ ದೇವರು/ದೇವತೆಗಳ ಫೋಟೋಗಳನ್ನು ಬಳಸುವುದಿಲ್ಲ. ಅವರು ‘ವಿಗ್ರಹಾರಾಧನೆ ಹರಾಮ್’ ಎಂಬ ತತ್ವವನ್ನು ಅನುಸರಿಸುತ್ತಿದ್ದಾರೆಂದು ತೋರುತ್ತದೆ” ಎಂದು ಬರೆದುಕೊಂಡಿದ್ದಾರೆ.

ಬಿಜೆಪಿ ನಾಯಕ ಗಿರಿರಾಜ್ ಸಿಂಗ್ (@girirajsinghbjp) ಕೂಡ ಎಕ್ಸ್‌ನಲ್ಲಿ ರಾಹುಲ್ ಗಾಂಧಿ ಹಿಂದೂ ಹಬ್ಬಗಳಿಗೆ ಶುಭಕೋರಿರುವ ಪೋಸ್ಟ್‌ಗಳ ಸ್ಕ್ರೀನ್ ಶಾಟ್ ಹಂಚಿಕೊಂಡು “OMG”ಎಂದು ಬರೆದುಕೊಂಡಿದ್ದಾರೆ.

ಇನ್ನೂ ಅನೇಕ ಬಲಪಂಥೀಯ ಎಕ್ಸ್‌, ಫೇಸ್‌ಬುಕ್ ಬಳಕೆದಾರರು ರಾಹುಲ್ ಗಾಂಧಿಯ ಪೋಸ್ಟ್‌ನ ಸ್ಕ್ರೀನ್‌ಶಾಟ್ ಹಂಚಿಕೊಂಡು ಅವರನ್ನು ಟೀಕಿಸಿದ್ದಾರೆ.

ಓಪ್‌ಇಂಡಿಯಾ ಸುದ್ದಿವೆಬ್‌ಸೈಟ್‌ ಮತ್ತು ಇತರ ಸಾಮಾಜಿಕ ಜಾಲತಾಣ ಬಳಕೆದಾರರು ಆರೋಪಿಸಿದಂತೆ ರಾಹುಲ್ ಗಾಂಧಿ ಹಿಂದೂ ದೇವರುಗಳ ಫೋಟೋ ಬಳಸಿ ಯಾವತ್ತೂ ಹಬ್ಬಗಳಿಗೆ ಶುಭಕೋರಿಯೇ ಇಲ್ವಾ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ರಾಹುಲ್ ಗಾಂಧಿ ಹಿಂದೂ ದೇವರುಗಳ ಫೋಟೋ ಬಳಸುವುದಿಲ್ಲ ಎಂಬ ಆರೋಪದ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಆ ಆರೋಪ ಸುಳ್ಳು ಎಂಬುವುದು ರುಜುವಾತಾಗಿದೆ. ಏಕೆಂದರೆ, ಈ ಹಿಂದೆ ಹಲವು ಬಾರಿ ಹಿಂದೂ ದೇವರುಗಳ ಫೋಟೋ ಬಳಸಿಕೊಂಡು ರಾಹುಲ್ ಗಾಂಧಿ ಹಬ್ಬಗಳಿಗೆ ಶುಭಕೋರಿದ್ದಾರೆ.

ಆಗಸ್ಟ್ 23, 2019ರಂದು ಹಿಂದೂ ದೇವರು ಶ್ರೀಕೃಷ್ಣ (ಬಾಲಕೃಷ್ಣ) ನ ಫೋಟೋ ಇರುವ ಪೋಸ್ಟರ್‌ ಬಳಸಿಕೊಂಡು ರಾಹುಲ್ ಗಾಂಧಿ ಜನ್ಮಾಷ್ಟಮಿಗೆ ಶುಭಕೋರಿದ್ದಾರೆ.

ಸೆಪ್ಟೆಂಬರ್ 25, 2017ರಂದು ಗುಜರಾತ್‌ನ ಜಾಮ್‌ನಗರದ ಚಂಡೀ ಬಝಾರ್‌ನ ನವರಾತ್ರಿ ಪೆಂಡಾಲ್‌ನ ಫೋಟೋವನ್ನು ಪೋಸ್ಟ್ ಮಾಡಿದ್ದ ರಾಹುಲ್ ಗಾಂಧಿ, “ಜಾಮ್‌ನಗರದ ಚಂಡೀ ಬಝಾರ್‌ನ ನವರಾತ್ರಿ ಪೆಂಡಾಲ್‌ಗೆ ಭೇಟಿ ನೀಡುವ ಮೂಲಕ ದಿನ ಮುಕ್ತಾಯಗೊಂಡಿತು” ಎಂದು ಬರೆದುಕೊಂಡಿದ್ದರು. ಆ ಪೆಂಡಾಲ್‌ ಫೋಟೋದಲ್ಲಿ ಹಿಂದೂ ದೇವ, ದೇವತೆಗಳ ಮೂರ್ತಿಗಳನ್ನು ನೋಡಬಹುದು.

ಅಕ್ಟೋಬರ್ 19, 2015ರಂದು ದುರ್ಗಾ ದೇವಿ ಮೂರ್ತಿಯ ಫೋಟೋ ಹಂಚಿಕೊಂಡು ” ದುರ್ಗಾ ಪೂಜೆಗೆ ರಾಹುಲ್ ಗಾಂಧಿ ಶುಭಕೋರಿದ್ದರು.

ಇದಲ್ಲದೆ, ಗಣಪತಿ ಫೋಟೋ ಹಾಕಿ ಗಣೇಶ ಚತುರ್ಥಿಗೆ, ಕೃಷ್ಣನ ಫೋಟೋ ಹಾಕಿ ವಿಶು ಹಬ್ಬಕ್ಕೆ, ಬಸವಣ್ಣನ ಫೋಟೋ ಹಾಕಿ ಬಸವ ಜಯಂತಿಗೆ, ಗೌತಮ ಬುದ್ದನ ಫೋಟೋ ಹಾಕಿ ಬುದ್ದ ಪೂರ್ಣಿಮೆಗೆ ರಾಹುಲ್ ಗಾಂಧಿ ಶುಭ ಕೋರಿರುವ ಪೋಸ್ಟ್‌ಗಳು ಈಗಲೂ ಅವರ ಎಕ್ಸ್‌ ಖಾತೆಯಲ್ಲಿ ಇವೆ.

ಹಾಗಾಗಿ, ರಾಹುಲ್ ಗಾಂಧಿ ಹಿಂದೂ ದೇವರುಗಳ ಫೋಟೋ ಬಳಸಿ ಫೋಸ್ಟ್ ಹಾಕುವುದಿಲ್ಲ. ಅವರು ಹಿಂದೂ ಧರ್ಮ ವಿರೋಧಿ ಎಂಬರ್ಥದ ಓಪ್‌ಇಂಡಿಯಾದ ಲೇಖನ ಮತ್ತು ಇತರ ಬಲಪಂಥೀಯರ ಪೋಸ್ಟ್‌ಗಳು ಸುಳ್ಳು ಮತ್ತು ದಾರಿ ತಪ್ಪಿಸುವಂತಿದೆ ಎಂದು ಹೇಳಬಹುದು.

ಇದನ್ನೂ ಓದಿ : FACT CHECK : ಬಿಜೆಪಿ ಪ್ರತಿಭಟನೆಯಲ್ಲಿ ಯುವತಿಯ ಡ್ಯಾನ್ಸ್… ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...