Homeಫ್ಯಾಕ್ಟ್‌ಚೆಕ್FACT CHECK : ರಾಹುಲ್ ಗಾಂಧಿ ಯಾವತ್ತೂ ಹಿಂದೂ ದೇವರ ಪೋಟೋ ಪೋಸ್ಟ್ ಮಾಡಿಲ್ವಾ? ಸತ್ಯಾಸತ್ಯತೆ...

FACT CHECK : ರಾಹುಲ್ ಗಾಂಧಿ ಯಾವತ್ತೂ ಹಿಂದೂ ದೇವರ ಪೋಟೋ ಪೋಸ್ಟ್ ಮಾಡಿಲ್ವಾ? ಸತ್ಯಾಸತ್ಯತೆ ಏನು?

- Advertisement -
- Advertisement -

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರು ಹಿಂದೂ ದೇವರು ‘ಶ್ರೀಕೃಷ್ಣ’ನ ಫೋಟೋ ಬಳಸದೆ ಸಾಮಾಜಿಕ ಜಾಲತಾಣಗಳಲ್ಲಿ ಜನ್ಮಾಷ್ಟಮಿಗೆ ಶುಭಕೋರಿದ್ದಾರೆ ಎಂದು ಬಲಪಂಥೀಯರು ಟೀಕಿಸಿದ್ದಾರೆ.

ಬಲಪಂಥೀಯ ಸುದ್ದಿ ವೆಬ್‌ಸೈಟ್‌ ‘ಓಪ್‌ಇಂಡಿಯಾ‘ ಈ ಕುರಿತು ಲೇಖನವೊಂದನ್ನು ಪ್ರಕಟಿಸಿದ್ದು, ಅದರಲ್ಲಿ ರಾಹುಲ್ ಗಾಂಧಿಯವರು ಹಿಂದೂ ಹಬ್ಬಗಳಿಗೆ ಶುಭಾಷಯ ಕೋರುವಾಗ, ಹಿಂದೂ ದೇವರುಗಳ ಫೋಟೋ ಏಕೆ ಪೋಸ್ಟ್ ಮಾಡುವುದಿಲ್ಲ? ಎಂದು ಪ್ರಶ್ನಿಸಿದೆ. ಎಲ್ಲಾ ಧರ್ಮಗಳನ್ನು ಸಮಾನವಾಗಿ ಗೌರವಿಸುವ ತಟಸ್ಥ ಅಥವಾ ನಿಷ್ಪಕ್ಷಪಾತ ನಿಲುವು ವ್ಯಕ್ತಪಡಿಸಲು ಅವರು ಹಾಗೆ ಮಾಡುತ್ತಿದ್ದಾರೆ ಎಂದಿದೆ.

ಹಿಂದೂ ಧರ್ಮವನ್ನು ಸಂಪೂರ್ಣ ಜಾತ್ಯತೀತ ಎಂದು ವಾದಿಸಿರುವ ಓಪ್‌ಇಂಡಿಯಾದ ಲೇಖಕ, ‘ಧರ್ಮವು ಒಂದು ಪ್ರತ್ಯೇಕ ಅಂಶವಾಗಿದೆ. ಅದು ಜಾತ್ಯತೀತವಾಗಿರಬಾರದು. ಹಳೆಯ ಪಕ್ಷದ (ಕಾಂಗ್ರೆಸ್‌) ರಾಜಕುಮಾರ (ರಾಹುಲ್ ಗಾಂಧಿ) ತನ್ನ ಜಾತ್ಯತೀತೆಯನ್ನು ಬಲಪಡಿಸಲು ಹಿಂದೂ ಧರ್ಮವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಸದಾ ಕೋಮುದ್ವೇಷ ಪೂರಿತ ಸುದ್ದಿಗಳನ್ನು ಹಂಚಿಕೊಳ್ಳುವ ಬಲಪಂಥೀಯ ಎಕ್ಸ್‌ ಬಳಕೆದಾರ ಮಿ.ಸಿನ್ಹಾ (MrSinha)ರಾಹುಲ್ ಗಾಂಧಿಯವರು ಈ ಹಿಂದೆ ಹಲವು ಹಿಂದೂ ಹಬ್ಬಗಳಿಗೆ ಶುಭಕೋರಿರುವ ಪೋಸ್ಟ್‌ಗಳ ಸ್ಕ್ರೀನ್ ಶಾಟ್ ಹಂಚಿಕೊಂಡು “ನಮ್ಮ ಹಬ್ಬ ಹರಿದಿನಗಳಿಗೆ ಶುಭ ಹಾರೈಸುವಾಗ ರಾಹುಲ್ ಗಾಂಧಿ ಎಂದಿಗೂ ಹಿಂದೂ ದೇವರು/ದೇವತೆಗಳ ಫೋಟೋಗಳನ್ನು ಬಳಸುವುದಿಲ್ಲ. ಅವರು ‘ವಿಗ್ರಹಾರಾಧನೆ ಹರಾಮ್’ ಎಂಬ ತತ್ವವನ್ನು ಅನುಸರಿಸುತ್ತಿದ್ದಾರೆಂದು ತೋರುತ್ತದೆ” ಎಂದು ಬರೆದುಕೊಂಡಿದ್ದಾರೆ.

ಬಿಜೆಪಿ ನಾಯಕ ಗಿರಿರಾಜ್ ಸಿಂಗ್ (@girirajsinghbjp) ಕೂಡ ಎಕ್ಸ್‌ನಲ್ಲಿ ರಾಹುಲ್ ಗಾಂಧಿ ಹಿಂದೂ ಹಬ್ಬಗಳಿಗೆ ಶುಭಕೋರಿರುವ ಪೋಸ್ಟ್‌ಗಳ ಸ್ಕ್ರೀನ್ ಶಾಟ್ ಹಂಚಿಕೊಂಡು “OMG”ಎಂದು ಬರೆದುಕೊಂಡಿದ್ದಾರೆ.

ಇನ್ನೂ ಅನೇಕ ಬಲಪಂಥೀಯ ಎಕ್ಸ್‌, ಫೇಸ್‌ಬುಕ್ ಬಳಕೆದಾರರು ರಾಹುಲ್ ಗಾಂಧಿಯ ಪೋಸ್ಟ್‌ನ ಸ್ಕ್ರೀನ್‌ಶಾಟ್ ಹಂಚಿಕೊಂಡು ಅವರನ್ನು ಟೀಕಿಸಿದ್ದಾರೆ.

ಓಪ್‌ಇಂಡಿಯಾ ಸುದ್ದಿವೆಬ್‌ಸೈಟ್‌ ಮತ್ತು ಇತರ ಸಾಮಾಜಿಕ ಜಾಲತಾಣ ಬಳಕೆದಾರರು ಆರೋಪಿಸಿದಂತೆ ರಾಹುಲ್ ಗಾಂಧಿ ಹಿಂದೂ ದೇವರುಗಳ ಫೋಟೋ ಬಳಸಿ ಯಾವತ್ತೂ ಹಬ್ಬಗಳಿಗೆ ಶುಭಕೋರಿಯೇ ಇಲ್ವಾ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ರಾಹುಲ್ ಗಾಂಧಿ ಹಿಂದೂ ದೇವರುಗಳ ಫೋಟೋ ಬಳಸುವುದಿಲ್ಲ ಎಂಬ ಆರೋಪದ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಆ ಆರೋಪ ಸುಳ್ಳು ಎಂಬುವುದು ರುಜುವಾತಾಗಿದೆ. ಏಕೆಂದರೆ, ಈ ಹಿಂದೆ ಹಲವು ಬಾರಿ ಹಿಂದೂ ದೇವರುಗಳ ಫೋಟೋ ಬಳಸಿಕೊಂಡು ರಾಹುಲ್ ಗಾಂಧಿ ಹಬ್ಬಗಳಿಗೆ ಶುಭಕೋರಿದ್ದಾರೆ.

ಆಗಸ್ಟ್ 23, 2019ರಂದು ಹಿಂದೂ ದೇವರು ಶ್ರೀಕೃಷ್ಣ (ಬಾಲಕೃಷ್ಣ) ನ ಫೋಟೋ ಇರುವ ಪೋಸ್ಟರ್‌ ಬಳಸಿಕೊಂಡು ರಾಹುಲ್ ಗಾಂಧಿ ಜನ್ಮಾಷ್ಟಮಿಗೆ ಶುಭಕೋರಿದ್ದಾರೆ.

ಸೆಪ್ಟೆಂಬರ್ 25, 2017ರಂದು ಗುಜರಾತ್‌ನ ಜಾಮ್‌ನಗರದ ಚಂಡೀ ಬಝಾರ್‌ನ ನವರಾತ್ರಿ ಪೆಂಡಾಲ್‌ನ ಫೋಟೋವನ್ನು ಪೋಸ್ಟ್ ಮಾಡಿದ್ದ ರಾಹುಲ್ ಗಾಂಧಿ, “ಜಾಮ್‌ನಗರದ ಚಂಡೀ ಬಝಾರ್‌ನ ನವರಾತ್ರಿ ಪೆಂಡಾಲ್‌ಗೆ ಭೇಟಿ ನೀಡುವ ಮೂಲಕ ದಿನ ಮುಕ್ತಾಯಗೊಂಡಿತು” ಎಂದು ಬರೆದುಕೊಂಡಿದ್ದರು. ಆ ಪೆಂಡಾಲ್‌ ಫೋಟೋದಲ್ಲಿ ಹಿಂದೂ ದೇವ, ದೇವತೆಗಳ ಮೂರ್ತಿಗಳನ್ನು ನೋಡಬಹುದು.

ಅಕ್ಟೋಬರ್ 19, 2015ರಂದು ದುರ್ಗಾ ದೇವಿ ಮೂರ್ತಿಯ ಫೋಟೋ ಹಂಚಿಕೊಂಡು ” ದುರ್ಗಾ ಪೂಜೆಗೆ ರಾಹುಲ್ ಗಾಂಧಿ ಶುಭಕೋರಿದ್ದರು.

ಇದಲ್ಲದೆ, ಗಣಪತಿ ಫೋಟೋ ಹಾಕಿ ಗಣೇಶ ಚತುರ್ಥಿಗೆ, ಕೃಷ್ಣನ ಫೋಟೋ ಹಾಕಿ ವಿಶು ಹಬ್ಬಕ್ಕೆ, ಬಸವಣ್ಣನ ಫೋಟೋ ಹಾಕಿ ಬಸವ ಜಯಂತಿಗೆ, ಗೌತಮ ಬುದ್ದನ ಫೋಟೋ ಹಾಕಿ ಬುದ್ದ ಪೂರ್ಣಿಮೆಗೆ ರಾಹುಲ್ ಗಾಂಧಿ ಶುಭ ಕೋರಿರುವ ಪೋಸ್ಟ್‌ಗಳು ಈಗಲೂ ಅವರ ಎಕ್ಸ್‌ ಖಾತೆಯಲ್ಲಿ ಇವೆ.

ಹಾಗಾಗಿ, ರಾಹುಲ್ ಗಾಂಧಿ ಹಿಂದೂ ದೇವರುಗಳ ಫೋಟೋ ಬಳಸಿ ಫೋಸ್ಟ್ ಹಾಕುವುದಿಲ್ಲ. ಅವರು ಹಿಂದೂ ಧರ್ಮ ವಿರೋಧಿ ಎಂಬರ್ಥದ ಓಪ್‌ಇಂಡಿಯಾದ ಲೇಖನ ಮತ್ತು ಇತರ ಬಲಪಂಥೀಯರ ಪೋಸ್ಟ್‌ಗಳು ಸುಳ್ಳು ಮತ್ತು ದಾರಿ ತಪ್ಪಿಸುವಂತಿದೆ ಎಂದು ಹೇಳಬಹುದು.

ಇದನ್ನೂ ಓದಿ : FACT CHECK : ಬಿಜೆಪಿ ಪ್ರತಿಭಟನೆಯಲ್ಲಿ ಯುವತಿಯ ಡ್ಯಾನ್ಸ್… ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...