Homeಫ್ಯಾಕ್ಟ್‌ಚೆಕ್FACT CHECK : ರಾಹುಲ್ ಗಾಂಧಿ ಯಾವತ್ತೂ ಹಿಂದೂ ದೇವರ ಪೋಟೋ ಪೋಸ್ಟ್ ಮಾಡಿಲ್ವಾ? ಸತ್ಯಾಸತ್ಯತೆ...

FACT CHECK : ರಾಹುಲ್ ಗಾಂಧಿ ಯಾವತ್ತೂ ಹಿಂದೂ ದೇವರ ಪೋಟೋ ಪೋಸ್ಟ್ ಮಾಡಿಲ್ವಾ? ಸತ್ಯಾಸತ್ಯತೆ ಏನು?

- Advertisement -
- Advertisement -

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರು ಹಿಂದೂ ದೇವರು ‘ಶ್ರೀಕೃಷ್ಣ’ನ ಫೋಟೋ ಬಳಸದೆ ಸಾಮಾಜಿಕ ಜಾಲತಾಣಗಳಲ್ಲಿ ಜನ್ಮಾಷ್ಟಮಿಗೆ ಶುಭಕೋರಿದ್ದಾರೆ ಎಂದು ಬಲಪಂಥೀಯರು ಟೀಕಿಸಿದ್ದಾರೆ.

ಬಲಪಂಥೀಯ ಸುದ್ದಿ ವೆಬ್‌ಸೈಟ್‌ ‘ಓಪ್‌ಇಂಡಿಯಾ‘ ಈ ಕುರಿತು ಲೇಖನವೊಂದನ್ನು ಪ್ರಕಟಿಸಿದ್ದು, ಅದರಲ್ಲಿ ರಾಹುಲ್ ಗಾಂಧಿಯವರು ಹಿಂದೂ ಹಬ್ಬಗಳಿಗೆ ಶುಭಾಷಯ ಕೋರುವಾಗ, ಹಿಂದೂ ದೇವರುಗಳ ಫೋಟೋ ಏಕೆ ಪೋಸ್ಟ್ ಮಾಡುವುದಿಲ್ಲ? ಎಂದು ಪ್ರಶ್ನಿಸಿದೆ. ಎಲ್ಲಾ ಧರ್ಮಗಳನ್ನು ಸಮಾನವಾಗಿ ಗೌರವಿಸುವ ತಟಸ್ಥ ಅಥವಾ ನಿಷ್ಪಕ್ಷಪಾತ ನಿಲುವು ವ್ಯಕ್ತಪಡಿಸಲು ಅವರು ಹಾಗೆ ಮಾಡುತ್ತಿದ್ದಾರೆ ಎಂದಿದೆ.

ಹಿಂದೂ ಧರ್ಮವನ್ನು ಸಂಪೂರ್ಣ ಜಾತ್ಯತೀತ ಎಂದು ವಾದಿಸಿರುವ ಓಪ್‌ಇಂಡಿಯಾದ ಲೇಖಕ, ‘ಧರ್ಮವು ಒಂದು ಪ್ರತ್ಯೇಕ ಅಂಶವಾಗಿದೆ. ಅದು ಜಾತ್ಯತೀತವಾಗಿರಬಾರದು. ಹಳೆಯ ಪಕ್ಷದ (ಕಾಂಗ್ರೆಸ್‌) ರಾಜಕುಮಾರ (ರಾಹುಲ್ ಗಾಂಧಿ) ತನ್ನ ಜಾತ್ಯತೀತೆಯನ್ನು ಬಲಪಡಿಸಲು ಹಿಂದೂ ಧರ್ಮವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಸದಾ ಕೋಮುದ್ವೇಷ ಪೂರಿತ ಸುದ್ದಿಗಳನ್ನು ಹಂಚಿಕೊಳ್ಳುವ ಬಲಪಂಥೀಯ ಎಕ್ಸ್‌ ಬಳಕೆದಾರ ಮಿ.ಸಿನ್ಹಾ (MrSinha)ರಾಹುಲ್ ಗಾಂಧಿಯವರು ಈ ಹಿಂದೆ ಹಲವು ಹಿಂದೂ ಹಬ್ಬಗಳಿಗೆ ಶುಭಕೋರಿರುವ ಪೋಸ್ಟ್‌ಗಳ ಸ್ಕ್ರೀನ್ ಶಾಟ್ ಹಂಚಿಕೊಂಡು “ನಮ್ಮ ಹಬ್ಬ ಹರಿದಿನಗಳಿಗೆ ಶುಭ ಹಾರೈಸುವಾಗ ರಾಹುಲ್ ಗಾಂಧಿ ಎಂದಿಗೂ ಹಿಂದೂ ದೇವರು/ದೇವತೆಗಳ ಫೋಟೋಗಳನ್ನು ಬಳಸುವುದಿಲ್ಲ. ಅವರು ‘ವಿಗ್ರಹಾರಾಧನೆ ಹರಾಮ್’ ಎಂಬ ತತ್ವವನ್ನು ಅನುಸರಿಸುತ್ತಿದ್ದಾರೆಂದು ತೋರುತ್ತದೆ” ಎಂದು ಬರೆದುಕೊಂಡಿದ್ದಾರೆ.

ಬಿಜೆಪಿ ನಾಯಕ ಗಿರಿರಾಜ್ ಸಿಂಗ್ (@girirajsinghbjp) ಕೂಡ ಎಕ್ಸ್‌ನಲ್ಲಿ ರಾಹುಲ್ ಗಾಂಧಿ ಹಿಂದೂ ಹಬ್ಬಗಳಿಗೆ ಶುಭಕೋರಿರುವ ಪೋಸ್ಟ್‌ಗಳ ಸ್ಕ್ರೀನ್ ಶಾಟ್ ಹಂಚಿಕೊಂಡು “OMG”ಎಂದು ಬರೆದುಕೊಂಡಿದ್ದಾರೆ.

ಇನ್ನೂ ಅನೇಕ ಬಲಪಂಥೀಯ ಎಕ್ಸ್‌, ಫೇಸ್‌ಬುಕ್ ಬಳಕೆದಾರರು ರಾಹುಲ್ ಗಾಂಧಿಯ ಪೋಸ್ಟ್‌ನ ಸ್ಕ್ರೀನ್‌ಶಾಟ್ ಹಂಚಿಕೊಂಡು ಅವರನ್ನು ಟೀಕಿಸಿದ್ದಾರೆ.

ಓಪ್‌ಇಂಡಿಯಾ ಸುದ್ದಿವೆಬ್‌ಸೈಟ್‌ ಮತ್ತು ಇತರ ಸಾಮಾಜಿಕ ಜಾಲತಾಣ ಬಳಕೆದಾರರು ಆರೋಪಿಸಿದಂತೆ ರಾಹುಲ್ ಗಾಂಧಿ ಹಿಂದೂ ದೇವರುಗಳ ಫೋಟೋ ಬಳಸಿ ಯಾವತ್ತೂ ಹಬ್ಬಗಳಿಗೆ ಶುಭಕೋರಿಯೇ ಇಲ್ವಾ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ರಾಹುಲ್ ಗಾಂಧಿ ಹಿಂದೂ ದೇವರುಗಳ ಫೋಟೋ ಬಳಸುವುದಿಲ್ಲ ಎಂಬ ಆರೋಪದ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಆ ಆರೋಪ ಸುಳ್ಳು ಎಂಬುವುದು ರುಜುವಾತಾಗಿದೆ. ಏಕೆಂದರೆ, ಈ ಹಿಂದೆ ಹಲವು ಬಾರಿ ಹಿಂದೂ ದೇವರುಗಳ ಫೋಟೋ ಬಳಸಿಕೊಂಡು ರಾಹುಲ್ ಗಾಂಧಿ ಹಬ್ಬಗಳಿಗೆ ಶುಭಕೋರಿದ್ದಾರೆ.

ಆಗಸ್ಟ್ 23, 2019ರಂದು ಹಿಂದೂ ದೇವರು ಶ್ರೀಕೃಷ್ಣ (ಬಾಲಕೃಷ್ಣ) ನ ಫೋಟೋ ಇರುವ ಪೋಸ್ಟರ್‌ ಬಳಸಿಕೊಂಡು ರಾಹುಲ್ ಗಾಂಧಿ ಜನ್ಮಾಷ್ಟಮಿಗೆ ಶುಭಕೋರಿದ್ದಾರೆ.

ಸೆಪ್ಟೆಂಬರ್ 25, 2017ರಂದು ಗುಜರಾತ್‌ನ ಜಾಮ್‌ನಗರದ ಚಂಡೀ ಬಝಾರ್‌ನ ನವರಾತ್ರಿ ಪೆಂಡಾಲ್‌ನ ಫೋಟೋವನ್ನು ಪೋಸ್ಟ್ ಮಾಡಿದ್ದ ರಾಹುಲ್ ಗಾಂಧಿ, “ಜಾಮ್‌ನಗರದ ಚಂಡೀ ಬಝಾರ್‌ನ ನವರಾತ್ರಿ ಪೆಂಡಾಲ್‌ಗೆ ಭೇಟಿ ನೀಡುವ ಮೂಲಕ ದಿನ ಮುಕ್ತಾಯಗೊಂಡಿತು” ಎಂದು ಬರೆದುಕೊಂಡಿದ್ದರು. ಆ ಪೆಂಡಾಲ್‌ ಫೋಟೋದಲ್ಲಿ ಹಿಂದೂ ದೇವ, ದೇವತೆಗಳ ಮೂರ್ತಿಗಳನ್ನು ನೋಡಬಹುದು.

ಅಕ್ಟೋಬರ್ 19, 2015ರಂದು ದುರ್ಗಾ ದೇವಿ ಮೂರ್ತಿಯ ಫೋಟೋ ಹಂಚಿಕೊಂಡು ” ದುರ್ಗಾ ಪೂಜೆಗೆ ರಾಹುಲ್ ಗಾಂಧಿ ಶುಭಕೋರಿದ್ದರು.

ಇದಲ್ಲದೆ, ಗಣಪತಿ ಫೋಟೋ ಹಾಕಿ ಗಣೇಶ ಚತುರ್ಥಿಗೆ, ಕೃಷ್ಣನ ಫೋಟೋ ಹಾಕಿ ವಿಶು ಹಬ್ಬಕ್ಕೆ, ಬಸವಣ್ಣನ ಫೋಟೋ ಹಾಕಿ ಬಸವ ಜಯಂತಿಗೆ, ಗೌತಮ ಬುದ್ದನ ಫೋಟೋ ಹಾಕಿ ಬುದ್ದ ಪೂರ್ಣಿಮೆಗೆ ರಾಹುಲ್ ಗಾಂಧಿ ಶುಭ ಕೋರಿರುವ ಪೋಸ್ಟ್‌ಗಳು ಈಗಲೂ ಅವರ ಎಕ್ಸ್‌ ಖಾತೆಯಲ್ಲಿ ಇವೆ.

ಹಾಗಾಗಿ, ರಾಹುಲ್ ಗಾಂಧಿ ಹಿಂದೂ ದೇವರುಗಳ ಫೋಟೋ ಬಳಸಿ ಫೋಸ್ಟ್ ಹಾಕುವುದಿಲ್ಲ. ಅವರು ಹಿಂದೂ ಧರ್ಮ ವಿರೋಧಿ ಎಂಬರ್ಥದ ಓಪ್‌ಇಂಡಿಯಾದ ಲೇಖನ ಮತ್ತು ಇತರ ಬಲಪಂಥೀಯರ ಪೋಸ್ಟ್‌ಗಳು ಸುಳ್ಳು ಮತ್ತು ದಾರಿ ತಪ್ಪಿಸುವಂತಿದೆ ಎಂದು ಹೇಳಬಹುದು.

ಇದನ್ನೂ ಓದಿ : FACT CHECK : ಬಿಜೆಪಿ ಪ್ರತಿಭಟನೆಯಲ್ಲಿ ಯುವತಿಯ ಡ್ಯಾನ್ಸ್… ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...