Homeಫ್ಯಾಕ್ಟ್‌ಚೆಕ್FACT CHECK : ರಾಹುಲ್ ಗಾಂಧಿ ಪ್ರದರ್ಶಿಸಿದ್ದು 'ಚೀನಾ ಸಂವಿಧಾನದ' ಪ್ರತಿಯಲ್ಲ

FACT CHECK : ರಾಹುಲ್ ಗಾಂಧಿ ಪ್ರದರ್ಶಿಸಿದ್ದು ‘ಚೀನಾ ಸಂವಿಧಾನದ’ ಪ್ರತಿಯಲ್ಲ

- Advertisement -
- Advertisement -

“ಭಾರತದ ಸಂವಿಧಾನದ ಮೂಲ ಪ್ರತಿಯ ಬಣ್ಣ ನೀಲಿಯಾಗಿದೆ. ಚೀನಾದ ಸಂವಿಧಾನದ ಮೂಲ ಪ್ರತಿಯ ಬಣ್ಣ ಕೆಂಪು. ರಾಹುಲ್ ಗಾಂಧಿ ಚೀನಾದ ಸಂವಿಧಾನ ತೋರಿಸಿದ್ದಾರೆಯೇ? ನಾವು ಈ ಬಗ್ಗೆ ಪರಿಶೀಲಿಸಬೇಕಿದೆ” ಎಂದು ಎಕ್ಸ್‌ನಲ್ಲಿ ಬರೆದುಕೊಂಡಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರು, ರಾಹುಲ್ ಗಾಂಧಿ ಸಂವಿಧಾನದ ಪ್ರತಿಯನ್ನು ತೋರಿಸಿರುವ ಫೋಟೋ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಹಿಮಂತ್ ಬಿಸ್ವಾ ಶರ್ಮಾ ಅವರ ಎಕ್ಸ್‌ ಪೋಸ್ಟ್‌ಗೆ ಅಲ್ಲಿಯೇ ಪ್ರತಿಕ್ರಿಯೆ ಕೊಟ್ಟಿರುವ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಝುಬೈರ್ ಅವರು, ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ನಾಯಕ ಅಮಿತ್ ಶಾ ಅವರು ರಾಹುಲ್ ಗಾಂಧಿ ಪ್ರದರ್ಶಿಸಿದ ಬಣ್ಣದ್ದೇ ಸಂವಿಧಾನದ ಪ್ರತಿಯನ್ನು ವ್ಯಕ್ತಿಯೊಬ್ಬರಿಗೆ ನೀಡಿದ ಫೋಟೋ ಹಂಚಿಕೊಂಡಿದ್ದು, “ಹಿಮಂತ್ ಬಿಸ್ವಾ ಶರ್ಮಾ ಅವರೇ ನಿಮ್ಮ ಬಾಸ್ ಅಮಿತ್ ಶಾ ಅವರಲ್ಲಿ ಈ ಬಗ್ಗೆ ಪರಿಶೀಲಿಸಲು ಹೇಳಿ” ಎಂದಿದ್ದಾರೆ. ಈ ಮೂಲಕ ರಾಹುಲ್ ಗಾಂಧಿ ಪ್ರದರ್ಶಿಸಿದ್ದು ಚೀನಾದ ಸಂವಿಧಾನ ಪ್ರತಿಯಲ್ಲ ಎಂದಿದ್ದಾರೆ.

ರಾಹುಲ್ ಗಾಂಧಿ ಸಂವಿಧಾನದ ಪ್ರತಿ ಪ್ರದರ್ಶಿಸಿದ ಫೋಟೋದ ಬಗ್ಗೆ ನಾವು ಗೂಗಲ್‌ನಲ್ಲಿ ಮಾಹಿತಿ ಹುಡುಕಿದಾಗ ಮೇ 6, 2024ರಂದು ಅದೇ ಫೋಟೋ ಬಳಸಿ business-standard.com ಸುದ್ದಿ ಪ್ರಕಟಿಸಿರುವುದು ಲಭ್ಯವಾಗಿದೆ. ಆ ಸುದ್ದಿಯ ಪ್ರಕಾರ, ಮೇ 5ರಂದು ತೆಲಂಗಾಣದ ಗದ್ವಾಲ್‌ನಲ್ಲಿ ನಡೆದ ಸಾರ್ವಜನಿಕ ಸಮಾವೇಶದಲ್ಲಿ ರಾಹುಲ್ ಗಾಂಧಿ ಸಂವಿಧಾನದ ಪ್ರತಿ ಪ್ರದರ್ಶಿಸಿದ್ದಾರೆ.

ರಾಹುಲ್ ಗಾಂಧಿ ಪ್ರದರ್ಶಿಸಿದ ಕೆಂಪು ಬಣ್ಣದ ಹೊದಿಕೆ (ಕವರ್) ಹೊಂದಿರುವ ಸಂವಿಧಾನದ ಪ್ರತಿಯ ಫೋಟೋವನ್ನು ನಾವು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹುಡುಕಿದ್ದೇವೆ. ಈ ವೇಳೆ ಆ ರೀತಿಯ ಹಲವು ಫೋಟೋಗಳು ಕಾಣಿಸಿಕೊಂಡಿವೆ.

ಮಾರ್ಚ್ 3, 2024ರಂದು ಕರ್ನಾಟಕದ ಶಿವಮೊಗ್ಗದಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ರಾಹುಲ್ ಗಾಂಧಿ ಕೆಂಪು ಬಣ್ಣದ ಹೊದಿಕೆ ಹೊಂದಿರುವ ಸಂವಿಧಾನದ ಪ್ರತಿ ತೋರಿಸಿದ್ದರು. ಈ ಕುರಿತು ‘ಹಿಂದೂಸ್ತಾನ್ ಟೈಮ್ಸ್ ಪತ್ರಿಕೆ’ ವರದಿ ಮಾಡಿತ್ತು. ಆ ವರದಿಯಲ್ಲಿ ರಾಹುಲ್ ಗಾಂಧಿ ಪ್ರದರ್ಶಿಸಿದ್ದು, ‘THE CONSTITUTION OF INDIA’ ಎಂದು ಸ್ಪಷ್ಟವಾಗಿ ಬರೆದಿರುವುದನ್ನು ನಾವು ನೋಡಬಹುದು.

‘ಬ್ಯುಸಿನೆಸ್ ಸ್ಟ್ಯಾಂಡರ್ಡ್’ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಅದೇ ಫೋಟೊ ಪ್ರಕಟಿಸಿದ್ದು, ಎಲ್ಲದರಲ್ಲಿಯೂ ‘THE CONSTITUTION OF INDIA’ ಎಂದು ಬರೆದಿರುವುದನ್ನು ನಾವು ನೋಡಬಹುದು.

ರಾಹುಲ್ ಗಾಂಧಿಯವರು ಬಹುತೇಕ ಎಲ್ಲಾ ಸಾರ್ವಜನಿಕ ಸಭೆಗಳಿಗೆ ಕೋಟ್ ಪಾಕೆಟ್ ಎಡಿಷನ್‌ನ ಚಿಕ್ಕ ಗಾತ್ರದ ಭಾರತದ ಸಂವಿಧಾನದ ಪ್ರತಿಯನ್ನು ಕೊಂಡೊಯ್ಯುತ್ತಾರೆ. ‘ನಾವು ಸಂವಿಧಾನವನ್ನು ರಕ್ಷಿಸುತ್ತೇವೆ’ ಎಂದು ಪ್ರಮಾಣ ಮಾಡುತ್ತಾರೆ. ಈ ಕುರಿತು ಗೂಗಲ್‌ನಲ್ಲಿ ಹುಡುಕಿದಾಗ ಹಲವಾರು ಪ್ರಕಾಶನಗಳು ಕೆಂಪು ಮತ್ತು ಕಪ್ಪು ಬಣ್ಣದ ಭಾರತದ ಸಂವಿಧಾನದ ಚಿಕ್ಕಗಾತ್ರದ ಪ್ರತಿಯನ್ನು ಮುದ್ರಿಸಿರುವುದನ್ನು ನೋಡಬಹುದು. ಹಲವಾರು ಆನ್‌ಲೈನ್‌ ಫ್ಲಾಟ್‌ಫಾರಂಗಳಲ್ಲಿ ಅವುಗಳನ್ನು ನಾವು ಕೊಳ್ಳಬಹುದುದಾಗಿದೆ.

ಈ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರಪತಿಯಾಗಿದ್ದ ರಾಮನಾಥ್ ಕೋವಿಂದ್ ಅವರಿಗೆ ಅದೇ ಕೆಂಪು ಬಣ್ಣದ ಹೊದಿಕೆ ಹೊಂದಿರುವ ಸಂವಿಧಾನದ ಪ್ರತಿಯನ್ನು ನೀಡಿದ್ದರು. ಈ ಕುರಿತ ಫೋಟೋಗಳನ್ನು ಮೊಹಮ್ಮದ್ ಝುಬೈರ್ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

ಹಾಗಾಗಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಚೀನಾದ ಸಂವಿಧಾನದ ಪ್ರತಿ ತೋರಿಸಿದ್ದಾರೆಯೇ? ಎಂಬ ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮಾ ಅವರ ಅನುಮಾನ ಅಥವಾ ಪ್ರತಿಪಾದನೆ ಸುಳ್ಳು. ಮೇಲೆ ನಾವು ಉಲ್ಲೇಖಿಸಿದ ಪುರಾವೆಗಳಿಂದ ರಾಹುಲ್ ಪ್ರದರ್ಶಿಸಿರುವುದು ಭಾರತದ ಸಂವಿಧಾನದ ಪ್ರತಿ ಎಂದು ಖಚಿತಪಡಿಸಬಹುದು.

ಇದನ್ನೂ ಓದಿ : FACT CHECK : ‘ಟಿಪ್ಪು ಸುಲ್ತಾನ್’ ಸಿನಿಮಾದಲ್ಲಿ ಶಾರುಖ್ ಖಾನ್ ನಟಿಸಲಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...