Homeಫ್ಯಾಕ್ಟ್‌ಚೆಕ್FACT CHECK : ರಾಹುಲ್ ಗಾಂಧಿ ಪ್ರದರ್ಶಿಸಿದ್ದು 'ಚೀನಾ ಸಂವಿಧಾನದ' ಪ್ರತಿಯಲ್ಲ

FACT CHECK : ರಾಹುಲ್ ಗಾಂಧಿ ಪ್ರದರ್ಶಿಸಿದ್ದು ‘ಚೀನಾ ಸಂವಿಧಾನದ’ ಪ್ರತಿಯಲ್ಲ

- Advertisement -
- Advertisement -

“ಭಾರತದ ಸಂವಿಧಾನದ ಮೂಲ ಪ್ರತಿಯ ಬಣ್ಣ ನೀಲಿಯಾಗಿದೆ. ಚೀನಾದ ಸಂವಿಧಾನದ ಮೂಲ ಪ್ರತಿಯ ಬಣ್ಣ ಕೆಂಪು. ರಾಹುಲ್ ಗಾಂಧಿ ಚೀನಾದ ಸಂವಿಧಾನ ತೋರಿಸಿದ್ದಾರೆಯೇ? ನಾವು ಈ ಬಗ್ಗೆ ಪರಿಶೀಲಿಸಬೇಕಿದೆ” ಎಂದು ಎಕ್ಸ್‌ನಲ್ಲಿ ಬರೆದುಕೊಂಡಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರು, ರಾಹುಲ್ ಗಾಂಧಿ ಸಂವಿಧಾನದ ಪ್ರತಿಯನ್ನು ತೋರಿಸಿರುವ ಫೋಟೋ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಹಿಮಂತ್ ಬಿಸ್ವಾ ಶರ್ಮಾ ಅವರ ಎಕ್ಸ್‌ ಪೋಸ್ಟ್‌ಗೆ ಅಲ್ಲಿಯೇ ಪ್ರತಿಕ್ರಿಯೆ ಕೊಟ್ಟಿರುವ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಝುಬೈರ್ ಅವರು, ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ನಾಯಕ ಅಮಿತ್ ಶಾ ಅವರು ರಾಹುಲ್ ಗಾಂಧಿ ಪ್ರದರ್ಶಿಸಿದ ಬಣ್ಣದ್ದೇ ಸಂವಿಧಾನದ ಪ್ರತಿಯನ್ನು ವ್ಯಕ್ತಿಯೊಬ್ಬರಿಗೆ ನೀಡಿದ ಫೋಟೋ ಹಂಚಿಕೊಂಡಿದ್ದು, “ಹಿಮಂತ್ ಬಿಸ್ವಾ ಶರ್ಮಾ ಅವರೇ ನಿಮ್ಮ ಬಾಸ್ ಅಮಿತ್ ಶಾ ಅವರಲ್ಲಿ ಈ ಬಗ್ಗೆ ಪರಿಶೀಲಿಸಲು ಹೇಳಿ” ಎಂದಿದ್ದಾರೆ. ಈ ಮೂಲಕ ರಾಹುಲ್ ಗಾಂಧಿ ಪ್ರದರ್ಶಿಸಿದ್ದು ಚೀನಾದ ಸಂವಿಧಾನ ಪ್ರತಿಯಲ್ಲ ಎಂದಿದ್ದಾರೆ.

ರಾಹುಲ್ ಗಾಂಧಿ ಸಂವಿಧಾನದ ಪ್ರತಿ ಪ್ರದರ್ಶಿಸಿದ ಫೋಟೋದ ಬಗ್ಗೆ ನಾವು ಗೂಗಲ್‌ನಲ್ಲಿ ಮಾಹಿತಿ ಹುಡುಕಿದಾಗ ಮೇ 6, 2024ರಂದು ಅದೇ ಫೋಟೋ ಬಳಸಿ business-standard.com ಸುದ್ದಿ ಪ್ರಕಟಿಸಿರುವುದು ಲಭ್ಯವಾಗಿದೆ. ಆ ಸುದ್ದಿಯ ಪ್ರಕಾರ, ಮೇ 5ರಂದು ತೆಲಂಗಾಣದ ಗದ್ವಾಲ್‌ನಲ್ಲಿ ನಡೆದ ಸಾರ್ವಜನಿಕ ಸಮಾವೇಶದಲ್ಲಿ ರಾಹುಲ್ ಗಾಂಧಿ ಸಂವಿಧಾನದ ಪ್ರತಿ ಪ್ರದರ್ಶಿಸಿದ್ದಾರೆ.

ರಾಹುಲ್ ಗಾಂಧಿ ಪ್ರದರ್ಶಿಸಿದ ಕೆಂಪು ಬಣ್ಣದ ಹೊದಿಕೆ (ಕವರ್) ಹೊಂದಿರುವ ಸಂವಿಧಾನದ ಪ್ರತಿಯ ಫೋಟೋವನ್ನು ನಾವು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹುಡುಕಿದ್ದೇವೆ. ಈ ವೇಳೆ ಆ ರೀತಿಯ ಹಲವು ಫೋಟೋಗಳು ಕಾಣಿಸಿಕೊಂಡಿವೆ.

ಮಾರ್ಚ್ 3, 2024ರಂದು ಕರ್ನಾಟಕದ ಶಿವಮೊಗ್ಗದಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ರಾಹುಲ್ ಗಾಂಧಿ ಕೆಂಪು ಬಣ್ಣದ ಹೊದಿಕೆ ಹೊಂದಿರುವ ಸಂವಿಧಾನದ ಪ್ರತಿ ತೋರಿಸಿದ್ದರು. ಈ ಕುರಿತು ‘ಹಿಂದೂಸ್ತಾನ್ ಟೈಮ್ಸ್ ಪತ್ರಿಕೆ’ ವರದಿ ಮಾಡಿತ್ತು. ಆ ವರದಿಯಲ್ಲಿ ರಾಹುಲ್ ಗಾಂಧಿ ಪ್ರದರ್ಶಿಸಿದ್ದು, ‘THE CONSTITUTION OF INDIA’ ಎಂದು ಸ್ಪಷ್ಟವಾಗಿ ಬರೆದಿರುವುದನ್ನು ನಾವು ನೋಡಬಹುದು.

‘ಬ್ಯುಸಿನೆಸ್ ಸ್ಟ್ಯಾಂಡರ್ಡ್’ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಅದೇ ಫೋಟೊ ಪ್ರಕಟಿಸಿದ್ದು, ಎಲ್ಲದರಲ್ಲಿಯೂ ‘THE CONSTITUTION OF INDIA’ ಎಂದು ಬರೆದಿರುವುದನ್ನು ನಾವು ನೋಡಬಹುದು.

ರಾಹುಲ್ ಗಾಂಧಿಯವರು ಬಹುತೇಕ ಎಲ್ಲಾ ಸಾರ್ವಜನಿಕ ಸಭೆಗಳಿಗೆ ಕೋಟ್ ಪಾಕೆಟ್ ಎಡಿಷನ್‌ನ ಚಿಕ್ಕ ಗಾತ್ರದ ಭಾರತದ ಸಂವಿಧಾನದ ಪ್ರತಿಯನ್ನು ಕೊಂಡೊಯ್ಯುತ್ತಾರೆ. ‘ನಾವು ಸಂವಿಧಾನವನ್ನು ರಕ್ಷಿಸುತ್ತೇವೆ’ ಎಂದು ಪ್ರಮಾಣ ಮಾಡುತ್ತಾರೆ. ಈ ಕುರಿತು ಗೂಗಲ್‌ನಲ್ಲಿ ಹುಡುಕಿದಾಗ ಹಲವಾರು ಪ್ರಕಾಶನಗಳು ಕೆಂಪು ಮತ್ತು ಕಪ್ಪು ಬಣ್ಣದ ಭಾರತದ ಸಂವಿಧಾನದ ಚಿಕ್ಕಗಾತ್ರದ ಪ್ರತಿಯನ್ನು ಮುದ್ರಿಸಿರುವುದನ್ನು ನೋಡಬಹುದು. ಹಲವಾರು ಆನ್‌ಲೈನ್‌ ಫ್ಲಾಟ್‌ಫಾರಂಗಳಲ್ಲಿ ಅವುಗಳನ್ನು ನಾವು ಕೊಳ್ಳಬಹುದುದಾಗಿದೆ.

ಈ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರಪತಿಯಾಗಿದ್ದ ರಾಮನಾಥ್ ಕೋವಿಂದ್ ಅವರಿಗೆ ಅದೇ ಕೆಂಪು ಬಣ್ಣದ ಹೊದಿಕೆ ಹೊಂದಿರುವ ಸಂವಿಧಾನದ ಪ್ರತಿಯನ್ನು ನೀಡಿದ್ದರು. ಈ ಕುರಿತ ಫೋಟೋಗಳನ್ನು ಮೊಹಮ್ಮದ್ ಝುಬೈರ್ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

ಹಾಗಾಗಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಚೀನಾದ ಸಂವಿಧಾನದ ಪ್ರತಿ ತೋರಿಸಿದ್ದಾರೆಯೇ? ಎಂಬ ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮಾ ಅವರ ಅನುಮಾನ ಅಥವಾ ಪ್ರತಿಪಾದನೆ ಸುಳ್ಳು. ಮೇಲೆ ನಾವು ಉಲ್ಲೇಖಿಸಿದ ಪುರಾವೆಗಳಿಂದ ರಾಹುಲ್ ಪ್ರದರ್ಶಿಸಿರುವುದು ಭಾರತದ ಸಂವಿಧಾನದ ಪ್ರತಿ ಎಂದು ಖಚಿತಪಡಿಸಬಹುದು.

ಇದನ್ನೂ ಓದಿ : FACT CHECK : ‘ಟಿಪ್ಪು ಸುಲ್ತಾನ್’ ಸಿನಿಮಾದಲ್ಲಿ ಶಾರುಖ್ ಖಾನ್ ನಟಿಸಲಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...