Homeಫ್ಯಾಕ್ಟ್‌ಚೆಕ್FACT CHECK : ರಾಹುಲ್ ಗಾಂಧಿ ಹಿಂದೂಗಳಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಎಡಿಟೆಡ್ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

FACT CHECK : ರಾಹುಲ್ ಗಾಂಧಿ ಹಿಂದೂಗಳಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಎಡಿಟೆಡ್ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

“ಅವರು ಏನು ಬೇಕಾದರು ಮಾಡಲಿ. ಆದರೆ, ಒಂದಲ್ಲ ಒಂದು ದಿನ ಬಿಜೆಪಿ ಸರ್ಕಾರ ಬದಲಾಗಲಿದೆ. ಆಗ ನಾವು ಕ್ರಮ ಕೈಗೊಳ್ಳುತ್ತೇವೆ. ಆ ಬಳಿಕ ಮುಂದೆ ಯಾವತ್ತೂ ಆ ರೀತಿ ಆಗುವುದಿಲ್ಲ. ಇದಕ್ಕೆ ನಾನು ಗ್ಯಾರಂಟಿ ಕೊಡುತ್ತೇನೆ” ಎಂಬರ್ಥದಲ್ಲಿ ಕಾಂಗ್ರೆಸ್‌ ಸಂಸದ ಹಾಗೂ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿಕೆ ನೀಡಿರುವ ವಿಡಿಯೋ ಕ್ಲಿಪ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಈ ವಿಡಿಯೋ ಹಂಚಿಕೊಂಡಿರುವ ಕೆಲ ಫೇಸ್‌ಬುಕ್, ಎಕ್ಸ್‌ ಬಳಕೆದಾರರು “ರಾಹುಲ್ ಗಾಂಧಿ ಹಿಂದೂಗಳಿಗೆ ಎಚ್ಚರಿಕೆ ನೀಡುತ್ತಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಜೀವನ್ ಮಹಲ್ಲೆ ಎಂಬ ಫೇಸ್‌ಬುಕ್ ಬಳಕೆದಾರರು ವಿಡಿಯೋ ಹಂಚಿಕೊಂಡು ” ಖಾನ್ ಮೊಮ್ಮಗ ಹಿಂದೂಗಳಿಗೆ ಎಚ್ಚರಿಕೆ ನೀಡುವುದನ್ನು ಕೇಳಿ. ಒಳ್ಳೆಯದು ರಾಹುಲ್ ಬಾಬಾ, ನೀವು ನಿಮ್ಮ ನಿಜವಾದ ಮುಖವನ್ನು ಬಹಿರಂಗಪಡಿಸಿದ್ದೀರಿ. ತಮ್ಮ ಪರಂಪರೆಯನ್ನು ಅಪ್ಪಿಕೊಂಡ ಪ್ರತಿಯೊಬ್ಬ ಹಿಂದೂವೂ ಈ ಹಿಂದೂ ವಿರೋಧಿ, ಸನಾತನ ವಿರೋಧಿ ರಾಹುಲ್ ಖಾನ್ ಅವರನ್ನು ಎದುರಿಸಲು ಸಜ್ಜಾಗಬೇಕು. ಅವರು ಬಹಿರಂಗವಾಗಿ ಬೆದರಿಕೆ ಹಾಕುತ್ತಿದ್ದಾರೆ” ಎಂಬ ಎಂದು ಬರೆದುಕೊಂಡಿದ್ದಾರೆ.

ವಿರಾಜ್ ರೇವಡೇಖರ್ ಎಂಬ ಮತ್ತೊಬ್ಬ ಫೇಸ್‌ಬುಕ್ ಬಳಕೆದಾರ ಕೂಡ ವಿಡಿಯೋ ಹಂಚಿಕೊಂಡು “ಖಾನ್ ಮೊಮ್ಮಗ ಹಿಂದೂಗಳಿಗೆ ಎಚ್ಚರಿಕೆ ನೀಡಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಇದೇ ರೀತಿಯ ಬರಹಗಳೊಂದಿಗೆ ಇನ್ನೂ ಅನೇಕರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ಆಗಿರುವ ರಾಹುಲ್ ಗಾಂಧಿಯವರ ಹೇಳಿಕೆಯ ವಿಡಿಯೋ ಕ್ಲಿಪ್‌ನ ಸತ್ಯಾಸತ್ಯತೆ ತಿಳಿಯಲು ನಾವು ರಾಹುಲ್ ಹೇಳಿಕೆಯ ಮೂಲ ವಿಡಿಯೋ ಹುಡುಕಿದ್ದೇವೆ. ಮಾರ್ಚ್ 29, 2024ರಂದು ರಾಹುಲ್ ಗಾಂಧಿಯವರ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ವಿಡಿಯೋ ಪೋಸ್ಟ್ ಆಗಿರುವುದು ಕಂಡು ಬಂದಿದೆ.

ವಿಡಿಯೋದಲ್ಲಿ “ಸಂಸ್ಥೆಗಳು ಅವರ ಕೆಲಸ ಮಾಡಿದ್ದರೆ, ಸಿಬಿಐ, ಇಡಿ ಅವರ ಕರ್ತವ್ಯ ನಿಭಾಯಿಸಿದ್ದರೆ ಇದು ಆಗುತ್ತಿರಲಿಲ್ಲ. ಇದೆಲ್ಲ ಮಾಡುವವರು ಒಂದು ಯೋಚನೆ ಮಾಡಬೇಕು, ಒಂದಲ್ಲ ಒಂದು ದಿನ ಬಿಜೆಪಿ ಸರ್ಕಾರ ಬದಲಾಗಲಿದೆ. ನಂತರ ಕ್ರಮ ಕೈಗೊಳ್ಳಲಾಗುವುದು. ಆ ಬಳಿಕ ಅದು ಮತ್ತೆ ಎಂದಿಗೂ ಸಂಭವಿಸುವುದಿಲ್ಲ. ಇದಕ್ಕೆ ನಾನು ಗ್ಯಾರಂಟಿ” ಎಂದು ರಾಹುಲ್ ಗಾಂಧಿ ಹೇಳಿರುವುದು ಇದೆ.

ವಿಡಿಯೋ ಜೊತೆಗೆ “ಸರ್ಕಾರ ಬದಲಾದಾಗ ‘ಪ್ರಜಾಪ್ರಭುತ್ವ ವಿಘಟನೆ’ ಮಾಡುವವರ ವಿರುದ್ಧ ಖಂಡಿತ ಕ್ರಮ ಕೈಗೊಳ್ಳಲಾಗುವುದು!. ಇದನ್ನೆಲ್ಲ ಮತ್ತೊಮ್ಮೆ ಮಾಡಲು ಯಾರಿಗೂ ಧೈರ್ಯ ಬರದಂತಹ ಕ್ರಮ ಕೈಗೊಳ್ಳಲಾಗುವುದು. ಇದು ನನ್ನ ಗ್ಯಾರಂಟಿ” ಎಂದು ಬರೆದುಕೊಳ್ಳಲಾಗಿದೆ.

ವಿಡಿಯೋ ಗಮನಿಸಿದಾಗ ರಾಹುಲ್ ಗಾಂಧಿ ಸಿಬಿಐ, ಇಡಿಯಂತಹ ಸಂಸ್ಥೆಗಳ ಕುರಿತು ಮಾತನಾಡಿರುವುದು ನಮಗೆ ಸ್ಪಷ್ಟವಾಗಿದೆ. ಹಾಗಾಗಿ, ರಾಹುಲ್ ಗಾಂಧಿ ಹೇಳಿಕೆಯ ಕುರಿತ ವರದಿಗಳನ್ನು ನಾವು ಹುಡುಕಿದ್ದೇವೆ. ಈ ವೇಳೆ ಹಿಂದೂಸ್ತಾನ್, ಎನ್‌ಡಿಟಿವಿ ಮತ್ತು ಎಬಿಪಿ ನ್ಯೂಸ್ ಲೈವ್‌ ಮಾರ್ಚ್ 29,2024 ರ ಮಾಡಿರುವ ವರದಿಗಳು ಲಭ್ಯವಾಗಿದೆ.

ವರದಿಗಳ ಪ್ರಕಾರ, ಆದಾಯ ತೆರಿಗೆ ಇಲಾಖೆ ಕಾಂಗ್ರೆಸ್ ಪಕ್ಷಕ್ಕೆ ನೀಡಿದ 1,823 ಕೋಟಿ ರೂ.ಗಳ ಬೇಡಿಕೆ ನೋಟಿಸ್‌ಗೆ ಪ್ರತಿಕ್ರಿಯೆಯಾಗಿ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ. ದಂಡ ಮತ್ತು ಬಡ್ಡಿಯನ್ನು ಒಳಗೊಂಡ ಈ ನೋಟಿಸ್ 2017-18 ರಿಂದ 2020-21ರ ಅವಧಿಯನ್ನು ಒಳಗೊಂಡಿದೆ. ಲೋಕಸಭಾ ಚುನಾವಣೆಗೆ ಮುನ್ನ ತೀವ್ರ ನಗದು ಬಿಕ್ಕಟ್ಟನ್ನು ಎದುರಿಸುತ್ತಿದ್ದ ಕಾಂಗ್ರೆಸ್‌ಗೆ ಈ ನೋಟಿಸ್ ದೊಡ್ಡ ಹಿನ್ನಡೆಯಾಗಿತ್ತು.

“ಸರ್ಕಾರ ಬದಲಾದಾಗ, ಪ್ರಜಾಪ್ರಭುತ್ವದ ಮೇಲೆ ದೌರ್ಜನ್ಯ ಎಸಗುವವರ ವಿರುದ್ಧ ಖಂಡಿತವಾಗಿಯೂ ಕ್ರಮ ಕೈಗೊಳ್ಳಲಾಗುವುದು” ಎಂದು ರಾಹುಲ್ ಗಾಂಧಿ ಆದಾಯ ತೆರಿಗೆ ಇಲಾಖೆಯ ನೋಟಿಸ್ ಅನ್ನು ಉದ್ದೇಶಿಸಿ ಹೇಳಿದ್ದರು. “ನಮ್ಮ ಕ್ರಮ ಹೇಗಿರುತ್ತದೆ ಎಂದರೆ ಯಾರೂ ಮತ್ತೆ ಅದನ್ನು ಮಾಡಲು ಧೈರ್ಯ ಮಾಡುವುದಿಲ್ಲ. ನಾನು ಇದನ್ನು ಖಾತರಿಪಡಿಸುತ್ತೇನೆ” ಎಂದಿದ್ದರು.

ಒಟ್ಟಾರೆಯಾಗಿ ಹೇಳುವುದಾರೆ ಬಿಜೆಪಿ ಸರ್ಕಾರದ ಅಣತಿಯಂತೆ ಐಟಿ, ಇಡಿ, ಸಿಬಿಐಗಳು ಕಾಂಗ್ರೆಸ್‌ ಪಕ್ಷವನ್ನು ಗುರಿಯಾಗಿಸುತ್ತಿದೆ. ನೀವುಗಳು ನೆನಪಿಡಿ, ಬಿಜೆಪಿ ಸರ್ಕಾರ ಶಾಸ್ವತವಾಗಿ ಇರುವುದಿಲ್ಲ. ಒಂದಲ್ಲ ಒಂದು ದಿನ ಸರ್ಕಾರ ಬದಲಾಗಲಿದೆ. ಆಗ ನಮ್ಮ ಸರ್ಕಾರ ಬರಲಿದೆ. ನಾವು ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವ ವಿರೋಧಿಯಾಗಿ ಕಾರ್ಯ ನಿರ್ವಹಿಸುವ ಸಂಸ್ಥೆಗಳ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಆ ಕ್ರಮ ಹೇಗಿರುತ್ತದೆ ಎಂದರೆ, ಸಂಸ್ಥೆಗಳು ಮತ್ತೆ ಆ ರೀತಿಯ ತಪ್ಪು ಮಾಡಬಾರದು ಎಂಬರ್ಥದಲ್ಲಿ ರಾಹುಲ್ ಗಾಂಧಿ ಹೇಳಿದ್ದರು. ಈ ಹೇಳಿಕೆಗೆ ಕೋಮು ಬಣ್ಣ ಬಳಿದು, ರಾಹುಲ್ ಗಾಂಧಿ ಹಿಂದೂಗಳಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ : FACT CHECK : ಮನೆಯಿಂದ 60 ಕಿ.ಮೀ. ದೂರದೊಳಗೆ ಟೋಲ್‌ ಬೂತ್ ಇದ್ದರೆ ಟೋಲ್ ಶುಲ್ಕ ಕಟ್ಟುವಂತಿಲ್ಲ ಎಂಬುವುದು ನಿಜಾನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...