Homeಫ್ಯಾಕ್ಟ್‌ಚೆಕ್FACT CHECK : ರಾಹುಲ್ ಗಾಂಧಿ ಹಿಂದೂಗಳಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಎಡಿಟೆಡ್ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

FACT CHECK : ರಾಹುಲ್ ಗಾಂಧಿ ಹಿಂದೂಗಳಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಎಡಿಟೆಡ್ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

“ಅವರು ಏನು ಬೇಕಾದರು ಮಾಡಲಿ. ಆದರೆ, ಒಂದಲ್ಲ ಒಂದು ದಿನ ಬಿಜೆಪಿ ಸರ್ಕಾರ ಬದಲಾಗಲಿದೆ. ಆಗ ನಾವು ಕ್ರಮ ಕೈಗೊಳ್ಳುತ್ತೇವೆ. ಆ ಬಳಿಕ ಮುಂದೆ ಯಾವತ್ತೂ ಆ ರೀತಿ ಆಗುವುದಿಲ್ಲ. ಇದಕ್ಕೆ ನಾನು ಗ್ಯಾರಂಟಿ ಕೊಡುತ್ತೇನೆ” ಎಂಬರ್ಥದಲ್ಲಿ ಕಾಂಗ್ರೆಸ್‌ ಸಂಸದ ಹಾಗೂ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿಕೆ ನೀಡಿರುವ ವಿಡಿಯೋ ಕ್ಲಿಪ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಈ ವಿಡಿಯೋ ಹಂಚಿಕೊಂಡಿರುವ ಕೆಲ ಫೇಸ್‌ಬುಕ್, ಎಕ್ಸ್‌ ಬಳಕೆದಾರರು “ರಾಹುಲ್ ಗಾಂಧಿ ಹಿಂದೂಗಳಿಗೆ ಎಚ್ಚರಿಕೆ ನೀಡುತ್ತಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಜೀವನ್ ಮಹಲ್ಲೆ ಎಂಬ ಫೇಸ್‌ಬುಕ್ ಬಳಕೆದಾರರು ವಿಡಿಯೋ ಹಂಚಿಕೊಂಡು ” ಖಾನ್ ಮೊಮ್ಮಗ ಹಿಂದೂಗಳಿಗೆ ಎಚ್ಚರಿಕೆ ನೀಡುವುದನ್ನು ಕೇಳಿ. ಒಳ್ಳೆಯದು ರಾಹುಲ್ ಬಾಬಾ, ನೀವು ನಿಮ್ಮ ನಿಜವಾದ ಮುಖವನ್ನು ಬಹಿರಂಗಪಡಿಸಿದ್ದೀರಿ. ತಮ್ಮ ಪರಂಪರೆಯನ್ನು ಅಪ್ಪಿಕೊಂಡ ಪ್ರತಿಯೊಬ್ಬ ಹಿಂದೂವೂ ಈ ಹಿಂದೂ ವಿರೋಧಿ, ಸನಾತನ ವಿರೋಧಿ ರಾಹುಲ್ ಖಾನ್ ಅವರನ್ನು ಎದುರಿಸಲು ಸಜ್ಜಾಗಬೇಕು. ಅವರು ಬಹಿರಂಗವಾಗಿ ಬೆದರಿಕೆ ಹಾಕುತ್ತಿದ್ದಾರೆ” ಎಂಬ ಎಂದು ಬರೆದುಕೊಂಡಿದ್ದಾರೆ.

ವಿರಾಜ್ ರೇವಡೇಖರ್ ಎಂಬ ಮತ್ತೊಬ್ಬ ಫೇಸ್‌ಬುಕ್ ಬಳಕೆದಾರ ಕೂಡ ವಿಡಿಯೋ ಹಂಚಿಕೊಂಡು “ಖಾನ್ ಮೊಮ್ಮಗ ಹಿಂದೂಗಳಿಗೆ ಎಚ್ಚರಿಕೆ ನೀಡಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಇದೇ ರೀತಿಯ ಬರಹಗಳೊಂದಿಗೆ ಇನ್ನೂ ಅನೇಕರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ಆಗಿರುವ ರಾಹುಲ್ ಗಾಂಧಿಯವರ ಹೇಳಿಕೆಯ ವಿಡಿಯೋ ಕ್ಲಿಪ್‌ನ ಸತ್ಯಾಸತ್ಯತೆ ತಿಳಿಯಲು ನಾವು ರಾಹುಲ್ ಹೇಳಿಕೆಯ ಮೂಲ ವಿಡಿಯೋ ಹುಡುಕಿದ್ದೇವೆ. ಮಾರ್ಚ್ 29, 2024ರಂದು ರಾಹುಲ್ ಗಾಂಧಿಯವರ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ವಿಡಿಯೋ ಪೋಸ್ಟ್ ಆಗಿರುವುದು ಕಂಡು ಬಂದಿದೆ.

ವಿಡಿಯೋದಲ್ಲಿ “ಸಂಸ್ಥೆಗಳು ಅವರ ಕೆಲಸ ಮಾಡಿದ್ದರೆ, ಸಿಬಿಐ, ಇಡಿ ಅವರ ಕರ್ತವ್ಯ ನಿಭಾಯಿಸಿದ್ದರೆ ಇದು ಆಗುತ್ತಿರಲಿಲ್ಲ. ಇದೆಲ್ಲ ಮಾಡುವವರು ಒಂದು ಯೋಚನೆ ಮಾಡಬೇಕು, ಒಂದಲ್ಲ ಒಂದು ದಿನ ಬಿಜೆಪಿ ಸರ್ಕಾರ ಬದಲಾಗಲಿದೆ. ನಂತರ ಕ್ರಮ ಕೈಗೊಳ್ಳಲಾಗುವುದು. ಆ ಬಳಿಕ ಅದು ಮತ್ತೆ ಎಂದಿಗೂ ಸಂಭವಿಸುವುದಿಲ್ಲ. ಇದಕ್ಕೆ ನಾನು ಗ್ಯಾರಂಟಿ” ಎಂದು ರಾಹುಲ್ ಗಾಂಧಿ ಹೇಳಿರುವುದು ಇದೆ.

ವಿಡಿಯೋ ಜೊತೆಗೆ “ಸರ್ಕಾರ ಬದಲಾದಾಗ ‘ಪ್ರಜಾಪ್ರಭುತ್ವ ವಿಘಟನೆ’ ಮಾಡುವವರ ವಿರುದ್ಧ ಖಂಡಿತ ಕ್ರಮ ಕೈಗೊಳ್ಳಲಾಗುವುದು!. ಇದನ್ನೆಲ್ಲ ಮತ್ತೊಮ್ಮೆ ಮಾಡಲು ಯಾರಿಗೂ ಧೈರ್ಯ ಬರದಂತಹ ಕ್ರಮ ಕೈಗೊಳ್ಳಲಾಗುವುದು. ಇದು ನನ್ನ ಗ್ಯಾರಂಟಿ” ಎಂದು ಬರೆದುಕೊಳ್ಳಲಾಗಿದೆ.

ವಿಡಿಯೋ ಗಮನಿಸಿದಾಗ ರಾಹುಲ್ ಗಾಂಧಿ ಸಿಬಿಐ, ಇಡಿಯಂತಹ ಸಂಸ್ಥೆಗಳ ಕುರಿತು ಮಾತನಾಡಿರುವುದು ನಮಗೆ ಸ್ಪಷ್ಟವಾಗಿದೆ. ಹಾಗಾಗಿ, ರಾಹುಲ್ ಗಾಂಧಿ ಹೇಳಿಕೆಯ ಕುರಿತ ವರದಿಗಳನ್ನು ನಾವು ಹುಡುಕಿದ್ದೇವೆ. ಈ ವೇಳೆ ಹಿಂದೂಸ್ತಾನ್, ಎನ್‌ಡಿಟಿವಿ ಮತ್ತು ಎಬಿಪಿ ನ್ಯೂಸ್ ಲೈವ್‌ ಮಾರ್ಚ್ 29,2024 ರ ಮಾಡಿರುವ ವರದಿಗಳು ಲಭ್ಯವಾಗಿದೆ.

ವರದಿಗಳ ಪ್ರಕಾರ, ಆದಾಯ ತೆರಿಗೆ ಇಲಾಖೆ ಕಾಂಗ್ರೆಸ್ ಪಕ್ಷಕ್ಕೆ ನೀಡಿದ 1,823 ಕೋಟಿ ರೂ.ಗಳ ಬೇಡಿಕೆ ನೋಟಿಸ್‌ಗೆ ಪ್ರತಿಕ್ರಿಯೆಯಾಗಿ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ. ದಂಡ ಮತ್ತು ಬಡ್ಡಿಯನ್ನು ಒಳಗೊಂಡ ಈ ನೋಟಿಸ್ 2017-18 ರಿಂದ 2020-21ರ ಅವಧಿಯನ್ನು ಒಳಗೊಂಡಿದೆ. ಲೋಕಸಭಾ ಚುನಾವಣೆಗೆ ಮುನ್ನ ತೀವ್ರ ನಗದು ಬಿಕ್ಕಟ್ಟನ್ನು ಎದುರಿಸುತ್ತಿದ್ದ ಕಾಂಗ್ರೆಸ್‌ಗೆ ಈ ನೋಟಿಸ್ ದೊಡ್ಡ ಹಿನ್ನಡೆಯಾಗಿತ್ತು.

“ಸರ್ಕಾರ ಬದಲಾದಾಗ, ಪ್ರಜಾಪ್ರಭುತ್ವದ ಮೇಲೆ ದೌರ್ಜನ್ಯ ಎಸಗುವವರ ವಿರುದ್ಧ ಖಂಡಿತವಾಗಿಯೂ ಕ್ರಮ ಕೈಗೊಳ್ಳಲಾಗುವುದು” ಎಂದು ರಾಹುಲ್ ಗಾಂಧಿ ಆದಾಯ ತೆರಿಗೆ ಇಲಾಖೆಯ ನೋಟಿಸ್ ಅನ್ನು ಉದ್ದೇಶಿಸಿ ಹೇಳಿದ್ದರು. “ನಮ್ಮ ಕ್ರಮ ಹೇಗಿರುತ್ತದೆ ಎಂದರೆ ಯಾರೂ ಮತ್ತೆ ಅದನ್ನು ಮಾಡಲು ಧೈರ್ಯ ಮಾಡುವುದಿಲ್ಲ. ನಾನು ಇದನ್ನು ಖಾತರಿಪಡಿಸುತ್ತೇನೆ” ಎಂದಿದ್ದರು.

ಒಟ್ಟಾರೆಯಾಗಿ ಹೇಳುವುದಾರೆ ಬಿಜೆಪಿ ಸರ್ಕಾರದ ಅಣತಿಯಂತೆ ಐಟಿ, ಇಡಿ, ಸಿಬಿಐಗಳು ಕಾಂಗ್ರೆಸ್‌ ಪಕ್ಷವನ್ನು ಗುರಿಯಾಗಿಸುತ್ತಿದೆ. ನೀವುಗಳು ನೆನಪಿಡಿ, ಬಿಜೆಪಿ ಸರ್ಕಾರ ಶಾಸ್ವತವಾಗಿ ಇರುವುದಿಲ್ಲ. ಒಂದಲ್ಲ ಒಂದು ದಿನ ಸರ್ಕಾರ ಬದಲಾಗಲಿದೆ. ಆಗ ನಮ್ಮ ಸರ್ಕಾರ ಬರಲಿದೆ. ನಾವು ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವ ವಿರೋಧಿಯಾಗಿ ಕಾರ್ಯ ನಿರ್ವಹಿಸುವ ಸಂಸ್ಥೆಗಳ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಆ ಕ್ರಮ ಹೇಗಿರುತ್ತದೆ ಎಂದರೆ, ಸಂಸ್ಥೆಗಳು ಮತ್ತೆ ಆ ರೀತಿಯ ತಪ್ಪು ಮಾಡಬಾರದು ಎಂಬರ್ಥದಲ್ಲಿ ರಾಹುಲ್ ಗಾಂಧಿ ಹೇಳಿದ್ದರು. ಈ ಹೇಳಿಕೆಗೆ ಕೋಮು ಬಣ್ಣ ಬಳಿದು, ರಾಹುಲ್ ಗಾಂಧಿ ಹಿಂದೂಗಳಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ : FACT CHECK : ಮನೆಯಿಂದ 60 ಕಿ.ಮೀ. ದೂರದೊಳಗೆ ಟೋಲ್‌ ಬೂತ್ ಇದ್ದರೆ ಟೋಲ್ ಶುಲ್ಕ ಕಟ್ಟುವಂತಿಲ್ಲ ಎಂಬುವುದು ನಿಜಾನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...