Homeಫ್ಯಾಕ್ಟ್‌ಚೆಕ್FACT CHECK : ರಾಹುಲ್ ಗಾಂಧಿ ಹಿಂದೂಗಳಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಎಡಿಟೆಡ್ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

FACT CHECK : ರಾಹುಲ್ ಗಾಂಧಿ ಹಿಂದೂಗಳಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಎಡಿಟೆಡ್ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

“ಅವರು ಏನು ಬೇಕಾದರು ಮಾಡಲಿ. ಆದರೆ, ಒಂದಲ್ಲ ಒಂದು ದಿನ ಬಿಜೆಪಿ ಸರ್ಕಾರ ಬದಲಾಗಲಿದೆ. ಆಗ ನಾವು ಕ್ರಮ ಕೈಗೊಳ್ಳುತ್ತೇವೆ. ಆ ಬಳಿಕ ಮುಂದೆ ಯಾವತ್ತೂ ಆ ರೀತಿ ಆಗುವುದಿಲ್ಲ. ಇದಕ್ಕೆ ನಾನು ಗ್ಯಾರಂಟಿ ಕೊಡುತ್ತೇನೆ” ಎಂಬರ್ಥದಲ್ಲಿ ಕಾಂಗ್ರೆಸ್‌ ಸಂಸದ ಹಾಗೂ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿಕೆ ನೀಡಿರುವ ವಿಡಿಯೋ ಕ್ಲಿಪ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಈ ವಿಡಿಯೋ ಹಂಚಿಕೊಂಡಿರುವ ಕೆಲ ಫೇಸ್‌ಬುಕ್, ಎಕ್ಸ್‌ ಬಳಕೆದಾರರು “ರಾಹುಲ್ ಗಾಂಧಿ ಹಿಂದೂಗಳಿಗೆ ಎಚ್ಚರಿಕೆ ನೀಡುತ್ತಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಜೀವನ್ ಮಹಲ್ಲೆ ಎಂಬ ಫೇಸ್‌ಬುಕ್ ಬಳಕೆದಾರರು ವಿಡಿಯೋ ಹಂಚಿಕೊಂಡು ” ಖಾನ್ ಮೊಮ್ಮಗ ಹಿಂದೂಗಳಿಗೆ ಎಚ್ಚರಿಕೆ ನೀಡುವುದನ್ನು ಕೇಳಿ. ಒಳ್ಳೆಯದು ರಾಹುಲ್ ಬಾಬಾ, ನೀವು ನಿಮ್ಮ ನಿಜವಾದ ಮುಖವನ್ನು ಬಹಿರಂಗಪಡಿಸಿದ್ದೀರಿ. ತಮ್ಮ ಪರಂಪರೆಯನ್ನು ಅಪ್ಪಿಕೊಂಡ ಪ್ರತಿಯೊಬ್ಬ ಹಿಂದೂವೂ ಈ ಹಿಂದೂ ವಿರೋಧಿ, ಸನಾತನ ವಿರೋಧಿ ರಾಹುಲ್ ಖಾನ್ ಅವರನ್ನು ಎದುರಿಸಲು ಸಜ್ಜಾಗಬೇಕು. ಅವರು ಬಹಿರಂಗವಾಗಿ ಬೆದರಿಕೆ ಹಾಕುತ್ತಿದ್ದಾರೆ” ಎಂಬ ಎಂದು ಬರೆದುಕೊಂಡಿದ್ದಾರೆ.

ವಿರಾಜ್ ರೇವಡೇಖರ್ ಎಂಬ ಮತ್ತೊಬ್ಬ ಫೇಸ್‌ಬುಕ್ ಬಳಕೆದಾರ ಕೂಡ ವಿಡಿಯೋ ಹಂಚಿಕೊಂಡು “ಖಾನ್ ಮೊಮ್ಮಗ ಹಿಂದೂಗಳಿಗೆ ಎಚ್ಚರಿಕೆ ನೀಡಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಇದೇ ರೀತಿಯ ಬರಹಗಳೊಂದಿಗೆ ಇನ್ನೂ ಅನೇಕರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ಆಗಿರುವ ರಾಹುಲ್ ಗಾಂಧಿಯವರ ಹೇಳಿಕೆಯ ವಿಡಿಯೋ ಕ್ಲಿಪ್‌ನ ಸತ್ಯಾಸತ್ಯತೆ ತಿಳಿಯಲು ನಾವು ರಾಹುಲ್ ಹೇಳಿಕೆಯ ಮೂಲ ವಿಡಿಯೋ ಹುಡುಕಿದ್ದೇವೆ. ಮಾರ್ಚ್ 29, 2024ರಂದು ರಾಹುಲ್ ಗಾಂಧಿಯವರ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ವಿಡಿಯೋ ಪೋಸ್ಟ್ ಆಗಿರುವುದು ಕಂಡು ಬಂದಿದೆ.

ವಿಡಿಯೋದಲ್ಲಿ “ಸಂಸ್ಥೆಗಳು ಅವರ ಕೆಲಸ ಮಾಡಿದ್ದರೆ, ಸಿಬಿಐ, ಇಡಿ ಅವರ ಕರ್ತವ್ಯ ನಿಭಾಯಿಸಿದ್ದರೆ ಇದು ಆಗುತ್ತಿರಲಿಲ್ಲ. ಇದೆಲ್ಲ ಮಾಡುವವರು ಒಂದು ಯೋಚನೆ ಮಾಡಬೇಕು, ಒಂದಲ್ಲ ಒಂದು ದಿನ ಬಿಜೆಪಿ ಸರ್ಕಾರ ಬದಲಾಗಲಿದೆ. ನಂತರ ಕ್ರಮ ಕೈಗೊಳ್ಳಲಾಗುವುದು. ಆ ಬಳಿಕ ಅದು ಮತ್ತೆ ಎಂದಿಗೂ ಸಂಭವಿಸುವುದಿಲ್ಲ. ಇದಕ್ಕೆ ನಾನು ಗ್ಯಾರಂಟಿ” ಎಂದು ರಾಹುಲ್ ಗಾಂಧಿ ಹೇಳಿರುವುದು ಇದೆ.

ವಿಡಿಯೋ ಜೊತೆಗೆ “ಸರ್ಕಾರ ಬದಲಾದಾಗ ‘ಪ್ರಜಾಪ್ರಭುತ್ವ ವಿಘಟನೆ’ ಮಾಡುವವರ ವಿರುದ್ಧ ಖಂಡಿತ ಕ್ರಮ ಕೈಗೊಳ್ಳಲಾಗುವುದು!. ಇದನ್ನೆಲ್ಲ ಮತ್ತೊಮ್ಮೆ ಮಾಡಲು ಯಾರಿಗೂ ಧೈರ್ಯ ಬರದಂತಹ ಕ್ರಮ ಕೈಗೊಳ್ಳಲಾಗುವುದು. ಇದು ನನ್ನ ಗ್ಯಾರಂಟಿ” ಎಂದು ಬರೆದುಕೊಳ್ಳಲಾಗಿದೆ.

ವಿಡಿಯೋ ಗಮನಿಸಿದಾಗ ರಾಹುಲ್ ಗಾಂಧಿ ಸಿಬಿಐ, ಇಡಿಯಂತಹ ಸಂಸ್ಥೆಗಳ ಕುರಿತು ಮಾತನಾಡಿರುವುದು ನಮಗೆ ಸ್ಪಷ್ಟವಾಗಿದೆ. ಹಾಗಾಗಿ, ರಾಹುಲ್ ಗಾಂಧಿ ಹೇಳಿಕೆಯ ಕುರಿತ ವರದಿಗಳನ್ನು ನಾವು ಹುಡುಕಿದ್ದೇವೆ. ಈ ವೇಳೆ ಹಿಂದೂಸ್ತಾನ್, ಎನ್‌ಡಿಟಿವಿ ಮತ್ತು ಎಬಿಪಿ ನ್ಯೂಸ್ ಲೈವ್‌ ಮಾರ್ಚ್ 29,2024 ರ ಮಾಡಿರುವ ವರದಿಗಳು ಲಭ್ಯವಾಗಿದೆ.

ವರದಿಗಳ ಪ್ರಕಾರ, ಆದಾಯ ತೆರಿಗೆ ಇಲಾಖೆ ಕಾಂಗ್ರೆಸ್ ಪಕ್ಷಕ್ಕೆ ನೀಡಿದ 1,823 ಕೋಟಿ ರೂ.ಗಳ ಬೇಡಿಕೆ ನೋಟಿಸ್‌ಗೆ ಪ್ರತಿಕ್ರಿಯೆಯಾಗಿ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ. ದಂಡ ಮತ್ತು ಬಡ್ಡಿಯನ್ನು ಒಳಗೊಂಡ ಈ ನೋಟಿಸ್ 2017-18 ರಿಂದ 2020-21ರ ಅವಧಿಯನ್ನು ಒಳಗೊಂಡಿದೆ. ಲೋಕಸಭಾ ಚುನಾವಣೆಗೆ ಮುನ್ನ ತೀವ್ರ ನಗದು ಬಿಕ್ಕಟ್ಟನ್ನು ಎದುರಿಸುತ್ತಿದ್ದ ಕಾಂಗ್ರೆಸ್‌ಗೆ ಈ ನೋಟಿಸ್ ದೊಡ್ಡ ಹಿನ್ನಡೆಯಾಗಿತ್ತು.

“ಸರ್ಕಾರ ಬದಲಾದಾಗ, ಪ್ರಜಾಪ್ರಭುತ್ವದ ಮೇಲೆ ದೌರ್ಜನ್ಯ ಎಸಗುವವರ ವಿರುದ್ಧ ಖಂಡಿತವಾಗಿಯೂ ಕ್ರಮ ಕೈಗೊಳ್ಳಲಾಗುವುದು” ಎಂದು ರಾಹುಲ್ ಗಾಂಧಿ ಆದಾಯ ತೆರಿಗೆ ಇಲಾಖೆಯ ನೋಟಿಸ್ ಅನ್ನು ಉದ್ದೇಶಿಸಿ ಹೇಳಿದ್ದರು. “ನಮ್ಮ ಕ್ರಮ ಹೇಗಿರುತ್ತದೆ ಎಂದರೆ ಯಾರೂ ಮತ್ತೆ ಅದನ್ನು ಮಾಡಲು ಧೈರ್ಯ ಮಾಡುವುದಿಲ್ಲ. ನಾನು ಇದನ್ನು ಖಾತರಿಪಡಿಸುತ್ತೇನೆ” ಎಂದಿದ್ದರು.

ಒಟ್ಟಾರೆಯಾಗಿ ಹೇಳುವುದಾರೆ ಬಿಜೆಪಿ ಸರ್ಕಾರದ ಅಣತಿಯಂತೆ ಐಟಿ, ಇಡಿ, ಸಿಬಿಐಗಳು ಕಾಂಗ್ರೆಸ್‌ ಪಕ್ಷವನ್ನು ಗುರಿಯಾಗಿಸುತ್ತಿದೆ. ನೀವುಗಳು ನೆನಪಿಡಿ, ಬಿಜೆಪಿ ಸರ್ಕಾರ ಶಾಸ್ವತವಾಗಿ ಇರುವುದಿಲ್ಲ. ಒಂದಲ್ಲ ಒಂದು ದಿನ ಸರ್ಕಾರ ಬದಲಾಗಲಿದೆ. ಆಗ ನಮ್ಮ ಸರ್ಕಾರ ಬರಲಿದೆ. ನಾವು ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವ ವಿರೋಧಿಯಾಗಿ ಕಾರ್ಯ ನಿರ್ವಹಿಸುವ ಸಂಸ್ಥೆಗಳ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಆ ಕ್ರಮ ಹೇಗಿರುತ್ತದೆ ಎಂದರೆ, ಸಂಸ್ಥೆಗಳು ಮತ್ತೆ ಆ ರೀತಿಯ ತಪ್ಪು ಮಾಡಬಾರದು ಎಂಬರ್ಥದಲ್ಲಿ ರಾಹುಲ್ ಗಾಂಧಿ ಹೇಳಿದ್ದರು. ಈ ಹೇಳಿಕೆಗೆ ಕೋಮು ಬಣ್ಣ ಬಳಿದು, ರಾಹುಲ್ ಗಾಂಧಿ ಹಿಂದೂಗಳಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ : FACT CHECK : ಮನೆಯಿಂದ 60 ಕಿ.ಮೀ. ದೂರದೊಳಗೆ ಟೋಲ್‌ ಬೂತ್ ಇದ್ದರೆ ಟೋಲ್ ಶುಲ್ಕ ಕಟ್ಟುವಂತಿಲ್ಲ ಎಂಬುವುದು ನಿಜಾನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...