Homeಫ್ಯಾಕ್ಟ್‌ಚೆಕ್FACT CHECK : ರಾಹುಲ್ ಗಾಂಧಿ ಹಿಂದೂಗಳಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಎಡಿಟೆಡ್ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

FACT CHECK : ರಾಹುಲ್ ಗಾಂಧಿ ಹಿಂದೂಗಳಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಎಡಿಟೆಡ್ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

“ಅವರು ಏನು ಬೇಕಾದರು ಮಾಡಲಿ. ಆದರೆ, ಒಂದಲ್ಲ ಒಂದು ದಿನ ಬಿಜೆಪಿ ಸರ್ಕಾರ ಬದಲಾಗಲಿದೆ. ಆಗ ನಾವು ಕ್ರಮ ಕೈಗೊಳ್ಳುತ್ತೇವೆ. ಆ ಬಳಿಕ ಮುಂದೆ ಯಾವತ್ತೂ ಆ ರೀತಿ ಆಗುವುದಿಲ್ಲ. ಇದಕ್ಕೆ ನಾನು ಗ್ಯಾರಂಟಿ ಕೊಡುತ್ತೇನೆ” ಎಂಬರ್ಥದಲ್ಲಿ ಕಾಂಗ್ರೆಸ್‌ ಸಂಸದ ಹಾಗೂ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿಕೆ ನೀಡಿರುವ ವಿಡಿಯೋ ಕ್ಲಿಪ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಈ ವಿಡಿಯೋ ಹಂಚಿಕೊಂಡಿರುವ ಕೆಲ ಫೇಸ್‌ಬುಕ್, ಎಕ್ಸ್‌ ಬಳಕೆದಾರರು “ರಾಹುಲ್ ಗಾಂಧಿ ಹಿಂದೂಗಳಿಗೆ ಎಚ್ಚರಿಕೆ ನೀಡುತ್ತಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಜೀವನ್ ಮಹಲ್ಲೆ ಎಂಬ ಫೇಸ್‌ಬುಕ್ ಬಳಕೆದಾರರು ವಿಡಿಯೋ ಹಂಚಿಕೊಂಡು ” ಖಾನ್ ಮೊಮ್ಮಗ ಹಿಂದೂಗಳಿಗೆ ಎಚ್ಚರಿಕೆ ನೀಡುವುದನ್ನು ಕೇಳಿ. ಒಳ್ಳೆಯದು ರಾಹುಲ್ ಬಾಬಾ, ನೀವು ನಿಮ್ಮ ನಿಜವಾದ ಮುಖವನ್ನು ಬಹಿರಂಗಪಡಿಸಿದ್ದೀರಿ. ತಮ್ಮ ಪರಂಪರೆಯನ್ನು ಅಪ್ಪಿಕೊಂಡ ಪ್ರತಿಯೊಬ್ಬ ಹಿಂದೂವೂ ಈ ಹಿಂದೂ ವಿರೋಧಿ, ಸನಾತನ ವಿರೋಧಿ ರಾಹುಲ್ ಖಾನ್ ಅವರನ್ನು ಎದುರಿಸಲು ಸಜ್ಜಾಗಬೇಕು. ಅವರು ಬಹಿರಂಗವಾಗಿ ಬೆದರಿಕೆ ಹಾಕುತ್ತಿದ್ದಾರೆ” ಎಂಬ ಎಂದು ಬರೆದುಕೊಂಡಿದ್ದಾರೆ.

ವಿರಾಜ್ ರೇವಡೇಖರ್ ಎಂಬ ಮತ್ತೊಬ್ಬ ಫೇಸ್‌ಬುಕ್ ಬಳಕೆದಾರ ಕೂಡ ವಿಡಿಯೋ ಹಂಚಿಕೊಂಡು “ಖಾನ್ ಮೊಮ್ಮಗ ಹಿಂದೂಗಳಿಗೆ ಎಚ್ಚರಿಕೆ ನೀಡಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಇದೇ ರೀತಿಯ ಬರಹಗಳೊಂದಿಗೆ ಇನ್ನೂ ಅನೇಕರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ಆಗಿರುವ ರಾಹುಲ್ ಗಾಂಧಿಯವರ ಹೇಳಿಕೆಯ ವಿಡಿಯೋ ಕ್ಲಿಪ್‌ನ ಸತ್ಯಾಸತ್ಯತೆ ತಿಳಿಯಲು ನಾವು ರಾಹುಲ್ ಹೇಳಿಕೆಯ ಮೂಲ ವಿಡಿಯೋ ಹುಡುಕಿದ್ದೇವೆ. ಮಾರ್ಚ್ 29, 2024ರಂದು ರಾಹುಲ್ ಗಾಂಧಿಯವರ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ವಿಡಿಯೋ ಪೋಸ್ಟ್ ಆಗಿರುವುದು ಕಂಡು ಬಂದಿದೆ.

ವಿಡಿಯೋದಲ್ಲಿ “ಸಂಸ್ಥೆಗಳು ಅವರ ಕೆಲಸ ಮಾಡಿದ್ದರೆ, ಸಿಬಿಐ, ಇಡಿ ಅವರ ಕರ್ತವ್ಯ ನಿಭಾಯಿಸಿದ್ದರೆ ಇದು ಆಗುತ್ತಿರಲಿಲ್ಲ. ಇದೆಲ್ಲ ಮಾಡುವವರು ಒಂದು ಯೋಚನೆ ಮಾಡಬೇಕು, ಒಂದಲ್ಲ ಒಂದು ದಿನ ಬಿಜೆಪಿ ಸರ್ಕಾರ ಬದಲಾಗಲಿದೆ. ನಂತರ ಕ್ರಮ ಕೈಗೊಳ್ಳಲಾಗುವುದು. ಆ ಬಳಿಕ ಅದು ಮತ್ತೆ ಎಂದಿಗೂ ಸಂಭವಿಸುವುದಿಲ್ಲ. ಇದಕ್ಕೆ ನಾನು ಗ್ಯಾರಂಟಿ” ಎಂದು ರಾಹುಲ್ ಗಾಂಧಿ ಹೇಳಿರುವುದು ಇದೆ.

ವಿಡಿಯೋ ಜೊತೆಗೆ “ಸರ್ಕಾರ ಬದಲಾದಾಗ ‘ಪ್ರಜಾಪ್ರಭುತ್ವ ವಿಘಟನೆ’ ಮಾಡುವವರ ವಿರುದ್ಧ ಖಂಡಿತ ಕ್ರಮ ಕೈಗೊಳ್ಳಲಾಗುವುದು!. ಇದನ್ನೆಲ್ಲ ಮತ್ತೊಮ್ಮೆ ಮಾಡಲು ಯಾರಿಗೂ ಧೈರ್ಯ ಬರದಂತಹ ಕ್ರಮ ಕೈಗೊಳ್ಳಲಾಗುವುದು. ಇದು ನನ್ನ ಗ್ಯಾರಂಟಿ” ಎಂದು ಬರೆದುಕೊಳ್ಳಲಾಗಿದೆ.

ವಿಡಿಯೋ ಗಮನಿಸಿದಾಗ ರಾಹುಲ್ ಗಾಂಧಿ ಸಿಬಿಐ, ಇಡಿಯಂತಹ ಸಂಸ್ಥೆಗಳ ಕುರಿತು ಮಾತನಾಡಿರುವುದು ನಮಗೆ ಸ್ಪಷ್ಟವಾಗಿದೆ. ಹಾಗಾಗಿ, ರಾಹುಲ್ ಗಾಂಧಿ ಹೇಳಿಕೆಯ ಕುರಿತ ವರದಿಗಳನ್ನು ನಾವು ಹುಡುಕಿದ್ದೇವೆ. ಈ ವೇಳೆ ಹಿಂದೂಸ್ತಾನ್, ಎನ್‌ಡಿಟಿವಿ ಮತ್ತು ಎಬಿಪಿ ನ್ಯೂಸ್ ಲೈವ್‌ ಮಾರ್ಚ್ 29,2024 ರ ಮಾಡಿರುವ ವರದಿಗಳು ಲಭ್ಯವಾಗಿದೆ.

ವರದಿಗಳ ಪ್ರಕಾರ, ಆದಾಯ ತೆರಿಗೆ ಇಲಾಖೆ ಕಾಂಗ್ರೆಸ್ ಪಕ್ಷಕ್ಕೆ ನೀಡಿದ 1,823 ಕೋಟಿ ರೂ.ಗಳ ಬೇಡಿಕೆ ನೋಟಿಸ್‌ಗೆ ಪ್ರತಿಕ್ರಿಯೆಯಾಗಿ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ. ದಂಡ ಮತ್ತು ಬಡ್ಡಿಯನ್ನು ಒಳಗೊಂಡ ಈ ನೋಟಿಸ್ 2017-18 ರಿಂದ 2020-21ರ ಅವಧಿಯನ್ನು ಒಳಗೊಂಡಿದೆ. ಲೋಕಸಭಾ ಚುನಾವಣೆಗೆ ಮುನ್ನ ತೀವ್ರ ನಗದು ಬಿಕ್ಕಟ್ಟನ್ನು ಎದುರಿಸುತ್ತಿದ್ದ ಕಾಂಗ್ರೆಸ್‌ಗೆ ಈ ನೋಟಿಸ್ ದೊಡ್ಡ ಹಿನ್ನಡೆಯಾಗಿತ್ತು.

“ಸರ್ಕಾರ ಬದಲಾದಾಗ, ಪ್ರಜಾಪ್ರಭುತ್ವದ ಮೇಲೆ ದೌರ್ಜನ್ಯ ಎಸಗುವವರ ವಿರುದ್ಧ ಖಂಡಿತವಾಗಿಯೂ ಕ್ರಮ ಕೈಗೊಳ್ಳಲಾಗುವುದು” ಎಂದು ರಾಹುಲ್ ಗಾಂಧಿ ಆದಾಯ ತೆರಿಗೆ ಇಲಾಖೆಯ ನೋಟಿಸ್ ಅನ್ನು ಉದ್ದೇಶಿಸಿ ಹೇಳಿದ್ದರು. “ನಮ್ಮ ಕ್ರಮ ಹೇಗಿರುತ್ತದೆ ಎಂದರೆ ಯಾರೂ ಮತ್ತೆ ಅದನ್ನು ಮಾಡಲು ಧೈರ್ಯ ಮಾಡುವುದಿಲ್ಲ. ನಾನು ಇದನ್ನು ಖಾತರಿಪಡಿಸುತ್ತೇನೆ” ಎಂದಿದ್ದರು.

ಒಟ್ಟಾರೆಯಾಗಿ ಹೇಳುವುದಾರೆ ಬಿಜೆಪಿ ಸರ್ಕಾರದ ಅಣತಿಯಂತೆ ಐಟಿ, ಇಡಿ, ಸಿಬಿಐಗಳು ಕಾಂಗ್ರೆಸ್‌ ಪಕ್ಷವನ್ನು ಗುರಿಯಾಗಿಸುತ್ತಿದೆ. ನೀವುಗಳು ನೆನಪಿಡಿ, ಬಿಜೆಪಿ ಸರ್ಕಾರ ಶಾಸ್ವತವಾಗಿ ಇರುವುದಿಲ್ಲ. ಒಂದಲ್ಲ ಒಂದು ದಿನ ಸರ್ಕಾರ ಬದಲಾಗಲಿದೆ. ಆಗ ನಮ್ಮ ಸರ್ಕಾರ ಬರಲಿದೆ. ನಾವು ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವ ವಿರೋಧಿಯಾಗಿ ಕಾರ್ಯ ನಿರ್ವಹಿಸುವ ಸಂಸ್ಥೆಗಳ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಆ ಕ್ರಮ ಹೇಗಿರುತ್ತದೆ ಎಂದರೆ, ಸಂಸ್ಥೆಗಳು ಮತ್ತೆ ಆ ರೀತಿಯ ತಪ್ಪು ಮಾಡಬಾರದು ಎಂಬರ್ಥದಲ್ಲಿ ರಾಹುಲ್ ಗಾಂಧಿ ಹೇಳಿದ್ದರು. ಈ ಹೇಳಿಕೆಗೆ ಕೋಮು ಬಣ್ಣ ಬಳಿದು, ರಾಹುಲ್ ಗಾಂಧಿ ಹಿಂದೂಗಳಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ : FACT CHECK : ಮನೆಯಿಂದ 60 ಕಿ.ಮೀ. ದೂರದೊಳಗೆ ಟೋಲ್‌ ಬೂತ್ ಇದ್ದರೆ ಟೋಲ್ ಶುಲ್ಕ ಕಟ್ಟುವಂತಿಲ್ಲ ಎಂಬುವುದು ನಿಜಾನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...