Homeಫ್ಯಾಕ್ಟ್‌ಚೆಕ್FACT CHECK | ಶೀಘ್ರದಲ್ಲೇ ಆರ್‌ಬಿಐನಿಂದ 5 ಸಾವಿರ ರೂಪಾಯಿಯ ಹೊಸ ನೋಟು ಬಿಡುಗಡೆ?..ಈ ಸ್ಟೋರಿ...

FACT CHECK | ಶೀಘ್ರದಲ್ಲೇ ಆರ್‌ಬಿಐನಿಂದ 5 ಸಾವಿರ ರೂಪಾಯಿಯ ಹೊಸ ನೋಟು ಬಿಡುಗಡೆ?..ಈ ಸ್ಟೋರಿ ಓದಿ

- Advertisement -
- Advertisement -

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಶೀಘ್ರದಲ್ಲೇ 5,000 ರೂಪಾಯಿ ಮುಖಬೆಲೆಯ ಕರೆನ್ಸಿ ನೋಟನ್ನು ಬಿಡುಗಡೆ ಮಾಡಲಿದೆ ಎಂದು ಫೋಟೋವೊಂದು ವೈರಲ್ ಆಗಿದೆ.

ಫೇಸ್‌ಬುಕ್ ಮತ್ತು ಥ್ರೆಡ್‌ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಈ ಫೋಟೋವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಅವುಗಳನ್ನು ಇಲ್ಲಿ, ಇಲ್ಲಿ, ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್ : ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಭಾರತದಲ್ಲಿ ಕರೆನ್ಸಿ ನೋಟುಗಳ ಮುದ್ರಣ ಮತ್ತು ಪ್ರಸಾರದ ಅಧಿಕಾರ ಹೊಂದಿದೆ. ಯಾವುದೇ ಹೊಸ ಕರೆನ್ಸಿ ನೋಟು ಮುದ್ರಿಸಿ ಮಾರುಕಟ್ಟೆಗೆ ಬಿಡುವುದಾದರೆ, ಅಥವಾ ಚಾಲ್ತಿಯಲ್ಲಿರುವ ನೋಟು ಹಿಂಪಡೆಯುವುದಾದರೆ ಅದಕ್ಕೂ ಮುನ್ನ ಆರ್‌ಬಿಐ ಗವರ್ನರ್ ಸುದ್ದಿಗೋಷ್ಠಿ ಕರೆದು ಜನರಿಗೆ ಮಾಹಿತಿ ನೀಡುತ್ತಾರೆ.

ನಮಗೆ ಲಭ್ಯವಾದ ಮಾಹಿತಿ ಪ್ರಕಾರ, ಆರ್‌ಬಿಐ 5,000 ರೂ. ಮುಖಬೆಲೆಯ ಕರೆನ್ಸಿ ನೋಟುಗಳನ್ನು ಬಿಡುಗಡೆ ಮಾಡುತ್ತಿರುವ ಬಗ್ಗೆ ಯಾವುದೇ ಮಾಹಿತಿಯನ್ನು ಇದುವರೆಗೆ ನೀಡಿಲ್ಲ.

ಆರ್‌ಬಿಐನ ಅಧಿಕೃತ ವೆಬ್‌ಸೈಟ್‌ನಲ್ಲಿ ಈ ಕುರಿತು ಯಾವುದೇ ಪತ್ರಿಕಾ ಪ್ರಕಟಣೆ ಕಂಡು ಬಂದಿಲ್ಲ.

ಜನವರಿ 1ರ ಆರ್‌ಬಿಐ ಪತ್ರಿಕಾ ಪ್ರಕಟಣೆ

ಜನವರಿ 1ರಂದು ಆರ್‌ಬಿಐ ಹೊರಡಿಸಿದ ಪತ್ರಿಕಾ ಪ್ರಕಟನೆಯೊಂದರಲ್ಲಿ ರೂ. 2000 ಮುಖ ಬೆಲೆಯ ಕರೆನ್ಸಿ ನೋಟುಗಳ ಹಿಂಪಡೆಯುವಿಕೆಯ ಸ್ಥಿತಿಯ ಕುರಿತು ಮಾಹಿತಿ ನೀಡಿದೆ.

ಮೇ 19, 2023ರಂತೆ ಚಲಾವಣೆಯಲ್ಲಿರುವ ಸುಮಾರು 98.12 ಶೇಖಡ 2000 ಮುಖಬೆಲೆಯ ಕರೆನ್ಸಿ ನೋಟುಗಳನ್ನು ವಾಪಸ್ ಪಡೆಯಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ವೆಬ್‌ಸೈಟ್‌ನಲ್ಲಿ ಪದೇ ಪದೇ ಕೇಳಲಾಗುವ ಪ್ರಶ್ನೆ (FAQ)ವಿಭಾಗದಲ್ಲಿ ಪ್ರಸ್ತುತ ರೂ. 10, ರೂ. 20, ರೂ. 50, ರೂ. 100, ರೂ. 200, ರೂ. 500 ಮತ್ತು ರೂ. 2000 ಮುಖಬೆಲೆಯ ನೋಟುಗಳನ್ನು ಚಾಲ್ತಿಯಲ್ಲಿದೆ ಎಂದು ಸ್ಪಷ್ಟವಾಗಿ ಹೇಳಲಾಗಿದೆ.

ಜನವರಿ 1ರ ಆರ್‌ಬಿಐ ಪತ್ರಿಕಾ ಪ್ರಕಟಣೆ

ಆರ್‌ಬಿಐ ವೆಬ್‌ಸೈಟ್‌ನಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಕರೆನ್ಸಿ ನೋಟುಗಳ ಚಿತ್ರವನ್ನು ಪ್ರಕಟಿಸಲಾಗಿದೆ. ಅದರಲ್ಲೂ 5 ಸಾವಿರ ಮುಖಬೆಲೆಯ ನೋಟಿನ ಚಿತ್ರ ಕಂಡು ಬಂದಿಲ್ಲ.

ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಧೀನಲ್ಲಿ ಕಾರ್ಯಾಚರಿಸುವ ಪ್ರೆಸ್ ಇನ್ಫರ್ಮೇಶನ್ ಬ್ಯೂರೋ (ಪಿಐಬಿ) ಕೂಡ ಜನವರಿ 4ರಂದು ತನ್ನ ಎಕ್ಸ್‌ ಖಾತೆಯಲ್ಲಿ ಈ ಸಂಬಂಧ ಸ್ಪಷ್ಟನೆ ಕೊಟ್ಟಿದ್ದು, “ಆರ್‌ಬಿಐ 5 ಸಾವಿರ ಮುಖಬೆಲೆಯ ಕರೆನ್ಸಿ ನೋಟು ಬಿಡುಗಡೆ ಮಾಡುತ್ತಿದೆ” ಎಂಬ ಸುದ್ದಿ ಸುಳ್ಳು ಎಂದಿದೆ.

ಯಾವುದೇ ಮುಖ್ಯವಾಹಿನಿ ಮಾಧ್ಯಮಗಳು ಕೂಡ 5 ಸಾವಿರ ಮುಖ ಬೆಲೆಯ ಕರೆನ್ಸಿ ನೋಟುಗಳನ್ನು ಬಿಡುಗಡೆ ಮಾಡುವ ಕುರಿತು ವರದಿ ಮಾಡಿಲ್ಲ.

ನಾವು ನಡೆಸಿದ ಪರಿಶೀಲನೆಯಲ್ಲಿ ಶೀಘ್ರದಲ್ಲೇ ರೂ. 5 ಸಾವಿರ ಮುಖಬೆಲೆಯ ಕರೆನ್ಸಿ ನೋಟುಗಳು ಬಿಡುಗಡೆಯಾಗಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು ಎಂದು ತಿಳಿದು ಬಂದಿದೆ.

FACT CHECK : ಅಜ್ಮೀರ್ ದರ್ಗಾ ವಿರುದ್ಧ ಪಂಜಿನ ಮೆರವಣಿಗೆ ವೇಳೆ ಬೆಂಕಿ ಅವಘಡ..ವೈರಲ್ ವಿಡಿಯೋದ ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...