Homeಫ್ಯಾಕ್ಟ್‌ಚೆಕ್FACT CHECK | ಶೀಘ್ರದಲ್ಲೇ ಆರ್‌ಬಿಐನಿಂದ 5 ಸಾವಿರ ರೂಪಾಯಿಯ ಹೊಸ ನೋಟು ಬಿಡುಗಡೆ?..ಈ ಸ್ಟೋರಿ...

FACT CHECK | ಶೀಘ್ರದಲ್ಲೇ ಆರ್‌ಬಿಐನಿಂದ 5 ಸಾವಿರ ರೂಪಾಯಿಯ ಹೊಸ ನೋಟು ಬಿಡುಗಡೆ?..ಈ ಸ್ಟೋರಿ ಓದಿ

- Advertisement -
- Advertisement -

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಶೀಘ್ರದಲ್ಲೇ 5,000 ರೂಪಾಯಿ ಮುಖಬೆಲೆಯ ಕರೆನ್ಸಿ ನೋಟನ್ನು ಬಿಡುಗಡೆ ಮಾಡಲಿದೆ ಎಂದು ಫೋಟೋವೊಂದು ವೈರಲ್ ಆಗಿದೆ.

ಫೇಸ್‌ಬುಕ್ ಮತ್ತು ಥ್ರೆಡ್‌ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಈ ಫೋಟೋವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಅವುಗಳನ್ನು ಇಲ್ಲಿ, ಇಲ್ಲಿ, ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್ : ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಭಾರತದಲ್ಲಿ ಕರೆನ್ಸಿ ನೋಟುಗಳ ಮುದ್ರಣ ಮತ್ತು ಪ್ರಸಾರದ ಅಧಿಕಾರ ಹೊಂದಿದೆ. ಯಾವುದೇ ಹೊಸ ಕರೆನ್ಸಿ ನೋಟು ಮುದ್ರಿಸಿ ಮಾರುಕಟ್ಟೆಗೆ ಬಿಡುವುದಾದರೆ, ಅಥವಾ ಚಾಲ್ತಿಯಲ್ಲಿರುವ ನೋಟು ಹಿಂಪಡೆಯುವುದಾದರೆ ಅದಕ್ಕೂ ಮುನ್ನ ಆರ್‌ಬಿಐ ಗವರ್ನರ್ ಸುದ್ದಿಗೋಷ್ಠಿ ಕರೆದು ಜನರಿಗೆ ಮಾಹಿತಿ ನೀಡುತ್ತಾರೆ.

ನಮಗೆ ಲಭ್ಯವಾದ ಮಾಹಿತಿ ಪ್ರಕಾರ, ಆರ್‌ಬಿಐ 5,000 ರೂ. ಮುಖಬೆಲೆಯ ಕರೆನ್ಸಿ ನೋಟುಗಳನ್ನು ಬಿಡುಗಡೆ ಮಾಡುತ್ತಿರುವ ಬಗ್ಗೆ ಯಾವುದೇ ಮಾಹಿತಿಯನ್ನು ಇದುವರೆಗೆ ನೀಡಿಲ್ಲ.

ಆರ್‌ಬಿಐನ ಅಧಿಕೃತ ವೆಬ್‌ಸೈಟ್‌ನಲ್ಲಿ ಈ ಕುರಿತು ಯಾವುದೇ ಪತ್ರಿಕಾ ಪ್ರಕಟಣೆ ಕಂಡು ಬಂದಿಲ್ಲ.

ಜನವರಿ 1ರ ಆರ್‌ಬಿಐ ಪತ್ರಿಕಾ ಪ್ರಕಟಣೆ

ಜನವರಿ 1ರಂದು ಆರ್‌ಬಿಐ ಹೊರಡಿಸಿದ ಪತ್ರಿಕಾ ಪ್ರಕಟನೆಯೊಂದರಲ್ಲಿ ರೂ. 2000 ಮುಖ ಬೆಲೆಯ ಕರೆನ್ಸಿ ನೋಟುಗಳ ಹಿಂಪಡೆಯುವಿಕೆಯ ಸ್ಥಿತಿಯ ಕುರಿತು ಮಾಹಿತಿ ನೀಡಿದೆ.

ಮೇ 19, 2023ರಂತೆ ಚಲಾವಣೆಯಲ್ಲಿರುವ ಸುಮಾರು 98.12 ಶೇಖಡ 2000 ಮುಖಬೆಲೆಯ ಕರೆನ್ಸಿ ನೋಟುಗಳನ್ನು ವಾಪಸ್ ಪಡೆಯಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ವೆಬ್‌ಸೈಟ್‌ನಲ್ಲಿ ಪದೇ ಪದೇ ಕೇಳಲಾಗುವ ಪ್ರಶ್ನೆ (FAQ)ವಿಭಾಗದಲ್ಲಿ ಪ್ರಸ್ತುತ ರೂ. 10, ರೂ. 20, ರೂ. 50, ರೂ. 100, ರೂ. 200, ರೂ. 500 ಮತ್ತು ರೂ. 2000 ಮುಖಬೆಲೆಯ ನೋಟುಗಳನ್ನು ಚಾಲ್ತಿಯಲ್ಲಿದೆ ಎಂದು ಸ್ಪಷ್ಟವಾಗಿ ಹೇಳಲಾಗಿದೆ.

ಜನವರಿ 1ರ ಆರ್‌ಬಿಐ ಪತ್ರಿಕಾ ಪ್ರಕಟಣೆ

ಆರ್‌ಬಿಐ ವೆಬ್‌ಸೈಟ್‌ನಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಕರೆನ್ಸಿ ನೋಟುಗಳ ಚಿತ್ರವನ್ನು ಪ್ರಕಟಿಸಲಾಗಿದೆ. ಅದರಲ್ಲೂ 5 ಸಾವಿರ ಮುಖಬೆಲೆಯ ನೋಟಿನ ಚಿತ್ರ ಕಂಡು ಬಂದಿಲ್ಲ.

ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಧೀನಲ್ಲಿ ಕಾರ್ಯಾಚರಿಸುವ ಪ್ರೆಸ್ ಇನ್ಫರ್ಮೇಶನ್ ಬ್ಯೂರೋ (ಪಿಐಬಿ) ಕೂಡ ಜನವರಿ 4ರಂದು ತನ್ನ ಎಕ್ಸ್‌ ಖಾತೆಯಲ್ಲಿ ಈ ಸಂಬಂಧ ಸ್ಪಷ್ಟನೆ ಕೊಟ್ಟಿದ್ದು, “ಆರ್‌ಬಿಐ 5 ಸಾವಿರ ಮುಖಬೆಲೆಯ ಕರೆನ್ಸಿ ನೋಟು ಬಿಡುಗಡೆ ಮಾಡುತ್ತಿದೆ” ಎಂಬ ಸುದ್ದಿ ಸುಳ್ಳು ಎಂದಿದೆ.

ಯಾವುದೇ ಮುಖ್ಯವಾಹಿನಿ ಮಾಧ್ಯಮಗಳು ಕೂಡ 5 ಸಾವಿರ ಮುಖ ಬೆಲೆಯ ಕರೆನ್ಸಿ ನೋಟುಗಳನ್ನು ಬಿಡುಗಡೆ ಮಾಡುವ ಕುರಿತು ವರದಿ ಮಾಡಿಲ್ಲ.

ನಾವು ನಡೆಸಿದ ಪರಿಶೀಲನೆಯಲ್ಲಿ ಶೀಘ್ರದಲ್ಲೇ ರೂ. 5 ಸಾವಿರ ಮುಖಬೆಲೆಯ ಕರೆನ್ಸಿ ನೋಟುಗಳು ಬಿಡುಗಡೆಯಾಗಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು ಎಂದು ತಿಳಿದು ಬಂದಿದೆ.

FACT CHECK : ಅಜ್ಮೀರ್ ದರ್ಗಾ ವಿರುದ್ಧ ಪಂಜಿನ ಮೆರವಣಿಗೆ ವೇಳೆ ಬೆಂಕಿ ಅವಘಡ..ವೈರಲ್ ವಿಡಿಯೋದ ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...