Homeಫ್ಯಾಕ್ಟ್‌ಚೆಕ್FACT CHECK : ಕಲಬುರಗಿಯ ಹಳೆಯ ವಿಡಿಯೋಗೆ ಕೋಮು ಬಣ್ಣ ಬಳಿದು ಹಂಚಿಕೊಳ್ಳುತ್ತಿರುವ ಬಲಪಂಥೀಯರು

FACT CHECK : ಕಲಬುರಗಿಯ ಹಳೆಯ ವಿಡಿಯೋಗೆ ಕೋಮು ಬಣ್ಣ ಬಳಿದು ಹಂಚಿಕೊಳ್ಳುತ್ತಿರುವ ಬಲಪಂಥೀಯರು

- Advertisement -
- Advertisement -

ಇಬ್ಬರು ವ್ಯಕ್ತಿಗಳು ಬಾಲಕನೋರ್ವನ ಕೈ ಹಿಡಿದುಕೊಂಡು, ಆತನಿಂದ ರೈಲು ಹಳಿ ಮೇಲೆ ಇಟ್ಟಿರುವ ಕಲ್ಲುಗಳನ್ನು ತೆಗೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವಿಡಿಯೋದಲ್ಲಿ, ಆ ವ್ಯಕ್ತಿಗಳು ಕನ್ನಡ ಭಾಷೆಯಲ್ಲಿ “ಎಷ್ಟು ರೈಲುಗಳಿಗೆ ಈ ರೀತಿ ಕಲ್ಲು ಇಟ್ಟಿದ್ದೀರಿ? ಎಂದು ಕೇಳುತ್ತಿರುವುದು ಮತ್ತು ಅದಕ್ಕೆ, “ಇದೇ ಮೊದಲ ಬಾರಿ ಇಟ್ಟಿದ್ದೀನಿ ಅಂಕಲ್. ನಿಮ್ಮ ಕಾಲಿಗೆ ಬೀಳುತ್ತೇನೆ, ದಯವಿಟ್ಟು ಬಿಟ್ಟು ಬಿಡಿ” ಎಂದು ಬಾಲಕ ಹೇಳುತ್ತಿರುವುದನ್ನು ನೋಡಬಹುದು.

ಸದಾ ಸುಳ್ಳು ಮತ್ತು ಕೋಮು ದ್ವೇಷದ ಸುದ್ದಿಗಳನ್ನು ಹಂಚಿಕೊಳ್ಳುವ ಬಲಪಂಥೀಯ ಎಕ್ಸ್ ಬಳಕೆದಾರ ರೌಶನ್ ಸಿಹ್ಹಾ ಅಥವಾ ಮಿ.ಸಿನ್ಹಾ ಇಂದು (ಸೆಪ್ಟೆಂಬರ್ 8, 2024) ವಿಡಿಯೋ ಪೋಸ್ಟ್ ಮಾಡಿ “ಇದು ತಮಾಷೆಯಲ್ಲ; ಇದು ಗಂಭೀರ ಸಮಸ್ಯೆ!. ದಿನಾಂಕ ಮತ್ತು ಸ್ಥಳ ತಿಳಿದಿಲ್ಲ. ಆದರೆ, ಇಂತಹ ವಿಡಿಯೋಗಳು ಬಹುತೇಕ ಪ್ರತಿದಿನ ಹೊರ ಬರುತ್ತಿವೆ. ರೈಲು ಹಳಿತಪ್ಪಿಸುವ ಉದ್ದೇಶದಿಂದ ಇಂತಹ ಕೆಲಸಗಳನ್ನು ಮಾಡಲು ಅವರಿಗೆ ಕಲಿಸಲಾಗುತ್ತಿದೆಯೇ?” ಎಂದು ಬರೆದುಕೊಂಡಿದ್ದಾರೆ.

ಮತ್ತೋರ್ವ ಬಲ ಪಂಥೀಯ ಎಕ್ಸ್ ಬಳಕೆದಾರ ದೀಪಕ್ ಶರ್ಮಾ (@SonOfBharat7)ಸೆಪ್ಟೆಂಬರ್ 6, 2024ರಂದು ವಿಡಿಯೋ ಹಂಚಿಕೊಂಡು ” ಹಿಂದೂಗಳೇ ನಿಮ್ಮನ್ನು ಕೊಲ್ಲಲು ನರಭಕ್ಷಕ ಜಿಹಾದಿಗಳ ಮಗು ಸಿದ್ದವಾಗಿದೆ. ನಿಮ್ಮ ಪ್ರೀತಿ ಪಾತ್ರರ ಮೃತದೇಹಗಳನ್ನು ನಿಮ್ಮ ನಾಲ್ಕು ಭುಜಗಳ ಮೇಲೆ ಹೊತ್ತುಕೊಂಡು ಹೋಗುತ್ತೀರಿ. ಈ ವಿಡಿಯೋ ಕರ್ನಾಟಕದದ್ದು ಎನ್ನಲಾಗಿದೆ. ಎಕ್ಸ್ ಪ್ರೆಸ್ ರೈಲು ಪಲ್ಟಿಯಾಗಿ ಎಷ್ಟೋ ಜನ ಪ್ರಾಣ ಕಳೆದುಕೊಂಡಿದ್ದಾರೆ. ಹೀಗೊಂದು ಸುದ್ದಿ ಬರುವ ದಿನ ದೂರವಿಲ್ಲ. ಎಚ್ಚರಿಕೆ” ಎಂದು ಹಿಂದಿ ಭಾಷೆಯಲ್ಲಿ ಬರೆದುಕೊಂಡಿದ್ದರು

ಕೋಮು ದ್ವೇಷದ ಸುದ್ದಿಗಳನ್ನು ಹಂಚಿಕೊಳ್ಳುವ ಫ್ರಂಟಲ್ ಪೋರ್ಸ್ (@FrontalForce) ಎಂಬ ಇನ್ನೊಂದು ಎಕ್ಸ್ ಖಾತೆಯಲ್ಲಿ ಸೆಪ್ಟೆಂಬರ್ 7ರಂದು ವಿಡಿಯೋ ಹಂಚಿಕೊಂಡು “ಬ್ರೇಕಿಂಗ್, ರೈಲು ಅಪಘಾತ ಉಂಟು ಮಾಡಲು ರೈಲು ಹಳಿಗಳ ಮೇಲೆ ಕಲ್ಲು ಮತ್ತು ಇತರ ವಸ್ತುಗಳನ್ನು ಇಟ್ಟು ಸ್ಥಳೀಯರ ಕೈಗೆ ಸಿಕ್ಕಿಬಿದ್ದ ಮೂಲಭೂತವಾದಿ ಎಂದು ಬರೆದುಕೊಂಡಿದ್ದರು.

ಇನ್ನೂ ಅನೇಕ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ವಿಡಿಯೋ ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡವರಲ್ಲಿ ಕೆಲವರು ‘ಮುಸ್ಲಿಂ ಹುಡುಗ’ ರೈಲು ಹಳಿ ಮೇಲೆ ಕಲ್ಲುಗಳನ್ನು ಇಟ್ಟು ಸಿಕ್ಕಿ ಬಿದ್ದಿದ್ದಾನೆ ಎಂದು ನೇರವಾಗಿ ಬರೆದುಕೊಂಡರೆ, ಇನ್ನೂ ಕೆಲವರು ಪರೋಕ್ಷವಾಗಿ ವಿಡಿಯೋಗೆ ಕೋಮು ಬಣ್ಣ ಬಳಿಯುವ ಪ್ರಯತ್ನ ಮಾಡಿದ್ದಾರೆ.

ವಿಡಿಯೋ ಪೋಸ್ಟ್ ಮಾಡಿದವರು ಸದಾ ಸುಳ್ಳು ಮತ್ತು ಕೋಮುದ್ವೇಷದ ಸುದ್ದಿಗಳನ್ನು ಹಂಚಿಕೊಳ್ಳುವವರಾದ್ದರಿಂದ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ.

ಫ್ಯಾಕ್ಟ್‌ಚೆಕ್ : ವೈರಲ್ ಆಗಿರುವ ವಿಡಿಯೋ ಕರ್ನಾಟಕದ ಕಲಬುರಗಿ ಜಿಲ್ಲೆಯದ್ದು ಮತ್ತು ಆರು ವರ್ಷ ಹಳೆಯದ್ದಾಗಿದೆ. ಅಂದರೆ, 2018ರಲ್ಲಿ ನಡೆದ ಘಟನೆಯದ್ದಾಗಿದೆ.

ಕಲಬುರಗಿ ಕೇಂದ್ರ ರೈಲು ನಿಲ್ದಾಣದಿಂದ ಹಿರೇನಂದೂರು ಕಡೆಗೆ ಸುಮಾರು 2 ಕಿಮೀ ದೂರದಲ್ಲಿ ಈ ಘಟನೆ ನಡೆದಿದೆ. ವಿಡಿಯೋದಲ್ಲಿರುವ ಬಾಲಕ ಪಕ್ಕದ ಕೊಳಗೇರಿಯ ನಿವಾಸಿಯಾಗಿದ್ದು, ಆತ ಮತ್ತು ಸ್ನೇಹಿತರು ಆಟವಾಡುತ್ತಾ ರೈಲು ಹಳಿ ಮೇಲೆ ಕಲ್ಲುಗಳನ್ನು ಜೋಡಿಸಿದ್ದಾರೆ. ಅವರಿಗೆ ಹಳಿ ಮೇಲೆ ಕಲ್ಲುಗಳನ್ನು ಇಟ್ಟು ಅಪಘಾತ ಉಂಟು ಮಾಡುವ ಯಾವುದೇ ಉದ್ದೇಶ ಇರಲಿಲ್ಲ.

ಮಕ್ಕಳು ರೈಲು ಹಳಿಗಳ ಮೇಲೆ ಕಲ್ಲು ಇಟ್ಟಿರುವುದನ್ನು ಗಮನಿಸಿದ ಟ್ರ್ಯಾಕ್‌ಮೆನ್‌ಗಳಾದ ಗೋಪಾಲ್, ರಾಜ್‌ಕುಮಾರ್ ಮತ್ತು ರಾಜು ಬಾಲಕನೋರ್ವನನ್ನು ಹಿಡಿದು ಕಲ್ಲುಗಳನ್ನು ತೆಗೆಸಿದ್ದರು.

ಈ ಘಟನೆಯ ವಿಡಿಯೋ 2018ರ ಬಳಿಕ ಅನೇಕ ಬಾರಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಮುಸ್ಲಿಂ ಬಾಲಕರು ರೈಲು ಹಳಿಗಳ ಮೇಲೆ ಕಲ್ಲುಗಳನ್ನು ಇಟ್ಟಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿತ್ತು. ಅಸಲಿಗೆ ರೈಲು ಹಳಿಗೆ ಕಲ್ಲುಗಳನ್ನು ಇಟ್ಟ ಬಾಲಕ ಹಿಂದೂ ಧರ್ಮದವನಾಗಿದ್ದಾನೆ.

ಇಲ್ಲಿ ಬಾಲಕನ ಧರ್ಮವನ್ನು ಹೇಳುವ ಅಗತ್ಯವಿಲ್ಲ. ಆದರೆ, ಇತ್ತೀಚಿಗೆ ಯಾವುದೇ ರೈಲು ಹಳಿಗಳ ಮೇಲೆ ಯಾವುದೇ ವಸ್ತುಗಳನ್ನು ಇಟ್ಟಿರುವುದು ಕಂಡು ಬಂದರೆ ಅಥವಾ ನೂತನ ವಂದೇ ಭಾರತ್ ರೈಲಿಗೆ ಯಾರಾದರು ಕಲ್ಲು ಎಸೆದರೆ, ಅದನ್ನು ಮುಸ್ಲಿಮರೇ ಮಾಡಿದ್ದಾರೆ ಎಂದು ಹೇಳುವುದು ಕೆಲವರಿಗೆ ವಾಡಿಕೆಯಾಗಿದೆ. ಈ ಮೂಲಕ ಮುಸ್ಲಿಂ ಸಮುದಾಯವನ್ನು ದೇಶ ವಿರೋಧಿಗಳ ರೀತಿ ಬಿಂಬಿಸಲಾಗುತ್ತಿದೆ.

ಇತ್ತೀಚೆಗೆ ಪಾಕಿಸ್ತಾನದಲ್ಲಿ ರೈಲು ಹಳಿಯೊಂದರಿಂದ ಮಕ್ಕಳು ಕಬ್ಬಿಣದ ವಸ್ತುಗಳನ್ನು ಕಳವು ಮಾಡಿದ ಘಟನೆಯನ್ನು ಭಾರತದಲ್ಲಿ ರೈಲು ಅಪಘಾತ ಉಂಟು ಮಾಡಲು ಮುಸ್ಲಿಂ ಮಕ್ಕಳು ರೈಲು ಹಳಿಗೆ ಹಾನಿ ಮಾಡುತ್ತಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಅದನ್ನು ನಾವು ಫ್ಯಾಕ್ಟ್‌ಚೆಕ್ ಮಾಡಿ ಜನರಿಗೆ ಸತ್ಯಾಸತ್ಯತೆ ತಿಳಿಸುವ ಪ್ರಯತ್ನ ಮಾಡಿದ್ದೇವೆ. ಆ ಸುದ್ದಿಯ ಲಿಂಕ್ ಕೆಳಗಿದೆ.

FACT CHECK : ಮುಸ್ಲಿಂ ಮಕ್ಕಳು ರೈಲ್ವೆ ಹಳಿಗೆ ಹಾನಿ ಮಾಡಿದ್ದಾರೆ ಎಂದು ಸುಳ್ಳು ವಿಡಿಯೋ ಹಂಚಿಕೆ

ಕಳೆದ ವರ್ಷ ಕಲಬುರಗಿಯ ಬಾಲಕನ ವಿಡಿಯೋ ಸುಳ್ಳು ಪ್ರತಿಪಾದನೆ ಮತ್ತು ಕೋಮು ಬಣ್ಣದೊಂದಿಗೆ ವೈರಲ್ ಆಗಿತ್ತು. ಆಗ ಖ್ಯಾತ ಫ್ಯಾಕ್ಟ್‌ಚೆಕ್ ಸಂಸ್ಥೆ ಆಲ್ಟ್‌ ನ್ಯೂಸ್ ವರದಿ ಪ್ರಕಟಿಸಿ ಜನರಿಗೆ ಸತ್ಯ ತಿಳಿಸಿತ್ತು. ಅದರ ಲಿಂಕ್ ಕೆಳಗಿದೆ.

5-yr-old video of boy placing stones on rail tracks viral with misleading claims

ಆಲ್ಟ್‌ ನ್ಯೂಸ್ ಸುದ್ದಿ ಬರೆಯುವ ವೇಳೆ, ರಾಯಚೂರು ರೈಲ್ವೆಯ ವೃತ್ತ ನಿರೀಕ್ಷಕ ರವಿಕುಮಾರ್ ಅವರನ್ನು ಸಂಪರ್ಕಿಸಿತ್ತು. ಅವರು ಕಲಬುರಗಿಯಲ್ಲಿ ಮಕ್ಕಳು ಆಟವಾಡುತ್ತಾ ರೈಲು ಹಳಿ ಮೇಲೆ ಕಲ್ಲು ಇಟ್ಟಿರುವುದನ್ನು ಖಚಿತಪಡಿಸಿದ್ದರು.

ಇಂದು (ಸೆ.8, 2024) ಆಲ್ಟ್‌ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಝುಬೈರ್ ಅವರು ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ಕಲಬುರಗಿಯ ಹಳೆಯ ವಿಡಿಯೋಗೆ ಬಲಪಂಥೀಯರು ಕೋಮು ಬಣ್ಣ ಬಳಿದಿರುವುದನ್ನು ವಿವರಿಸಿದ್ದಾರೆ.

 

ಒಟ್ಟಿನಲ್ಲಿ, ಕಲಬುರಗಿಯಲ್ಲಿ 6 ವರ್ಷಗಳ ಹಿಂದೆ ನಡೆದ ಘಟನೆಯೊಂದರ ವಿಡಿಯೋವನ್ನು ಈಗ ಹಂಚಿಕೊಂಡು, ಅದಕ್ಕೆ ಕೋಮು ಬಣ್ಣ ಬಳಿಯಲಾಗಿದೆ.

ಇದನ್ನೂ ಓದಿ : FACT CHECK : ಹಿಂದೂ ಬಾಲಕನ ತಾಯತವನ್ನು ಮುಸ್ಲಿಮರು ಬಲವಂತದಿಂದ ತೆಗೆದಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...