Homeಫ್ಯಾಕ್ಟ್‌ಚೆಕ್FACT CHECK : ಕಲಬುರಗಿಯ ಹಳೆಯ ವಿಡಿಯೋಗೆ ಕೋಮು ಬಣ್ಣ ಬಳಿದು ಹಂಚಿಕೊಳ್ಳುತ್ತಿರುವ ಬಲಪಂಥೀಯರು

FACT CHECK : ಕಲಬುರಗಿಯ ಹಳೆಯ ವಿಡಿಯೋಗೆ ಕೋಮು ಬಣ್ಣ ಬಳಿದು ಹಂಚಿಕೊಳ್ಳುತ್ತಿರುವ ಬಲಪಂಥೀಯರು

- Advertisement -
- Advertisement -

ಇಬ್ಬರು ವ್ಯಕ್ತಿಗಳು ಬಾಲಕನೋರ್ವನ ಕೈ ಹಿಡಿದುಕೊಂಡು, ಆತನಿಂದ ರೈಲು ಹಳಿ ಮೇಲೆ ಇಟ್ಟಿರುವ ಕಲ್ಲುಗಳನ್ನು ತೆಗೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವಿಡಿಯೋದಲ್ಲಿ, ಆ ವ್ಯಕ್ತಿಗಳು ಕನ್ನಡ ಭಾಷೆಯಲ್ಲಿ “ಎಷ್ಟು ರೈಲುಗಳಿಗೆ ಈ ರೀತಿ ಕಲ್ಲು ಇಟ್ಟಿದ್ದೀರಿ? ಎಂದು ಕೇಳುತ್ತಿರುವುದು ಮತ್ತು ಅದಕ್ಕೆ, “ಇದೇ ಮೊದಲ ಬಾರಿ ಇಟ್ಟಿದ್ದೀನಿ ಅಂಕಲ್. ನಿಮ್ಮ ಕಾಲಿಗೆ ಬೀಳುತ್ತೇನೆ, ದಯವಿಟ್ಟು ಬಿಟ್ಟು ಬಿಡಿ” ಎಂದು ಬಾಲಕ ಹೇಳುತ್ತಿರುವುದನ್ನು ನೋಡಬಹುದು.

ಸದಾ ಸುಳ್ಳು ಮತ್ತು ಕೋಮು ದ್ವೇಷದ ಸುದ್ದಿಗಳನ್ನು ಹಂಚಿಕೊಳ್ಳುವ ಬಲಪಂಥೀಯ ಎಕ್ಸ್ ಬಳಕೆದಾರ ರೌಶನ್ ಸಿಹ್ಹಾ ಅಥವಾ ಮಿ.ಸಿನ್ಹಾ ಇಂದು (ಸೆಪ್ಟೆಂಬರ್ 8, 2024) ವಿಡಿಯೋ ಪೋಸ್ಟ್ ಮಾಡಿ “ಇದು ತಮಾಷೆಯಲ್ಲ; ಇದು ಗಂಭೀರ ಸಮಸ್ಯೆ!. ದಿನಾಂಕ ಮತ್ತು ಸ್ಥಳ ತಿಳಿದಿಲ್ಲ. ಆದರೆ, ಇಂತಹ ವಿಡಿಯೋಗಳು ಬಹುತೇಕ ಪ್ರತಿದಿನ ಹೊರ ಬರುತ್ತಿವೆ. ರೈಲು ಹಳಿತಪ್ಪಿಸುವ ಉದ್ದೇಶದಿಂದ ಇಂತಹ ಕೆಲಸಗಳನ್ನು ಮಾಡಲು ಅವರಿಗೆ ಕಲಿಸಲಾಗುತ್ತಿದೆಯೇ?” ಎಂದು ಬರೆದುಕೊಂಡಿದ್ದಾರೆ.

ಮತ್ತೋರ್ವ ಬಲ ಪಂಥೀಯ ಎಕ್ಸ್ ಬಳಕೆದಾರ ದೀಪಕ್ ಶರ್ಮಾ (@SonOfBharat7)ಸೆಪ್ಟೆಂಬರ್ 6, 2024ರಂದು ವಿಡಿಯೋ ಹಂಚಿಕೊಂಡು ” ಹಿಂದೂಗಳೇ ನಿಮ್ಮನ್ನು ಕೊಲ್ಲಲು ನರಭಕ್ಷಕ ಜಿಹಾದಿಗಳ ಮಗು ಸಿದ್ದವಾಗಿದೆ. ನಿಮ್ಮ ಪ್ರೀತಿ ಪಾತ್ರರ ಮೃತದೇಹಗಳನ್ನು ನಿಮ್ಮ ನಾಲ್ಕು ಭುಜಗಳ ಮೇಲೆ ಹೊತ್ತುಕೊಂಡು ಹೋಗುತ್ತೀರಿ. ಈ ವಿಡಿಯೋ ಕರ್ನಾಟಕದದ್ದು ಎನ್ನಲಾಗಿದೆ. ಎಕ್ಸ್ ಪ್ರೆಸ್ ರೈಲು ಪಲ್ಟಿಯಾಗಿ ಎಷ್ಟೋ ಜನ ಪ್ರಾಣ ಕಳೆದುಕೊಂಡಿದ್ದಾರೆ. ಹೀಗೊಂದು ಸುದ್ದಿ ಬರುವ ದಿನ ದೂರವಿಲ್ಲ. ಎಚ್ಚರಿಕೆ” ಎಂದು ಹಿಂದಿ ಭಾಷೆಯಲ್ಲಿ ಬರೆದುಕೊಂಡಿದ್ದರು

ಕೋಮು ದ್ವೇಷದ ಸುದ್ದಿಗಳನ್ನು ಹಂಚಿಕೊಳ್ಳುವ ಫ್ರಂಟಲ್ ಪೋರ್ಸ್ (@FrontalForce) ಎಂಬ ಇನ್ನೊಂದು ಎಕ್ಸ್ ಖಾತೆಯಲ್ಲಿ ಸೆಪ್ಟೆಂಬರ್ 7ರಂದು ವಿಡಿಯೋ ಹಂಚಿಕೊಂಡು “ಬ್ರೇಕಿಂಗ್, ರೈಲು ಅಪಘಾತ ಉಂಟು ಮಾಡಲು ರೈಲು ಹಳಿಗಳ ಮೇಲೆ ಕಲ್ಲು ಮತ್ತು ಇತರ ವಸ್ತುಗಳನ್ನು ಇಟ್ಟು ಸ್ಥಳೀಯರ ಕೈಗೆ ಸಿಕ್ಕಿಬಿದ್ದ ಮೂಲಭೂತವಾದಿ ಎಂದು ಬರೆದುಕೊಂಡಿದ್ದರು.

ಇನ್ನೂ ಅನೇಕ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ವಿಡಿಯೋ ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡವರಲ್ಲಿ ಕೆಲವರು ‘ಮುಸ್ಲಿಂ ಹುಡುಗ’ ರೈಲು ಹಳಿ ಮೇಲೆ ಕಲ್ಲುಗಳನ್ನು ಇಟ್ಟು ಸಿಕ್ಕಿ ಬಿದ್ದಿದ್ದಾನೆ ಎಂದು ನೇರವಾಗಿ ಬರೆದುಕೊಂಡರೆ, ಇನ್ನೂ ಕೆಲವರು ಪರೋಕ್ಷವಾಗಿ ವಿಡಿಯೋಗೆ ಕೋಮು ಬಣ್ಣ ಬಳಿಯುವ ಪ್ರಯತ್ನ ಮಾಡಿದ್ದಾರೆ.

ವಿಡಿಯೋ ಪೋಸ್ಟ್ ಮಾಡಿದವರು ಸದಾ ಸುಳ್ಳು ಮತ್ತು ಕೋಮುದ್ವೇಷದ ಸುದ್ದಿಗಳನ್ನು ಹಂಚಿಕೊಳ್ಳುವವರಾದ್ದರಿಂದ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ.

ಫ್ಯಾಕ್ಟ್‌ಚೆಕ್ : ವೈರಲ್ ಆಗಿರುವ ವಿಡಿಯೋ ಕರ್ನಾಟಕದ ಕಲಬುರಗಿ ಜಿಲ್ಲೆಯದ್ದು ಮತ್ತು ಆರು ವರ್ಷ ಹಳೆಯದ್ದಾಗಿದೆ. ಅಂದರೆ, 2018ರಲ್ಲಿ ನಡೆದ ಘಟನೆಯದ್ದಾಗಿದೆ.

ಕಲಬುರಗಿ ಕೇಂದ್ರ ರೈಲು ನಿಲ್ದಾಣದಿಂದ ಹಿರೇನಂದೂರು ಕಡೆಗೆ ಸುಮಾರು 2 ಕಿಮೀ ದೂರದಲ್ಲಿ ಈ ಘಟನೆ ನಡೆದಿದೆ. ವಿಡಿಯೋದಲ್ಲಿರುವ ಬಾಲಕ ಪಕ್ಕದ ಕೊಳಗೇರಿಯ ನಿವಾಸಿಯಾಗಿದ್ದು, ಆತ ಮತ್ತು ಸ್ನೇಹಿತರು ಆಟವಾಡುತ್ತಾ ರೈಲು ಹಳಿ ಮೇಲೆ ಕಲ್ಲುಗಳನ್ನು ಜೋಡಿಸಿದ್ದಾರೆ. ಅವರಿಗೆ ಹಳಿ ಮೇಲೆ ಕಲ್ಲುಗಳನ್ನು ಇಟ್ಟು ಅಪಘಾತ ಉಂಟು ಮಾಡುವ ಯಾವುದೇ ಉದ್ದೇಶ ಇರಲಿಲ್ಲ.

ಮಕ್ಕಳು ರೈಲು ಹಳಿಗಳ ಮೇಲೆ ಕಲ್ಲು ಇಟ್ಟಿರುವುದನ್ನು ಗಮನಿಸಿದ ಟ್ರ್ಯಾಕ್‌ಮೆನ್‌ಗಳಾದ ಗೋಪಾಲ್, ರಾಜ್‌ಕುಮಾರ್ ಮತ್ತು ರಾಜು ಬಾಲಕನೋರ್ವನನ್ನು ಹಿಡಿದು ಕಲ್ಲುಗಳನ್ನು ತೆಗೆಸಿದ್ದರು.

ಈ ಘಟನೆಯ ವಿಡಿಯೋ 2018ರ ಬಳಿಕ ಅನೇಕ ಬಾರಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಮುಸ್ಲಿಂ ಬಾಲಕರು ರೈಲು ಹಳಿಗಳ ಮೇಲೆ ಕಲ್ಲುಗಳನ್ನು ಇಟ್ಟಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿತ್ತು. ಅಸಲಿಗೆ ರೈಲು ಹಳಿಗೆ ಕಲ್ಲುಗಳನ್ನು ಇಟ್ಟ ಬಾಲಕ ಹಿಂದೂ ಧರ್ಮದವನಾಗಿದ್ದಾನೆ.

ಇಲ್ಲಿ ಬಾಲಕನ ಧರ್ಮವನ್ನು ಹೇಳುವ ಅಗತ್ಯವಿಲ್ಲ. ಆದರೆ, ಇತ್ತೀಚಿಗೆ ಯಾವುದೇ ರೈಲು ಹಳಿಗಳ ಮೇಲೆ ಯಾವುದೇ ವಸ್ತುಗಳನ್ನು ಇಟ್ಟಿರುವುದು ಕಂಡು ಬಂದರೆ ಅಥವಾ ನೂತನ ವಂದೇ ಭಾರತ್ ರೈಲಿಗೆ ಯಾರಾದರು ಕಲ್ಲು ಎಸೆದರೆ, ಅದನ್ನು ಮುಸ್ಲಿಮರೇ ಮಾಡಿದ್ದಾರೆ ಎಂದು ಹೇಳುವುದು ಕೆಲವರಿಗೆ ವಾಡಿಕೆಯಾಗಿದೆ. ಈ ಮೂಲಕ ಮುಸ್ಲಿಂ ಸಮುದಾಯವನ್ನು ದೇಶ ವಿರೋಧಿಗಳ ರೀತಿ ಬಿಂಬಿಸಲಾಗುತ್ತಿದೆ.

ಇತ್ತೀಚೆಗೆ ಪಾಕಿಸ್ತಾನದಲ್ಲಿ ರೈಲು ಹಳಿಯೊಂದರಿಂದ ಮಕ್ಕಳು ಕಬ್ಬಿಣದ ವಸ್ತುಗಳನ್ನು ಕಳವು ಮಾಡಿದ ಘಟನೆಯನ್ನು ಭಾರತದಲ್ಲಿ ರೈಲು ಅಪಘಾತ ಉಂಟು ಮಾಡಲು ಮುಸ್ಲಿಂ ಮಕ್ಕಳು ರೈಲು ಹಳಿಗೆ ಹಾನಿ ಮಾಡುತ್ತಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಅದನ್ನು ನಾವು ಫ್ಯಾಕ್ಟ್‌ಚೆಕ್ ಮಾಡಿ ಜನರಿಗೆ ಸತ್ಯಾಸತ್ಯತೆ ತಿಳಿಸುವ ಪ್ರಯತ್ನ ಮಾಡಿದ್ದೇವೆ. ಆ ಸುದ್ದಿಯ ಲಿಂಕ್ ಕೆಳಗಿದೆ.

FACT CHECK : ಮುಸ್ಲಿಂ ಮಕ್ಕಳು ರೈಲ್ವೆ ಹಳಿಗೆ ಹಾನಿ ಮಾಡಿದ್ದಾರೆ ಎಂದು ಸುಳ್ಳು ವಿಡಿಯೋ ಹಂಚಿಕೆ

ಕಳೆದ ವರ್ಷ ಕಲಬುರಗಿಯ ಬಾಲಕನ ವಿಡಿಯೋ ಸುಳ್ಳು ಪ್ರತಿಪಾದನೆ ಮತ್ತು ಕೋಮು ಬಣ್ಣದೊಂದಿಗೆ ವೈರಲ್ ಆಗಿತ್ತು. ಆಗ ಖ್ಯಾತ ಫ್ಯಾಕ್ಟ್‌ಚೆಕ್ ಸಂಸ್ಥೆ ಆಲ್ಟ್‌ ನ್ಯೂಸ್ ವರದಿ ಪ್ರಕಟಿಸಿ ಜನರಿಗೆ ಸತ್ಯ ತಿಳಿಸಿತ್ತು. ಅದರ ಲಿಂಕ್ ಕೆಳಗಿದೆ.

5-yr-old video of boy placing stones on rail tracks viral with misleading claims

ಆಲ್ಟ್‌ ನ್ಯೂಸ್ ಸುದ್ದಿ ಬರೆಯುವ ವೇಳೆ, ರಾಯಚೂರು ರೈಲ್ವೆಯ ವೃತ್ತ ನಿರೀಕ್ಷಕ ರವಿಕುಮಾರ್ ಅವರನ್ನು ಸಂಪರ್ಕಿಸಿತ್ತು. ಅವರು ಕಲಬುರಗಿಯಲ್ಲಿ ಮಕ್ಕಳು ಆಟವಾಡುತ್ತಾ ರೈಲು ಹಳಿ ಮೇಲೆ ಕಲ್ಲು ಇಟ್ಟಿರುವುದನ್ನು ಖಚಿತಪಡಿಸಿದ್ದರು.

ಇಂದು (ಸೆ.8, 2024) ಆಲ್ಟ್‌ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಝುಬೈರ್ ಅವರು ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ಕಲಬುರಗಿಯ ಹಳೆಯ ವಿಡಿಯೋಗೆ ಬಲಪಂಥೀಯರು ಕೋಮು ಬಣ್ಣ ಬಳಿದಿರುವುದನ್ನು ವಿವರಿಸಿದ್ದಾರೆ.

 

ಒಟ್ಟಿನಲ್ಲಿ, ಕಲಬುರಗಿಯಲ್ಲಿ 6 ವರ್ಷಗಳ ಹಿಂದೆ ನಡೆದ ಘಟನೆಯೊಂದರ ವಿಡಿಯೋವನ್ನು ಈಗ ಹಂಚಿಕೊಂಡು, ಅದಕ್ಕೆ ಕೋಮು ಬಣ್ಣ ಬಳಿಯಲಾಗಿದೆ.

ಇದನ್ನೂ ಓದಿ : FACT CHECK : ಹಿಂದೂ ಬಾಲಕನ ತಾಯತವನ್ನು ಮುಸ್ಲಿಮರು ಬಲವಂತದಿಂದ ತೆಗೆದಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...