Homeಫ್ಯಾಕ್ಟ್‌ಚೆಕ್FACT CHECK : ಕಲಬುರಗಿಯ ಹಳೆಯ ವಿಡಿಯೋಗೆ ಕೋಮು ಬಣ್ಣ ಬಳಿದು ಹಂಚಿಕೊಳ್ಳುತ್ತಿರುವ ಬಲಪಂಥೀಯರು

FACT CHECK : ಕಲಬುರಗಿಯ ಹಳೆಯ ವಿಡಿಯೋಗೆ ಕೋಮು ಬಣ್ಣ ಬಳಿದು ಹಂಚಿಕೊಳ್ಳುತ್ತಿರುವ ಬಲಪಂಥೀಯರು

- Advertisement -
- Advertisement -

ಇಬ್ಬರು ವ್ಯಕ್ತಿಗಳು ಬಾಲಕನೋರ್ವನ ಕೈ ಹಿಡಿದುಕೊಂಡು, ಆತನಿಂದ ರೈಲು ಹಳಿ ಮೇಲೆ ಇಟ್ಟಿರುವ ಕಲ್ಲುಗಳನ್ನು ತೆಗೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವಿಡಿಯೋದಲ್ಲಿ, ಆ ವ್ಯಕ್ತಿಗಳು ಕನ್ನಡ ಭಾಷೆಯಲ್ಲಿ “ಎಷ್ಟು ರೈಲುಗಳಿಗೆ ಈ ರೀತಿ ಕಲ್ಲು ಇಟ್ಟಿದ್ದೀರಿ? ಎಂದು ಕೇಳುತ್ತಿರುವುದು ಮತ್ತು ಅದಕ್ಕೆ, “ಇದೇ ಮೊದಲ ಬಾರಿ ಇಟ್ಟಿದ್ದೀನಿ ಅಂಕಲ್. ನಿಮ್ಮ ಕಾಲಿಗೆ ಬೀಳುತ್ತೇನೆ, ದಯವಿಟ್ಟು ಬಿಟ್ಟು ಬಿಡಿ” ಎಂದು ಬಾಲಕ ಹೇಳುತ್ತಿರುವುದನ್ನು ನೋಡಬಹುದು.

ಸದಾ ಸುಳ್ಳು ಮತ್ತು ಕೋಮು ದ್ವೇಷದ ಸುದ್ದಿಗಳನ್ನು ಹಂಚಿಕೊಳ್ಳುವ ಬಲಪಂಥೀಯ ಎಕ್ಸ್ ಬಳಕೆದಾರ ರೌಶನ್ ಸಿಹ್ಹಾ ಅಥವಾ ಮಿ.ಸಿನ್ಹಾ ಇಂದು (ಸೆಪ್ಟೆಂಬರ್ 8, 2024) ವಿಡಿಯೋ ಪೋಸ್ಟ್ ಮಾಡಿ “ಇದು ತಮಾಷೆಯಲ್ಲ; ಇದು ಗಂಭೀರ ಸಮಸ್ಯೆ!. ದಿನಾಂಕ ಮತ್ತು ಸ್ಥಳ ತಿಳಿದಿಲ್ಲ. ಆದರೆ, ಇಂತಹ ವಿಡಿಯೋಗಳು ಬಹುತೇಕ ಪ್ರತಿದಿನ ಹೊರ ಬರುತ್ತಿವೆ. ರೈಲು ಹಳಿತಪ್ಪಿಸುವ ಉದ್ದೇಶದಿಂದ ಇಂತಹ ಕೆಲಸಗಳನ್ನು ಮಾಡಲು ಅವರಿಗೆ ಕಲಿಸಲಾಗುತ್ತಿದೆಯೇ?” ಎಂದು ಬರೆದುಕೊಂಡಿದ್ದಾರೆ.

ಮತ್ತೋರ್ವ ಬಲ ಪಂಥೀಯ ಎಕ್ಸ್ ಬಳಕೆದಾರ ದೀಪಕ್ ಶರ್ಮಾ (@SonOfBharat7)ಸೆಪ್ಟೆಂಬರ್ 6, 2024ರಂದು ವಿಡಿಯೋ ಹಂಚಿಕೊಂಡು ” ಹಿಂದೂಗಳೇ ನಿಮ್ಮನ್ನು ಕೊಲ್ಲಲು ನರಭಕ್ಷಕ ಜಿಹಾದಿಗಳ ಮಗು ಸಿದ್ದವಾಗಿದೆ. ನಿಮ್ಮ ಪ್ರೀತಿ ಪಾತ್ರರ ಮೃತದೇಹಗಳನ್ನು ನಿಮ್ಮ ನಾಲ್ಕು ಭುಜಗಳ ಮೇಲೆ ಹೊತ್ತುಕೊಂಡು ಹೋಗುತ್ತೀರಿ. ಈ ವಿಡಿಯೋ ಕರ್ನಾಟಕದದ್ದು ಎನ್ನಲಾಗಿದೆ. ಎಕ್ಸ್ ಪ್ರೆಸ್ ರೈಲು ಪಲ್ಟಿಯಾಗಿ ಎಷ್ಟೋ ಜನ ಪ್ರಾಣ ಕಳೆದುಕೊಂಡಿದ್ದಾರೆ. ಹೀಗೊಂದು ಸುದ್ದಿ ಬರುವ ದಿನ ದೂರವಿಲ್ಲ. ಎಚ್ಚರಿಕೆ” ಎಂದು ಹಿಂದಿ ಭಾಷೆಯಲ್ಲಿ ಬರೆದುಕೊಂಡಿದ್ದರು

ಕೋಮು ದ್ವೇಷದ ಸುದ್ದಿಗಳನ್ನು ಹಂಚಿಕೊಳ್ಳುವ ಫ್ರಂಟಲ್ ಪೋರ್ಸ್ (@FrontalForce) ಎಂಬ ಇನ್ನೊಂದು ಎಕ್ಸ್ ಖಾತೆಯಲ್ಲಿ ಸೆಪ್ಟೆಂಬರ್ 7ರಂದು ವಿಡಿಯೋ ಹಂಚಿಕೊಂಡು “ಬ್ರೇಕಿಂಗ್, ರೈಲು ಅಪಘಾತ ಉಂಟು ಮಾಡಲು ರೈಲು ಹಳಿಗಳ ಮೇಲೆ ಕಲ್ಲು ಮತ್ತು ಇತರ ವಸ್ತುಗಳನ್ನು ಇಟ್ಟು ಸ್ಥಳೀಯರ ಕೈಗೆ ಸಿಕ್ಕಿಬಿದ್ದ ಮೂಲಭೂತವಾದಿ ಎಂದು ಬರೆದುಕೊಂಡಿದ್ದರು.

ಇನ್ನೂ ಅನೇಕ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ವಿಡಿಯೋ ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡವರಲ್ಲಿ ಕೆಲವರು ‘ಮುಸ್ಲಿಂ ಹುಡುಗ’ ರೈಲು ಹಳಿ ಮೇಲೆ ಕಲ್ಲುಗಳನ್ನು ಇಟ್ಟು ಸಿಕ್ಕಿ ಬಿದ್ದಿದ್ದಾನೆ ಎಂದು ನೇರವಾಗಿ ಬರೆದುಕೊಂಡರೆ, ಇನ್ನೂ ಕೆಲವರು ಪರೋಕ್ಷವಾಗಿ ವಿಡಿಯೋಗೆ ಕೋಮು ಬಣ್ಣ ಬಳಿಯುವ ಪ್ರಯತ್ನ ಮಾಡಿದ್ದಾರೆ.

ವಿಡಿಯೋ ಪೋಸ್ಟ್ ಮಾಡಿದವರು ಸದಾ ಸುಳ್ಳು ಮತ್ತು ಕೋಮುದ್ವೇಷದ ಸುದ್ದಿಗಳನ್ನು ಹಂಚಿಕೊಳ್ಳುವವರಾದ್ದರಿಂದ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ.

ಫ್ಯಾಕ್ಟ್‌ಚೆಕ್ : ವೈರಲ್ ಆಗಿರುವ ವಿಡಿಯೋ ಕರ್ನಾಟಕದ ಕಲಬುರಗಿ ಜಿಲ್ಲೆಯದ್ದು ಮತ್ತು ಆರು ವರ್ಷ ಹಳೆಯದ್ದಾಗಿದೆ. ಅಂದರೆ, 2018ರಲ್ಲಿ ನಡೆದ ಘಟನೆಯದ್ದಾಗಿದೆ.

ಕಲಬುರಗಿ ಕೇಂದ್ರ ರೈಲು ನಿಲ್ದಾಣದಿಂದ ಹಿರೇನಂದೂರು ಕಡೆಗೆ ಸುಮಾರು 2 ಕಿಮೀ ದೂರದಲ್ಲಿ ಈ ಘಟನೆ ನಡೆದಿದೆ. ವಿಡಿಯೋದಲ್ಲಿರುವ ಬಾಲಕ ಪಕ್ಕದ ಕೊಳಗೇರಿಯ ನಿವಾಸಿಯಾಗಿದ್ದು, ಆತ ಮತ್ತು ಸ್ನೇಹಿತರು ಆಟವಾಡುತ್ತಾ ರೈಲು ಹಳಿ ಮೇಲೆ ಕಲ್ಲುಗಳನ್ನು ಜೋಡಿಸಿದ್ದಾರೆ. ಅವರಿಗೆ ಹಳಿ ಮೇಲೆ ಕಲ್ಲುಗಳನ್ನು ಇಟ್ಟು ಅಪಘಾತ ಉಂಟು ಮಾಡುವ ಯಾವುದೇ ಉದ್ದೇಶ ಇರಲಿಲ್ಲ.

ಮಕ್ಕಳು ರೈಲು ಹಳಿಗಳ ಮೇಲೆ ಕಲ್ಲು ಇಟ್ಟಿರುವುದನ್ನು ಗಮನಿಸಿದ ಟ್ರ್ಯಾಕ್‌ಮೆನ್‌ಗಳಾದ ಗೋಪಾಲ್, ರಾಜ್‌ಕುಮಾರ್ ಮತ್ತು ರಾಜು ಬಾಲಕನೋರ್ವನನ್ನು ಹಿಡಿದು ಕಲ್ಲುಗಳನ್ನು ತೆಗೆಸಿದ್ದರು.

ಈ ಘಟನೆಯ ವಿಡಿಯೋ 2018ರ ಬಳಿಕ ಅನೇಕ ಬಾರಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಮುಸ್ಲಿಂ ಬಾಲಕರು ರೈಲು ಹಳಿಗಳ ಮೇಲೆ ಕಲ್ಲುಗಳನ್ನು ಇಟ್ಟಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿತ್ತು. ಅಸಲಿಗೆ ರೈಲು ಹಳಿಗೆ ಕಲ್ಲುಗಳನ್ನು ಇಟ್ಟ ಬಾಲಕ ಹಿಂದೂ ಧರ್ಮದವನಾಗಿದ್ದಾನೆ.

ಇಲ್ಲಿ ಬಾಲಕನ ಧರ್ಮವನ್ನು ಹೇಳುವ ಅಗತ್ಯವಿಲ್ಲ. ಆದರೆ, ಇತ್ತೀಚಿಗೆ ಯಾವುದೇ ರೈಲು ಹಳಿಗಳ ಮೇಲೆ ಯಾವುದೇ ವಸ್ತುಗಳನ್ನು ಇಟ್ಟಿರುವುದು ಕಂಡು ಬಂದರೆ ಅಥವಾ ನೂತನ ವಂದೇ ಭಾರತ್ ರೈಲಿಗೆ ಯಾರಾದರು ಕಲ್ಲು ಎಸೆದರೆ, ಅದನ್ನು ಮುಸ್ಲಿಮರೇ ಮಾಡಿದ್ದಾರೆ ಎಂದು ಹೇಳುವುದು ಕೆಲವರಿಗೆ ವಾಡಿಕೆಯಾಗಿದೆ. ಈ ಮೂಲಕ ಮುಸ್ಲಿಂ ಸಮುದಾಯವನ್ನು ದೇಶ ವಿರೋಧಿಗಳ ರೀತಿ ಬಿಂಬಿಸಲಾಗುತ್ತಿದೆ.

ಇತ್ತೀಚೆಗೆ ಪಾಕಿಸ್ತಾನದಲ್ಲಿ ರೈಲು ಹಳಿಯೊಂದರಿಂದ ಮಕ್ಕಳು ಕಬ್ಬಿಣದ ವಸ್ತುಗಳನ್ನು ಕಳವು ಮಾಡಿದ ಘಟನೆಯನ್ನು ಭಾರತದಲ್ಲಿ ರೈಲು ಅಪಘಾತ ಉಂಟು ಮಾಡಲು ಮುಸ್ಲಿಂ ಮಕ್ಕಳು ರೈಲು ಹಳಿಗೆ ಹಾನಿ ಮಾಡುತ್ತಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಅದನ್ನು ನಾವು ಫ್ಯಾಕ್ಟ್‌ಚೆಕ್ ಮಾಡಿ ಜನರಿಗೆ ಸತ್ಯಾಸತ್ಯತೆ ತಿಳಿಸುವ ಪ್ರಯತ್ನ ಮಾಡಿದ್ದೇವೆ. ಆ ಸುದ್ದಿಯ ಲಿಂಕ್ ಕೆಳಗಿದೆ.

FACT CHECK : ಮುಸ್ಲಿಂ ಮಕ್ಕಳು ರೈಲ್ವೆ ಹಳಿಗೆ ಹಾನಿ ಮಾಡಿದ್ದಾರೆ ಎಂದು ಸುಳ್ಳು ವಿಡಿಯೋ ಹಂಚಿಕೆ

ಕಳೆದ ವರ್ಷ ಕಲಬುರಗಿಯ ಬಾಲಕನ ವಿಡಿಯೋ ಸುಳ್ಳು ಪ್ರತಿಪಾದನೆ ಮತ್ತು ಕೋಮು ಬಣ್ಣದೊಂದಿಗೆ ವೈರಲ್ ಆಗಿತ್ತು. ಆಗ ಖ್ಯಾತ ಫ್ಯಾಕ್ಟ್‌ಚೆಕ್ ಸಂಸ್ಥೆ ಆಲ್ಟ್‌ ನ್ಯೂಸ್ ವರದಿ ಪ್ರಕಟಿಸಿ ಜನರಿಗೆ ಸತ್ಯ ತಿಳಿಸಿತ್ತು. ಅದರ ಲಿಂಕ್ ಕೆಳಗಿದೆ.

5-yr-old video of boy placing stones on rail tracks viral with misleading claims

ಆಲ್ಟ್‌ ನ್ಯೂಸ್ ಸುದ್ದಿ ಬರೆಯುವ ವೇಳೆ, ರಾಯಚೂರು ರೈಲ್ವೆಯ ವೃತ್ತ ನಿರೀಕ್ಷಕ ರವಿಕುಮಾರ್ ಅವರನ್ನು ಸಂಪರ್ಕಿಸಿತ್ತು. ಅವರು ಕಲಬುರಗಿಯಲ್ಲಿ ಮಕ್ಕಳು ಆಟವಾಡುತ್ತಾ ರೈಲು ಹಳಿ ಮೇಲೆ ಕಲ್ಲು ಇಟ್ಟಿರುವುದನ್ನು ಖಚಿತಪಡಿಸಿದ್ದರು.

ಇಂದು (ಸೆ.8, 2024) ಆಲ್ಟ್‌ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಝುಬೈರ್ ಅವರು ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ಕಲಬುರಗಿಯ ಹಳೆಯ ವಿಡಿಯೋಗೆ ಬಲಪಂಥೀಯರು ಕೋಮು ಬಣ್ಣ ಬಳಿದಿರುವುದನ್ನು ವಿವರಿಸಿದ್ದಾರೆ.

 

ಒಟ್ಟಿನಲ್ಲಿ, ಕಲಬುರಗಿಯಲ್ಲಿ 6 ವರ್ಷಗಳ ಹಿಂದೆ ನಡೆದ ಘಟನೆಯೊಂದರ ವಿಡಿಯೋವನ್ನು ಈಗ ಹಂಚಿಕೊಂಡು, ಅದಕ್ಕೆ ಕೋಮು ಬಣ್ಣ ಬಳಿಯಲಾಗಿದೆ.

ಇದನ್ನೂ ಓದಿ : FACT CHECK : ಹಿಂದೂ ಬಾಲಕನ ತಾಯತವನ್ನು ಮುಸ್ಲಿಮರು ಬಲವಂತದಿಂದ ತೆಗೆದಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...