Homeಫ್ಯಾಕ್ಟ್‌ಚೆಕ್FACT CHECK : ಕಲಬುರಗಿಯ ಹಳೆಯ ವಿಡಿಯೋಗೆ ಕೋಮು ಬಣ್ಣ ಬಳಿದು ಹಂಚಿಕೊಳ್ಳುತ್ತಿರುವ ಬಲಪಂಥೀಯರು

FACT CHECK : ಕಲಬುರಗಿಯ ಹಳೆಯ ವಿಡಿಯೋಗೆ ಕೋಮು ಬಣ್ಣ ಬಳಿದು ಹಂಚಿಕೊಳ್ಳುತ್ತಿರುವ ಬಲಪಂಥೀಯರು

- Advertisement -
- Advertisement -

ಇಬ್ಬರು ವ್ಯಕ್ತಿಗಳು ಬಾಲಕನೋರ್ವನ ಕೈ ಹಿಡಿದುಕೊಂಡು, ಆತನಿಂದ ರೈಲು ಹಳಿ ಮೇಲೆ ಇಟ್ಟಿರುವ ಕಲ್ಲುಗಳನ್ನು ತೆಗೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವಿಡಿಯೋದಲ್ಲಿ, ಆ ವ್ಯಕ್ತಿಗಳು ಕನ್ನಡ ಭಾಷೆಯಲ್ಲಿ “ಎಷ್ಟು ರೈಲುಗಳಿಗೆ ಈ ರೀತಿ ಕಲ್ಲು ಇಟ್ಟಿದ್ದೀರಿ? ಎಂದು ಕೇಳುತ್ತಿರುವುದು ಮತ್ತು ಅದಕ್ಕೆ, “ಇದೇ ಮೊದಲ ಬಾರಿ ಇಟ್ಟಿದ್ದೀನಿ ಅಂಕಲ್. ನಿಮ್ಮ ಕಾಲಿಗೆ ಬೀಳುತ್ತೇನೆ, ದಯವಿಟ್ಟು ಬಿಟ್ಟು ಬಿಡಿ” ಎಂದು ಬಾಲಕ ಹೇಳುತ್ತಿರುವುದನ್ನು ನೋಡಬಹುದು.

ಸದಾ ಸುಳ್ಳು ಮತ್ತು ಕೋಮು ದ್ವೇಷದ ಸುದ್ದಿಗಳನ್ನು ಹಂಚಿಕೊಳ್ಳುವ ಬಲಪಂಥೀಯ ಎಕ್ಸ್ ಬಳಕೆದಾರ ರೌಶನ್ ಸಿಹ್ಹಾ ಅಥವಾ ಮಿ.ಸಿನ್ಹಾ ಇಂದು (ಸೆಪ್ಟೆಂಬರ್ 8, 2024) ವಿಡಿಯೋ ಪೋಸ್ಟ್ ಮಾಡಿ “ಇದು ತಮಾಷೆಯಲ್ಲ; ಇದು ಗಂಭೀರ ಸಮಸ್ಯೆ!. ದಿನಾಂಕ ಮತ್ತು ಸ್ಥಳ ತಿಳಿದಿಲ್ಲ. ಆದರೆ, ಇಂತಹ ವಿಡಿಯೋಗಳು ಬಹುತೇಕ ಪ್ರತಿದಿನ ಹೊರ ಬರುತ್ತಿವೆ. ರೈಲು ಹಳಿತಪ್ಪಿಸುವ ಉದ್ದೇಶದಿಂದ ಇಂತಹ ಕೆಲಸಗಳನ್ನು ಮಾಡಲು ಅವರಿಗೆ ಕಲಿಸಲಾಗುತ್ತಿದೆಯೇ?” ಎಂದು ಬರೆದುಕೊಂಡಿದ್ದಾರೆ.

ಮತ್ತೋರ್ವ ಬಲ ಪಂಥೀಯ ಎಕ್ಸ್ ಬಳಕೆದಾರ ದೀಪಕ್ ಶರ್ಮಾ (@SonOfBharat7)ಸೆಪ್ಟೆಂಬರ್ 6, 2024ರಂದು ವಿಡಿಯೋ ಹಂಚಿಕೊಂಡು ” ಹಿಂದೂಗಳೇ ನಿಮ್ಮನ್ನು ಕೊಲ್ಲಲು ನರಭಕ್ಷಕ ಜಿಹಾದಿಗಳ ಮಗು ಸಿದ್ದವಾಗಿದೆ. ನಿಮ್ಮ ಪ್ರೀತಿ ಪಾತ್ರರ ಮೃತದೇಹಗಳನ್ನು ನಿಮ್ಮ ನಾಲ್ಕು ಭುಜಗಳ ಮೇಲೆ ಹೊತ್ತುಕೊಂಡು ಹೋಗುತ್ತೀರಿ. ಈ ವಿಡಿಯೋ ಕರ್ನಾಟಕದದ್ದು ಎನ್ನಲಾಗಿದೆ. ಎಕ್ಸ್ ಪ್ರೆಸ್ ರೈಲು ಪಲ್ಟಿಯಾಗಿ ಎಷ್ಟೋ ಜನ ಪ್ರಾಣ ಕಳೆದುಕೊಂಡಿದ್ದಾರೆ. ಹೀಗೊಂದು ಸುದ್ದಿ ಬರುವ ದಿನ ದೂರವಿಲ್ಲ. ಎಚ್ಚರಿಕೆ” ಎಂದು ಹಿಂದಿ ಭಾಷೆಯಲ್ಲಿ ಬರೆದುಕೊಂಡಿದ್ದರು

ಕೋಮು ದ್ವೇಷದ ಸುದ್ದಿಗಳನ್ನು ಹಂಚಿಕೊಳ್ಳುವ ಫ್ರಂಟಲ್ ಪೋರ್ಸ್ (@FrontalForce) ಎಂಬ ಇನ್ನೊಂದು ಎಕ್ಸ್ ಖಾತೆಯಲ್ಲಿ ಸೆಪ್ಟೆಂಬರ್ 7ರಂದು ವಿಡಿಯೋ ಹಂಚಿಕೊಂಡು “ಬ್ರೇಕಿಂಗ್, ರೈಲು ಅಪಘಾತ ಉಂಟು ಮಾಡಲು ರೈಲು ಹಳಿಗಳ ಮೇಲೆ ಕಲ್ಲು ಮತ್ತು ಇತರ ವಸ್ತುಗಳನ್ನು ಇಟ್ಟು ಸ್ಥಳೀಯರ ಕೈಗೆ ಸಿಕ್ಕಿಬಿದ್ದ ಮೂಲಭೂತವಾದಿ ಎಂದು ಬರೆದುಕೊಂಡಿದ್ದರು.

ಇನ್ನೂ ಅನೇಕ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ವಿಡಿಯೋ ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡವರಲ್ಲಿ ಕೆಲವರು ‘ಮುಸ್ಲಿಂ ಹುಡುಗ’ ರೈಲು ಹಳಿ ಮೇಲೆ ಕಲ್ಲುಗಳನ್ನು ಇಟ್ಟು ಸಿಕ್ಕಿ ಬಿದ್ದಿದ್ದಾನೆ ಎಂದು ನೇರವಾಗಿ ಬರೆದುಕೊಂಡರೆ, ಇನ್ನೂ ಕೆಲವರು ಪರೋಕ್ಷವಾಗಿ ವಿಡಿಯೋಗೆ ಕೋಮು ಬಣ್ಣ ಬಳಿಯುವ ಪ್ರಯತ್ನ ಮಾಡಿದ್ದಾರೆ.

ವಿಡಿಯೋ ಪೋಸ್ಟ್ ಮಾಡಿದವರು ಸದಾ ಸುಳ್ಳು ಮತ್ತು ಕೋಮುದ್ವೇಷದ ಸುದ್ದಿಗಳನ್ನು ಹಂಚಿಕೊಳ್ಳುವವರಾದ್ದರಿಂದ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ.

ಫ್ಯಾಕ್ಟ್‌ಚೆಕ್ : ವೈರಲ್ ಆಗಿರುವ ವಿಡಿಯೋ ಕರ್ನಾಟಕದ ಕಲಬುರಗಿ ಜಿಲ್ಲೆಯದ್ದು ಮತ್ತು ಆರು ವರ್ಷ ಹಳೆಯದ್ದಾಗಿದೆ. ಅಂದರೆ, 2018ರಲ್ಲಿ ನಡೆದ ಘಟನೆಯದ್ದಾಗಿದೆ.

ಕಲಬುರಗಿ ಕೇಂದ್ರ ರೈಲು ನಿಲ್ದಾಣದಿಂದ ಹಿರೇನಂದೂರು ಕಡೆಗೆ ಸುಮಾರು 2 ಕಿಮೀ ದೂರದಲ್ಲಿ ಈ ಘಟನೆ ನಡೆದಿದೆ. ವಿಡಿಯೋದಲ್ಲಿರುವ ಬಾಲಕ ಪಕ್ಕದ ಕೊಳಗೇರಿಯ ನಿವಾಸಿಯಾಗಿದ್ದು, ಆತ ಮತ್ತು ಸ್ನೇಹಿತರು ಆಟವಾಡುತ್ತಾ ರೈಲು ಹಳಿ ಮೇಲೆ ಕಲ್ಲುಗಳನ್ನು ಜೋಡಿಸಿದ್ದಾರೆ. ಅವರಿಗೆ ಹಳಿ ಮೇಲೆ ಕಲ್ಲುಗಳನ್ನು ಇಟ್ಟು ಅಪಘಾತ ಉಂಟು ಮಾಡುವ ಯಾವುದೇ ಉದ್ದೇಶ ಇರಲಿಲ್ಲ.

ಮಕ್ಕಳು ರೈಲು ಹಳಿಗಳ ಮೇಲೆ ಕಲ್ಲು ಇಟ್ಟಿರುವುದನ್ನು ಗಮನಿಸಿದ ಟ್ರ್ಯಾಕ್‌ಮೆನ್‌ಗಳಾದ ಗೋಪಾಲ್, ರಾಜ್‌ಕುಮಾರ್ ಮತ್ತು ರಾಜು ಬಾಲಕನೋರ್ವನನ್ನು ಹಿಡಿದು ಕಲ್ಲುಗಳನ್ನು ತೆಗೆಸಿದ್ದರು.

ಈ ಘಟನೆಯ ವಿಡಿಯೋ 2018ರ ಬಳಿಕ ಅನೇಕ ಬಾರಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಮುಸ್ಲಿಂ ಬಾಲಕರು ರೈಲು ಹಳಿಗಳ ಮೇಲೆ ಕಲ್ಲುಗಳನ್ನು ಇಟ್ಟಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿತ್ತು. ಅಸಲಿಗೆ ರೈಲು ಹಳಿಗೆ ಕಲ್ಲುಗಳನ್ನು ಇಟ್ಟ ಬಾಲಕ ಹಿಂದೂ ಧರ್ಮದವನಾಗಿದ್ದಾನೆ.

ಇಲ್ಲಿ ಬಾಲಕನ ಧರ್ಮವನ್ನು ಹೇಳುವ ಅಗತ್ಯವಿಲ್ಲ. ಆದರೆ, ಇತ್ತೀಚಿಗೆ ಯಾವುದೇ ರೈಲು ಹಳಿಗಳ ಮೇಲೆ ಯಾವುದೇ ವಸ್ತುಗಳನ್ನು ಇಟ್ಟಿರುವುದು ಕಂಡು ಬಂದರೆ ಅಥವಾ ನೂತನ ವಂದೇ ಭಾರತ್ ರೈಲಿಗೆ ಯಾರಾದರು ಕಲ್ಲು ಎಸೆದರೆ, ಅದನ್ನು ಮುಸ್ಲಿಮರೇ ಮಾಡಿದ್ದಾರೆ ಎಂದು ಹೇಳುವುದು ಕೆಲವರಿಗೆ ವಾಡಿಕೆಯಾಗಿದೆ. ಈ ಮೂಲಕ ಮುಸ್ಲಿಂ ಸಮುದಾಯವನ್ನು ದೇಶ ವಿರೋಧಿಗಳ ರೀತಿ ಬಿಂಬಿಸಲಾಗುತ್ತಿದೆ.

ಇತ್ತೀಚೆಗೆ ಪಾಕಿಸ್ತಾನದಲ್ಲಿ ರೈಲು ಹಳಿಯೊಂದರಿಂದ ಮಕ್ಕಳು ಕಬ್ಬಿಣದ ವಸ್ತುಗಳನ್ನು ಕಳವು ಮಾಡಿದ ಘಟನೆಯನ್ನು ಭಾರತದಲ್ಲಿ ರೈಲು ಅಪಘಾತ ಉಂಟು ಮಾಡಲು ಮುಸ್ಲಿಂ ಮಕ್ಕಳು ರೈಲು ಹಳಿಗೆ ಹಾನಿ ಮಾಡುತ್ತಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಅದನ್ನು ನಾವು ಫ್ಯಾಕ್ಟ್‌ಚೆಕ್ ಮಾಡಿ ಜನರಿಗೆ ಸತ್ಯಾಸತ್ಯತೆ ತಿಳಿಸುವ ಪ್ರಯತ್ನ ಮಾಡಿದ್ದೇವೆ. ಆ ಸುದ್ದಿಯ ಲಿಂಕ್ ಕೆಳಗಿದೆ.

FACT CHECK : ಮುಸ್ಲಿಂ ಮಕ್ಕಳು ರೈಲ್ವೆ ಹಳಿಗೆ ಹಾನಿ ಮಾಡಿದ್ದಾರೆ ಎಂದು ಸುಳ್ಳು ವಿಡಿಯೋ ಹಂಚಿಕೆ

ಕಳೆದ ವರ್ಷ ಕಲಬುರಗಿಯ ಬಾಲಕನ ವಿಡಿಯೋ ಸುಳ್ಳು ಪ್ರತಿಪಾದನೆ ಮತ್ತು ಕೋಮು ಬಣ್ಣದೊಂದಿಗೆ ವೈರಲ್ ಆಗಿತ್ತು. ಆಗ ಖ್ಯಾತ ಫ್ಯಾಕ್ಟ್‌ಚೆಕ್ ಸಂಸ್ಥೆ ಆಲ್ಟ್‌ ನ್ಯೂಸ್ ವರದಿ ಪ್ರಕಟಿಸಿ ಜನರಿಗೆ ಸತ್ಯ ತಿಳಿಸಿತ್ತು. ಅದರ ಲಿಂಕ್ ಕೆಳಗಿದೆ.

5-yr-old video of boy placing stones on rail tracks viral with misleading claims

ಆಲ್ಟ್‌ ನ್ಯೂಸ್ ಸುದ್ದಿ ಬರೆಯುವ ವೇಳೆ, ರಾಯಚೂರು ರೈಲ್ವೆಯ ವೃತ್ತ ನಿರೀಕ್ಷಕ ರವಿಕುಮಾರ್ ಅವರನ್ನು ಸಂಪರ್ಕಿಸಿತ್ತು. ಅವರು ಕಲಬುರಗಿಯಲ್ಲಿ ಮಕ್ಕಳು ಆಟವಾಡುತ್ತಾ ರೈಲು ಹಳಿ ಮೇಲೆ ಕಲ್ಲು ಇಟ್ಟಿರುವುದನ್ನು ಖಚಿತಪಡಿಸಿದ್ದರು.

ಇಂದು (ಸೆ.8, 2024) ಆಲ್ಟ್‌ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಝುಬೈರ್ ಅವರು ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ಕಲಬುರಗಿಯ ಹಳೆಯ ವಿಡಿಯೋಗೆ ಬಲಪಂಥೀಯರು ಕೋಮು ಬಣ್ಣ ಬಳಿದಿರುವುದನ್ನು ವಿವರಿಸಿದ್ದಾರೆ.

 

ಒಟ್ಟಿನಲ್ಲಿ, ಕಲಬುರಗಿಯಲ್ಲಿ 6 ವರ್ಷಗಳ ಹಿಂದೆ ನಡೆದ ಘಟನೆಯೊಂದರ ವಿಡಿಯೋವನ್ನು ಈಗ ಹಂಚಿಕೊಂಡು, ಅದಕ್ಕೆ ಕೋಮು ಬಣ್ಣ ಬಳಿಯಲಾಗಿದೆ.

ಇದನ್ನೂ ಓದಿ : FACT CHECK : ಹಿಂದೂ ಬಾಲಕನ ತಾಯತವನ್ನು ಮುಸ್ಲಿಮರು ಬಲವಂತದಿಂದ ತೆಗೆದಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...