Homeಫ್ಯಾಕ್ಟ್‌ಚೆಕ್FACT CHECK : ಕರ್ನಾಟಕ ಸರ್ಕಾರದಿಂದ ಗಣೇಶ ಮೆರವಣಿಗೆಗೆ ಅಡ್ಡಿ ಎಂದು ಸುಳ್ಳು ಸುದ್ದಿ ಹಬ್ಬಿಸಿದ...

FACT CHECK : ಕರ್ನಾಟಕ ಸರ್ಕಾರದಿಂದ ಗಣೇಶ ಮೆರವಣಿಗೆಗೆ ಅಡ್ಡಿ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಬಲಪಂಥೀಯರು

ದನಿಗೂಡಿಸಿದ ಪ್ರಧಾನಿ ಮೋದಿ!

- Advertisement -
- Advertisement -

ಸೆಪ್ಟೆಂಬರ್ 14, 2024 ರಂದು ಹರಿಯಾಣದ ಕುರುಕ್ಷೇತ್ರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, “ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದಲ್ಲಿ ಗಣಪತಿಯನ್ನೂ ಜೈಲಿಗೆ ಹಾಕಲಾಗುತ್ತಿದೆ. ಗಣಪತಿಯನ್ನು ಪೊಲೀಸ್ ವ್ಯಾನಿನಲ್ಲಿಟ್ಟು ಬೀಗ ಹಾಕಿದ್ದಾರೆ. ಇಡೀ ರಾಷ್ಟ್ರ ಗಣೇಶ ಉತ್ಸವವನ್ನು ಆಚರಿಸುತ್ತಿದ್ದರೆ, ವಿಘ್ನ ವಿನಾಶಕನಾದ ಗಣಪತಿಯನ್ನು ಪೂಜಿಸಲು ಕಾಂಗ್ರೆಸ್ ಅಡ್ಡಿಪಡಿಸುತ್ತಿದೆ. ತುಷ್ಟೀಕರಣಕ್ಕಾಗಿ ಕಾಂಗ್ರೆಸ್ ಯಾವ ಹಂತಕ್ಕೂ ಹೋಗಬಹುದು” ಎಂದು ಹೇಳಿದ್ದರು.

ಸೆಪ್ಟೆಂಬರ್ 17ರಂದು ಒಡಿಶಾದ ಭುವನೇಶ್ವರದಲ್ಲಿ ಭಾಷಣ ಮಾಡುವಾಗಲೂ ಪ್ರಧಾನಿ ಈ ಮಾತುಗಳು  ಪುನರುಚ್ಚರಿಸಿದ್ದರು “ಅವರ (ಕಾಂಗ್ರೆಸ್) ಸರ್ಕಾರವು ಅಧಿಕಾರದಲ್ಲಿರುವ ಕರ್ನಾಟಕದಲ್ಲಿ ಗಣೇಶನ ವಿಗ್ರಹವನ್ನು ಕಂಬಿ ಹಿಂದೆ ಇರಿಸುವ ಮೂಲಕ ದೊಡ್ಡ ಅಪರಾಧ ಮಾಡಿದ್ದಾರೆ” ಎಂದಿದ್ದರು.

ಹರಿಯಾಣದಲ್ಲಿ ಪ್ರಧಾನಿ ಮೋದಿ ಹೇಳಿಕೆ ಕೊಟ್ಟಾಗ ಕರ್ನಾಟಕದಲ್ಲಿ ಗಣೇಶ ಮೂರ್ತಿಯನ್ನು ಪೊಲೀಸ್ ವ್ಯಾನ್‌ನಲ್ಲಿಟ್ಟ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.

ಸೆಪ್ಟೆಂಬರ್ 13, 2024 ರಂದು ಎಕ್ಸ್‌ನಲ್ಲಿ ವೈರಲ್ ಫೋಟೋ ಹಂಚಿಕೊಂಡಿದ್ದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ “ಕಾಂಗ್ರೆಸ್ ಹಿಂದೂಗಳ ನಂಬಿಕೆಯನ್ನು ಅವಮಾನಿಸಿದೆ” ಎಂದು ಬರೆದುಕೊಂಡಿದ್ದರು.

ವೈರಲ್ ಫೋಟೋವನ್ನು ಎಕ್ಸ್ ಬಳಕೆದಾರ ಗಿರೀಶ್ ಭಾರದ್ವಾಜ್ (@Girishvhp) ಎಂಬವರು ಕೂಡ ಸೆ.13, 2024ರಂದು ಹಂಚಿಕೊಂಡಿದ್ದರು. ಗಿರೀಶ್ ಅವರು ತಮ್ಮ ಎಕ್ಸ್ ಬಯೋದಲ್ಲಿ ‘ಸ್ವಯಂಸೇವಕ’ ಹಾಗೂ  ವಿಶ್ವ ಹಿಂದೂ ಪರಿಷತ್‌ನೊಂದಿಗೆ ಗುರುತಿಸಿಕೊಂಡಿರುವುದಾಗಿ ಬರೆದುಕೊಂಡಿದ್ದಾರೆ. “ಭಗವಾನ್ ಗಣೇಶನನ್ನು ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ. ಮಂಡ್ಯದ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ಮೇಲೆ ಮುಸ್ಲಿಮರು ಕಲ್ಲು ತೂರಾಟ ನಡೆಸಿದ ಘಟನೆಯನ್ನು ಖಂಡಿಸಿ ನಡೆದ ಪ್ರತಿಭಟನೆಯ ವೇಳೆ ಈ ಬಂಧನ ನಡೆದಿದೆ ಎಂದೂ ಅವರು ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದರು.

ನಾವು ಈ ಸುದ್ದಿ ಬರೆಯುವ ಹೊತ್ತಿಗೆ ಗಿರೀಶ್ ಅವರ ಪೋಸ್ಟ್ 2 ಲಕ್ಷದ 70 ಸಾವಿರ ವೀಕ್ಷಣೆಗಳನ್ನು ಪಡೆದಿತ್ತು.

ಬಿಜೆಪಿಯ ಉನ್ನತ ನಾಯಕರು ಸೇರಿದಂತೆ ಹಲವಾರು ಎಕ್ಸ್‌ ಬಳಕೆದಾರರು ಕೂಡ ವೈರಲ್ ಫೋಟೋ ಹಂಚಿಕೊಂಡು ಕರ್ನಾಟಕದ ಕಾಂಗ್ರೆಸ್ ಸರ್ಕಾರವನ್ನು ಹಿಂದೂ ವಿರೋಧಿ ಎಂದು ಟೀಕಿಸಿದ್ದರು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ (@blsantosh), ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ (@BYVijayendra), ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ (@Shehzad_Ind), ಪಕ್ಷದ ಬೆಂಗಳೂರು ಕೇಂದ್ರ ಸಂಸದ ಪಿ ಸಿ ಮೋಹನ್ (@PCMohanMP), ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ (@shobabjp) ಫೋಟೋ ಹಂಚಿಕೊಂಡವರಲ್ಲಿ ಪ್ರಮುಖರು.

ಮಾಧ್ಯಮಗಳು ಕೂಡ ಘಟನೆಯ ಬಗ್ಗೆ ವರದಿ ಮಾಡಿತ್ತು. ಸುದ್ದಿ ಸಂಸ್ಥೆ ಎಎನ್‌ಐ (@ANI) ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಹೇಳಿಕೆಯನ್ನು ಎಕ್ಸ್‌ನಲ್ಲಿ ಹಂಚಿಕೊಂಡಿತ್ತು.

ಸೆಪ್ಟೆಂಬರ್ 14ರಂದು ವರದಿ ಪ್ರಕಟಿಸಿದ್ದ ರಿಪಬ್ಲಿಕ್ ಟಿವಿ ಇಂಗ್ಲಿಷ್ “ಕಾಂಗ್ರೆಸ್ ಆಡಳಿತದ ಕರ್ನಾಟಕದಲ್ಲಿ ಗಣಪತಿಯನ್ನೂ ಕಂಬಿ ಹಿಂದೆ ತಳ್ಳಲಾಗಿದೆ” ಎಂಬ ಪ್ರಧಾನಿ ಮೋದಿಯವರ ಹೇಳಿಕೆಯನ್ನು ಉಲ್ಲೇಖಿಸಿತ್ತು.

ಫ್ಯಾಕ್ಟ್‌ಚೆಕ್  : ಪ್ರಧಾನಿ ಮೋದಿ ಭಾಷಣದಲ್ಲಿ ಉಲ್ಲೇಖಿಸಿರುವ, ಬಿಜೆಪಿ ನಾಯಕರು ಎಕ್ಸ್‌ನಲ್ಲಿ ಹಂಚಿಕೊಂಡಿರುವ ವೈರಲ್ ಫೋಟೋದ ಕುರಿತು ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ.

ಈ ಕುರಿತ ಮಾಧ್ಯಮ ವರದಿಗಳನ್ನು ಪರಿಶೀಲಿಸಿದಾಗ ” ಹಲವು ವರದಿಗಳು ನಮಗೆ ಲಭ್ಯವಾಗಿದೆ. ಈ ಪೈಕಿ ದಿ ನ್ಯೂಸ್ ಮಿನಿಟ್ ವೆಬ್‌ಸೈಟ್ “Controversy erupts in Bengaluru over Ganesha idol in police van: What really happened?” ಎಂಬ ಶೀರ್ಷಿಕೆಯ ವರದಿಯನ್ನು ನಾವು ಪರಿಶೀಲಿಸಿದ್ದೇವೆ.

ವರದಿಯಲ್ಲಿ “ಮಂಡ್ಯದ ಸೆಪ್ಟೆಂಬರ್ 11ರಂದು ಮಂಡ್ಯದ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ, ಗಲಾಟೆ ನಡೆದಿರುವುದನ್ನು ಖಂಡಿಸಿ ಸೆಪ್ಟೆಂಬರ್ 13ರಂದು ಬೆಂಗಳೂರಿನ ಟೌನ್‌ಹಾಲ್ ಮುಂಭಾಗದಲ್ಲಿ ‘ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿ’ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪ್ರತಿಭಟನಾ ನಿರತರು ಗಣೇಶ ಮೂರ್ತಿಯನ್ನು ಹೊತ್ತು ತಂದಿದ್ದರು. ಪ್ರತಿಭಟನಾಕಾರರನ್ನು ಸ್ಥಳದಿಂದ ಚದುರಿಸುವಾಗ ಪೊಲೀಸರು ಗಣೇಶ ಮೂರ್ತಿಯನ್ನು ಎತ್ತಿಕೊಂಡು ಹೋಗಿ ಪೊಲೀಸ್ ವ್ಯಾನ್‌ನಲ್ಲಿಟ್ಟಿದ್ದರು. ಈ ಕುರಿತ ಫೋಟೋ ವೈರಲ್ ಆಗಿದ್ದು, ಬಿಜೆಪಿ ನಾಯಕರು ಹಾಗೂ ಮತ್ತಿತರು ಪೊಲೀಸರ ನಡೆಯನ್ನು ಖಂಡಿಸಿದ್ದಾರೆ” ಎಂದಿದೆ.

“ಹೈಕೋರ್ಟ್ ಆದೇಶದಂತೆ ಬೆಂಗಳೂರು ನಗರದಲ್ಲಿ ಸ್ವಾತಂತ್ರ್ಯ ಉದ್ಯಾನವದಲ್ಲಿ (ಫ್ರೀಡಂ ಪಾರ್ಕ್‌) ಮಾತ್ರ ಯಾವುದೇ ಪ್ರತಿಭಟನೆ ಮಾಡಬೇಕು. ಗಣೇಶ ಉತ್ಸವ ಸಮಿತಿಯವರು ನಿಯಮ ಉಲ್ಲಂಘಿಸಿ ಟೌನ್ ಹಾಲ್ ಬಳಿ ಪ್ರತಿಭಟಿಸಿದ್ದಕ್ಕೆ ಪೊಲೀಸರು ಅಡ್ಡಿಪಡಿಸಿದ್ದಾರೆ” ಎಂದೂ ವರದಿಯಲ್ಲಿ ತಿಳಿಸಲಾಗಿದೆ.

“ಪ್ರತಿಭಟನೆಗೆ ಸಂಬಂಧಿಸಿದಂತೆ ಪೊಲೀಸರು ಸುಮಾರು 40 ಮಂದಿಯನ್ನು ಬಂಧಿಸಿದ್ದರು. ಅವರಿಂದ ವಶಪಡಿಸಿಕೊಂಡ ಗಣೇಶ ಮೂರ್ತಿಯನ್ನು ಹಲಸೂರು ಕೆರೆಯಲ್ಲಿ ವಿಸರ್ಜನೆ ಮಾಡಿದ್ದಾರೆ” ಎಂದು ವರದಿಯಲ್ಲಿ ವಿವರಿಸಲಾಗಿದೆ.

ವೈರಲ್ ಫೋಟೋ ಮತ್ತು ಅದರ ಸುತ್ತಮುತ್ತ ಉಂಟಾಗಿರುವ ಗೊಂದಲದ ಕುರಿತು ಸೆಪ್ಟೆಂಬರ್ 15ರಂದು ಬೆಂಗಳೂರು ಕೇಂದ್ರೀಯ ವಿಭಾಗದ ಡಿಸಿಪಿ (@DCPCentralBCP)ಯವರ ಅಧಿಕೃತ ಎಕ್ಸ್ ಹ್ಯಾಂಡಲ್ ಸ್ಪಷ್ಟನೆ ಕೊಡಲಾಗಿತ್ತು.

“ಬೆಂಗಳೂರಿನ ಟೌನ್ ಹಾಲ್ ಬಳಿ ನಿಮಜ್ಜನಕ್ಕೆ ತೆರಳುತ್ತಿದ್ದ ಭಕ್ತರಿಂದ ಗಣೇಶ ಮೂರ್ತಿಯನ್ನು ಅಧಿಕಾರಿಗಳು ಕಸಿದುಕೊಂಡಿದ್ದಾರೆ ಎಂಬ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಪೋಸ್ಟ್‌ಗಳ ಬಗ್ಗೆ ಸ್ಪಷ್ಟನೆ”

ಸೆಪ್ಟೆಂಬರ್ 13, 2024 ರಂದು, ಹಿಂದೂ ಗುಂಪುಗಳು ಬೆಂಗಳೂರಿನ ಟೌನ್ ಹಾಲ್‌ ಬಳಿ ನಾಗಮಂಗಲ ಗಣೇಶ ಮೆರವಣಿಗೆಯ ಘಟನೆಯನ್ನು ಖಂಡಿಸಿ, ಹೈಕೋರ್ಟ್ ಆದೇಶವನ್ನು ಧಿಕ್ಕರಿಸಿ ಪ್ರತಿಭಟಿಸಿದ್ದವು. ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ. ಬಳಿಕ ಗಣಪತಿ ಮೂರ್ತಿಯನ್ನು ಅಧಿಕಾರಿಗಳು ವಿಧಿ ವಿಧಾನಗಳೊಂದಿಗೆ ನಿಮಜ್ಜನ ಮಾಡಿದ್ದಾರೆ” ಎಂದು ಡಿಸಿಪಿಯವರ ಎಕ್ಸ್‌ ಹ್ಯಾಂಡಲ್‌ನಲ್ಲಿ ಹೇಳಲಾಗಿತ್ತು.

 

ಒಟ್ಟಿನಲ್ಲಿ , ನಾಗಮಂಗಲದ ಘಟನೆಯನ್ನು ಖಂಡಿಸಿ ಬೆಂಗಳೂರಿನ ಟೌನ್‌ಹಾಲ್‌ ಬಳಿ ಬೆಂಗಳೂರು ಗಣೇಶ ಉತ್ಸವ ಸಮಿತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪ್ರತಿಭಟನಾಕಾರರು ತಂದಿದ್ದ ಗಣೇಶ ಮೂರ್ತಿಯನ್ನು ವಶಪಡಿಸಿಕೊಂಡಿದ್ದ ಪೊಲೀಸರು, ಅದನ್ನು ಖಾಲಿ ಪೊಲೀಸ್ ವ್ಯಾನ್‌ನಲ್ಲಿಟ್ಟಿದ್ದರು. ಈ ಕುರಿತ ಪೋಟೋವನ್ನು ಹಂಚಿಕೊಂಡ ಬಿಜೆಪಿ ನಾಯಕರು ಮತ್ತು ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ” ಕಾಂಗ್ರೆಸ್ ಆಡಳಿತ ಕರ್ನಾಟಕದಲ್ಲಿ ಗಣೇಶ ಮೆರವಣಿಗೆಗೆ ಪೊಲೀಸರು ಅಡ್ಡಿಪಡಿಸಿದ್ದಾರೆ. ಗಣೇಶ ಮೂರ್ತಿಯನ್ನು ಬಂಧಿಸಿ ಕಂಬಿ ಹಿಂದೆ ತಳ್ಳಿದ್ದಾರೆ” ಎಂದು ಸುಳ್ಳು ಸಂದೇಶ ಹಂಚಿಕೊಂಡಿದ್ದರು. ಇದನ್ನೇ ಭಾಷಣದಲ್ಲಿ ಉಲ್ಲೇಖಿಸುವ ಮೂಲಕ ಸುಳ್ಳು ಸುದ್ದಿಗೆ ಪ್ರಧಾನಿ ಧನಿಗೂಡಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...