Homeಫ್ಯಾಕ್ಟ್‌ಚೆಕ್FACT CHECK : ಕರ್ನಾಟಕ ಸರ್ಕಾರದಿಂದ ಗಣೇಶ ಮೆರವಣಿಗೆಗೆ ಅಡ್ಡಿ ಎಂದು ಸುಳ್ಳು ಸುದ್ದಿ ಹಬ್ಬಿಸಿದ...

FACT CHECK : ಕರ್ನಾಟಕ ಸರ್ಕಾರದಿಂದ ಗಣೇಶ ಮೆರವಣಿಗೆಗೆ ಅಡ್ಡಿ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಬಲಪಂಥೀಯರು

ದನಿಗೂಡಿಸಿದ ಪ್ರಧಾನಿ ಮೋದಿ!

- Advertisement -
- Advertisement -

ಸೆಪ್ಟೆಂಬರ್ 14, 2024 ರಂದು ಹರಿಯಾಣದ ಕುರುಕ್ಷೇತ್ರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, “ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದಲ್ಲಿ ಗಣಪತಿಯನ್ನೂ ಜೈಲಿಗೆ ಹಾಕಲಾಗುತ್ತಿದೆ. ಗಣಪತಿಯನ್ನು ಪೊಲೀಸ್ ವ್ಯಾನಿನಲ್ಲಿಟ್ಟು ಬೀಗ ಹಾಕಿದ್ದಾರೆ. ಇಡೀ ರಾಷ್ಟ್ರ ಗಣೇಶ ಉತ್ಸವವನ್ನು ಆಚರಿಸುತ್ತಿದ್ದರೆ, ವಿಘ್ನ ವಿನಾಶಕನಾದ ಗಣಪತಿಯನ್ನು ಪೂಜಿಸಲು ಕಾಂಗ್ರೆಸ್ ಅಡ್ಡಿಪಡಿಸುತ್ತಿದೆ. ತುಷ್ಟೀಕರಣಕ್ಕಾಗಿ ಕಾಂಗ್ರೆಸ್ ಯಾವ ಹಂತಕ್ಕೂ ಹೋಗಬಹುದು” ಎಂದು ಹೇಳಿದ್ದರು.

ಸೆಪ್ಟೆಂಬರ್ 17ರಂದು ಒಡಿಶಾದ ಭುವನೇಶ್ವರದಲ್ಲಿ ಭಾಷಣ ಮಾಡುವಾಗಲೂ ಪ್ರಧಾನಿ ಈ ಮಾತುಗಳು  ಪುನರುಚ್ಚರಿಸಿದ್ದರು “ಅವರ (ಕಾಂಗ್ರೆಸ್) ಸರ್ಕಾರವು ಅಧಿಕಾರದಲ್ಲಿರುವ ಕರ್ನಾಟಕದಲ್ಲಿ ಗಣೇಶನ ವಿಗ್ರಹವನ್ನು ಕಂಬಿ ಹಿಂದೆ ಇರಿಸುವ ಮೂಲಕ ದೊಡ್ಡ ಅಪರಾಧ ಮಾಡಿದ್ದಾರೆ” ಎಂದಿದ್ದರು.

ಹರಿಯಾಣದಲ್ಲಿ ಪ್ರಧಾನಿ ಮೋದಿ ಹೇಳಿಕೆ ಕೊಟ್ಟಾಗ ಕರ್ನಾಟಕದಲ್ಲಿ ಗಣೇಶ ಮೂರ್ತಿಯನ್ನು ಪೊಲೀಸ್ ವ್ಯಾನ್‌ನಲ್ಲಿಟ್ಟ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.

ಸೆಪ್ಟೆಂಬರ್ 13, 2024 ರಂದು ಎಕ್ಸ್‌ನಲ್ಲಿ ವೈರಲ್ ಫೋಟೋ ಹಂಚಿಕೊಂಡಿದ್ದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ “ಕಾಂಗ್ರೆಸ್ ಹಿಂದೂಗಳ ನಂಬಿಕೆಯನ್ನು ಅವಮಾನಿಸಿದೆ” ಎಂದು ಬರೆದುಕೊಂಡಿದ್ದರು.

ವೈರಲ್ ಫೋಟೋವನ್ನು ಎಕ್ಸ್ ಬಳಕೆದಾರ ಗಿರೀಶ್ ಭಾರದ್ವಾಜ್ (@Girishvhp) ಎಂಬವರು ಕೂಡ ಸೆ.13, 2024ರಂದು ಹಂಚಿಕೊಂಡಿದ್ದರು. ಗಿರೀಶ್ ಅವರು ತಮ್ಮ ಎಕ್ಸ್ ಬಯೋದಲ್ಲಿ ‘ಸ್ವಯಂಸೇವಕ’ ಹಾಗೂ  ವಿಶ್ವ ಹಿಂದೂ ಪರಿಷತ್‌ನೊಂದಿಗೆ ಗುರುತಿಸಿಕೊಂಡಿರುವುದಾಗಿ ಬರೆದುಕೊಂಡಿದ್ದಾರೆ. “ಭಗವಾನ್ ಗಣೇಶನನ್ನು ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ. ಮಂಡ್ಯದ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ಮೇಲೆ ಮುಸ್ಲಿಮರು ಕಲ್ಲು ತೂರಾಟ ನಡೆಸಿದ ಘಟನೆಯನ್ನು ಖಂಡಿಸಿ ನಡೆದ ಪ್ರತಿಭಟನೆಯ ವೇಳೆ ಈ ಬಂಧನ ನಡೆದಿದೆ ಎಂದೂ ಅವರು ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದರು.

ನಾವು ಈ ಸುದ್ದಿ ಬರೆಯುವ ಹೊತ್ತಿಗೆ ಗಿರೀಶ್ ಅವರ ಪೋಸ್ಟ್ 2 ಲಕ್ಷದ 70 ಸಾವಿರ ವೀಕ್ಷಣೆಗಳನ್ನು ಪಡೆದಿತ್ತು.

ಬಿಜೆಪಿಯ ಉನ್ನತ ನಾಯಕರು ಸೇರಿದಂತೆ ಹಲವಾರು ಎಕ್ಸ್‌ ಬಳಕೆದಾರರು ಕೂಡ ವೈರಲ್ ಫೋಟೋ ಹಂಚಿಕೊಂಡು ಕರ್ನಾಟಕದ ಕಾಂಗ್ರೆಸ್ ಸರ್ಕಾರವನ್ನು ಹಿಂದೂ ವಿರೋಧಿ ಎಂದು ಟೀಕಿಸಿದ್ದರು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ (@blsantosh), ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ (@BYVijayendra), ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ (@Shehzad_Ind), ಪಕ್ಷದ ಬೆಂಗಳೂರು ಕೇಂದ್ರ ಸಂಸದ ಪಿ ಸಿ ಮೋಹನ್ (@PCMohanMP), ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ (@shobabjp) ಫೋಟೋ ಹಂಚಿಕೊಂಡವರಲ್ಲಿ ಪ್ರಮುಖರು.

ಮಾಧ್ಯಮಗಳು ಕೂಡ ಘಟನೆಯ ಬಗ್ಗೆ ವರದಿ ಮಾಡಿತ್ತು. ಸುದ್ದಿ ಸಂಸ್ಥೆ ಎಎನ್‌ಐ (@ANI) ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಹೇಳಿಕೆಯನ್ನು ಎಕ್ಸ್‌ನಲ್ಲಿ ಹಂಚಿಕೊಂಡಿತ್ತು.

ಸೆಪ್ಟೆಂಬರ್ 14ರಂದು ವರದಿ ಪ್ರಕಟಿಸಿದ್ದ ರಿಪಬ್ಲಿಕ್ ಟಿವಿ ಇಂಗ್ಲಿಷ್ “ಕಾಂಗ್ರೆಸ್ ಆಡಳಿತದ ಕರ್ನಾಟಕದಲ್ಲಿ ಗಣಪತಿಯನ್ನೂ ಕಂಬಿ ಹಿಂದೆ ತಳ್ಳಲಾಗಿದೆ” ಎಂಬ ಪ್ರಧಾನಿ ಮೋದಿಯವರ ಹೇಳಿಕೆಯನ್ನು ಉಲ್ಲೇಖಿಸಿತ್ತು.

ಫ್ಯಾಕ್ಟ್‌ಚೆಕ್  : ಪ್ರಧಾನಿ ಮೋದಿ ಭಾಷಣದಲ್ಲಿ ಉಲ್ಲೇಖಿಸಿರುವ, ಬಿಜೆಪಿ ನಾಯಕರು ಎಕ್ಸ್‌ನಲ್ಲಿ ಹಂಚಿಕೊಂಡಿರುವ ವೈರಲ್ ಫೋಟೋದ ಕುರಿತು ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ.

ಈ ಕುರಿತ ಮಾಧ್ಯಮ ವರದಿಗಳನ್ನು ಪರಿಶೀಲಿಸಿದಾಗ ” ಹಲವು ವರದಿಗಳು ನಮಗೆ ಲಭ್ಯವಾಗಿದೆ. ಈ ಪೈಕಿ ದಿ ನ್ಯೂಸ್ ಮಿನಿಟ್ ವೆಬ್‌ಸೈಟ್ “Controversy erupts in Bengaluru over Ganesha idol in police van: What really happened?” ಎಂಬ ಶೀರ್ಷಿಕೆಯ ವರದಿಯನ್ನು ನಾವು ಪರಿಶೀಲಿಸಿದ್ದೇವೆ.

ವರದಿಯಲ್ಲಿ “ಮಂಡ್ಯದ ಸೆಪ್ಟೆಂಬರ್ 11ರಂದು ಮಂಡ್ಯದ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ, ಗಲಾಟೆ ನಡೆದಿರುವುದನ್ನು ಖಂಡಿಸಿ ಸೆಪ್ಟೆಂಬರ್ 13ರಂದು ಬೆಂಗಳೂರಿನ ಟೌನ್‌ಹಾಲ್ ಮುಂಭಾಗದಲ್ಲಿ ‘ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿ’ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪ್ರತಿಭಟನಾ ನಿರತರು ಗಣೇಶ ಮೂರ್ತಿಯನ್ನು ಹೊತ್ತು ತಂದಿದ್ದರು. ಪ್ರತಿಭಟನಾಕಾರರನ್ನು ಸ್ಥಳದಿಂದ ಚದುರಿಸುವಾಗ ಪೊಲೀಸರು ಗಣೇಶ ಮೂರ್ತಿಯನ್ನು ಎತ್ತಿಕೊಂಡು ಹೋಗಿ ಪೊಲೀಸ್ ವ್ಯಾನ್‌ನಲ್ಲಿಟ್ಟಿದ್ದರು. ಈ ಕುರಿತ ಫೋಟೋ ವೈರಲ್ ಆಗಿದ್ದು, ಬಿಜೆಪಿ ನಾಯಕರು ಹಾಗೂ ಮತ್ತಿತರು ಪೊಲೀಸರ ನಡೆಯನ್ನು ಖಂಡಿಸಿದ್ದಾರೆ” ಎಂದಿದೆ.

“ಹೈಕೋರ್ಟ್ ಆದೇಶದಂತೆ ಬೆಂಗಳೂರು ನಗರದಲ್ಲಿ ಸ್ವಾತಂತ್ರ್ಯ ಉದ್ಯಾನವದಲ್ಲಿ (ಫ್ರೀಡಂ ಪಾರ್ಕ್‌) ಮಾತ್ರ ಯಾವುದೇ ಪ್ರತಿಭಟನೆ ಮಾಡಬೇಕು. ಗಣೇಶ ಉತ್ಸವ ಸಮಿತಿಯವರು ನಿಯಮ ಉಲ್ಲಂಘಿಸಿ ಟೌನ್ ಹಾಲ್ ಬಳಿ ಪ್ರತಿಭಟಿಸಿದ್ದಕ್ಕೆ ಪೊಲೀಸರು ಅಡ್ಡಿಪಡಿಸಿದ್ದಾರೆ” ಎಂದೂ ವರದಿಯಲ್ಲಿ ತಿಳಿಸಲಾಗಿದೆ.

“ಪ್ರತಿಭಟನೆಗೆ ಸಂಬಂಧಿಸಿದಂತೆ ಪೊಲೀಸರು ಸುಮಾರು 40 ಮಂದಿಯನ್ನು ಬಂಧಿಸಿದ್ದರು. ಅವರಿಂದ ವಶಪಡಿಸಿಕೊಂಡ ಗಣೇಶ ಮೂರ್ತಿಯನ್ನು ಹಲಸೂರು ಕೆರೆಯಲ್ಲಿ ವಿಸರ್ಜನೆ ಮಾಡಿದ್ದಾರೆ” ಎಂದು ವರದಿಯಲ್ಲಿ ವಿವರಿಸಲಾಗಿದೆ.

ವೈರಲ್ ಫೋಟೋ ಮತ್ತು ಅದರ ಸುತ್ತಮುತ್ತ ಉಂಟಾಗಿರುವ ಗೊಂದಲದ ಕುರಿತು ಸೆಪ್ಟೆಂಬರ್ 15ರಂದು ಬೆಂಗಳೂರು ಕೇಂದ್ರೀಯ ವಿಭಾಗದ ಡಿಸಿಪಿ (@DCPCentralBCP)ಯವರ ಅಧಿಕೃತ ಎಕ್ಸ್ ಹ್ಯಾಂಡಲ್ ಸ್ಪಷ್ಟನೆ ಕೊಡಲಾಗಿತ್ತು.

“ಬೆಂಗಳೂರಿನ ಟೌನ್ ಹಾಲ್ ಬಳಿ ನಿಮಜ್ಜನಕ್ಕೆ ತೆರಳುತ್ತಿದ್ದ ಭಕ್ತರಿಂದ ಗಣೇಶ ಮೂರ್ತಿಯನ್ನು ಅಧಿಕಾರಿಗಳು ಕಸಿದುಕೊಂಡಿದ್ದಾರೆ ಎಂಬ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಪೋಸ್ಟ್‌ಗಳ ಬಗ್ಗೆ ಸ್ಪಷ್ಟನೆ”

ಸೆಪ್ಟೆಂಬರ್ 13, 2024 ರಂದು, ಹಿಂದೂ ಗುಂಪುಗಳು ಬೆಂಗಳೂರಿನ ಟೌನ್ ಹಾಲ್‌ ಬಳಿ ನಾಗಮಂಗಲ ಗಣೇಶ ಮೆರವಣಿಗೆಯ ಘಟನೆಯನ್ನು ಖಂಡಿಸಿ, ಹೈಕೋರ್ಟ್ ಆದೇಶವನ್ನು ಧಿಕ್ಕರಿಸಿ ಪ್ರತಿಭಟಿಸಿದ್ದವು. ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ. ಬಳಿಕ ಗಣಪತಿ ಮೂರ್ತಿಯನ್ನು ಅಧಿಕಾರಿಗಳು ವಿಧಿ ವಿಧಾನಗಳೊಂದಿಗೆ ನಿಮಜ್ಜನ ಮಾಡಿದ್ದಾರೆ” ಎಂದು ಡಿಸಿಪಿಯವರ ಎಕ್ಸ್‌ ಹ್ಯಾಂಡಲ್‌ನಲ್ಲಿ ಹೇಳಲಾಗಿತ್ತು.

 

ಒಟ್ಟಿನಲ್ಲಿ , ನಾಗಮಂಗಲದ ಘಟನೆಯನ್ನು ಖಂಡಿಸಿ ಬೆಂಗಳೂರಿನ ಟೌನ್‌ಹಾಲ್‌ ಬಳಿ ಬೆಂಗಳೂರು ಗಣೇಶ ಉತ್ಸವ ಸಮಿತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪ್ರತಿಭಟನಾಕಾರರು ತಂದಿದ್ದ ಗಣೇಶ ಮೂರ್ತಿಯನ್ನು ವಶಪಡಿಸಿಕೊಂಡಿದ್ದ ಪೊಲೀಸರು, ಅದನ್ನು ಖಾಲಿ ಪೊಲೀಸ್ ವ್ಯಾನ್‌ನಲ್ಲಿಟ್ಟಿದ್ದರು. ಈ ಕುರಿತ ಪೋಟೋವನ್ನು ಹಂಚಿಕೊಂಡ ಬಿಜೆಪಿ ನಾಯಕರು ಮತ್ತು ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ” ಕಾಂಗ್ರೆಸ್ ಆಡಳಿತ ಕರ್ನಾಟಕದಲ್ಲಿ ಗಣೇಶ ಮೆರವಣಿಗೆಗೆ ಪೊಲೀಸರು ಅಡ್ಡಿಪಡಿಸಿದ್ದಾರೆ. ಗಣೇಶ ಮೂರ್ತಿಯನ್ನು ಬಂಧಿಸಿ ಕಂಬಿ ಹಿಂದೆ ತಳ್ಳಿದ್ದಾರೆ” ಎಂದು ಸುಳ್ಳು ಸಂದೇಶ ಹಂಚಿಕೊಂಡಿದ್ದರು. ಇದನ್ನೇ ಭಾಷಣದಲ್ಲಿ ಉಲ್ಲೇಖಿಸುವ ಮೂಲಕ ಸುಳ್ಳು ಸುದ್ದಿಗೆ ಪ್ರಧಾನಿ ಧನಿಗೂಡಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...