Homeಫ್ಯಾಕ್ಟ್‌ಚೆಕ್FACT CHECK : ಕರ್ನಾಟಕ ಸರ್ಕಾರದಿಂದ ಗಣೇಶ ಮೆರವಣಿಗೆಗೆ ಅಡ್ಡಿ ಎಂದು ಸುಳ್ಳು ಸುದ್ದಿ ಹಬ್ಬಿಸಿದ...

FACT CHECK : ಕರ್ನಾಟಕ ಸರ್ಕಾರದಿಂದ ಗಣೇಶ ಮೆರವಣಿಗೆಗೆ ಅಡ್ಡಿ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಬಲಪಂಥೀಯರು

ದನಿಗೂಡಿಸಿದ ಪ್ರಧಾನಿ ಮೋದಿ!

- Advertisement -
- Advertisement -

ಸೆಪ್ಟೆಂಬರ್ 14, 2024 ರಂದು ಹರಿಯಾಣದ ಕುರುಕ್ಷೇತ್ರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, “ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದಲ್ಲಿ ಗಣಪತಿಯನ್ನೂ ಜೈಲಿಗೆ ಹಾಕಲಾಗುತ್ತಿದೆ. ಗಣಪತಿಯನ್ನು ಪೊಲೀಸ್ ವ್ಯಾನಿನಲ್ಲಿಟ್ಟು ಬೀಗ ಹಾಕಿದ್ದಾರೆ. ಇಡೀ ರಾಷ್ಟ್ರ ಗಣೇಶ ಉತ್ಸವವನ್ನು ಆಚರಿಸುತ್ತಿದ್ದರೆ, ವಿಘ್ನ ವಿನಾಶಕನಾದ ಗಣಪತಿಯನ್ನು ಪೂಜಿಸಲು ಕಾಂಗ್ರೆಸ್ ಅಡ್ಡಿಪಡಿಸುತ್ತಿದೆ. ತುಷ್ಟೀಕರಣಕ್ಕಾಗಿ ಕಾಂಗ್ರೆಸ್ ಯಾವ ಹಂತಕ್ಕೂ ಹೋಗಬಹುದು” ಎಂದು ಹೇಳಿದ್ದರು.

ಸೆಪ್ಟೆಂಬರ್ 17ರಂದು ಒಡಿಶಾದ ಭುವನೇಶ್ವರದಲ್ಲಿ ಭಾಷಣ ಮಾಡುವಾಗಲೂ ಪ್ರಧಾನಿ ಈ ಮಾತುಗಳು  ಪುನರುಚ್ಚರಿಸಿದ್ದರು “ಅವರ (ಕಾಂಗ್ರೆಸ್) ಸರ್ಕಾರವು ಅಧಿಕಾರದಲ್ಲಿರುವ ಕರ್ನಾಟಕದಲ್ಲಿ ಗಣೇಶನ ವಿಗ್ರಹವನ್ನು ಕಂಬಿ ಹಿಂದೆ ಇರಿಸುವ ಮೂಲಕ ದೊಡ್ಡ ಅಪರಾಧ ಮಾಡಿದ್ದಾರೆ” ಎಂದಿದ್ದರು.

ಹರಿಯಾಣದಲ್ಲಿ ಪ್ರಧಾನಿ ಮೋದಿ ಹೇಳಿಕೆ ಕೊಟ್ಟಾಗ ಕರ್ನಾಟಕದಲ್ಲಿ ಗಣೇಶ ಮೂರ್ತಿಯನ್ನು ಪೊಲೀಸ್ ವ್ಯಾನ್‌ನಲ್ಲಿಟ್ಟ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.

ಸೆಪ್ಟೆಂಬರ್ 13, 2024 ರಂದು ಎಕ್ಸ್‌ನಲ್ಲಿ ವೈರಲ್ ಫೋಟೋ ಹಂಚಿಕೊಂಡಿದ್ದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ “ಕಾಂಗ್ರೆಸ್ ಹಿಂದೂಗಳ ನಂಬಿಕೆಯನ್ನು ಅವಮಾನಿಸಿದೆ” ಎಂದು ಬರೆದುಕೊಂಡಿದ್ದರು.

ವೈರಲ್ ಫೋಟೋವನ್ನು ಎಕ್ಸ್ ಬಳಕೆದಾರ ಗಿರೀಶ್ ಭಾರದ್ವಾಜ್ (@Girishvhp) ಎಂಬವರು ಕೂಡ ಸೆ.13, 2024ರಂದು ಹಂಚಿಕೊಂಡಿದ್ದರು. ಗಿರೀಶ್ ಅವರು ತಮ್ಮ ಎಕ್ಸ್ ಬಯೋದಲ್ಲಿ ‘ಸ್ವಯಂಸೇವಕ’ ಹಾಗೂ  ವಿಶ್ವ ಹಿಂದೂ ಪರಿಷತ್‌ನೊಂದಿಗೆ ಗುರುತಿಸಿಕೊಂಡಿರುವುದಾಗಿ ಬರೆದುಕೊಂಡಿದ್ದಾರೆ. “ಭಗವಾನ್ ಗಣೇಶನನ್ನು ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ. ಮಂಡ್ಯದ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ಮೇಲೆ ಮುಸ್ಲಿಮರು ಕಲ್ಲು ತೂರಾಟ ನಡೆಸಿದ ಘಟನೆಯನ್ನು ಖಂಡಿಸಿ ನಡೆದ ಪ್ರತಿಭಟನೆಯ ವೇಳೆ ಈ ಬಂಧನ ನಡೆದಿದೆ ಎಂದೂ ಅವರು ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದರು.

ನಾವು ಈ ಸುದ್ದಿ ಬರೆಯುವ ಹೊತ್ತಿಗೆ ಗಿರೀಶ್ ಅವರ ಪೋಸ್ಟ್ 2 ಲಕ್ಷದ 70 ಸಾವಿರ ವೀಕ್ಷಣೆಗಳನ್ನು ಪಡೆದಿತ್ತು.

ಬಿಜೆಪಿಯ ಉನ್ನತ ನಾಯಕರು ಸೇರಿದಂತೆ ಹಲವಾರು ಎಕ್ಸ್‌ ಬಳಕೆದಾರರು ಕೂಡ ವೈರಲ್ ಫೋಟೋ ಹಂಚಿಕೊಂಡು ಕರ್ನಾಟಕದ ಕಾಂಗ್ರೆಸ್ ಸರ್ಕಾರವನ್ನು ಹಿಂದೂ ವಿರೋಧಿ ಎಂದು ಟೀಕಿಸಿದ್ದರು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ (@blsantosh), ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ (@BYVijayendra), ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ (@Shehzad_Ind), ಪಕ್ಷದ ಬೆಂಗಳೂರು ಕೇಂದ್ರ ಸಂಸದ ಪಿ ಸಿ ಮೋಹನ್ (@PCMohanMP), ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ (@shobabjp) ಫೋಟೋ ಹಂಚಿಕೊಂಡವರಲ್ಲಿ ಪ್ರಮುಖರು.

ಮಾಧ್ಯಮಗಳು ಕೂಡ ಘಟನೆಯ ಬಗ್ಗೆ ವರದಿ ಮಾಡಿತ್ತು. ಸುದ್ದಿ ಸಂಸ್ಥೆ ಎಎನ್‌ಐ (@ANI) ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಹೇಳಿಕೆಯನ್ನು ಎಕ್ಸ್‌ನಲ್ಲಿ ಹಂಚಿಕೊಂಡಿತ್ತು.

ಸೆಪ್ಟೆಂಬರ್ 14ರಂದು ವರದಿ ಪ್ರಕಟಿಸಿದ್ದ ರಿಪಬ್ಲಿಕ್ ಟಿವಿ ಇಂಗ್ಲಿಷ್ “ಕಾಂಗ್ರೆಸ್ ಆಡಳಿತದ ಕರ್ನಾಟಕದಲ್ಲಿ ಗಣಪತಿಯನ್ನೂ ಕಂಬಿ ಹಿಂದೆ ತಳ್ಳಲಾಗಿದೆ” ಎಂಬ ಪ್ರಧಾನಿ ಮೋದಿಯವರ ಹೇಳಿಕೆಯನ್ನು ಉಲ್ಲೇಖಿಸಿತ್ತು.

ಫ್ಯಾಕ್ಟ್‌ಚೆಕ್  : ಪ್ರಧಾನಿ ಮೋದಿ ಭಾಷಣದಲ್ಲಿ ಉಲ್ಲೇಖಿಸಿರುವ, ಬಿಜೆಪಿ ನಾಯಕರು ಎಕ್ಸ್‌ನಲ್ಲಿ ಹಂಚಿಕೊಂಡಿರುವ ವೈರಲ್ ಫೋಟೋದ ಕುರಿತು ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ.

ಈ ಕುರಿತ ಮಾಧ್ಯಮ ವರದಿಗಳನ್ನು ಪರಿಶೀಲಿಸಿದಾಗ ” ಹಲವು ವರದಿಗಳು ನಮಗೆ ಲಭ್ಯವಾಗಿದೆ. ಈ ಪೈಕಿ ದಿ ನ್ಯೂಸ್ ಮಿನಿಟ್ ವೆಬ್‌ಸೈಟ್ “Controversy erupts in Bengaluru over Ganesha idol in police van: What really happened?” ಎಂಬ ಶೀರ್ಷಿಕೆಯ ವರದಿಯನ್ನು ನಾವು ಪರಿಶೀಲಿಸಿದ್ದೇವೆ.

ವರದಿಯಲ್ಲಿ “ಮಂಡ್ಯದ ಸೆಪ್ಟೆಂಬರ್ 11ರಂದು ಮಂಡ್ಯದ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ, ಗಲಾಟೆ ನಡೆದಿರುವುದನ್ನು ಖಂಡಿಸಿ ಸೆಪ್ಟೆಂಬರ್ 13ರಂದು ಬೆಂಗಳೂರಿನ ಟೌನ್‌ಹಾಲ್ ಮುಂಭಾಗದಲ್ಲಿ ‘ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿ’ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪ್ರತಿಭಟನಾ ನಿರತರು ಗಣೇಶ ಮೂರ್ತಿಯನ್ನು ಹೊತ್ತು ತಂದಿದ್ದರು. ಪ್ರತಿಭಟನಾಕಾರರನ್ನು ಸ್ಥಳದಿಂದ ಚದುರಿಸುವಾಗ ಪೊಲೀಸರು ಗಣೇಶ ಮೂರ್ತಿಯನ್ನು ಎತ್ತಿಕೊಂಡು ಹೋಗಿ ಪೊಲೀಸ್ ವ್ಯಾನ್‌ನಲ್ಲಿಟ್ಟಿದ್ದರು. ಈ ಕುರಿತ ಫೋಟೋ ವೈರಲ್ ಆಗಿದ್ದು, ಬಿಜೆಪಿ ನಾಯಕರು ಹಾಗೂ ಮತ್ತಿತರು ಪೊಲೀಸರ ನಡೆಯನ್ನು ಖಂಡಿಸಿದ್ದಾರೆ” ಎಂದಿದೆ.

“ಹೈಕೋರ್ಟ್ ಆದೇಶದಂತೆ ಬೆಂಗಳೂರು ನಗರದಲ್ಲಿ ಸ್ವಾತಂತ್ರ್ಯ ಉದ್ಯಾನವದಲ್ಲಿ (ಫ್ರೀಡಂ ಪಾರ್ಕ್‌) ಮಾತ್ರ ಯಾವುದೇ ಪ್ರತಿಭಟನೆ ಮಾಡಬೇಕು. ಗಣೇಶ ಉತ್ಸವ ಸಮಿತಿಯವರು ನಿಯಮ ಉಲ್ಲಂಘಿಸಿ ಟೌನ್ ಹಾಲ್ ಬಳಿ ಪ್ರತಿಭಟಿಸಿದ್ದಕ್ಕೆ ಪೊಲೀಸರು ಅಡ್ಡಿಪಡಿಸಿದ್ದಾರೆ” ಎಂದೂ ವರದಿಯಲ್ಲಿ ತಿಳಿಸಲಾಗಿದೆ.

“ಪ್ರತಿಭಟನೆಗೆ ಸಂಬಂಧಿಸಿದಂತೆ ಪೊಲೀಸರು ಸುಮಾರು 40 ಮಂದಿಯನ್ನು ಬಂಧಿಸಿದ್ದರು. ಅವರಿಂದ ವಶಪಡಿಸಿಕೊಂಡ ಗಣೇಶ ಮೂರ್ತಿಯನ್ನು ಹಲಸೂರು ಕೆರೆಯಲ್ಲಿ ವಿಸರ್ಜನೆ ಮಾಡಿದ್ದಾರೆ” ಎಂದು ವರದಿಯಲ್ಲಿ ವಿವರಿಸಲಾಗಿದೆ.

ವೈರಲ್ ಫೋಟೋ ಮತ್ತು ಅದರ ಸುತ್ತಮುತ್ತ ಉಂಟಾಗಿರುವ ಗೊಂದಲದ ಕುರಿತು ಸೆಪ್ಟೆಂಬರ್ 15ರಂದು ಬೆಂಗಳೂರು ಕೇಂದ್ರೀಯ ವಿಭಾಗದ ಡಿಸಿಪಿ (@DCPCentralBCP)ಯವರ ಅಧಿಕೃತ ಎಕ್ಸ್ ಹ್ಯಾಂಡಲ್ ಸ್ಪಷ್ಟನೆ ಕೊಡಲಾಗಿತ್ತು.

“ಬೆಂಗಳೂರಿನ ಟೌನ್ ಹಾಲ್ ಬಳಿ ನಿಮಜ್ಜನಕ್ಕೆ ತೆರಳುತ್ತಿದ್ದ ಭಕ್ತರಿಂದ ಗಣೇಶ ಮೂರ್ತಿಯನ್ನು ಅಧಿಕಾರಿಗಳು ಕಸಿದುಕೊಂಡಿದ್ದಾರೆ ಎಂಬ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಪೋಸ್ಟ್‌ಗಳ ಬಗ್ಗೆ ಸ್ಪಷ್ಟನೆ”

ಸೆಪ್ಟೆಂಬರ್ 13, 2024 ರಂದು, ಹಿಂದೂ ಗುಂಪುಗಳು ಬೆಂಗಳೂರಿನ ಟೌನ್ ಹಾಲ್‌ ಬಳಿ ನಾಗಮಂಗಲ ಗಣೇಶ ಮೆರವಣಿಗೆಯ ಘಟನೆಯನ್ನು ಖಂಡಿಸಿ, ಹೈಕೋರ್ಟ್ ಆದೇಶವನ್ನು ಧಿಕ್ಕರಿಸಿ ಪ್ರತಿಭಟಿಸಿದ್ದವು. ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ. ಬಳಿಕ ಗಣಪತಿ ಮೂರ್ತಿಯನ್ನು ಅಧಿಕಾರಿಗಳು ವಿಧಿ ವಿಧಾನಗಳೊಂದಿಗೆ ನಿಮಜ್ಜನ ಮಾಡಿದ್ದಾರೆ” ಎಂದು ಡಿಸಿಪಿಯವರ ಎಕ್ಸ್‌ ಹ್ಯಾಂಡಲ್‌ನಲ್ಲಿ ಹೇಳಲಾಗಿತ್ತು.

 

ಒಟ್ಟಿನಲ್ಲಿ , ನಾಗಮಂಗಲದ ಘಟನೆಯನ್ನು ಖಂಡಿಸಿ ಬೆಂಗಳೂರಿನ ಟೌನ್‌ಹಾಲ್‌ ಬಳಿ ಬೆಂಗಳೂರು ಗಣೇಶ ಉತ್ಸವ ಸಮಿತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪ್ರತಿಭಟನಾಕಾರರು ತಂದಿದ್ದ ಗಣೇಶ ಮೂರ್ತಿಯನ್ನು ವಶಪಡಿಸಿಕೊಂಡಿದ್ದ ಪೊಲೀಸರು, ಅದನ್ನು ಖಾಲಿ ಪೊಲೀಸ್ ವ್ಯಾನ್‌ನಲ್ಲಿಟ್ಟಿದ್ದರು. ಈ ಕುರಿತ ಪೋಟೋವನ್ನು ಹಂಚಿಕೊಂಡ ಬಿಜೆಪಿ ನಾಯಕರು ಮತ್ತು ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ” ಕಾಂಗ್ರೆಸ್ ಆಡಳಿತ ಕರ್ನಾಟಕದಲ್ಲಿ ಗಣೇಶ ಮೆರವಣಿಗೆಗೆ ಪೊಲೀಸರು ಅಡ್ಡಿಪಡಿಸಿದ್ದಾರೆ. ಗಣೇಶ ಮೂರ್ತಿಯನ್ನು ಬಂಧಿಸಿ ಕಂಬಿ ಹಿಂದೆ ತಳ್ಳಿದ್ದಾರೆ” ಎಂದು ಸುಳ್ಳು ಸಂದೇಶ ಹಂಚಿಕೊಂಡಿದ್ದರು. ಇದನ್ನೇ ಭಾಷಣದಲ್ಲಿ ಉಲ್ಲೇಖಿಸುವ ಮೂಲಕ ಸುಳ್ಳು ಸುದ್ದಿಗೆ ಪ್ರಧಾನಿ ಧನಿಗೂಡಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...