Homeಫ್ಯಾಕ್ಟ್‌ಚೆಕ್FACT CHECK : ಕರ್ನಾಟಕ ಸರ್ಕಾರದಿಂದ ಗಣೇಶ ಮೆರವಣಿಗೆಗೆ ಅಡ್ಡಿ ಎಂದು ಸುಳ್ಳು ಸುದ್ದಿ ಹಬ್ಬಿಸಿದ...

FACT CHECK : ಕರ್ನಾಟಕ ಸರ್ಕಾರದಿಂದ ಗಣೇಶ ಮೆರವಣಿಗೆಗೆ ಅಡ್ಡಿ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಬಲಪಂಥೀಯರು

ದನಿಗೂಡಿಸಿದ ಪ್ರಧಾನಿ ಮೋದಿ!

- Advertisement -
- Advertisement -

ಸೆಪ್ಟೆಂಬರ್ 14, 2024 ರಂದು ಹರಿಯಾಣದ ಕುರುಕ್ಷೇತ್ರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, “ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದಲ್ಲಿ ಗಣಪತಿಯನ್ನೂ ಜೈಲಿಗೆ ಹಾಕಲಾಗುತ್ತಿದೆ. ಗಣಪತಿಯನ್ನು ಪೊಲೀಸ್ ವ್ಯಾನಿನಲ್ಲಿಟ್ಟು ಬೀಗ ಹಾಕಿದ್ದಾರೆ. ಇಡೀ ರಾಷ್ಟ್ರ ಗಣೇಶ ಉತ್ಸವವನ್ನು ಆಚರಿಸುತ್ತಿದ್ದರೆ, ವಿಘ್ನ ವಿನಾಶಕನಾದ ಗಣಪತಿಯನ್ನು ಪೂಜಿಸಲು ಕಾಂಗ್ರೆಸ್ ಅಡ್ಡಿಪಡಿಸುತ್ತಿದೆ. ತುಷ್ಟೀಕರಣಕ್ಕಾಗಿ ಕಾಂಗ್ರೆಸ್ ಯಾವ ಹಂತಕ್ಕೂ ಹೋಗಬಹುದು” ಎಂದು ಹೇಳಿದ್ದರು.

ಸೆಪ್ಟೆಂಬರ್ 17ರಂದು ಒಡಿಶಾದ ಭುವನೇಶ್ವರದಲ್ಲಿ ಭಾಷಣ ಮಾಡುವಾಗಲೂ ಪ್ರಧಾನಿ ಈ ಮಾತುಗಳು  ಪುನರುಚ್ಚರಿಸಿದ್ದರು “ಅವರ (ಕಾಂಗ್ರೆಸ್) ಸರ್ಕಾರವು ಅಧಿಕಾರದಲ್ಲಿರುವ ಕರ್ನಾಟಕದಲ್ಲಿ ಗಣೇಶನ ವಿಗ್ರಹವನ್ನು ಕಂಬಿ ಹಿಂದೆ ಇರಿಸುವ ಮೂಲಕ ದೊಡ್ಡ ಅಪರಾಧ ಮಾಡಿದ್ದಾರೆ” ಎಂದಿದ್ದರು.

ಹರಿಯಾಣದಲ್ಲಿ ಪ್ರಧಾನಿ ಮೋದಿ ಹೇಳಿಕೆ ಕೊಟ್ಟಾಗ ಕರ್ನಾಟಕದಲ್ಲಿ ಗಣೇಶ ಮೂರ್ತಿಯನ್ನು ಪೊಲೀಸ್ ವ್ಯಾನ್‌ನಲ್ಲಿಟ್ಟ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.

ಸೆಪ್ಟೆಂಬರ್ 13, 2024 ರಂದು ಎಕ್ಸ್‌ನಲ್ಲಿ ವೈರಲ್ ಫೋಟೋ ಹಂಚಿಕೊಂಡಿದ್ದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ “ಕಾಂಗ್ರೆಸ್ ಹಿಂದೂಗಳ ನಂಬಿಕೆಯನ್ನು ಅವಮಾನಿಸಿದೆ” ಎಂದು ಬರೆದುಕೊಂಡಿದ್ದರು.

ವೈರಲ್ ಫೋಟೋವನ್ನು ಎಕ್ಸ್ ಬಳಕೆದಾರ ಗಿರೀಶ್ ಭಾರದ್ವಾಜ್ (@Girishvhp) ಎಂಬವರು ಕೂಡ ಸೆ.13, 2024ರಂದು ಹಂಚಿಕೊಂಡಿದ್ದರು. ಗಿರೀಶ್ ಅವರು ತಮ್ಮ ಎಕ್ಸ್ ಬಯೋದಲ್ಲಿ ‘ಸ್ವಯಂಸೇವಕ’ ಹಾಗೂ  ವಿಶ್ವ ಹಿಂದೂ ಪರಿಷತ್‌ನೊಂದಿಗೆ ಗುರುತಿಸಿಕೊಂಡಿರುವುದಾಗಿ ಬರೆದುಕೊಂಡಿದ್ದಾರೆ. “ಭಗವಾನ್ ಗಣೇಶನನ್ನು ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ. ಮಂಡ್ಯದ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ಮೇಲೆ ಮುಸ್ಲಿಮರು ಕಲ್ಲು ತೂರಾಟ ನಡೆಸಿದ ಘಟನೆಯನ್ನು ಖಂಡಿಸಿ ನಡೆದ ಪ್ರತಿಭಟನೆಯ ವೇಳೆ ಈ ಬಂಧನ ನಡೆದಿದೆ ಎಂದೂ ಅವರು ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದರು.

ನಾವು ಈ ಸುದ್ದಿ ಬರೆಯುವ ಹೊತ್ತಿಗೆ ಗಿರೀಶ್ ಅವರ ಪೋಸ್ಟ್ 2 ಲಕ್ಷದ 70 ಸಾವಿರ ವೀಕ್ಷಣೆಗಳನ್ನು ಪಡೆದಿತ್ತು.

ಬಿಜೆಪಿಯ ಉನ್ನತ ನಾಯಕರು ಸೇರಿದಂತೆ ಹಲವಾರು ಎಕ್ಸ್‌ ಬಳಕೆದಾರರು ಕೂಡ ವೈರಲ್ ಫೋಟೋ ಹಂಚಿಕೊಂಡು ಕರ್ನಾಟಕದ ಕಾಂಗ್ರೆಸ್ ಸರ್ಕಾರವನ್ನು ಹಿಂದೂ ವಿರೋಧಿ ಎಂದು ಟೀಕಿಸಿದ್ದರು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ (@blsantosh), ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ (@BYVijayendra), ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ (@Shehzad_Ind), ಪಕ್ಷದ ಬೆಂಗಳೂರು ಕೇಂದ್ರ ಸಂಸದ ಪಿ ಸಿ ಮೋಹನ್ (@PCMohanMP), ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ (@shobabjp) ಫೋಟೋ ಹಂಚಿಕೊಂಡವರಲ್ಲಿ ಪ್ರಮುಖರು.

ಮಾಧ್ಯಮಗಳು ಕೂಡ ಘಟನೆಯ ಬಗ್ಗೆ ವರದಿ ಮಾಡಿತ್ತು. ಸುದ್ದಿ ಸಂಸ್ಥೆ ಎಎನ್‌ಐ (@ANI) ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಹೇಳಿಕೆಯನ್ನು ಎಕ್ಸ್‌ನಲ್ಲಿ ಹಂಚಿಕೊಂಡಿತ್ತು.

ಸೆಪ್ಟೆಂಬರ್ 14ರಂದು ವರದಿ ಪ್ರಕಟಿಸಿದ್ದ ರಿಪಬ್ಲಿಕ್ ಟಿವಿ ಇಂಗ್ಲಿಷ್ “ಕಾಂಗ್ರೆಸ್ ಆಡಳಿತದ ಕರ್ನಾಟಕದಲ್ಲಿ ಗಣಪತಿಯನ್ನೂ ಕಂಬಿ ಹಿಂದೆ ತಳ್ಳಲಾಗಿದೆ” ಎಂಬ ಪ್ರಧಾನಿ ಮೋದಿಯವರ ಹೇಳಿಕೆಯನ್ನು ಉಲ್ಲೇಖಿಸಿತ್ತು.

ಫ್ಯಾಕ್ಟ್‌ಚೆಕ್  : ಪ್ರಧಾನಿ ಮೋದಿ ಭಾಷಣದಲ್ಲಿ ಉಲ್ಲೇಖಿಸಿರುವ, ಬಿಜೆಪಿ ನಾಯಕರು ಎಕ್ಸ್‌ನಲ್ಲಿ ಹಂಚಿಕೊಂಡಿರುವ ವೈರಲ್ ಫೋಟೋದ ಕುರಿತು ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ.

ಈ ಕುರಿತ ಮಾಧ್ಯಮ ವರದಿಗಳನ್ನು ಪರಿಶೀಲಿಸಿದಾಗ ” ಹಲವು ವರದಿಗಳು ನಮಗೆ ಲಭ್ಯವಾಗಿದೆ. ಈ ಪೈಕಿ ದಿ ನ್ಯೂಸ್ ಮಿನಿಟ್ ವೆಬ್‌ಸೈಟ್ “Controversy erupts in Bengaluru over Ganesha idol in police van: What really happened?” ಎಂಬ ಶೀರ್ಷಿಕೆಯ ವರದಿಯನ್ನು ನಾವು ಪರಿಶೀಲಿಸಿದ್ದೇವೆ.

ವರದಿಯಲ್ಲಿ “ಮಂಡ್ಯದ ಸೆಪ್ಟೆಂಬರ್ 11ರಂದು ಮಂಡ್ಯದ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ, ಗಲಾಟೆ ನಡೆದಿರುವುದನ್ನು ಖಂಡಿಸಿ ಸೆಪ್ಟೆಂಬರ್ 13ರಂದು ಬೆಂಗಳೂರಿನ ಟೌನ್‌ಹಾಲ್ ಮುಂಭಾಗದಲ್ಲಿ ‘ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿ’ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪ್ರತಿಭಟನಾ ನಿರತರು ಗಣೇಶ ಮೂರ್ತಿಯನ್ನು ಹೊತ್ತು ತಂದಿದ್ದರು. ಪ್ರತಿಭಟನಾಕಾರರನ್ನು ಸ್ಥಳದಿಂದ ಚದುರಿಸುವಾಗ ಪೊಲೀಸರು ಗಣೇಶ ಮೂರ್ತಿಯನ್ನು ಎತ್ತಿಕೊಂಡು ಹೋಗಿ ಪೊಲೀಸ್ ವ್ಯಾನ್‌ನಲ್ಲಿಟ್ಟಿದ್ದರು. ಈ ಕುರಿತ ಫೋಟೋ ವೈರಲ್ ಆಗಿದ್ದು, ಬಿಜೆಪಿ ನಾಯಕರು ಹಾಗೂ ಮತ್ತಿತರು ಪೊಲೀಸರ ನಡೆಯನ್ನು ಖಂಡಿಸಿದ್ದಾರೆ” ಎಂದಿದೆ.

“ಹೈಕೋರ್ಟ್ ಆದೇಶದಂತೆ ಬೆಂಗಳೂರು ನಗರದಲ್ಲಿ ಸ್ವಾತಂತ್ರ್ಯ ಉದ್ಯಾನವದಲ್ಲಿ (ಫ್ರೀಡಂ ಪಾರ್ಕ್‌) ಮಾತ್ರ ಯಾವುದೇ ಪ್ರತಿಭಟನೆ ಮಾಡಬೇಕು. ಗಣೇಶ ಉತ್ಸವ ಸಮಿತಿಯವರು ನಿಯಮ ಉಲ್ಲಂಘಿಸಿ ಟೌನ್ ಹಾಲ್ ಬಳಿ ಪ್ರತಿಭಟಿಸಿದ್ದಕ್ಕೆ ಪೊಲೀಸರು ಅಡ್ಡಿಪಡಿಸಿದ್ದಾರೆ” ಎಂದೂ ವರದಿಯಲ್ಲಿ ತಿಳಿಸಲಾಗಿದೆ.

“ಪ್ರತಿಭಟನೆಗೆ ಸಂಬಂಧಿಸಿದಂತೆ ಪೊಲೀಸರು ಸುಮಾರು 40 ಮಂದಿಯನ್ನು ಬಂಧಿಸಿದ್ದರು. ಅವರಿಂದ ವಶಪಡಿಸಿಕೊಂಡ ಗಣೇಶ ಮೂರ್ತಿಯನ್ನು ಹಲಸೂರು ಕೆರೆಯಲ್ಲಿ ವಿಸರ್ಜನೆ ಮಾಡಿದ್ದಾರೆ” ಎಂದು ವರದಿಯಲ್ಲಿ ವಿವರಿಸಲಾಗಿದೆ.

ವೈರಲ್ ಫೋಟೋ ಮತ್ತು ಅದರ ಸುತ್ತಮುತ್ತ ಉಂಟಾಗಿರುವ ಗೊಂದಲದ ಕುರಿತು ಸೆಪ್ಟೆಂಬರ್ 15ರಂದು ಬೆಂಗಳೂರು ಕೇಂದ್ರೀಯ ವಿಭಾಗದ ಡಿಸಿಪಿ (@DCPCentralBCP)ಯವರ ಅಧಿಕೃತ ಎಕ್ಸ್ ಹ್ಯಾಂಡಲ್ ಸ್ಪಷ್ಟನೆ ಕೊಡಲಾಗಿತ್ತು.

“ಬೆಂಗಳೂರಿನ ಟೌನ್ ಹಾಲ್ ಬಳಿ ನಿಮಜ್ಜನಕ್ಕೆ ತೆರಳುತ್ತಿದ್ದ ಭಕ್ತರಿಂದ ಗಣೇಶ ಮೂರ್ತಿಯನ್ನು ಅಧಿಕಾರಿಗಳು ಕಸಿದುಕೊಂಡಿದ್ದಾರೆ ಎಂಬ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಪೋಸ್ಟ್‌ಗಳ ಬಗ್ಗೆ ಸ್ಪಷ್ಟನೆ”

ಸೆಪ್ಟೆಂಬರ್ 13, 2024 ರಂದು, ಹಿಂದೂ ಗುಂಪುಗಳು ಬೆಂಗಳೂರಿನ ಟೌನ್ ಹಾಲ್‌ ಬಳಿ ನಾಗಮಂಗಲ ಗಣೇಶ ಮೆರವಣಿಗೆಯ ಘಟನೆಯನ್ನು ಖಂಡಿಸಿ, ಹೈಕೋರ್ಟ್ ಆದೇಶವನ್ನು ಧಿಕ್ಕರಿಸಿ ಪ್ರತಿಭಟಿಸಿದ್ದವು. ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ. ಬಳಿಕ ಗಣಪತಿ ಮೂರ್ತಿಯನ್ನು ಅಧಿಕಾರಿಗಳು ವಿಧಿ ವಿಧಾನಗಳೊಂದಿಗೆ ನಿಮಜ್ಜನ ಮಾಡಿದ್ದಾರೆ” ಎಂದು ಡಿಸಿಪಿಯವರ ಎಕ್ಸ್‌ ಹ್ಯಾಂಡಲ್‌ನಲ್ಲಿ ಹೇಳಲಾಗಿತ್ತು.

 

ಒಟ್ಟಿನಲ್ಲಿ , ನಾಗಮಂಗಲದ ಘಟನೆಯನ್ನು ಖಂಡಿಸಿ ಬೆಂಗಳೂರಿನ ಟೌನ್‌ಹಾಲ್‌ ಬಳಿ ಬೆಂಗಳೂರು ಗಣೇಶ ಉತ್ಸವ ಸಮಿತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪ್ರತಿಭಟನಾಕಾರರು ತಂದಿದ್ದ ಗಣೇಶ ಮೂರ್ತಿಯನ್ನು ವಶಪಡಿಸಿಕೊಂಡಿದ್ದ ಪೊಲೀಸರು, ಅದನ್ನು ಖಾಲಿ ಪೊಲೀಸ್ ವ್ಯಾನ್‌ನಲ್ಲಿಟ್ಟಿದ್ದರು. ಈ ಕುರಿತ ಪೋಟೋವನ್ನು ಹಂಚಿಕೊಂಡ ಬಿಜೆಪಿ ನಾಯಕರು ಮತ್ತು ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ” ಕಾಂಗ್ರೆಸ್ ಆಡಳಿತ ಕರ್ನಾಟಕದಲ್ಲಿ ಗಣೇಶ ಮೆರವಣಿಗೆಗೆ ಪೊಲೀಸರು ಅಡ್ಡಿಪಡಿಸಿದ್ದಾರೆ. ಗಣೇಶ ಮೂರ್ತಿಯನ್ನು ಬಂಧಿಸಿ ಕಂಬಿ ಹಿಂದೆ ತಳ್ಳಿದ್ದಾರೆ” ಎಂದು ಸುಳ್ಳು ಸಂದೇಶ ಹಂಚಿಕೊಂಡಿದ್ದರು. ಇದನ್ನೇ ಭಾಷಣದಲ್ಲಿ ಉಲ್ಲೇಖಿಸುವ ಮೂಲಕ ಸುಳ್ಳು ಸುದ್ದಿಗೆ ಪ್ರಧಾನಿ ಧನಿಗೂಡಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...