Homeಫ್ಯಾಕ್ಟ್‌ಚೆಕ್FACT CHECK : ಅಪಘಾತದ ವಿಡಿಯೋಗೆ ಕೋಮು ಬಣ್ಣ ಬಳಿದ ಬಲಪಂಥೀಯರು

FACT CHECK : ಅಪಘಾತದ ವಿಡಿಯೋಗೆ ಕೋಮು ಬಣ್ಣ ಬಳಿದ ಬಲಪಂಥೀಯರು

- Advertisement -
- Advertisement -

ಸಾಮಾಜಿಕ ಜಾಲತಾಣಗಳಲ್ಲಿ ಅಪಘಾತವೊಂದರ ವಿಡಿಯೋ ಹರಿದಾಡುತ್ತಿದ್ದು, ಮನೆ ಮುಂದೆ ರಂಗೋಲಿ ಹಾಕುತ್ತಿದ್ದ ಇಬ್ಬರು ಹುಡುಗಿಯರ ಮೇಲೆ ನಿಯಂತ್ರಣ ತಪ್ಪಿದ ಕಾರೊಂದು ಏಕಾಏಕಿ ನುಗ್ಗಿರುವುದನ್ನು ಅದರಲ್ಲಿ ನೋಡಬಹುದು.

ಈ ವಿಡಿಯೋ ಹಂಚಿಕೊಂಡಿರುವ ಅನೇಕ ಫೇಸ್‌ಬುಕ್, ಎಕ್ಸ್‌ ಬಳಕೆದಾರು, “ಹಿಂದೂ ಹೆಣ್ಣು ಮಕ್ಕಳನ್ನು ಕೊಲ್ಲುವ ಯೋಜನೆಯ ಭಾಗವಾಗಿ ಈ ಅಪಘಾತ ನಡೆಸಲಾಗಿದೆ ಎಂದು ಬರೆದುಕೊಂಡಿದ್ದಾರೆ.

ಹಿಂದೂ ಯುವ ರಾಷ್ಟ್ರ ಸೇನೆ‘ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ನೆವೆಂಬರ್ 1,2024ರಂದು ವಿಡಿಯೋ ಹಂಚಿಕೊಂಡು “ಇದೆಲ್ಲ ಈ ಜಿಹಾದಿಗಳ ಪ್ಲಾನ್. ಹಿಂದೂಗಳು ಮತ್ತು ಹಿಂದೂಗಳ ಸಹೋದರಿಯರು ಮತ್ತು ಹಿಂದೂಗಳ ಹೆಣ್ಣು ಮಕ್ಕಳನ್ನು ಕೊಲ್ಲಲಾಗುತ್ತಿದೆ. ಇದು ಅಪಘಾತ ಎಂದು ಹಿಂದೂಗಳು ಭಾವಿಸುತ್ತಿದ್ದಾರೆ. ಈ ವೀಡಿಯೋ ಎಲ್ಲಿಂದ ಬಂದಿದೆಯೋ ಗೊತ್ತಿಲ್ಲ, ಆದರೆ ಹೆಣ್ಣಿನ ಮೇಲೆ ವಾಹನಗಳನ್ನು ಓಡಿಸುವ ಉದ್ದೇಶವೂ ಅದೇ, ಈ ಮುಸ್ಲಿಂ ಯುವಕರು ಸಂಪೂರ್ಣ ಸಿದ್ದತೆ ಮಾಡಿಕೊಂಡಿದ್ದಾರೆ. ಹಿಂದೂಗಳು ಶಾಂತಿಯುತವಾಗಿ ಮೇಣದ ಬತ್ತಿಗಳನ್ನು ಬೆಳಗಿಸುವುದು ಬಿಟ್ಟು ಬೇರೇನೂ ಮಾಡಲ್ಲ ಅಂತ ಅವರಿಗೂ ಗೊತ್ತು” ಎಂದು ಬರೆದುಕೊಳ್ಳಲಾಗಿತ್ತು.

ಅರುಣ್ ಕುಮಾರ್‘ ಎಂಬ ಮತ್ತೋರ್ವ ಎಕ್ಸ್‌ ಬಳಕೆದಾರ ನವೆಂಬರ್ 1,2024ರಂದು ವಿಡಿಯೋ ಹಂಚಿಕೊಂಡು “ಜಿಹಾದಿಗಳ ಪಿತೂರಿ ಅರಿಯದೆ ನಾವು ಮೋಸ ಹೋಗುತ್ತಿದ್ದೇವೆ. ಹಿಂದೂ ಹೆಣ್ಣುಮಕ್ಕಳನ್ನು ಆ್ಯಕ್ಸಿಡೆಂಟ್ ಮೂಲಕ ಕೊಲ್ಲಲಾಗುತ್ತಿದೆ, ಇದು ಅಪಘಾತ ಎಂದು ಹಿಂದೂಗಳು ಭಾವಿಸುತ್ತಿದ್ದಾರೆ. ಎಚ್ಚೆತ್ತು ಕೊಳ್ಳಿ ಹಿಂದೂ ಬಾಂಧವರೆ” ಎಂದು ಬರೆದುಕೊಂಡಿದ್ದರು.

ಇನ್ನೂ ಕೆಲ ಸಾಮಾಜಿಕ ಜಾಲತಾಣ ಬಳಕೆದಾರರು ವಿಡಿಯೋ ಹಂಚಿಕೊಂಡು ಇದೇ ರೀತಿ ಬರೆದುಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ಕುರಿತು ಸತ್ಯಾಸತ್ಯತೆ ತಿಳಿಯಲು ನಾವು ಅದರ ಸ್ಕ್ರೀನ್ ಶಾಟ್ ಅನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಸರ್ಚ್ ಮಾಡಿದ್ದೇವೆ. ಈ ವೇಳೆ ವಿಡಿಯೋಗೆ ಸಂಬಂಧಿಸಿದ ಅನೇಕ ಮಾಧ್ಯಮ ವರದಿಗಳು ನಮಗೆ ಲಭ್ಯವಾಗಿದೆ.

ವರದಿಗಳ ಪ್ರಕಾರ, ಘಟನೆಯ ಹಿಂದೆ ಯಾವುದೇ ಕೋಮು ಆಯಾಮ ಇಲ್ಲ. ಅದೊಂದು ಸಾಮಾನ್ಯ ಅಪಘಾತವಾಗಿದ್ದು, ಅಪಘಾತವೆಸಗಿದ ಆರೋಪದ ಮೇಲೆ ಬಂಧಿತ ವ್ಯಕ್ತಿ ಕೂಡ ಹಿಂದೂ ಎಂದು ಗೊತ್ತಾಗಿದೆ.

ಘಟನೆಯ ಕುರಿತು ಎಬಿಪಿ ನ್ಯೂಸ್ಎನ್‌ಬಿಟಿ ಮತ್ತು ಟಿವಿ-9 ಭಾರತವರ್ಷ ಅಕ್ಟೋಬರ್ 29, 2024 ರಂದು ಪ್ರಕಟಿಸಿದ ವರದಿಗಳನ್ನು ನಾವು ಪರಿಶೀಲಿಸಿದ್ದೇವೆ. ಈ ಎಲ್ಲಾ ವರದಿಗಳು ಆರೋಪಿ ಕಾರು ಚಾಲಕನ ಹೆಸರನ್ನು ತುಷಾರ್ ಅಗರ್ವಾಲ್ ಎಂದು ಉಲ್ಲೇಖಿಸಿದೆ.

‘ಇಂದೋರ್‌ನ ಜೈಭವಾನಿ ನಗರದಲ್ಲಿ ಇಬ್ಬರು ಹುಡುಗಿಯರು ನವ್ಯಾ ಪ್ರಜಾಪತ್ ಮತ್ತು ಪ್ರಿಯಾಂಶು ತಮ್ಮ ಮನೆಯ ಹೊರಗೆ ರಂಗೋಲಿ ಹಾಕುತ್ತಿದ್ದರು. ಈ ವೇಳೆ ತುಷಾರ್ ಅಗರ್ವಾಲ್ ಅತಿ ವೇಗವಾಗಿ ಬಂದು  ಬಾಲಕಿಯರ ಮೇಲೆ ಕಾರು ಹತ್ತಿಸಿದ್ದಾನೆ. ಕಾರಿನ ಸಂಖ್ಯೆ MP 09 ZW 7287 ಆಗಿದ್ದು, ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾರು ಚಾಲಕ ತುಷಾರ್ ಅಗರ್ವಾಲ್, ಹುಕುಮಚಂದ್ ಕಾಲೋನಿ ನಿವಾಸಿಯಾಗಿದ್ದಾನೆ. ಈತ ಘಟನೆ ಬಳಿಕ ಸ್ಥಳದಿಂದ ಪರಾರಿಯಾಗಿದ್ದ. ಬಳಿಕ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ” ಎಂದು ವರದಿಗಳು ವಿವರಿಸಿದೆ.

ಎಎನ್‌ಐ ಸುದ್ದಿ ಸಂಸ್ಥೆ ಅಕ್ಟೋಬರ್ 29,2024ರಂದು ತನ್ನ ಎಕ್ಸ್ ಖಾತೆಯಲ್ಲಿ ಈ ಘಟನೆಯ ಕುರಿತು ಇಂದೋರ್ ವಲಯ-1 ಡಿಸಿಪಿ ವಿನೋದ್ ಕುಮಾರ್ ಮೀನಾ ಅವರು ನೀಡಿದ್ದ ಹೇಳಿಕೆಯನ್ನು ಹಂಚಿಕೊಂಡಿತ್ತು. ಇದರಲ್ಲೂ ಅವರು ಆರೋಪಿಯನ್ನು ತುಷಾರ್ ಅಗರ್ವಾಲ್ ಎಂದು ಹೇಳಿದ್ದರು.

ಒಟ್ಟಿನಲ್ಲಿ, ಹುಡುಗಿಯರ ಮೇಲೆ ಕಾರು ಹತ್ತಿದ ಅಪಘಾತದ ವಿಡಿಯೋ ಹಿಂದೆ ಯಾವುದೇ ಕೋಮು ಆಯಾಮ ಇಲ್ಲ. ಅಪಘಾತ ಹಿಂದೂ ಹೆಣ್ಣುಮಕ್ಕಳನ್ನು ಕೊಲ್ಲುವ ಯೋಜನೆಯ ಭಾಗ ಎಂಬುವುದು ಸುಳ್ಳು.

ಇದನ್ನೂ ಓದಿ : FACT CHECK : ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗಡೆ ನಿಲ್ಲಿಸಿ ಅವಮಾನಿಸಲಾಗಿದೆಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...