Homeಫ್ಯಾಕ್ಟ್‌ಚೆಕ್FACT CHECK : ಅಪಘಾತದ ವಿಡಿಯೋಗೆ ಕೋಮು ಬಣ್ಣ ಬಳಿದ ಬಲಪಂಥೀಯರು

FACT CHECK : ಅಪಘಾತದ ವಿಡಿಯೋಗೆ ಕೋಮು ಬಣ್ಣ ಬಳಿದ ಬಲಪಂಥೀಯರು

- Advertisement -
- Advertisement -

ಸಾಮಾಜಿಕ ಜಾಲತಾಣಗಳಲ್ಲಿ ಅಪಘಾತವೊಂದರ ವಿಡಿಯೋ ಹರಿದಾಡುತ್ತಿದ್ದು, ಮನೆ ಮುಂದೆ ರಂಗೋಲಿ ಹಾಕುತ್ತಿದ್ದ ಇಬ್ಬರು ಹುಡುಗಿಯರ ಮೇಲೆ ನಿಯಂತ್ರಣ ತಪ್ಪಿದ ಕಾರೊಂದು ಏಕಾಏಕಿ ನುಗ್ಗಿರುವುದನ್ನು ಅದರಲ್ಲಿ ನೋಡಬಹುದು.

ಈ ವಿಡಿಯೋ ಹಂಚಿಕೊಂಡಿರುವ ಅನೇಕ ಫೇಸ್‌ಬುಕ್, ಎಕ್ಸ್‌ ಬಳಕೆದಾರು, “ಹಿಂದೂ ಹೆಣ್ಣು ಮಕ್ಕಳನ್ನು ಕೊಲ್ಲುವ ಯೋಜನೆಯ ಭಾಗವಾಗಿ ಈ ಅಪಘಾತ ನಡೆಸಲಾಗಿದೆ ಎಂದು ಬರೆದುಕೊಂಡಿದ್ದಾರೆ.

ಹಿಂದೂ ಯುವ ರಾಷ್ಟ್ರ ಸೇನೆ‘ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ನೆವೆಂಬರ್ 1,2024ರಂದು ವಿಡಿಯೋ ಹಂಚಿಕೊಂಡು “ಇದೆಲ್ಲ ಈ ಜಿಹಾದಿಗಳ ಪ್ಲಾನ್. ಹಿಂದೂಗಳು ಮತ್ತು ಹಿಂದೂಗಳ ಸಹೋದರಿಯರು ಮತ್ತು ಹಿಂದೂಗಳ ಹೆಣ್ಣು ಮಕ್ಕಳನ್ನು ಕೊಲ್ಲಲಾಗುತ್ತಿದೆ. ಇದು ಅಪಘಾತ ಎಂದು ಹಿಂದೂಗಳು ಭಾವಿಸುತ್ತಿದ್ದಾರೆ. ಈ ವೀಡಿಯೋ ಎಲ್ಲಿಂದ ಬಂದಿದೆಯೋ ಗೊತ್ತಿಲ್ಲ, ಆದರೆ ಹೆಣ್ಣಿನ ಮೇಲೆ ವಾಹನಗಳನ್ನು ಓಡಿಸುವ ಉದ್ದೇಶವೂ ಅದೇ, ಈ ಮುಸ್ಲಿಂ ಯುವಕರು ಸಂಪೂರ್ಣ ಸಿದ್ದತೆ ಮಾಡಿಕೊಂಡಿದ್ದಾರೆ. ಹಿಂದೂಗಳು ಶಾಂತಿಯುತವಾಗಿ ಮೇಣದ ಬತ್ತಿಗಳನ್ನು ಬೆಳಗಿಸುವುದು ಬಿಟ್ಟು ಬೇರೇನೂ ಮಾಡಲ್ಲ ಅಂತ ಅವರಿಗೂ ಗೊತ್ತು” ಎಂದು ಬರೆದುಕೊಳ್ಳಲಾಗಿತ್ತು.

ಅರುಣ್ ಕುಮಾರ್‘ ಎಂಬ ಮತ್ತೋರ್ವ ಎಕ್ಸ್‌ ಬಳಕೆದಾರ ನವೆಂಬರ್ 1,2024ರಂದು ವಿಡಿಯೋ ಹಂಚಿಕೊಂಡು “ಜಿಹಾದಿಗಳ ಪಿತೂರಿ ಅರಿಯದೆ ನಾವು ಮೋಸ ಹೋಗುತ್ತಿದ್ದೇವೆ. ಹಿಂದೂ ಹೆಣ್ಣುಮಕ್ಕಳನ್ನು ಆ್ಯಕ್ಸಿಡೆಂಟ್ ಮೂಲಕ ಕೊಲ್ಲಲಾಗುತ್ತಿದೆ, ಇದು ಅಪಘಾತ ಎಂದು ಹಿಂದೂಗಳು ಭಾವಿಸುತ್ತಿದ್ದಾರೆ. ಎಚ್ಚೆತ್ತು ಕೊಳ್ಳಿ ಹಿಂದೂ ಬಾಂಧವರೆ” ಎಂದು ಬರೆದುಕೊಂಡಿದ್ದರು.

ಇನ್ನೂ ಕೆಲ ಸಾಮಾಜಿಕ ಜಾಲತಾಣ ಬಳಕೆದಾರರು ವಿಡಿಯೋ ಹಂಚಿಕೊಂಡು ಇದೇ ರೀತಿ ಬರೆದುಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ಕುರಿತು ಸತ್ಯಾಸತ್ಯತೆ ತಿಳಿಯಲು ನಾವು ಅದರ ಸ್ಕ್ರೀನ್ ಶಾಟ್ ಅನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಸರ್ಚ್ ಮಾಡಿದ್ದೇವೆ. ಈ ವೇಳೆ ವಿಡಿಯೋಗೆ ಸಂಬಂಧಿಸಿದ ಅನೇಕ ಮಾಧ್ಯಮ ವರದಿಗಳು ನಮಗೆ ಲಭ್ಯವಾಗಿದೆ.

ವರದಿಗಳ ಪ್ರಕಾರ, ಘಟನೆಯ ಹಿಂದೆ ಯಾವುದೇ ಕೋಮು ಆಯಾಮ ಇಲ್ಲ. ಅದೊಂದು ಸಾಮಾನ್ಯ ಅಪಘಾತವಾಗಿದ್ದು, ಅಪಘಾತವೆಸಗಿದ ಆರೋಪದ ಮೇಲೆ ಬಂಧಿತ ವ್ಯಕ್ತಿ ಕೂಡ ಹಿಂದೂ ಎಂದು ಗೊತ್ತಾಗಿದೆ.

ಘಟನೆಯ ಕುರಿತು ಎಬಿಪಿ ನ್ಯೂಸ್ಎನ್‌ಬಿಟಿ ಮತ್ತು ಟಿವಿ-9 ಭಾರತವರ್ಷ ಅಕ್ಟೋಬರ್ 29, 2024 ರಂದು ಪ್ರಕಟಿಸಿದ ವರದಿಗಳನ್ನು ನಾವು ಪರಿಶೀಲಿಸಿದ್ದೇವೆ. ಈ ಎಲ್ಲಾ ವರದಿಗಳು ಆರೋಪಿ ಕಾರು ಚಾಲಕನ ಹೆಸರನ್ನು ತುಷಾರ್ ಅಗರ್ವಾಲ್ ಎಂದು ಉಲ್ಲೇಖಿಸಿದೆ.

‘ಇಂದೋರ್‌ನ ಜೈಭವಾನಿ ನಗರದಲ್ಲಿ ಇಬ್ಬರು ಹುಡುಗಿಯರು ನವ್ಯಾ ಪ್ರಜಾಪತ್ ಮತ್ತು ಪ್ರಿಯಾಂಶು ತಮ್ಮ ಮನೆಯ ಹೊರಗೆ ರಂಗೋಲಿ ಹಾಕುತ್ತಿದ್ದರು. ಈ ವೇಳೆ ತುಷಾರ್ ಅಗರ್ವಾಲ್ ಅತಿ ವೇಗವಾಗಿ ಬಂದು  ಬಾಲಕಿಯರ ಮೇಲೆ ಕಾರು ಹತ್ತಿಸಿದ್ದಾನೆ. ಕಾರಿನ ಸಂಖ್ಯೆ MP 09 ZW 7287 ಆಗಿದ್ದು, ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾರು ಚಾಲಕ ತುಷಾರ್ ಅಗರ್ವಾಲ್, ಹುಕುಮಚಂದ್ ಕಾಲೋನಿ ನಿವಾಸಿಯಾಗಿದ್ದಾನೆ. ಈತ ಘಟನೆ ಬಳಿಕ ಸ್ಥಳದಿಂದ ಪರಾರಿಯಾಗಿದ್ದ. ಬಳಿಕ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ” ಎಂದು ವರದಿಗಳು ವಿವರಿಸಿದೆ.

ಎಎನ್‌ಐ ಸುದ್ದಿ ಸಂಸ್ಥೆ ಅಕ್ಟೋಬರ್ 29,2024ರಂದು ತನ್ನ ಎಕ್ಸ್ ಖಾತೆಯಲ್ಲಿ ಈ ಘಟನೆಯ ಕುರಿತು ಇಂದೋರ್ ವಲಯ-1 ಡಿಸಿಪಿ ವಿನೋದ್ ಕುಮಾರ್ ಮೀನಾ ಅವರು ನೀಡಿದ್ದ ಹೇಳಿಕೆಯನ್ನು ಹಂಚಿಕೊಂಡಿತ್ತು. ಇದರಲ್ಲೂ ಅವರು ಆರೋಪಿಯನ್ನು ತುಷಾರ್ ಅಗರ್ವಾಲ್ ಎಂದು ಹೇಳಿದ್ದರು.

ಒಟ್ಟಿನಲ್ಲಿ, ಹುಡುಗಿಯರ ಮೇಲೆ ಕಾರು ಹತ್ತಿದ ಅಪಘಾತದ ವಿಡಿಯೋ ಹಿಂದೆ ಯಾವುದೇ ಕೋಮು ಆಯಾಮ ಇಲ್ಲ. ಅಪಘಾತ ಹಿಂದೂ ಹೆಣ್ಣುಮಕ್ಕಳನ್ನು ಕೊಲ್ಲುವ ಯೋಜನೆಯ ಭಾಗ ಎಂಬುವುದು ಸುಳ್ಳು.

ಇದನ್ನೂ ಓದಿ : FACT CHECK : ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗಡೆ ನಿಲ್ಲಿಸಿ ಅವಮಾನಿಸಲಾಗಿದೆಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...