Homeಫ್ಯಾಕ್ಟ್‌ಚೆಕ್FACT CHECK : ಅಪಘಾತದ ವಿಡಿಯೋಗೆ ಕೋಮು ಬಣ್ಣ ಬಳಿದ ಬಲಪಂಥೀಯರು

FACT CHECK : ಅಪಘಾತದ ವಿಡಿಯೋಗೆ ಕೋಮು ಬಣ್ಣ ಬಳಿದ ಬಲಪಂಥೀಯರು

- Advertisement -
- Advertisement -

ಸಾಮಾಜಿಕ ಜಾಲತಾಣಗಳಲ್ಲಿ ಅಪಘಾತವೊಂದರ ವಿಡಿಯೋ ಹರಿದಾಡುತ್ತಿದ್ದು, ಮನೆ ಮುಂದೆ ರಂಗೋಲಿ ಹಾಕುತ್ತಿದ್ದ ಇಬ್ಬರು ಹುಡುಗಿಯರ ಮೇಲೆ ನಿಯಂತ್ರಣ ತಪ್ಪಿದ ಕಾರೊಂದು ಏಕಾಏಕಿ ನುಗ್ಗಿರುವುದನ್ನು ಅದರಲ್ಲಿ ನೋಡಬಹುದು.

ಈ ವಿಡಿಯೋ ಹಂಚಿಕೊಂಡಿರುವ ಅನೇಕ ಫೇಸ್‌ಬುಕ್, ಎಕ್ಸ್‌ ಬಳಕೆದಾರು, “ಹಿಂದೂ ಹೆಣ್ಣು ಮಕ್ಕಳನ್ನು ಕೊಲ್ಲುವ ಯೋಜನೆಯ ಭಾಗವಾಗಿ ಈ ಅಪಘಾತ ನಡೆಸಲಾಗಿದೆ ಎಂದು ಬರೆದುಕೊಂಡಿದ್ದಾರೆ.

ಹಿಂದೂ ಯುವ ರಾಷ್ಟ್ರ ಸೇನೆ‘ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ನೆವೆಂಬರ್ 1,2024ರಂದು ವಿಡಿಯೋ ಹಂಚಿಕೊಂಡು “ಇದೆಲ್ಲ ಈ ಜಿಹಾದಿಗಳ ಪ್ಲಾನ್. ಹಿಂದೂಗಳು ಮತ್ತು ಹಿಂದೂಗಳ ಸಹೋದರಿಯರು ಮತ್ತು ಹಿಂದೂಗಳ ಹೆಣ್ಣು ಮಕ್ಕಳನ್ನು ಕೊಲ್ಲಲಾಗುತ್ತಿದೆ. ಇದು ಅಪಘಾತ ಎಂದು ಹಿಂದೂಗಳು ಭಾವಿಸುತ್ತಿದ್ದಾರೆ. ಈ ವೀಡಿಯೋ ಎಲ್ಲಿಂದ ಬಂದಿದೆಯೋ ಗೊತ್ತಿಲ್ಲ, ಆದರೆ ಹೆಣ್ಣಿನ ಮೇಲೆ ವಾಹನಗಳನ್ನು ಓಡಿಸುವ ಉದ್ದೇಶವೂ ಅದೇ, ಈ ಮುಸ್ಲಿಂ ಯುವಕರು ಸಂಪೂರ್ಣ ಸಿದ್ದತೆ ಮಾಡಿಕೊಂಡಿದ್ದಾರೆ. ಹಿಂದೂಗಳು ಶಾಂತಿಯುತವಾಗಿ ಮೇಣದ ಬತ್ತಿಗಳನ್ನು ಬೆಳಗಿಸುವುದು ಬಿಟ್ಟು ಬೇರೇನೂ ಮಾಡಲ್ಲ ಅಂತ ಅವರಿಗೂ ಗೊತ್ತು” ಎಂದು ಬರೆದುಕೊಳ್ಳಲಾಗಿತ್ತು.

ಅರುಣ್ ಕುಮಾರ್‘ ಎಂಬ ಮತ್ತೋರ್ವ ಎಕ್ಸ್‌ ಬಳಕೆದಾರ ನವೆಂಬರ್ 1,2024ರಂದು ವಿಡಿಯೋ ಹಂಚಿಕೊಂಡು “ಜಿಹಾದಿಗಳ ಪಿತೂರಿ ಅರಿಯದೆ ನಾವು ಮೋಸ ಹೋಗುತ್ತಿದ್ದೇವೆ. ಹಿಂದೂ ಹೆಣ್ಣುಮಕ್ಕಳನ್ನು ಆ್ಯಕ್ಸಿಡೆಂಟ್ ಮೂಲಕ ಕೊಲ್ಲಲಾಗುತ್ತಿದೆ, ಇದು ಅಪಘಾತ ಎಂದು ಹಿಂದೂಗಳು ಭಾವಿಸುತ್ತಿದ್ದಾರೆ. ಎಚ್ಚೆತ್ತು ಕೊಳ್ಳಿ ಹಿಂದೂ ಬಾಂಧವರೆ” ಎಂದು ಬರೆದುಕೊಂಡಿದ್ದರು.

ಇನ್ನೂ ಕೆಲ ಸಾಮಾಜಿಕ ಜಾಲತಾಣ ಬಳಕೆದಾರರು ವಿಡಿಯೋ ಹಂಚಿಕೊಂಡು ಇದೇ ರೀತಿ ಬರೆದುಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ಕುರಿತು ಸತ್ಯಾಸತ್ಯತೆ ತಿಳಿಯಲು ನಾವು ಅದರ ಸ್ಕ್ರೀನ್ ಶಾಟ್ ಅನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಸರ್ಚ್ ಮಾಡಿದ್ದೇವೆ. ಈ ವೇಳೆ ವಿಡಿಯೋಗೆ ಸಂಬಂಧಿಸಿದ ಅನೇಕ ಮಾಧ್ಯಮ ವರದಿಗಳು ನಮಗೆ ಲಭ್ಯವಾಗಿದೆ.

ವರದಿಗಳ ಪ್ರಕಾರ, ಘಟನೆಯ ಹಿಂದೆ ಯಾವುದೇ ಕೋಮು ಆಯಾಮ ಇಲ್ಲ. ಅದೊಂದು ಸಾಮಾನ್ಯ ಅಪಘಾತವಾಗಿದ್ದು, ಅಪಘಾತವೆಸಗಿದ ಆರೋಪದ ಮೇಲೆ ಬಂಧಿತ ವ್ಯಕ್ತಿ ಕೂಡ ಹಿಂದೂ ಎಂದು ಗೊತ್ತಾಗಿದೆ.

ಘಟನೆಯ ಕುರಿತು ಎಬಿಪಿ ನ್ಯೂಸ್ಎನ್‌ಬಿಟಿ ಮತ್ತು ಟಿವಿ-9 ಭಾರತವರ್ಷ ಅಕ್ಟೋಬರ್ 29, 2024 ರಂದು ಪ್ರಕಟಿಸಿದ ವರದಿಗಳನ್ನು ನಾವು ಪರಿಶೀಲಿಸಿದ್ದೇವೆ. ಈ ಎಲ್ಲಾ ವರದಿಗಳು ಆರೋಪಿ ಕಾರು ಚಾಲಕನ ಹೆಸರನ್ನು ತುಷಾರ್ ಅಗರ್ವಾಲ್ ಎಂದು ಉಲ್ಲೇಖಿಸಿದೆ.

‘ಇಂದೋರ್‌ನ ಜೈಭವಾನಿ ನಗರದಲ್ಲಿ ಇಬ್ಬರು ಹುಡುಗಿಯರು ನವ್ಯಾ ಪ್ರಜಾಪತ್ ಮತ್ತು ಪ್ರಿಯಾಂಶು ತಮ್ಮ ಮನೆಯ ಹೊರಗೆ ರಂಗೋಲಿ ಹಾಕುತ್ತಿದ್ದರು. ಈ ವೇಳೆ ತುಷಾರ್ ಅಗರ್ವಾಲ್ ಅತಿ ವೇಗವಾಗಿ ಬಂದು  ಬಾಲಕಿಯರ ಮೇಲೆ ಕಾರು ಹತ್ತಿಸಿದ್ದಾನೆ. ಕಾರಿನ ಸಂಖ್ಯೆ MP 09 ZW 7287 ಆಗಿದ್ದು, ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾರು ಚಾಲಕ ತುಷಾರ್ ಅಗರ್ವಾಲ್, ಹುಕುಮಚಂದ್ ಕಾಲೋನಿ ನಿವಾಸಿಯಾಗಿದ್ದಾನೆ. ಈತ ಘಟನೆ ಬಳಿಕ ಸ್ಥಳದಿಂದ ಪರಾರಿಯಾಗಿದ್ದ. ಬಳಿಕ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ” ಎಂದು ವರದಿಗಳು ವಿವರಿಸಿದೆ.

ಎಎನ್‌ಐ ಸುದ್ದಿ ಸಂಸ್ಥೆ ಅಕ್ಟೋಬರ್ 29,2024ರಂದು ತನ್ನ ಎಕ್ಸ್ ಖಾತೆಯಲ್ಲಿ ಈ ಘಟನೆಯ ಕುರಿತು ಇಂದೋರ್ ವಲಯ-1 ಡಿಸಿಪಿ ವಿನೋದ್ ಕುಮಾರ್ ಮೀನಾ ಅವರು ನೀಡಿದ್ದ ಹೇಳಿಕೆಯನ್ನು ಹಂಚಿಕೊಂಡಿತ್ತು. ಇದರಲ್ಲೂ ಅವರು ಆರೋಪಿಯನ್ನು ತುಷಾರ್ ಅಗರ್ವಾಲ್ ಎಂದು ಹೇಳಿದ್ದರು.

ಒಟ್ಟಿನಲ್ಲಿ, ಹುಡುಗಿಯರ ಮೇಲೆ ಕಾರು ಹತ್ತಿದ ಅಪಘಾತದ ವಿಡಿಯೋ ಹಿಂದೆ ಯಾವುದೇ ಕೋಮು ಆಯಾಮ ಇಲ್ಲ. ಅಪಘಾತ ಹಿಂದೂ ಹೆಣ್ಣುಮಕ್ಕಳನ್ನು ಕೊಲ್ಲುವ ಯೋಜನೆಯ ಭಾಗ ಎಂಬುವುದು ಸುಳ್ಳು.

ಇದನ್ನೂ ಓದಿ : FACT CHECK : ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗಡೆ ನಿಲ್ಲಿಸಿ ಅವಮಾನಿಸಲಾಗಿದೆಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...