Homeಫ್ಯಾಕ್ಟ್‌ಚೆಕ್FACT CHECK : ಅಪಘಾತದ ವಿಡಿಯೋಗೆ ಕೋಮು ಬಣ್ಣ ಬಳಿದ ಬಲಪಂಥೀಯರು

FACT CHECK : ಅಪಘಾತದ ವಿಡಿಯೋಗೆ ಕೋಮು ಬಣ್ಣ ಬಳಿದ ಬಲಪಂಥೀಯರು

- Advertisement -
- Advertisement -

ಸಾಮಾಜಿಕ ಜಾಲತಾಣಗಳಲ್ಲಿ ಅಪಘಾತವೊಂದರ ವಿಡಿಯೋ ಹರಿದಾಡುತ್ತಿದ್ದು, ಮನೆ ಮುಂದೆ ರಂಗೋಲಿ ಹಾಕುತ್ತಿದ್ದ ಇಬ್ಬರು ಹುಡುಗಿಯರ ಮೇಲೆ ನಿಯಂತ್ರಣ ತಪ್ಪಿದ ಕಾರೊಂದು ಏಕಾಏಕಿ ನುಗ್ಗಿರುವುದನ್ನು ಅದರಲ್ಲಿ ನೋಡಬಹುದು.

ಈ ವಿಡಿಯೋ ಹಂಚಿಕೊಂಡಿರುವ ಅನೇಕ ಫೇಸ್‌ಬುಕ್, ಎಕ್ಸ್‌ ಬಳಕೆದಾರು, “ಹಿಂದೂ ಹೆಣ್ಣು ಮಕ್ಕಳನ್ನು ಕೊಲ್ಲುವ ಯೋಜನೆಯ ಭಾಗವಾಗಿ ಈ ಅಪಘಾತ ನಡೆಸಲಾಗಿದೆ ಎಂದು ಬರೆದುಕೊಂಡಿದ್ದಾರೆ.

ಹಿಂದೂ ಯುವ ರಾಷ್ಟ್ರ ಸೇನೆ‘ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ನೆವೆಂಬರ್ 1,2024ರಂದು ವಿಡಿಯೋ ಹಂಚಿಕೊಂಡು “ಇದೆಲ್ಲ ಈ ಜಿಹಾದಿಗಳ ಪ್ಲಾನ್. ಹಿಂದೂಗಳು ಮತ್ತು ಹಿಂದೂಗಳ ಸಹೋದರಿಯರು ಮತ್ತು ಹಿಂದೂಗಳ ಹೆಣ್ಣು ಮಕ್ಕಳನ್ನು ಕೊಲ್ಲಲಾಗುತ್ತಿದೆ. ಇದು ಅಪಘಾತ ಎಂದು ಹಿಂದೂಗಳು ಭಾವಿಸುತ್ತಿದ್ದಾರೆ. ಈ ವೀಡಿಯೋ ಎಲ್ಲಿಂದ ಬಂದಿದೆಯೋ ಗೊತ್ತಿಲ್ಲ, ಆದರೆ ಹೆಣ್ಣಿನ ಮೇಲೆ ವಾಹನಗಳನ್ನು ಓಡಿಸುವ ಉದ್ದೇಶವೂ ಅದೇ, ಈ ಮುಸ್ಲಿಂ ಯುವಕರು ಸಂಪೂರ್ಣ ಸಿದ್ದತೆ ಮಾಡಿಕೊಂಡಿದ್ದಾರೆ. ಹಿಂದೂಗಳು ಶಾಂತಿಯುತವಾಗಿ ಮೇಣದ ಬತ್ತಿಗಳನ್ನು ಬೆಳಗಿಸುವುದು ಬಿಟ್ಟು ಬೇರೇನೂ ಮಾಡಲ್ಲ ಅಂತ ಅವರಿಗೂ ಗೊತ್ತು” ಎಂದು ಬರೆದುಕೊಳ್ಳಲಾಗಿತ್ತು.

ಅರುಣ್ ಕುಮಾರ್‘ ಎಂಬ ಮತ್ತೋರ್ವ ಎಕ್ಸ್‌ ಬಳಕೆದಾರ ನವೆಂಬರ್ 1,2024ರಂದು ವಿಡಿಯೋ ಹಂಚಿಕೊಂಡು “ಜಿಹಾದಿಗಳ ಪಿತೂರಿ ಅರಿಯದೆ ನಾವು ಮೋಸ ಹೋಗುತ್ತಿದ್ದೇವೆ. ಹಿಂದೂ ಹೆಣ್ಣುಮಕ್ಕಳನ್ನು ಆ್ಯಕ್ಸಿಡೆಂಟ್ ಮೂಲಕ ಕೊಲ್ಲಲಾಗುತ್ತಿದೆ, ಇದು ಅಪಘಾತ ಎಂದು ಹಿಂದೂಗಳು ಭಾವಿಸುತ್ತಿದ್ದಾರೆ. ಎಚ್ಚೆತ್ತು ಕೊಳ್ಳಿ ಹಿಂದೂ ಬಾಂಧವರೆ” ಎಂದು ಬರೆದುಕೊಂಡಿದ್ದರು.

ಇನ್ನೂ ಕೆಲ ಸಾಮಾಜಿಕ ಜಾಲತಾಣ ಬಳಕೆದಾರರು ವಿಡಿಯೋ ಹಂಚಿಕೊಂಡು ಇದೇ ರೀತಿ ಬರೆದುಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ಕುರಿತು ಸತ್ಯಾಸತ್ಯತೆ ತಿಳಿಯಲು ನಾವು ಅದರ ಸ್ಕ್ರೀನ್ ಶಾಟ್ ಅನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಸರ್ಚ್ ಮಾಡಿದ್ದೇವೆ. ಈ ವೇಳೆ ವಿಡಿಯೋಗೆ ಸಂಬಂಧಿಸಿದ ಅನೇಕ ಮಾಧ್ಯಮ ವರದಿಗಳು ನಮಗೆ ಲಭ್ಯವಾಗಿದೆ.

ವರದಿಗಳ ಪ್ರಕಾರ, ಘಟನೆಯ ಹಿಂದೆ ಯಾವುದೇ ಕೋಮು ಆಯಾಮ ಇಲ್ಲ. ಅದೊಂದು ಸಾಮಾನ್ಯ ಅಪಘಾತವಾಗಿದ್ದು, ಅಪಘಾತವೆಸಗಿದ ಆರೋಪದ ಮೇಲೆ ಬಂಧಿತ ವ್ಯಕ್ತಿ ಕೂಡ ಹಿಂದೂ ಎಂದು ಗೊತ್ತಾಗಿದೆ.

ಘಟನೆಯ ಕುರಿತು ಎಬಿಪಿ ನ್ಯೂಸ್ಎನ್‌ಬಿಟಿ ಮತ್ತು ಟಿವಿ-9 ಭಾರತವರ್ಷ ಅಕ್ಟೋಬರ್ 29, 2024 ರಂದು ಪ್ರಕಟಿಸಿದ ವರದಿಗಳನ್ನು ನಾವು ಪರಿಶೀಲಿಸಿದ್ದೇವೆ. ಈ ಎಲ್ಲಾ ವರದಿಗಳು ಆರೋಪಿ ಕಾರು ಚಾಲಕನ ಹೆಸರನ್ನು ತುಷಾರ್ ಅಗರ್ವಾಲ್ ಎಂದು ಉಲ್ಲೇಖಿಸಿದೆ.

‘ಇಂದೋರ್‌ನ ಜೈಭವಾನಿ ನಗರದಲ್ಲಿ ಇಬ್ಬರು ಹುಡುಗಿಯರು ನವ್ಯಾ ಪ್ರಜಾಪತ್ ಮತ್ತು ಪ್ರಿಯಾಂಶು ತಮ್ಮ ಮನೆಯ ಹೊರಗೆ ರಂಗೋಲಿ ಹಾಕುತ್ತಿದ್ದರು. ಈ ವೇಳೆ ತುಷಾರ್ ಅಗರ್ವಾಲ್ ಅತಿ ವೇಗವಾಗಿ ಬಂದು  ಬಾಲಕಿಯರ ಮೇಲೆ ಕಾರು ಹತ್ತಿಸಿದ್ದಾನೆ. ಕಾರಿನ ಸಂಖ್ಯೆ MP 09 ZW 7287 ಆಗಿದ್ದು, ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾರು ಚಾಲಕ ತುಷಾರ್ ಅಗರ್ವಾಲ್, ಹುಕುಮಚಂದ್ ಕಾಲೋನಿ ನಿವಾಸಿಯಾಗಿದ್ದಾನೆ. ಈತ ಘಟನೆ ಬಳಿಕ ಸ್ಥಳದಿಂದ ಪರಾರಿಯಾಗಿದ್ದ. ಬಳಿಕ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ” ಎಂದು ವರದಿಗಳು ವಿವರಿಸಿದೆ.

ಎಎನ್‌ಐ ಸುದ್ದಿ ಸಂಸ್ಥೆ ಅಕ್ಟೋಬರ್ 29,2024ರಂದು ತನ್ನ ಎಕ್ಸ್ ಖಾತೆಯಲ್ಲಿ ಈ ಘಟನೆಯ ಕುರಿತು ಇಂದೋರ್ ವಲಯ-1 ಡಿಸಿಪಿ ವಿನೋದ್ ಕುಮಾರ್ ಮೀನಾ ಅವರು ನೀಡಿದ್ದ ಹೇಳಿಕೆಯನ್ನು ಹಂಚಿಕೊಂಡಿತ್ತು. ಇದರಲ್ಲೂ ಅವರು ಆರೋಪಿಯನ್ನು ತುಷಾರ್ ಅಗರ್ವಾಲ್ ಎಂದು ಹೇಳಿದ್ದರು.

ಒಟ್ಟಿನಲ್ಲಿ, ಹುಡುಗಿಯರ ಮೇಲೆ ಕಾರು ಹತ್ತಿದ ಅಪಘಾತದ ವಿಡಿಯೋ ಹಿಂದೆ ಯಾವುದೇ ಕೋಮು ಆಯಾಮ ಇಲ್ಲ. ಅಪಘಾತ ಹಿಂದೂ ಹೆಣ್ಣುಮಕ್ಕಳನ್ನು ಕೊಲ್ಲುವ ಯೋಜನೆಯ ಭಾಗ ಎಂಬುವುದು ಸುಳ್ಳು.

ಇದನ್ನೂ ಓದಿ : FACT CHECK : ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗಡೆ ನಿಲ್ಲಿಸಿ ಅವಮಾನಿಸಲಾಗಿದೆಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...