Homeಫ್ಯಾಕ್ಟ್‌ಚೆಕ್FACT CHECK : ಶಿವಲಿಂಗ ಧ್ವಂಸ ಘಟನೆಗೆ ಕೋಮು ಬಣ್ಣ ಬಳಿದ ಬಲಪಂಥೀಯರು

FACT CHECK : ಶಿವಲಿಂಗ ಧ್ವಂಸ ಘಟನೆಗೆ ಕೋಮು ಬಣ್ಣ ಬಳಿದ ಬಲಪಂಥೀಯರು

- Advertisement -
- Advertisement -

ಶಿಮ್ಲಾ ಸೇರಿದಂತೆ ಹಿಮಾಚಲ ಪ್ರದೇಶದ ವಿವಿದೆಡೆ ಕೋಮು ದ್ವೇಷದ ಘಟನೆಗಳು ಸುದ್ದಿಯಾಗುತ್ತಿರುವ ನಡುವೆ, ಸೆಪ್ಟೆಂಬರ್ 27, 2024ರಂದು ಕಾಂಗ್ರಾ ಜಿಲ್ಲೆಯ ನಗ್ರೋಟಾದಲ್ಲಿನ ದೇವಾಲಯವೊಂದರ ಶಿವಲಿಂಗ ಭಗ್ನಗೊಂಡ ರೀತಿಯಲ್ಲಿ ಪತ್ತೆಯಾಗಿತ್ತು.

ಈ ಕುರಿತು ಸಿಟಿ ನ್ಯೂಸ್ ಹಿಮಾಚಲ್ ಎಂಬ ಸ್ಥಳೀಯ ಸುದ್ದಿ ಸಂಸ್ಥೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದ ವಿಡಿಯೋ ಕ್ಲಿಪ್‌ವೊಂದು ವ್ಯಾಪಕವಾಗಿ ವೈರಲ್ ಆಗಿತ್ತು. ವಿಡಿಯೋದಲ್ಲಿ ದೇವಸ್ಥಾಯಕ್ಕೆ ಹಾನಿ ಮಾಡಿದ ದೃಶ್ಯವಿತ್ತು. ವಿಡಿಯೋ ಕುರಿತು ವಿವರಿಸಿದ್ದ ಸುದ್ದಿ ಸಂಸ್ಥೆಯ ವರದಿಗಾರ “ಯಾರೋ ದುಷ್ಕರ್ಮಿಗಳ ಕೃತ್ಯ” ಎಂದಿದ್ದರು.

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದ ಪೊಲೀಸರು “ಘಟನೆಯ ಕುರಿತು ತನಿಖೆ ಕೈಗೊಂಡಿದ್ದೇವೆ, ಸಿಸಿಟಿವಿ ವಿಡಿಯೋಗಳನ್ನು ಪರಿಶೀಲನೆ ನಡೆಸುತ್ತಿದ್ದೇವೆ” ಎಂದಿದ್ದರು.

ರಾಜ್ಯದಲ್ಲಿ ಜನಸಂಖ್ಯೆಯ ಬದಲಾವಣೆಯೇ ದೇವಸ್ಥಾನ ಅಪವಿತ್ರಗೊಳ್ಳಲು ಕಾರಣ ಎಂದು ವಿಡಿಯೋ ಹಂಚಿಕೊಳ್ಳಲಾಗಿತ್ತು.

ಸೆಪ್ಟೆಂಬರ್ 27, 2024ರಂದು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದ ಬಲಪಂಥೀಯ ಬಳಕೆದಾರ ರೌಶನ್ ಸಿನ್ಹಾ (@MrSinha) ಹಿಮಾಚಲ ಪ್ರದೇಶದಲ್ಲಿ ದುಷ್ಕರ್ಮಿಗಳನ್ನು ಶಿವಲಿಂಗವನ್ನು ಧ್ವಂಸಗೊಳಿಸಿದ್ದಾರೆ. ದೇವಭೂಮಿ ಹಿಮಾಚಲದಲ್ಲಿ ಹಿಂದೆ ಇದು ಸಾಮಾನ್ಯ ವಿಷಯವಾಗಿರಲಿಲ್ಲ. ಆದರೆ, ಅದು ಹೊಸ ಸಾಮಾನ್ಯ ವಿಷಯವಾಗಿದೆ. ಜನಸಂಖ್ಯಾ ಬದಲಾವಣೆಯು ನಿಜ ಮತ್ತು ಭಯಾನಕವಾಗಿದೆ” ಎಂದು ಬರೆದುಕೊಂಡಿದ್ದರು.

ದೀಪಕ್ ಶರ್ಮಾ (SonofBharat7) ಎಂಬ ಮತ್ತೋರ್ವ ಬಲಂಥೀಯ ಎಕ್ಸ್ ಬಳಕೆದಾರ ಸೆಪ್ಟೆಂಬರ್ 27ರಂದು ವಿಡಿಯೋ ಹಂಚಿಕೊಂಡು ” ಹಿಮಾಚಲ ಪ್ರದೇಶದಲ್ಲಿ 20 ವರ್ಷ ಹಳೆಯ ಶಿವಲಿಂಗ ಧ್ವಂಸಗೊಂಡಿದೆ. ದೇವಭೂಮಿಯು ಇಂತಹ ರಾಕ್ಷಸರಿಂದ ಮುಕ್ತವಾಗಿತ್ತು. ಆದರೆ, ಯಾವಾಗಿನಿಂದ ಮೃಗಗಳು ಇಲ್ಲಿ ತಮ್ಮ ದುಷ್ಟ ಕಣ್ಣುಗಳನ್ನು ನೆಟ್ಟಿತೋ, ಅಂದಿನಿಂದ ಇಂತಹ ಘಟನೆಗಳು ಹೆಚ್ಚುತ್ತಿವೆ. ಹಿಮಾಚಲದ ಜನರೇ.. ಪ್ರತಿ ರಾಕ್ಷಸರಿಗೂ ತಕ್ಕ ಪಾಠ ಕಲಿಸುವವರೆಗೆ ನಿಲ್ಲಬೇಡಿ, ಬೇಕಾದರೆ ಇಡೀ ದೇಶವೇ ನಿಮ್ಮೊಂದಿಗಿದೆ” ಎಂದು ಬರೆದುಕೊಂಡಿದ್ದರು.

ಬಿಜೆಪಿ ನಾಯಕ ಮತ್ತು ಅಸ್ಸಾಂ ನಗರ ವ್ಯವಹಾರಗಳ ಸಚಿವ ಅಶೋಕ್ ಸಿಂಘಾಲ್ (@TheAshokSinghal)ಅವರು ಸೆಪ್ಟೆಂಬರ್ 28ರಂದು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡು “ಇಂದು ಹಿಮಾಚಲ ಪ್ರದೇಶದಲ್ಲಿ ದುಷ್ಕರ್ಮಿಗಳು ಶಿವಲಿಂಗವನ್ನು ಧ್ವಂಸಗೊಳಿಸಿದ್ದಾರೆ. ಮಾತೆ ಕಾಮಕ್ಯಳ ಭೂಮಿಯಲ್ಲಿ ಇದು ನಾಳೆಯೂ ನಡೆಯಬಹುದು. ಅದಕ್ಕಾಗಿಯೇ ನಾವು ನಮ್ಮ ಜಾತಿ, ಮತ, ಮಗಳನ್ನು ರಕ್ಷಿಸಿಕೊಳ್ಳಬೇಕು. ನಮ್ಮ ಗುರುತು, ಭೂಮಿ ಮತ್ತು ಪರಂಪರೆಯನ್ನು ಯಾವುದೇ ಬೆಲೆ ತೆತ್ತಾದರೂ ರಕ್ಷಿಸುವ ನಮ್ಮ ಸಂಕಲ್ಪದಲ್ಲಿ ದೃಢವಾಗಿ ನಿಲ್ಲಬೇಕು. ಜನಸಂಖ್ಯಾಶಾಸ್ತ್ರವು ವಿಧಿಯಾಗಿದೆ” ಎಂದು ಬರೆದುಕೊಂಡಿದ್ದರು.

ಎಲ್ಲಾ ಪೋಸ್ಟ್‌ಗಳಲ್ಲಿ ಜನಸಂಖ್ಯೆ ಬದಲಾವಣೆ ಎಂದು ಉಲ್ಲೇಖಿಸುವ ಮೂಲಕ, ಇಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಾಗಿದೆ. ಅದುವೇ ಈ ಘಟನೆಗೆ ಕಾರಣ ಎಂದು ಪರೋಕ್ಷವಾಗಿ ಹೇಳಲಾಗಿದೆ.

ದೇವಾಲಯದ ಅಪವಿತ್ರತೆಯ ಸುದ್ದಿ ವೈರಲ್ ಆದ ನಂತರ, ಸೆಪ್ಟೆಂಬರ್ 27, 2024 ರಂದು ಹಲವಾರು ಹಿಂದುತ್ವವಾದಿ ಸಂಘಟನೆಗಳು ನಗ್ರೋಟಾದ ಶಾಸಕ ರಘುಬೀರ್ ಸಿಂಗ್ ಬಾಲಿ ನೇತೃತ್ವದಲ್ಲಿ ಗಾಂಧಿ ಮೈದಾನದಲ್ಲಿ ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿತ್ತು. ನ್ಯೂಸ್ 24 ಹಿಮಾಚಲದ ಅಧಿಕೃತ ಫೇಸ್‌ಬುಕ್ ಪೇಜ್‌ನಲ್ಲಿ ಅದನ್ನು ನೇರ ಪ್ರಸಾರ ಮಾಡಲಾಗಿತ್ತು.

ಫ್ಯಾಕ್ಟ್‌ಚೆಕ್ : ಶಿವಲಿಂಗ ಧ್ವಂಸಗೊಳಿಸಿ, ದೇವಾಲಯವನ್ನು ಅಪವಿತ್ರಗೊಳಿಸಲಾಗಿದೆ ಎಂಬ ಸುದ್ದಿ ಕೋಮು ಆಯಾಮ ಪಡೆಯುತ್ತಿದ್ದಂತೆ ಕಂಗ್ರಾ ಡಿಎಸ್‌ಪಿ ಅಂಕಿತ್ ಶರ್ಮಾ ಘಟನೆ ಕುರಿತು ಹೇಳಿಕೆ ಕೊಟ್ಟಿದ್ದರು.

ಸಿಸಿಟಿವಿ ಕ್ಯಾಮಾರಗಳ ಪರಿಶೀಲನೆ ಬಳಿಕ, ಶಿವಲಿಂಗವನ್ನು ಧ್ವಂಸಗೊಳಿಸಿ, ದೇವಸ್ಥಾನವನ್ನು ಅಪವಿತ್ರಗೊಳಿಸಿದ ಆರೋಪದ ಮೇಲೆ 35 ವರ್ಷದ ನಿಶಾ ದೇವಿ ಎಂಬಾಕೆಯ ಮೇಲೆ ಬಿಎನ್‌ಎಸ್‌ ಸೆಕ್ಷನ್ 298ರ ಅಡಿ ನಗ್ರೋಟಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದ್ದರು.

ಮುಂಜಾನೆ 3:30 ರಿಂದ 4:00 ಗಂಟೆಯ ನಡುವೆ ಈ ಕೃತ್ಯ ನಡೆದಿದೆ. ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ನಿಶಾ ದೇವಿಯನ್ನು ಯೋಲ್‌ನಲ್ಲಿ ಬಂಧಿಸಿದ್ದಾರೆ. ಮಹಿಳೆ ಈಗಾಗಲೇ ವಿವಿಧ ಪೊಲೀಸ್ ಠಾಣೆಗಳಲ್ಲಿ ಇದೇ ರೀತಿಯ ಆರೋಪಗಳನ್ನು ಎದುರಿಸುತ್ತಿದ್ದಾರೆ. 2020ರಲ್ಲಿ, ಅವರು ಧರ್ಮಶಾಲಾದ ಫತೇಪುರದ ದೇವಸ್ಥಾನದಲ್ಲಿ ಶಿವಲಿಂಗವನ್ನು ಹಾನಿಗೊಳಿಸಿದ್ದರು. ದೇವಸ್ಥಾನಗಳಲ್ಲಿ ವಿಗ್ರಹಗಳಿಗೆ ಹಾನಿ ಮಾಡುತ್ತಲೇ ಇರುತ್ತಾರೆ. ಮಹಿಳೆ ಮಾನಸಿಕವಾಗಿ ವಿಭಿನ್ನ ಸಾಮರ್ಥ್ಯ ಹೊಂದಿರುವವಳು. ಪೊಲೀಸರು ಕಾನೂನು ರೀತಿಯ ಕ್ರಮ ಕೈಗೊಳ್ಳಲಿದ್ದಾರೆ” ಎಂದು ಡಿಎಸ್‌ಪಿ ವಿವರಿಸಿದ್ದರು.

ಅನಂತ್ ಜ್ಞಾನ್ ಎಂಬ ಸ್ಥಳೀಯ ಹಿಂದಿ ಮಾಧ್ಯಮವು ಸೆಪ್ಟೆಂಬರ್ 27, 2024 ರಂದು ಸಿಸಿಟಿವಿ ದೃಶ್ಯವೊಂದನ್ನು ಅಪ್ಲೋಡ್ ಮಾಡಿತ್ತು. ಅದರಲ್ಲಿ ಶಾಲು ಹೊದ್ದು ವ್ಯಕ್ತಿಯೊಬ್ಬರು ಮಧ್ಯರಾತ್ರಿ 03:39 ರಿಂದ 03:44 ರವರೆಗೆ ದೇವಸ್ಥಾನದ ಒಳಗೆ ಮತ್ತು ಹೊರಗೆ ಹೋಗುತ್ತಿರುವುದನ್ನು ನೋಡಬಹುದು “ನಗ್ರೋಟಾದಲ್ಲಿ ಶಿವಲಿಂಗಕ್ಕೆ ಹಾನಿ ಮಾಡಿದ ವ್ಯಕ್ತಿ ಮಹಿಳೆ” ಎಂದು ಫೇಸ್‌ಬುಕ್ ಪೋಸ್ಟ್‌ನಲ್ಲಿ ಬರೆಯಲಾಗಿತ್ತು.

ಘಟನೆಯ ಕುರಿತ ಪಂಜಾಬ್ ಕೇಸರಿ ಹಿಮಾಚಲ ಸುದ್ದಿ ಸಂಸ್ಥೆಯ ವರದಿಯನ್ನೂ ನಾವು ಪರಿಶೀಲಿಸಿದ್ದೇವೆ. ಅದರಲ್ಲಿ “ಕಳೆದ ಗುರುವಾರ ರಾತ್ರಿ ಗಾಂಧಿ ಮೈದಾನದ ಬಳಿ ಶಿವಲಿಂಗಕ್ಕೆ ಹಾನಿಗೊಳಿಸಿದ ಪ್ರಕರಣದಲ್ಲಿ ಪೊಲೀಸರು ದೊಡ್ಡ ಯಶಸ್ಸನ್ನು ಸಾಧಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಆರೋಪಿ ಮಹಿಳೆಯನ್ನು ಒಂದು ದಿನದ ನಂತರ ಯೋಲ್ ಬಳಿ ಬಂಧಿಸಿದ್ದಾರೆ. ಆರೋಪಿ ಮಹಿಳೆಯನ್ನು ನಿಶಾದೇವಿ ಎಂದು ಗುರುತಿಸಲಾಗಿದ್ದು, ಅವರು ಯೋಲ್ ಕಡೆಗೆ ಹೋಗುತ್ತಿದ್ದರು. ಮಹಿಳೆಯ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದು ಪೊಲೀಸರು ತಿಳಿಸಿದ್ದು, ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದ ಮಹಿಳೆ ಅದೇ ಬಟ್ಟೆಯನ್ನು ಧರಿಸಿ ಕೈಯಲ್ಲಿ ಅದೇ ಚೀಲವನ್ನು ಹಿಡಿದಿರುವುದು ಪೊಲೀಸರಿಗೆ ಗೊತ್ತಾಗಿದೆ. ಪೊಲೀಸರ ಅನುಮಾನ ದೃಢಪಟ್ಟಿದೆ” ಎಂದು ತಿಳಿಸಲಾಗಿತ್ತು.

ಒಟ್ಟಿನಲ್ಲಿ, ಶಿವಲಿಂಗ ಧ್ವಂಸ ಮತ್ತು ದೇವಸ್ಥಾನವನ್ನು ಅಪವಿತ್ರಗೊಳಿಸಿದ ಪ್ರಕರಣದ ಆರೋಪಿ ನಿಶಾ ದೇವಿ ಎಂಬಾಕೆಯಾಗಿದ್ದು, ಮಾನಸಿಕ ಅಸ್ವಸ್ಥೆ ಎಂದು ಪೊಲೀಸರು ತಿಳಿಸಿದ್ದಾರೆ. ಆದ್ದರಿಂದ ಪ್ರಕರಣದಲ್ಲಿ ಯಾವುದೇ ಕೋಮು ಆಯಾಮ ಇಲ್ಲ.

ಇದನ್ನೂ ಓದಿ : FACT CHECK : ಬೆಂಗಳೂರು ಬಳಿ ಗುಹೆಯಲ್ಲಿ 188 ವರ್ಷದ ವ್ಯಕ್ತಿ ಪತ್ತೆ? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...