Homeಫ್ಯಾಕ್ಟ್‌ಚೆಕ್FACT CHECK : ಶಿವಲಿಂಗ ಧ್ವಂಸ ಘಟನೆಗೆ ಕೋಮು ಬಣ್ಣ ಬಳಿದ ಬಲಪಂಥೀಯರು

FACT CHECK : ಶಿವಲಿಂಗ ಧ್ವಂಸ ಘಟನೆಗೆ ಕೋಮು ಬಣ್ಣ ಬಳಿದ ಬಲಪಂಥೀಯರು

- Advertisement -
- Advertisement -

ಶಿಮ್ಲಾ ಸೇರಿದಂತೆ ಹಿಮಾಚಲ ಪ್ರದೇಶದ ವಿವಿದೆಡೆ ಕೋಮು ದ್ವೇಷದ ಘಟನೆಗಳು ಸುದ್ದಿಯಾಗುತ್ತಿರುವ ನಡುವೆ, ಸೆಪ್ಟೆಂಬರ್ 27, 2024ರಂದು ಕಾಂಗ್ರಾ ಜಿಲ್ಲೆಯ ನಗ್ರೋಟಾದಲ್ಲಿನ ದೇವಾಲಯವೊಂದರ ಶಿವಲಿಂಗ ಭಗ್ನಗೊಂಡ ರೀತಿಯಲ್ಲಿ ಪತ್ತೆಯಾಗಿತ್ತು.

ಈ ಕುರಿತು ಸಿಟಿ ನ್ಯೂಸ್ ಹಿಮಾಚಲ್ ಎಂಬ ಸ್ಥಳೀಯ ಸುದ್ದಿ ಸಂಸ್ಥೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದ ವಿಡಿಯೋ ಕ್ಲಿಪ್‌ವೊಂದು ವ್ಯಾಪಕವಾಗಿ ವೈರಲ್ ಆಗಿತ್ತು. ವಿಡಿಯೋದಲ್ಲಿ ದೇವಸ್ಥಾಯಕ್ಕೆ ಹಾನಿ ಮಾಡಿದ ದೃಶ್ಯವಿತ್ತು. ವಿಡಿಯೋ ಕುರಿತು ವಿವರಿಸಿದ್ದ ಸುದ್ದಿ ಸಂಸ್ಥೆಯ ವರದಿಗಾರ “ಯಾರೋ ದುಷ್ಕರ್ಮಿಗಳ ಕೃತ್ಯ” ಎಂದಿದ್ದರು.

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದ ಪೊಲೀಸರು “ಘಟನೆಯ ಕುರಿತು ತನಿಖೆ ಕೈಗೊಂಡಿದ್ದೇವೆ, ಸಿಸಿಟಿವಿ ವಿಡಿಯೋಗಳನ್ನು ಪರಿಶೀಲನೆ ನಡೆಸುತ್ತಿದ್ದೇವೆ” ಎಂದಿದ್ದರು.

ರಾಜ್ಯದಲ್ಲಿ ಜನಸಂಖ್ಯೆಯ ಬದಲಾವಣೆಯೇ ದೇವಸ್ಥಾನ ಅಪವಿತ್ರಗೊಳ್ಳಲು ಕಾರಣ ಎಂದು ವಿಡಿಯೋ ಹಂಚಿಕೊಳ್ಳಲಾಗಿತ್ತು.

ಸೆಪ್ಟೆಂಬರ್ 27, 2024ರಂದು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದ ಬಲಪಂಥೀಯ ಬಳಕೆದಾರ ರೌಶನ್ ಸಿನ್ಹಾ (@MrSinha) ಹಿಮಾಚಲ ಪ್ರದೇಶದಲ್ಲಿ ದುಷ್ಕರ್ಮಿಗಳನ್ನು ಶಿವಲಿಂಗವನ್ನು ಧ್ವಂಸಗೊಳಿಸಿದ್ದಾರೆ. ದೇವಭೂಮಿ ಹಿಮಾಚಲದಲ್ಲಿ ಹಿಂದೆ ಇದು ಸಾಮಾನ್ಯ ವಿಷಯವಾಗಿರಲಿಲ್ಲ. ಆದರೆ, ಅದು ಹೊಸ ಸಾಮಾನ್ಯ ವಿಷಯವಾಗಿದೆ. ಜನಸಂಖ್ಯಾ ಬದಲಾವಣೆಯು ನಿಜ ಮತ್ತು ಭಯಾನಕವಾಗಿದೆ” ಎಂದು ಬರೆದುಕೊಂಡಿದ್ದರು.

ದೀಪಕ್ ಶರ್ಮಾ (SonofBharat7) ಎಂಬ ಮತ್ತೋರ್ವ ಬಲಂಥೀಯ ಎಕ್ಸ್ ಬಳಕೆದಾರ ಸೆಪ್ಟೆಂಬರ್ 27ರಂದು ವಿಡಿಯೋ ಹಂಚಿಕೊಂಡು ” ಹಿಮಾಚಲ ಪ್ರದೇಶದಲ್ಲಿ 20 ವರ್ಷ ಹಳೆಯ ಶಿವಲಿಂಗ ಧ್ವಂಸಗೊಂಡಿದೆ. ದೇವಭೂಮಿಯು ಇಂತಹ ರಾಕ್ಷಸರಿಂದ ಮುಕ್ತವಾಗಿತ್ತು. ಆದರೆ, ಯಾವಾಗಿನಿಂದ ಮೃಗಗಳು ಇಲ್ಲಿ ತಮ್ಮ ದುಷ್ಟ ಕಣ್ಣುಗಳನ್ನು ನೆಟ್ಟಿತೋ, ಅಂದಿನಿಂದ ಇಂತಹ ಘಟನೆಗಳು ಹೆಚ್ಚುತ್ತಿವೆ. ಹಿಮಾಚಲದ ಜನರೇ.. ಪ್ರತಿ ರಾಕ್ಷಸರಿಗೂ ತಕ್ಕ ಪಾಠ ಕಲಿಸುವವರೆಗೆ ನಿಲ್ಲಬೇಡಿ, ಬೇಕಾದರೆ ಇಡೀ ದೇಶವೇ ನಿಮ್ಮೊಂದಿಗಿದೆ” ಎಂದು ಬರೆದುಕೊಂಡಿದ್ದರು.

ಬಿಜೆಪಿ ನಾಯಕ ಮತ್ತು ಅಸ್ಸಾಂ ನಗರ ವ್ಯವಹಾರಗಳ ಸಚಿವ ಅಶೋಕ್ ಸಿಂಘಾಲ್ (@TheAshokSinghal)ಅವರು ಸೆಪ್ಟೆಂಬರ್ 28ರಂದು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡು “ಇಂದು ಹಿಮಾಚಲ ಪ್ರದೇಶದಲ್ಲಿ ದುಷ್ಕರ್ಮಿಗಳು ಶಿವಲಿಂಗವನ್ನು ಧ್ವಂಸಗೊಳಿಸಿದ್ದಾರೆ. ಮಾತೆ ಕಾಮಕ್ಯಳ ಭೂಮಿಯಲ್ಲಿ ಇದು ನಾಳೆಯೂ ನಡೆಯಬಹುದು. ಅದಕ್ಕಾಗಿಯೇ ನಾವು ನಮ್ಮ ಜಾತಿ, ಮತ, ಮಗಳನ್ನು ರಕ್ಷಿಸಿಕೊಳ್ಳಬೇಕು. ನಮ್ಮ ಗುರುತು, ಭೂಮಿ ಮತ್ತು ಪರಂಪರೆಯನ್ನು ಯಾವುದೇ ಬೆಲೆ ತೆತ್ತಾದರೂ ರಕ್ಷಿಸುವ ನಮ್ಮ ಸಂಕಲ್ಪದಲ್ಲಿ ದೃಢವಾಗಿ ನಿಲ್ಲಬೇಕು. ಜನಸಂಖ್ಯಾಶಾಸ್ತ್ರವು ವಿಧಿಯಾಗಿದೆ” ಎಂದು ಬರೆದುಕೊಂಡಿದ್ದರು.

ಎಲ್ಲಾ ಪೋಸ್ಟ್‌ಗಳಲ್ಲಿ ಜನಸಂಖ್ಯೆ ಬದಲಾವಣೆ ಎಂದು ಉಲ್ಲೇಖಿಸುವ ಮೂಲಕ, ಇಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಾಗಿದೆ. ಅದುವೇ ಈ ಘಟನೆಗೆ ಕಾರಣ ಎಂದು ಪರೋಕ್ಷವಾಗಿ ಹೇಳಲಾಗಿದೆ.

ದೇವಾಲಯದ ಅಪವಿತ್ರತೆಯ ಸುದ್ದಿ ವೈರಲ್ ಆದ ನಂತರ, ಸೆಪ್ಟೆಂಬರ್ 27, 2024 ರಂದು ಹಲವಾರು ಹಿಂದುತ್ವವಾದಿ ಸಂಘಟನೆಗಳು ನಗ್ರೋಟಾದ ಶಾಸಕ ರಘುಬೀರ್ ಸಿಂಗ್ ಬಾಲಿ ನೇತೃತ್ವದಲ್ಲಿ ಗಾಂಧಿ ಮೈದಾನದಲ್ಲಿ ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿತ್ತು. ನ್ಯೂಸ್ 24 ಹಿಮಾಚಲದ ಅಧಿಕೃತ ಫೇಸ್‌ಬುಕ್ ಪೇಜ್‌ನಲ್ಲಿ ಅದನ್ನು ನೇರ ಪ್ರಸಾರ ಮಾಡಲಾಗಿತ್ತು.

ಫ್ಯಾಕ್ಟ್‌ಚೆಕ್ : ಶಿವಲಿಂಗ ಧ್ವಂಸಗೊಳಿಸಿ, ದೇವಾಲಯವನ್ನು ಅಪವಿತ್ರಗೊಳಿಸಲಾಗಿದೆ ಎಂಬ ಸುದ್ದಿ ಕೋಮು ಆಯಾಮ ಪಡೆಯುತ್ತಿದ್ದಂತೆ ಕಂಗ್ರಾ ಡಿಎಸ್‌ಪಿ ಅಂಕಿತ್ ಶರ್ಮಾ ಘಟನೆ ಕುರಿತು ಹೇಳಿಕೆ ಕೊಟ್ಟಿದ್ದರು.

ಸಿಸಿಟಿವಿ ಕ್ಯಾಮಾರಗಳ ಪರಿಶೀಲನೆ ಬಳಿಕ, ಶಿವಲಿಂಗವನ್ನು ಧ್ವಂಸಗೊಳಿಸಿ, ದೇವಸ್ಥಾನವನ್ನು ಅಪವಿತ್ರಗೊಳಿಸಿದ ಆರೋಪದ ಮೇಲೆ 35 ವರ್ಷದ ನಿಶಾ ದೇವಿ ಎಂಬಾಕೆಯ ಮೇಲೆ ಬಿಎನ್‌ಎಸ್‌ ಸೆಕ್ಷನ್ 298ರ ಅಡಿ ನಗ್ರೋಟಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದ್ದರು.

ಮುಂಜಾನೆ 3:30 ರಿಂದ 4:00 ಗಂಟೆಯ ನಡುವೆ ಈ ಕೃತ್ಯ ನಡೆದಿದೆ. ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ನಿಶಾ ದೇವಿಯನ್ನು ಯೋಲ್‌ನಲ್ಲಿ ಬಂಧಿಸಿದ್ದಾರೆ. ಮಹಿಳೆ ಈಗಾಗಲೇ ವಿವಿಧ ಪೊಲೀಸ್ ಠಾಣೆಗಳಲ್ಲಿ ಇದೇ ರೀತಿಯ ಆರೋಪಗಳನ್ನು ಎದುರಿಸುತ್ತಿದ್ದಾರೆ. 2020ರಲ್ಲಿ, ಅವರು ಧರ್ಮಶಾಲಾದ ಫತೇಪುರದ ದೇವಸ್ಥಾನದಲ್ಲಿ ಶಿವಲಿಂಗವನ್ನು ಹಾನಿಗೊಳಿಸಿದ್ದರು. ದೇವಸ್ಥಾನಗಳಲ್ಲಿ ವಿಗ್ರಹಗಳಿಗೆ ಹಾನಿ ಮಾಡುತ್ತಲೇ ಇರುತ್ತಾರೆ. ಮಹಿಳೆ ಮಾನಸಿಕವಾಗಿ ವಿಭಿನ್ನ ಸಾಮರ್ಥ್ಯ ಹೊಂದಿರುವವಳು. ಪೊಲೀಸರು ಕಾನೂನು ರೀತಿಯ ಕ್ರಮ ಕೈಗೊಳ್ಳಲಿದ್ದಾರೆ” ಎಂದು ಡಿಎಸ್‌ಪಿ ವಿವರಿಸಿದ್ದರು.

ಅನಂತ್ ಜ್ಞಾನ್ ಎಂಬ ಸ್ಥಳೀಯ ಹಿಂದಿ ಮಾಧ್ಯಮವು ಸೆಪ್ಟೆಂಬರ್ 27, 2024 ರಂದು ಸಿಸಿಟಿವಿ ದೃಶ್ಯವೊಂದನ್ನು ಅಪ್ಲೋಡ್ ಮಾಡಿತ್ತು. ಅದರಲ್ಲಿ ಶಾಲು ಹೊದ್ದು ವ್ಯಕ್ತಿಯೊಬ್ಬರು ಮಧ್ಯರಾತ್ರಿ 03:39 ರಿಂದ 03:44 ರವರೆಗೆ ದೇವಸ್ಥಾನದ ಒಳಗೆ ಮತ್ತು ಹೊರಗೆ ಹೋಗುತ್ತಿರುವುದನ್ನು ನೋಡಬಹುದು “ನಗ್ರೋಟಾದಲ್ಲಿ ಶಿವಲಿಂಗಕ್ಕೆ ಹಾನಿ ಮಾಡಿದ ವ್ಯಕ್ತಿ ಮಹಿಳೆ” ಎಂದು ಫೇಸ್‌ಬುಕ್ ಪೋಸ್ಟ್‌ನಲ್ಲಿ ಬರೆಯಲಾಗಿತ್ತು.

ಘಟನೆಯ ಕುರಿತ ಪಂಜಾಬ್ ಕೇಸರಿ ಹಿಮಾಚಲ ಸುದ್ದಿ ಸಂಸ್ಥೆಯ ವರದಿಯನ್ನೂ ನಾವು ಪರಿಶೀಲಿಸಿದ್ದೇವೆ. ಅದರಲ್ಲಿ “ಕಳೆದ ಗುರುವಾರ ರಾತ್ರಿ ಗಾಂಧಿ ಮೈದಾನದ ಬಳಿ ಶಿವಲಿಂಗಕ್ಕೆ ಹಾನಿಗೊಳಿಸಿದ ಪ್ರಕರಣದಲ್ಲಿ ಪೊಲೀಸರು ದೊಡ್ಡ ಯಶಸ್ಸನ್ನು ಸಾಧಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಆರೋಪಿ ಮಹಿಳೆಯನ್ನು ಒಂದು ದಿನದ ನಂತರ ಯೋಲ್ ಬಳಿ ಬಂಧಿಸಿದ್ದಾರೆ. ಆರೋಪಿ ಮಹಿಳೆಯನ್ನು ನಿಶಾದೇವಿ ಎಂದು ಗುರುತಿಸಲಾಗಿದ್ದು, ಅವರು ಯೋಲ್ ಕಡೆಗೆ ಹೋಗುತ್ತಿದ್ದರು. ಮಹಿಳೆಯ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದು ಪೊಲೀಸರು ತಿಳಿಸಿದ್ದು, ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದ ಮಹಿಳೆ ಅದೇ ಬಟ್ಟೆಯನ್ನು ಧರಿಸಿ ಕೈಯಲ್ಲಿ ಅದೇ ಚೀಲವನ್ನು ಹಿಡಿದಿರುವುದು ಪೊಲೀಸರಿಗೆ ಗೊತ್ತಾಗಿದೆ. ಪೊಲೀಸರ ಅನುಮಾನ ದೃಢಪಟ್ಟಿದೆ” ಎಂದು ತಿಳಿಸಲಾಗಿತ್ತು.

ಒಟ್ಟಿನಲ್ಲಿ, ಶಿವಲಿಂಗ ಧ್ವಂಸ ಮತ್ತು ದೇವಸ್ಥಾನವನ್ನು ಅಪವಿತ್ರಗೊಳಿಸಿದ ಪ್ರಕರಣದ ಆರೋಪಿ ನಿಶಾ ದೇವಿ ಎಂಬಾಕೆಯಾಗಿದ್ದು, ಮಾನಸಿಕ ಅಸ್ವಸ್ಥೆ ಎಂದು ಪೊಲೀಸರು ತಿಳಿಸಿದ್ದಾರೆ. ಆದ್ದರಿಂದ ಪ್ರಕರಣದಲ್ಲಿ ಯಾವುದೇ ಕೋಮು ಆಯಾಮ ಇಲ್ಲ.

ಇದನ್ನೂ ಓದಿ : FACT CHECK : ಬೆಂಗಳೂರು ಬಳಿ ಗುಹೆಯಲ್ಲಿ 188 ವರ್ಷದ ವ್ಯಕ್ತಿ ಪತ್ತೆ? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...