Homeಫ್ಯಾಕ್ಟ್‌ಚೆಕ್FACT CHECK : ಶಿವಲಿಂಗ ಧ್ವಂಸ ಘಟನೆಗೆ ಕೋಮು ಬಣ್ಣ ಬಳಿದ ಬಲಪಂಥೀಯರು

FACT CHECK : ಶಿವಲಿಂಗ ಧ್ವಂಸ ಘಟನೆಗೆ ಕೋಮು ಬಣ್ಣ ಬಳಿದ ಬಲಪಂಥೀಯರು

- Advertisement -
- Advertisement -

ಶಿಮ್ಲಾ ಸೇರಿದಂತೆ ಹಿಮಾಚಲ ಪ್ರದೇಶದ ವಿವಿದೆಡೆ ಕೋಮು ದ್ವೇಷದ ಘಟನೆಗಳು ಸುದ್ದಿಯಾಗುತ್ತಿರುವ ನಡುವೆ, ಸೆಪ್ಟೆಂಬರ್ 27, 2024ರಂದು ಕಾಂಗ್ರಾ ಜಿಲ್ಲೆಯ ನಗ್ರೋಟಾದಲ್ಲಿನ ದೇವಾಲಯವೊಂದರ ಶಿವಲಿಂಗ ಭಗ್ನಗೊಂಡ ರೀತಿಯಲ್ಲಿ ಪತ್ತೆಯಾಗಿತ್ತು.

ಈ ಕುರಿತು ಸಿಟಿ ನ್ಯೂಸ್ ಹಿಮಾಚಲ್ ಎಂಬ ಸ್ಥಳೀಯ ಸುದ್ದಿ ಸಂಸ್ಥೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದ ವಿಡಿಯೋ ಕ್ಲಿಪ್‌ವೊಂದು ವ್ಯಾಪಕವಾಗಿ ವೈರಲ್ ಆಗಿತ್ತು. ವಿಡಿಯೋದಲ್ಲಿ ದೇವಸ್ಥಾಯಕ್ಕೆ ಹಾನಿ ಮಾಡಿದ ದೃಶ್ಯವಿತ್ತು. ವಿಡಿಯೋ ಕುರಿತು ವಿವರಿಸಿದ್ದ ಸುದ್ದಿ ಸಂಸ್ಥೆಯ ವರದಿಗಾರ “ಯಾರೋ ದುಷ್ಕರ್ಮಿಗಳ ಕೃತ್ಯ” ಎಂದಿದ್ದರು.

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದ ಪೊಲೀಸರು “ಘಟನೆಯ ಕುರಿತು ತನಿಖೆ ಕೈಗೊಂಡಿದ್ದೇವೆ, ಸಿಸಿಟಿವಿ ವಿಡಿಯೋಗಳನ್ನು ಪರಿಶೀಲನೆ ನಡೆಸುತ್ತಿದ್ದೇವೆ” ಎಂದಿದ್ದರು.

ರಾಜ್ಯದಲ್ಲಿ ಜನಸಂಖ್ಯೆಯ ಬದಲಾವಣೆಯೇ ದೇವಸ್ಥಾನ ಅಪವಿತ್ರಗೊಳ್ಳಲು ಕಾರಣ ಎಂದು ವಿಡಿಯೋ ಹಂಚಿಕೊಳ್ಳಲಾಗಿತ್ತು.

ಸೆಪ್ಟೆಂಬರ್ 27, 2024ರಂದು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದ ಬಲಪಂಥೀಯ ಬಳಕೆದಾರ ರೌಶನ್ ಸಿನ್ಹಾ (@MrSinha) ಹಿಮಾಚಲ ಪ್ರದೇಶದಲ್ಲಿ ದುಷ್ಕರ್ಮಿಗಳನ್ನು ಶಿವಲಿಂಗವನ್ನು ಧ್ವಂಸಗೊಳಿಸಿದ್ದಾರೆ. ದೇವಭೂಮಿ ಹಿಮಾಚಲದಲ್ಲಿ ಹಿಂದೆ ಇದು ಸಾಮಾನ್ಯ ವಿಷಯವಾಗಿರಲಿಲ್ಲ. ಆದರೆ, ಅದು ಹೊಸ ಸಾಮಾನ್ಯ ವಿಷಯವಾಗಿದೆ. ಜನಸಂಖ್ಯಾ ಬದಲಾವಣೆಯು ನಿಜ ಮತ್ತು ಭಯಾನಕವಾಗಿದೆ” ಎಂದು ಬರೆದುಕೊಂಡಿದ್ದರು.

ದೀಪಕ್ ಶರ್ಮಾ (SonofBharat7) ಎಂಬ ಮತ್ತೋರ್ವ ಬಲಂಥೀಯ ಎಕ್ಸ್ ಬಳಕೆದಾರ ಸೆಪ್ಟೆಂಬರ್ 27ರಂದು ವಿಡಿಯೋ ಹಂಚಿಕೊಂಡು ” ಹಿಮಾಚಲ ಪ್ರದೇಶದಲ್ಲಿ 20 ವರ್ಷ ಹಳೆಯ ಶಿವಲಿಂಗ ಧ್ವಂಸಗೊಂಡಿದೆ. ದೇವಭೂಮಿಯು ಇಂತಹ ರಾಕ್ಷಸರಿಂದ ಮುಕ್ತವಾಗಿತ್ತು. ಆದರೆ, ಯಾವಾಗಿನಿಂದ ಮೃಗಗಳು ಇಲ್ಲಿ ತಮ್ಮ ದುಷ್ಟ ಕಣ್ಣುಗಳನ್ನು ನೆಟ್ಟಿತೋ, ಅಂದಿನಿಂದ ಇಂತಹ ಘಟನೆಗಳು ಹೆಚ್ಚುತ್ತಿವೆ. ಹಿಮಾಚಲದ ಜನರೇ.. ಪ್ರತಿ ರಾಕ್ಷಸರಿಗೂ ತಕ್ಕ ಪಾಠ ಕಲಿಸುವವರೆಗೆ ನಿಲ್ಲಬೇಡಿ, ಬೇಕಾದರೆ ಇಡೀ ದೇಶವೇ ನಿಮ್ಮೊಂದಿಗಿದೆ” ಎಂದು ಬರೆದುಕೊಂಡಿದ್ದರು.

ಬಿಜೆಪಿ ನಾಯಕ ಮತ್ತು ಅಸ್ಸಾಂ ನಗರ ವ್ಯವಹಾರಗಳ ಸಚಿವ ಅಶೋಕ್ ಸಿಂಘಾಲ್ (@TheAshokSinghal)ಅವರು ಸೆಪ್ಟೆಂಬರ್ 28ರಂದು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡು “ಇಂದು ಹಿಮಾಚಲ ಪ್ರದೇಶದಲ್ಲಿ ದುಷ್ಕರ್ಮಿಗಳು ಶಿವಲಿಂಗವನ್ನು ಧ್ವಂಸಗೊಳಿಸಿದ್ದಾರೆ. ಮಾತೆ ಕಾಮಕ್ಯಳ ಭೂಮಿಯಲ್ಲಿ ಇದು ನಾಳೆಯೂ ನಡೆಯಬಹುದು. ಅದಕ್ಕಾಗಿಯೇ ನಾವು ನಮ್ಮ ಜಾತಿ, ಮತ, ಮಗಳನ್ನು ರಕ್ಷಿಸಿಕೊಳ್ಳಬೇಕು. ನಮ್ಮ ಗುರುತು, ಭೂಮಿ ಮತ್ತು ಪರಂಪರೆಯನ್ನು ಯಾವುದೇ ಬೆಲೆ ತೆತ್ತಾದರೂ ರಕ್ಷಿಸುವ ನಮ್ಮ ಸಂಕಲ್ಪದಲ್ಲಿ ದೃಢವಾಗಿ ನಿಲ್ಲಬೇಕು. ಜನಸಂಖ್ಯಾಶಾಸ್ತ್ರವು ವಿಧಿಯಾಗಿದೆ” ಎಂದು ಬರೆದುಕೊಂಡಿದ್ದರು.

ಎಲ್ಲಾ ಪೋಸ್ಟ್‌ಗಳಲ್ಲಿ ಜನಸಂಖ್ಯೆ ಬದಲಾವಣೆ ಎಂದು ಉಲ್ಲೇಖಿಸುವ ಮೂಲಕ, ಇಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಾಗಿದೆ. ಅದುವೇ ಈ ಘಟನೆಗೆ ಕಾರಣ ಎಂದು ಪರೋಕ್ಷವಾಗಿ ಹೇಳಲಾಗಿದೆ.

ದೇವಾಲಯದ ಅಪವಿತ್ರತೆಯ ಸುದ್ದಿ ವೈರಲ್ ಆದ ನಂತರ, ಸೆಪ್ಟೆಂಬರ್ 27, 2024 ರಂದು ಹಲವಾರು ಹಿಂದುತ್ವವಾದಿ ಸಂಘಟನೆಗಳು ನಗ್ರೋಟಾದ ಶಾಸಕ ರಘುಬೀರ್ ಸಿಂಗ್ ಬಾಲಿ ನೇತೃತ್ವದಲ್ಲಿ ಗಾಂಧಿ ಮೈದಾನದಲ್ಲಿ ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿತ್ತು. ನ್ಯೂಸ್ 24 ಹಿಮಾಚಲದ ಅಧಿಕೃತ ಫೇಸ್‌ಬುಕ್ ಪೇಜ್‌ನಲ್ಲಿ ಅದನ್ನು ನೇರ ಪ್ರಸಾರ ಮಾಡಲಾಗಿತ್ತು.

ಫ್ಯಾಕ್ಟ್‌ಚೆಕ್ : ಶಿವಲಿಂಗ ಧ್ವಂಸಗೊಳಿಸಿ, ದೇವಾಲಯವನ್ನು ಅಪವಿತ್ರಗೊಳಿಸಲಾಗಿದೆ ಎಂಬ ಸುದ್ದಿ ಕೋಮು ಆಯಾಮ ಪಡೆಯುತ್ತಿದ್ದಂತೆ ಕಂಗ್ರಾ ಡಿಎಸ್‌ಪಿ ಅಂಕಿತ್ ಶರ್ಮಾ ಘಟನೆ ಕುರಿತು ಹೇಳಿಕೆ ಕೊಟ್ಟಿದ್ದರು.

ಸಿಸಿಟಿವಿ ಕ್ಯಾಮಾರಗಳ ಪರಿಶೀಲನೆ ಬಳಿಕ, ಶಿವಲಿಂಗವನ್ನು ಧ್ವಂಸಗೊಳಿಸಿ, ದೇವಸ್ಥಾನವನ್ನು ಅಪವಿತ್ರಗೊಳಿಸಿದ ಆರೋಪದ ಮೇಲೆ 35 ವರ್ಷದ ನಿಶಾ ದೇವಿ ಎಂಬಾಕೆಯ ಮೇಲೆ ಬಿಎನ್‌ಎಸ್‌ ಸೆಕ್ಷನ್ 298ರ ಅಡಿ ನಗ್ರೋಟಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದ್ದರು.

ಮುಂಜಾನೆ 3:30 ರಿಂದ 4:00 ಗಂಟೆಯ ನಡುವೆ ಈ ಕೃತ್ಯ ನಡೆದಿದೆ. ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ನಿಶಾ ದೇವಿಯನ್ನು ಯೋಲ್‌ನಲ್ಲಿ ಬಂಧಿಸಿದ್ದಾರೆ. ಮಹಿಳೆ ಈಗಾಗಲೇ ವಿವಿಧ ಪೊಲೀಸ್ ಠಾಣೆಗಳಲ್ಲಿ ಇದೇ ರೀತಿಯ ಆರೋಪಗಳನ್ನು ಎದುರಿಸುತ್ತಿದ್ದಾರೆ. 2020ರಲ್ಲಿ, ಅವರು ಧರ್ಮಶಾಲಾದ ಫತೇಪುರದ ದೇವಸ್ಥಾನದಲ್ಲಿ ಶಿವಲಿಂಗವನ್ನು ಹಾನಿಗೊಳಿಸಿದ್ದರು. ದೇವಸ್ಥಾನಗಳಲ್ಲಿ ವಿಗ್ರಹಗಳಿಗೆ ಹಾನಿ ಮಾಡುತ್ತಲೇ ಇರುತ್ತಾರೆ. ಮಹಿಳೆ ಮಾನಸಿಕವಾಗಿ ವಿಭಿನ್ನ ಸಾಮರ್ಥ್ಯ ಹೊಂದಿರುವವಳು. ಪೊಲೀಸರು ಕಾನೂನು ರೀತಿಯ ಕ್ರಮ ಕೈಗೊಳ್ಳಲಿದ್ದಾರೆ” ಎಂದು ಡಿಎಸ್‌ಪಿ ವಿವರಿಸಿದ್ದರು.

ಅನಂತ್ ಜ್ಞಾನ್ ಎಂಬ ಸ್ಥಳೀಯ ಹಿಂದಿ ಮಾಧ್ಯಮವು ಸೆಪ್ಟೆಂಬರ್ 27, 2024 ರಂದು ಸಿಸಿಟಿವಿ ದೃಶ್ಯವೊಂದನ್ನು ಅಪ್ಲೋಡ್ ಮಾಡಿತ್ತು. ಅದರಲ್ಲಿ ಶಾಲು ಹೊದ್ದು ವ್ಯಕ್ತಿಯೊಬ್ಬರು ಮಧ್ಯರಾತ್ರಿ 03:39 ರಿಂದ 03:44 ರವರೆಗೆ ದೇವಸ್ಥಾನದ ಒಳಗೆ ಮತ್ತು ಹೊರಗೆ ಹೋಗುತ್ತಿರುವುದನ್ನು ನೋಡಬಹುದು “ನಗ್ರೋಟಾದಲ್ಲಿ ಶಿವಲಿಂಗಕ್ಕೆ ಹಾನಿ ಮಾಡಿದ ವ್ಯಕ್ತಿ ಮಹಿಳೆ” ಎಂದು ಫೇಸ್‌ಬುಕ್ ಪೋಸ್ಟ್‌ನಲ್ಲಿ ಬರೆಯಲಾಗಿತ್ತು.

ಘಟನೆಯ ಕುರಿತ ಪಂಜಾಬ್ ಕೇಸರಿ ಹಿಮಾಚಲ ಸುದ್ದಿ ಸಂಸ್ಥೆಯ ವರದಿಯನ್ನೂ ನಾವು ಪರಿಶೀಲಿಸಿದ್ದೇವೆ. ಅದರಲ್ಲಿ “ಕಳೆದ ಗುರುವಾರ ರಾತ್ರಿ ಗಾಂಧಿ ಮೈದಾನದ ಬಳಿ ಶಿವಲಿಂಗಕ್ಕೆ ಹಾನಿಗೊಳಿಸಿದ ಪ್ರಕರಣದಲ್ಲಿ ಪೊಲೀಸರು ದೊಡ್ಡ ಯಶಸ್ಸನ್ನು ಸಾಧಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಆರೋಪಿ ಮಹಿಳೆಯನ್ನು ಒಂದು ದಿನದ ನಂತರ ಯೋಲ್ ಬಳಿ ಬಂಧಿಸಿದ್ದಾರೆ. ಆರೋಪಿ ಮಹಿಳೆಯನ್ನು ನಿಶಾದೇವಿ ಎಂದು ಗುರುತಿಸಲಾಗಿದ್ದು, ಅವರು ಯೋಲ್ ಕಡೆಗೆ ಹೋಗುತ್ತಿದ್ದರು. ಮಹಿಳೆಯ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದು ಪೊಲೀಸರು ತಿಳಿಸಿದ್ದು, ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದ ಮಹಿಳೆ ಅದೇ ಬಟ್ಟೆಯನ್ನು ಧರಿಸಿ ಕೈಯಲ್ಲಿ ಅದೇ ಚೀಲವನ್ನು ಹಿಡಿದಿರುವುದು ಪೊಲೀಸರಿಗೆ ಗೊತ್ತಾಗಿದೆ. ಪೊಲೀಸರ ಅನುಮಾನ ದೃಢಪಟ್ಟಿದೆ” ಎಂದು ತಿಳಿಸಲಾಗಿತ್ತು.

ಒಟ್ಟಿನಲ್ಲಿ, ಶಿವಲಿಂಗ ಧ್ವಂಸ ಮತ್ತು ದೇವಸ್ಥಾನವನ್ನು ಅಪವಿತ್ರಗೊಳಿಸಿದ ಪ್ರಕರಣದ ಆರೋಪಿ ನಿಶಾ ದೇವಿ ಎಂಬಾಕೆಯಾಗಿದ್ದು, ಮಾನಸಿಕ ಅಸ್ವಸ್ಥೆ ಎಂದು ಪೊಲೀಸರು ತಿಳಿಸಿದ್ದಾರೆ. ಆದ್ದರಿಂದ ಪ್ರಕರಣದಲ್ಲಿ ಯಾವುದೇ ಕೋಮು ಆಯಾಮ ಇಲ್ಲ.

ಇದನ್ನೂ ಓದಿ : FACT CHECK : ಬೆಂಗಳೂರು ಬಳಿ ಗುಹೆಯಲ್ಲಿ 188 ವರ್ಷದ ವ್ಯಕ್ತಿ ಪತ್ತೆ? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...