Homeಫ್ಯಾಕ್ಟ್‌ಚೆಕ್FACT CHECK : ಶಿವಲಿಂಗ ಧ್ವಂಸ ಘಟನೆಗೆ ಕೋಮು ಬಣ್ಣ ಬಳಿದ ಬಲಪಂಥೀಯರು

FACT CHECK : ಶಿವಲಿಂಗ ಧ್ವಂಸ ಘಟನೆಗೆ ಕೋಮು ಬಣ್ಣ ಬಳಿದ ಬಲಪಂಥೀಯರು

- Advertisement -
- Advertisement -

ಶಿಮ್ಲಾ ಸೇರಿದಂತೆ ಹಿಮಾಚಲ ಪ್ರದೇಶದ ವಿವಿದೆಡೆ ಕೋಮು ದ್ವೇಷದ ಘಟನೆಗಳು ಸುದ್ದಿಯಾಗುತ್ತಿರುವ ನಡುವೆ, ಸೆಪ್ಟೆಂಬರ್ 27, 2024ರಂದು ಕಾಂಗ್ರಾ ಜಿಲ್ಲೆಯ ನಗ್ರೋಟಾದಲ್ಲಿನ ದೇವಾಲಯವೊಂದರ ಶಿವಲಿಂಗ ಭಗ್ನಗೊಂಡ ರೀತಿಯಲ್ಲಿ ಪತ್ತೆಯಾಗಿತ್ತು.

ಈ ಕುರಿತು ಸಿಟಿ ನ್ಯೂಸ್ ಹಿಮಾಚಲ್ ಎಂಬ ಸ್ಥಳೀಯ ಸುದ್ದಿ ಸಂಸ್ಥೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದ ವಿಡಿಯೋ ಕ್ಲಿಪ್‌ವೊಂದು ವ್ಯಾಪಕವಾಗಿ ವೈರಲ್ ಆಗಿತ್ತು. ವಿಡಿಯೋದಲ್ಲಿ ದೇವಸ್ಥಾಯಕ್ಕೆ ಹಾನಿ ಮಾಡಿದ ದೃಶ್ಯವಿತ್ತು. ವಿಡಿಯೋ ಕುರಿತು ವಿವರಿಸಿದ್ದ ಸುದ್ದಿ ಸಂಸ್ಥೆಯ ವರದಿಗಾರ “ಯಾರೋ ದುಷ್ಕರ್ಮಿಗಳ ಕೃತ್ಯ” ಎಂದಿದ್ದರು.

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದ ಪೊಲೀಸರು “ಘಟನೆಯ ಕುರಿತು ತನಿಖೆ ಕೈಗೊಂಡಿದ್ದೇವೆ, ಸಿಸಿಟಿವಿ ವಿಡಿಯೋಗಳನ್ನು ಪರಿಶೀಲನೆ ನಡೆಸುತ್ತಿದ್ದೇವೆ” ಎಂದಿದ್ದರು.

ರಾಜ್ಯದಲ್ಲಿ ಜನಸಂಖ್ಯೆಯ ಬದಲಾವಣೆಯೇ ದೇವಸ್ಥಾನ ಅಪವಿತ್ರಗೊಳ್ಳಲು ಕಾರಣ ಎಂದು ವಿಡಿಯೋ ಹಂಚಿಕೊಳ್ಳಲಾಗಿತ್ತು.

ಸೆಪ್ಟೆಂಬರ್ 27, 2024ರಂದು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದ ಬಲಪಂಥೀಯ ಬಳಕೆದಾರ ರೌಶನ್ ಸಿನ್ಹಾ (@MrSinha) ಹಿಮಾಚಲ ಪ್ರದೇಶದಲ್ಲಿ ದುಷ್ಕರ್ಮಿಗಳನ್ನು ಶಿವಲಿಂಗವನ್ನು ಧ್ವಂಸಗೊಳಿಸಿದ್ದಾರೆ. ದೇವಭೂಮಿ ಹಿಮಾಚಲದಲ್ಲಿ ಹಿಂದೆ ಇದು ಸಾಮಾನ್ಯ ವಿಷಯವಾಗಿರಲಿಲ್ಲ. ಆದರೆ, ಅದು ಹೊಸ ಸಾಮಾನ್ಯ ವಿಷಯವಾಗಿದೆ. ಜನಸಂಖ್ಯಾ ಬದಲಾವಣೆಯು ನಿಜ ಮತ್ತು ಭಯಾನಕವಾಗಿದೆ” ಎಂದು ಬರೆದುಕೊಂಡಿದ್ದರು.

ದೀಪಕ್ ಶರ್ಮಾ (SonofBharat7) ಎಂಬ ಮತ್ತೋರ್ವ ಬಲಂಥೀಯ ಎಕ್ಸ್ ಬಳಕೆದಾರ ಸೆಪ್ಟೆಂಬರ್ 27ರಂದು ವಿಡಿಯೋ ಹಂಚಿಕೊಂಡು ” ಹಿಮಾಚಲ ಪ್ರದೇಶದಲ್ಲಿ 20 ವರ್ಷ ಹಳೆಯ ಶಿವಲಿಂಗ ಧ್ವಂಸಗೊಂಡಿದೆ. ದೇವಭೂಮಿಯು ಇಂತಹ ರಾಕ್ಷಸರಿಂದ ಮುಕ್ತವಾಗಿತ್ತು. ಆದರೆ, ಯಾವಾಗಿನಿಂದ ಮೃಗಗಳು ಇಲ್ಲಿ ತಮ್ಮ ದುಷ್ಟ ಕಣ್ಣುಗಳನ್ನು ನೆಟ್ಟಿತೋ, ಅಂದಿನಿಂದ ಇಂತಹ ಘಟನೆಗಳು ಹೆಚ್ಚುತ್ತಿವೆ. ಹಿಮಾಚಲದ ಜನರೇ.. ಪ್ರತಿ ರಾಕ್ಷಸರಿಗೂ ತಕ್ಕ ಪಾಠ ಕಲಿಸುವವರೆಗೆ ನಿಲ್ಲಬೇಡಿ, ಬೇಕಾದರೆ ಇಡೀ ದೇಶವೇ ನಿಮ್ಮೊಂದಿಗಿದೆ” ಎಂದು ಬರೆದುಕೊಂಡಿದ್ದರು.

ಬಿಜೆಪಿ ನಾಯಕ ಮತ್ತು ಅಸ್ಸಾಂ ನಗರ ವ್ಯವಹಾರಗಳ ಸಚಿವ ಅಶೋಕ್ ಸಿಂಘಾಲ್ (@TheAshokSinghal)ಅವರು ಸೆಪ್ಟೆಂಬರ್ 28ರಂದು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡು “ಇಂದು ಹಿಮಾಚಲ ಪ್ರದೇಶದಲ್ಲಿ ದುಷ್ಕರ್ಮಿಗಳು ಶಿವಲಿಂಗವನ್ನು ಧ್ವಂಸಗೊಳಿಸಿದ್ದಾರೆ. ಮಾತೆ ಕಾಮಕ್ಯಳ ಭೂಮಿಯಲ್ಲಿ ಇದು ನಾಳೆಯೂ ನಡೆಯಬಹುದು. ಅದಕ್ಕಾಗಿಯೇ ನಾವು ನಮ್ಮ ಜಾತಿ, ಮತ, ಮಗಳನ್ನು ರಕ್ಷಿಸಿಕೊಳ್ಳಬೇಕು. ನಮ್ಮ ಗುರುತು, ಭೂಮಿ ಮತ್ತು ಪರಂಪರೆಯನ್ನು ಯಾವುದೇ ಬೆಲೆ ತೆತ್ತಾದರೂ ರಕ್ಷಿಸುವ ನಮ್ಮ ಸಂಕಲ್ಪದಲ್ಲಿ ದೃಢವಾಗಿ ನಿಲ್ಲಬೇಕು. ಜನಸಂಖ್ಯಾಶಾಸ್ತ್ರವು ವಿಧಿಯಾಗಿದೆ” ಎಂದು ಬರೆದುಕೊಂಡಿದ್ದರು.

ಎಲ್ಲಾ ಪೋಸ್ಟ್‌ಗಳಲ್ಲಿ ಜನಸಂಖ್ಯೆ ಬದಲಾವಣೆ ಎಂದು ಉಲ್ಲೇಖಿಸುವ ಮೂಲಕ, ಇಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಾಗಿದೆ. ಅದುವೇ ಈ ಘಟನೆಗೆ ಕಾರಣ ಎಂದು ಪರೋಕ್ಷವಾಗಿ ಹೇಳಲಾಗಿದೆ.

ದೇವಾಲಯದ ಅಪವಿತ್ರತೆಯ ಸುದ್ದಿ ವೈರಲ್ ಆದ ನಂತರ, ಸೆಪ್ಟೆಂಬರ್ 27, 2024 ರಂದು ಹಲವಾರು ಹಿಂದುತ್ವವಾದಿ ಸಂಘಟನೆಗಳು ನಗ್ರೋಟಾದ ಶಾಸಕ ರಘುಬೀರ್ ಸಿಂಗ್ ಬಾಲಿ ನೇತೃತ್ವದಲ್ಲಿ ಗಾಂಧಿ ಮೈದಾನದಲ್ಲಿ ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿತ್ತು. ನ್ಯೂಸ್ 24 ಹಿಮಾಚಲದ ಅಧಿಕೃತ ಫೇಸ್‌ಬುಕ್ ಪೇಜ್‌ನಲ್ಲಿ ಅದನ್ನು ನೇರ ಪ್ರಸಾರ ಮಾಡಲಾಗಿತ್ತು.

ಫ್ಯಾಕ್ಟ್‌ಚೆಕ್ : ಶಿವಲಿಂಗ ಧ್ವಂಸಗೊಳಿಸಿ, ದೇವಾಲಯವನ್ನು ಅಪವಿತ್ರಗೊಳಿಸಲಾಗಿದೆ ಎಂಬ ಸುದ್ದಿ ಕೋಮು ಆಯಾಮ ಪಡೆಯುತ್ತಿದ್ದಂತೆ ಕಂಗ್ರಾ ಡಿಎಸ್‌ಪಿ ಅಂಕಿತ್ ಶರ್ಮಾ ಘಟನೆ ಕುರಿತು ಹೇಳಿಕೆ ಕೊಟ್ಟಿದ್ದರು.

ಸಿಸಿಟಿವಿ ಕ್ಯಾಮಾರಗಳ ಪರಿಶೀಲನೆ ಬಳಿಕ, ಶಿವಲಿಂಗವನ್ನು ಧ್ವಂಸಗೊಳಿಸಿ, ದೇವಸ್ಥಾನವನ್ನು ಅಪವಿತ್ರಗೊಳಿಸಿದ ಆರೋಪದ ಮೇಲೆ 35 ವರ್ಷದ ನಿಶಾ ದೇವಿ ಎಂಬಾಕೆಯ ಮೇಲೆ ಬಿಎನ್‌ಎಸ್‌ ಸೆಕ್ಷನ್ 298ರ ಅಡಿ ನಗ್ರೋಟಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದ್ದರು.

ಮುಂಜಾನೆ 3:30 ರಿಂದ 4:00 ಗಂಟೆಯ ನಡುವೆ ಈ ಕೃತ್ಯ ನಡೆದಿದೆ. ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ನಿಶಾ ದೇವಿಯನ್ನು ಯೋಲ್‌ನಲ್ಲಿ ಬಂಧಿಸಿದ್ದಾರೆ. ಮಹಿಳೆ ಈಗಾಗಲೇ ವಿವಿಧ ಪೊಲೀಸ್ ಠಾಣೆಗಳಲ್ಲಿ ಇದೇ ರೀತಿಯ ಆರೋಪಗಳನ್ನು ಎದುರಿಸುತ್ತಿದ್ದಾರೆ. 2020ರಲ್ಲಿ, ಅವರು ಧರ್ಮಶಾಲಾದ ಫತೇಪುರದ ದೇವಸ್ಥಾನದಲ್ಲಿ ಶಿವಲಿಂಗವನ್ನು ಹಾನಿಗೊಳಿಸಿದ್ದರು. ದೇವಸ್ಥಾನಗಳಲ್ಲಿ ವಿಗ್ರಹಗಳಿಗೆ ಹಾನಿ ಮಾಡುತ್ತಲೇ ಇರುತ್ತಾರೆ. ಮಹಿಳೆ ಮಾನಸಿಕವಾಗಿ ವಿಭಿನ್ನ ಸಾಮರ್ಥ್ಯ ಹೊಂದಿರುವವಳು. ಪೊಲೀಸರು ಕಾನೂನು ರೀತಿಯ ಕ್ರಮ ಕೈಗೊಳ್ಳಲಿದ್ದಾರೆ” ಎಂದು ಡಿಎಸ್‌ಪಿ ವಿವರಿಸಿದ್ದರು.

ಅನಂತ್ ಜ್ಞಾನ್ ಎಂಬ ಸ್ಥಳೀಯ ಹಿಂದಿ ಮಾಧ್ಯಮವು ಸೆಪ್ಟೆಂಬರ್ 27, 2024 ರಂದು ಸಿಸಿಟಿವಿ ದೃಶ್ಯವೊಂದನ್ನು ಅಪ್ಲೋಡ್ ಮಾಡಿತ್ತು. ಅದರಲ್ಲಿ ಶಾಲು ಹೊದ್ದು ವ್ಯಕ್ತಿಯೊಬ್ಬರು ಮಧ್ಯರಾತ್ರಿ 03:39 ರಿಂದ 03:44 ರವರೆಗೆ ದೇವಸ್ಥಾನದ ಒಳಗೆ ಮತ್ತು ಹೊರಗೆ ಹೋಗುತ್ತಿರುವುದನ್ನು ನೋಡಬಹುದು “ನಗ್ರೋಟಾದಲ್ಲಿ ಶಿವಲಿಂಗಕ್ಕೆ ಹಾನಿ ಮಾಡಿದ ವ್ಯಕ್ತಿ ಮಹಿಳೆ” ಎಂದು ಫೇಸ್‌ಬುಕ್ ಪೋಸ್ಟ್‌ನಲ್ಲಿ ಬರೆಯಲಾಗಿತ್ತು.

ಘಟನೆಯ ಕುರಿತ ಪಂಜಾಬ್ ಕೇಸರಿ ಹಿಮಾಚಲ ಸುದ್ದಿ ಸಂಸ್ಥೆಯ ವರದಿಯನ್ನೂ ನಾವು ಪರಿಶೀಲಿಸಿದ್ದೇವೆ. ಅದರಲ್ಲಿ “ಕಳೆದ ಗುರುವಾರ ರಾತ್ರಿ ಗಾಂಧಿ ಮೈದಾನದ ಬಳಿ ಶಿವಲಿಂಗಕ್ಕೆ ಹಾನಿಗೊಳಿಸಿದ ಪ್ರಕರಣದಲ್ಲಿ ಪೊಲೀಸರು ದೊಡ್ಡ ಯಶಸ್ಸನ್ನು ಸಾಧಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಆರೋಪಿ ಮಹಿಳೆಯನ್ನು ಒಂದು ದಿನದ ನಂತರ ಯೋಲ್ ಬಳಿ ಬಂಧಿಸಿದ್ದಾರೆ. ಆರೋಪಿ ಮಹಿಳೆಯನ್ನು ನಿಶಾದೇವಿ ಎಂದು ಗುರುತಿಸಲಾಗಿದ್ದು, ಅವರು ಯೋಲ್ ಕಡೆಗೆ ಹೋಗುತ್ತಿದ್ದರು. ಮಹಿಳೆಯ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದು ಪೊಲೀಸರು ತಿಳಿಸಿದ್ದು, ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದ ಮಹಿಳೆ ಅದೇ ಬಟ್ಟೆಯನ್ನು ಧರಿಸಿ ಕೈಯಲ್ಲಿ ಅದೇ ಚೀಲವನ್ನು ಹಿಡಿದಿರುವುದು ಪೊಲೀಸರಿಗೆ ಗೊತ್ತಾಗಿದೆ. ಪೊಲೀಸರ ಅನುಮಾನ ದೃಢಪಟ್ಟಿದೆ” ಎಂದು ತಿಳಿಸಲಾಗಿತ್ತು.

ಒಟ್ಟಿನಲ್ಲಿ, ಶಿವಲಿಂಗ ಧ್ವಂಸ ಮತ್ತು ದೇವಸ್ಥಾನವನ್ನು ಅಪವಿತ್ರಗೊಳಿಸಿದ ಪ್ರಕರಣದ ಆರೋಪಿ ನಿಶಾ ದೇವಿ ಎಂಬಾಕೆಯಾಗಿದ್ದು, ಮಾನಸಿಕ ಅಸ್ವಸ್ಥೆ ಎಂದು ಪೊಲೀಸರು ತಿಳಿಸಿದ್ದಾರೆ. ಆದ್ದರಿಂದ ಪ್ರಕರಣದಲ್ಲಿ ಯಾವುದೇ ಕೋಮು ಆಯಾಮ ಇಲ್ಲ.

ಇದನ್ನೂ ಓದಿ : FACT CHECK : ಬೆಂಗಳೂರು ಬಳಿ ಗುಹೆಯಲ್ಲಿ 188 ವರ್ಷದ ವ್ಯಕ್ತಿ ಪತ್ತೆ? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...