Homeಫ್ಯಾಕ್ಟ್‌ಚೆಕ್FACT CHECK : ಶಿವಲಿಂಗ ಧ್ವಂಸ ಘಟನೆಗೆ ಕೋಮು ಬಣ್ಣ ಬಳಿದ ಬಲಪಂಥೀಯರು

FACT CHECK : ಶಿವಲಿಂಗ ಧ್ವಂಸ ಘಟನೆಗೆ ಕೋಮು ಬಣ್ಣ ಬಳಿದ ಬಲಪಂಥೀಯರು

- Advertisement -
- Advertisement -

ಶಿಮ್ಲಾ ಸೇರಿದಂತೆ ಹಿಮಾಚಲ ಪ್ರದೇಶದ ವಿವಿದೆಡೆ ಕೋಮು ದ್ವೇಷದ ಘಟನೆಗಳು ಸುದ್ದಿಯಾಗುತ್ತಿರುವ ನಡುವೆ, ಸೆಪ್ಟೆಂಬರ್ 27, 2024ರಂದು ಕಾಂಗ್ರಾ ಜಿಲ್ಲೆಯ ನಗ್ರೋಟಾದಲ್ಲಿನ ದೇವಾಲಯವೊಂದರ ಶಿವಲಿಂಗ ಭಗ್ನಗೊಂಡ ರೀತಿಯಲ್ಲಿ ಪತ್ತೆಯಾಗಿತ್ತು.

ಈ ಕುರಿತು ಸಿಟಿ ನ್ಯೂಸ್ ಹಿಮಾಚಲ್ ಎಂಬ ಸ್ಥಳೀಯ ಸುದ್ದಿ ಸಂಸ್ಥೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದ ವಿಡಿಯೋ ಕ್ಲಿಪ್‌ವೊಂದು ವ್ಯಾಪಕವಾಗಿ ವೈರಲ್ ಆಗಿತ್ತು. ವಿಡಿಯೋದಲ್ಲಿ ದೇವಸ್ಥಾಯಕ್ಕೆ ಹಾನಿ ಮಾಡಿದ ದೃಶ್ಯವಿತ್ತು. ವಿಡಿಯೋ ಕುರಿತು ವಿವರಿಸಿದ್ದ ಸುದ್ದಿ ಸಂಸ್ಥೆಯ ವರದಿಗಾರ “ಯಾರೋ ದುಷ್ಕರ್ಮಿಗಳ ಕೃತ್ಯ” ಎಂದಿದ್ದರು.

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದ ಪೊಲೀಸರು “ಘಟನೆಯ ಕುರಿತು ತನಿಖೆ ಕೈಗೊಂಡಿದ್ದೇವೆ, ಸಿಸಿಟಿವಿ ವಿಡಿಯೋಗಳನ್ನು ಪರಿಶೀಲನೆ ನಡೆಸುತ್ತಿದ್ದೇವೆ” ಎಂದಿದ್ದರು.

ರಾಜ್ಯದಲ್ಲಿ ಜನಸಂಖ್ಯೆಯ ಬದಲಾವಣೆಯೇ ದೇವಸ್ಥಾನ ಅಪವಿತ್ರಗೊಳ್ಳಲು ಕಾರಣ ಎಂದು ವಿಡಿಯೋ ಹಂಚಿಕೊಳ್ಳಲಾಗಿತ್ತು.

ಸೆಪ್ಟೆಂಬರ್ 27, 2024ರಂದು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದ ಬಲಪಂಥೀಯ ಬಳಕೆದಾರ ರೌಶನ್ ಸಿನ್ಹಾ (@MrSinha) ಹಿಮಾಚಲ ಪ್ರದೇಶದಲ್ಲಿ ದುಷ್ಕರ್ಮಿಗಳನ್ನು ಶಿವಲಿಂಗವನ್ನು ಧ್ವಂಸಗೊಳಿಸಿದ್ದಾರೆ. ದೇವಭೂಮಿ ಹಿಮಾಚಲದಲ್ಲಿ ಹಿಂದೆ ಇದು ಸಾಮಾನ್ಯ ವಿಷಯವಾಗಿರಲಿಲ್ಲ. ಆದರೆ, ಅದು ಹೊಸ ಸಾಮಾನ್ಯ ವಿಷಯವಾಗಿದೆ. ಜನಸಂಖ್ಯಾ ಬದಲಾವಣೆಯು ನಿಜ ಮತ್ತು ಭಯಾನಕವಾಗಿದೆ” ಎಂದು ಬರೆದುಕೊಂಡಿದ್ದರು.

ದೀಪಕ್ ಶರ್ಮಾ (SonofBharat7) ಎಂಬ ಮತ್ತೋರ್ವ ಬಲಂಥೀಯ ಎಕ್ಸ್ ಬಳಕೆದಾರ ಸೆಪ್ಟೆಂಬರ್ 27ರಂದು ವಿಡಿಯೋ ಹಂಚಿಕೊಂಡು ” ಹಿಮಾಚಲ ಪ್ರದೇಶದಲ್ಲಿ 20 ವರ್ಷ ಹಳೆಯ ಶಿವಲಿಂಗ ಧ್ವಂಸಗೊಂಡಿದೆ. ದೇವಭೂಮಿಯು ಇಂತಹ ರಾಕ್ಷಸರಿಂದ ಮುಕ್ತವಾಗಿತ್ತು. ಆದರೆ, ಯಾವಾಗಿನಿಂದ ಮೃಗಗಳು ಇಲ್ಲಿ ತಮ್ಮ ದುಷ್ಟ ಕಣ್ಣುಗಳನ್ನು ನೆಟ್ಟಿತೋ, ಅಂದಿನಿಂದ ಇಂತಹ ಘಟನೆಗಳು ಹೆಚ್ಚುತ್ತಿವೆ. ಹಿಮಾಚಲದ ಜನರೇ.. ಪ್ರತಿ ರಾಕ್ಷಸರಿಗೂ ತಕ್ಕ ಪಾಠ ಕಲಿಸುವವರೆಗೆ ನಿಲ್ಲಬೇಡಿ, ಬೇಕಾದರೆ ಇಡೀ ದೇಶವೇ ನಿಮ್ಮೊಂದಿಗಿದೆ” ಎಂದು ಬರೆದುಕೊಂಡಿದ್ದರು.

ಬಿಜೆಪಿ ನಾಯಕ ಮತ್ತು ಅಸ್ಸಾಂ ನಗರ ವ್ಯವಹಾರಗಳ ಸಚಿವ ಅಶೋಕ್ ಸಿಂಘಾಲ್ (@TheAshokSinghal)ಅವರು ಸೆಪ್ಟೆಂಬರ್ 28ರಂದು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡು “ಇಂದು ಹಿಮಾಚಲ ಪ್ರದೇಶದಲ್ಲಿ ದುಷ್ಕರ್ಮಿಗಳು ಶಿವಲಿಂಗವನ್ನು ಧ್ವಂಸಗೊಳಿಸಿದ್ದಾರೆ. ಮಾತೆ ಕಾಮಕ್ಯಳ ಭೂಮಿಯಲ್ಲಿ ಇದು ನಾಳೆಯೂ ನಡೆಯಬಹುದು. ಅದಕ್ಕಾಗಿಯೇ ನಾವು ನಮ್ಮ ಜಾತಿ, ಮತ, ಮಗಳನ್ನು ರಕ್ಷಿಸಿಕೊಳ್ಳಬೇಕು. ನಮ್ಮ ಗುರುತು, ಭೂಮಿ ಮತ್ತು ಪರಂಪರೆಯನ್ನು ಯಾವುದೇ ಬೆಲೆ ತೆತ್ತಾದರೂ ರಕ್ಷಿಸುವ ನಮ್ಮ ಸಂಕಲ್ಪದಲ್ಲಿ ದೃಢವಾಗಿ ನಿಲ್ಲಬೇಕು. ಜನಸಂಖ್ಯಾಶಾಸ್ತ್ರವು ವಿಧಿಯಾಗಿದೆ” ಎಂದು ಬರೆದುಕೊಂಡಿದ್ದರು.

ಎಲ್ಲಾ ಪೋಸ್ಟ್‌ಗಳಲ್ಲಿ ಜನಸಂಖ್ಯೆ ಬದಲಾವಣೆ ಎಂದು ಉಲ್ಲೇಖಿಸುವ ಮೂಲಕ, ಇಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಾಗಿದೆ. ಅದುವೇ ಈ ಘಟನೆಗೆ ಕಾರಣ ಎಂದು ಪರೋಕ್ಷವಾಗಿ ಹೇಳಲಾಗಿದೆ.

ದೇವಾಲಯದ ಅಪವಿತ್ರತೆಯ ಸುದ್ದಿ ವೈರಲ್ ಆದ ನಂತರ, ಸೆಪ್ಟೆಂಬರ್ 27, 2024 ರಂದು ಹಲವಾರು ಹಿಂದುತ್ವವಾದಿ ಸಂಘಟನೆಗಳು ನಗ್ರೋಟಾದ ಶಾಸಕ ರಘುಬೀರ್ ಸಿಂಗ್ ಬಾಲಿ ನೇತೃತ್ವದಲ್ಲಿ ಗಾಂಧಿ ಮೈದಾನದಲ್ಲಿ ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿತ್ತು. ನ್ಯೂಸ್ 24 ಹಿಮಾಚಲದ ಅಧಿಕೃತ ಫೇಸ್‌ಬುಕ್ ಪೇಜ್‌ನಲ್ಲಿ ಅದನ್ನು ನೇರ ಪ್ರಸಾರ ಮಾಡಲಾಗಿತ್ತು.

ಫ್ಯಾಕ್ಟ್‌ಚೆಕ್ : ಶಿವಲಿಂಗ ಧ್ವಂಸಗೊಳಿಸಿ, ದೇವಾಲಯವನ್ನು ಅಪವಿತ್ರಗೊಳಿಸಲಾಗಿದೆ ಎಂಬ ಸುದ್ದಿ ಕೋಮು ಆಯಾಮ ಪಡೆಯುತ್ತಿದ್ದಂತೆ ಕಂಗ್ರಾ ಡಿಎಸ್‌ಪಿ ಅಂಕಿತ್ ಶರ್ಮಾ ಘಟನೆ ಕುರಿತು ಹೇಳಿಕೆ ಕೊಟ್ಟಿದ್ದರು.

ಸಿಸಿಟಿವಿ ಕ್ಯಾಮಾರಗಳ ಪರಿಶೀಲನೆ ಬಳಿಕ, ಶಿವಲಿಂಗವನ್ನು ಧ್ವಂಸಗೊಳಿಸಿ, ದೇವಸ್ಥಾನವನ್ನು ಅಪವಿತ್ರಗೊಳಿಸಿದ ಆರೋಪದ ಮೇಲೆ 35 ವರ್ಷದ ನಿಶಾ ದೇವಿ ಎಂಬಾಕೆಯ ಮೇಲೆ ಬಿಎನ್‌ಎಸ್‌ ಸೆಕ್ಷನ್ 298ರ ಅಡಿ ನಗ್ರೋಟಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದ್ದರು.

ಮುಂಜಾನೆ 3:30 ರಿಂದ 4:00 ಗಂಟೆಯ ನಡುವೆ ಈ ಕೃತ್ಯ ನಡೆದಿದೆ. ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ನಿಶಾ ದೇವಿಯನ್ನು ಯೋಲ್‌ನಲ್ಲಿ ಬಂಧಿಸಿದ್ದಾರೆ. ಮಹಿಳೆ ಈಗಾಗಲೇ ವಿವಿಧ ಪೊಲೀಸ್ ಠಾಣೆಗಳಲ್ಲಿ ಇದೇ ರೀತಿಯ ಆರೋಪಗಳನ್ನು ಎದುರಿಸುತ್ತಿದ್ದಾರೆ. 2020ರಲ್ಲಿ, ಅವರು ಧರ್ಮಶಾಲಾದ ಫತೇಪುರದ ದೇವಸ್ಥಾನದಲ್ಲಿ ಶಿವಲಿಂಗವನ್ನು ಹಾನಿಗೊಳಿಸಿದ್ದರು. ದೇವಸ್ಥಾನಗಳಲ್ಲಿ ವಿಗ್ರಹಗಳಿಗೆ ಹಾನಿ ಮಾಡುತ್ತಲೇ ಇರುತ್ತಾರೆ. ಮಹಿಳೆ ಮಾನಸಿಕವಾಗಿ ವಿಭಿನ್ನ ಸಾಮರ್ಥ್ಯ ಹೊಂದಿರುವವಳು. ಪೊಲೀಸರು ಕಾನೂನು ರೀತಿಯ ಕ್ರಮ ಕೈಗೊಳ್ಳಲಿದ್ದಾರೆ” ಎಂದು ಡಿಎಸ್‌ಪಿ ವಿವರಿಸಿದ್ದರು.

ಅನಂತ್ ಜ್ಞಾನ್ ಎಂಬ ಸ್ಥಳೀಯ ಹಿಂದಿ ಮಾಧ್ಯಮವು ಸೆಪ್ಟೆಂಬರ್ 27, 2024 ರಂದು ಸಿಸಿಟಿವಿ ದೃಶ್ಯವೊಂದನ್ನು ಅಪ್ಲೋಡ್ ಮಾಡಿತ್ತು. ಅದರಲ್ಲಿ ಶಾಲು ಹೊದ್ದು ವ್ಯಕ್ತಿಯೊಬ್ಬರು ಮಧ್ಯರಾತ್ರಿ 03:39 ರಿಂದ 03:44 ರವರೆಗೆ ದೇವಸ್ಥಾನದ ಒಳಗೆ ಮತ್ತು ಹೊರಗೆ ಹೋಗುತ್ತಿರುವುದನ್ನು ನೋಡಬಹುದು “ನಗ್ರೋಟಾದಲ್ಲಿ ಶಿವಲಿಂಗಕ್ಕೆ ಹಾನಿ ಮಾಡಿದ ವ್ಯಕ್ತಿ ಮಹಿಳೆ” ಎಂದು ಫೇಸ್‌ಬುಕ್ ಪೋಸ್ಟ್‌ನಲ್ಲಿ ಬರೆಯಲಾಗಿತ್ತು.

ಘಟನೆಯ ಕುರಿತ ಪಂಜಾಬ್ ಕೇಸರಿ ಹಿಮಾಚಲ ಸುದ್ದಿ ಸಂಸ್ಥೆಯ ವರದಿಯನ್ನೂ ನಾವು ಪರಿಶೀಲಿಸಿದ್ದೇವೆ. ಅದರಲ್ಲಿ “ಕಳೆದ ಗುರುವಾರ ರಾತ್ರಿ ಗಾಂಧಿ ಮೈದಾನದ ಬಳಿ ಶಿವಲಿಂಗಕ್ಕೆ ಹಾನಿಗೊಳಿಸಿದ ಪ್ರಕರಣದಲ್ಲಿ ಪೊಲೀಸರು ದೊಡ್ಡ ಯಶಸ್ಸನ್ನು ಸಾಧಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಆರೋಪಿ ಮಹಿಳೆಯನ್ನು ಒಂದು ದಿನದ ನಂತರ ಯೋಲ್ ಬಳಿ ಬಂಧಿಸಿದ್ದಾರೆ. ಆರೋಪಿ ಮಹಿಳೆಯನ್ನು ನಿಶಾದೇವಿ ಎಂದು ಗುರುತಿಸಲಾಗಿದ್ದು, ಅವರು ಯೋಲ್ ಕಡೆಗೆ ಹೋಗುತ್ತಿದ್ದರು. ಮಹಿಳೆಯ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದು ಪೊಲೀಸರು ತಿಳಿಸಿದ್ದು, ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದ ಮಹಿಳೆ ಅದೇ ಬಟ್ಟೆಯನ್ನು ಧರಿಸಿ ಕೈಯಲ್ಲಿ ಅದೇ ಚೀಲವನ್ನು ಹಿಡಿದಿರುವುದು ಪೊಲೀಸರಿಗೆ ಗೊತ್ತಾಗಿದೆ. ಪೊಲೀಸರ ಅನುಮಾನ ದೃಢಪಟ್ಟಿದೆ” ಎಂದು ತಿಳಿಸಲಾಗಿತ್ತು.

ಒಟ್ಟಿನಲ್ಲಿ, ಶಿವಲಿಂಗ ಧ್ವಂಸ ಮತ್ತು ದೇವಸ್ಥಾನವನ್ನು ಅಪವಿತ್ರಗೊಳಿಸಿದ ಪ್ರಕರಣದ ಆರೋಪಿ ನಿಶಾ ದೇವಿ ಎಂಬಾಕೆಯಾಗಿದ್ದು, ಮಾನಸಿಕ ಅಸ್ವಸ್ಥೆ ಎಂದು ಪೊಲೀಸರು ತಿಳಿಸಿದ್ದಾರೆ. ಆದ್ದರಿಂದ ಪ್ರಕರಣದಲ್ಲಿ ಯಾವುದೇ ಕೋಮು ಆಯಾಮ ಇಲ್ಲ.

ಇದನ್ನೂ ಓದಿ : FACT CHECK : ಬೆಂಗಳೂರು ಬಳಿ ಗುಹೆಯಲ್ಲಿ 188 ವರ್ಷದ ವ್ಯಕ್ತಿ ಪತ್ತೆ? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...